Home Blog Page 42

ರಾಯಚೂರು| ಕಾಲುವೆಯಲ್ಲಿ ಬಿದ್ದು ಇಬ್ಬರು ಕೂಲಿ ಮಹಿಳೆಯರು ಸಾವು!

0

ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು ಬಳಿ ಭತ್ತ ಹಚ್ಚುವ ಕೆಲಸ ಮುಗಿಸಿದ ಇಬ್ಬರು ಮಹಿಳೆಯರು ಕೈಕಾಲು ತೊಳೆದುಕೊಳ್ಳಲು ಹೋಗುವ ವೇಳೆ ಕಾಲುವೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.

ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಮತ್ತು ದೇವಮ್ಮ (30) ಈ ದುರಂತದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಲಿಂಗಸುಗೂರು ಪೊಲೀಸ್ ಮತ್ತು ಅಗ್ನಿಶಾಮಕ ದಳ ಭೇಟಿ ನೀಡಿ ಶೋಧ ಕಾರ್ಯ ನಡೆಸಿ ಶವಗಳನ್ನು ಹೊರತೆಗೆದಿದ್ದಾರೆ. ಸದ್ಯ ಮೃತದೇಹಗಳನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಕ್ಲು ಶಿವು ಕೊಲೆ ಪ್ರಕರಣ| ಏರ್ ಪೋರ್ಟ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ MLA ಬೈರತಿ ಬಸವರಾಜ್!

0

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತರ, ಬಿಜೆಪಿ ಶಾಸಕ ಭೈರತಿ ಬಸವರಾಜ್​​ ನನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪರಾರಿಯಾಗಿದ್ದ ಬಸವರಾಜ್​​ನ ಅಹಮದಾಬಾದ್​ನಿಂದ ಬೆಂಗಳೂರಿಗೆ ಆಗಮನದ ಮಾಹಿತಿ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಯಿತು. ಸಂಜೆ 7 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲ್ಯಾಂಡ್ ಆದ ನಂತರ, ಸಿಐಡಿ ತಂಡವು ಅವರನ್ನು ಟರ್ಮಿನಲ್ ಒಳಗಡೆಯೇ ವಶಕ್ಕೆ ಪಡೆದಿದೆ.

ಈ ವೇಳೆ, ಭೈರತಿ ಬಸವರಾಜ್​​ನನ್ನು ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ವೈದ್ಯಕೀಯ ಪರಿಶೀಲನೆ ನಂತರ ಶೀಘ್ರವೇ ಜಡ್ಜ್ ಎದುರು ಹಾಜರಾತಿ ನಡೆಯಲಿದೆ. ಸಿಐಡಿ ಜಡ್ಜ್​​ ಮುಂದಿನ ರಿಮ್ಯಾಂಡ್ ಅರ್ಜಿಯನ್ನು ಸಲ್ಲಿಸಲಿದೆ.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್‌ ಮಾಡಲೂ ಲಂಚ; ಐವರು ಸಿಬ್ಬಂದಿ ಸಸ್ಪೆಂಡ್

0

ಹುಬ್ಬಳ್ಳಿ: ಕಿಮ್ಸ್‌ ಆಸ್ಪತ್ರೆಯಲ್ಲಿ ಶವ ಪ್ಯಾಕ್‌ ಮಾಡುವ ಸಂದರ್ಭದಲ್ಲಿ ಲಂಚ ವಸೂಲಾತಿ ಪ್ರಕರಣ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಐವರು ಹೊರ ಗುತ್ತಿಗೆ (ಡಿ ಗ್ರೂಪ್) ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ನಿವಾಸಿ ಗದ್ದೆಮ್ಮಾ (52) ಪಿತ್ತಕೋಶದ ಕಲ್ಲುಗಳಿಂದ ಅಸ್ವಸ್ಥರಾಗಿದ್ದರು. ಹೀಗಾಗಿ ಜ.31ರಂದು ಅವರನ್ನು ಹುಬ್ಬಳ್ಳಿ ಕಿಮ್ಸ್​​ಗೆ ದಾಖಲು ಮಾಡಲಾಗಿತ್ತು. ದುರಾದೃಷ್ಟವಶಾತ್ ಶಸ್ತ್ರಚಿಕಿತ್ಸೆ ನಂತರ ಗದ್ದೆಮ್ಮಾ ಮೃತಪಟ್ಟಿದ್ದರು.

ಆದರೆ ಮಹಿಳೆಯ ಶವವನ್ನು ಪ್ಯಾಕ್ ಮಾಡಿ ವಾಹನಕ್ಕೆ ಹಾಕಲು ಐವರು ಡ್ರಿ ಗ್ರೂಪ್ ಸಿಬ್ಬಂದಿ ಹಣ ವಸೂಲಾತಿ ಮಾಡಿಕೊಂಡಿದ್ದರು. ಆರಂಭದಲ್ಲಿ 200 ರೂಪಾಯಿ ಪಡೆದ ಬಳಿಕ, ಶವವನ್ನು ವಾಹನಕ್ಕೆ ಹಾಕಿದ ಮೇಲೆ ಮತ್ತಷ್ಟು 200 ರೂಪಾಯಿ ಕೇಳಿದ್ದರಿಂದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಈ ಘಟನೆಯನ್ನು ವಿಡಿಯೋ ಮಾಡಿ ಅವರು ಸಾರ್ವಜನಿಕರಿಗೆ ತೋರಿಸಿದ್ದರು. ಲಂಚಾವತಾರ ಬಯಲಾದ ಬಳಿಕ ಹಣ ವಸೂಲಿ ಮಾಡಿದ ಐವರು ಡಿ ಗ್ರೂಪ್‌ ನೌಕರರನ್ನು ಅಮಾನತು ಮಾಡಲಾಗಿದೆ

ಮೈಸೂರು| ಫೆಬ್ರವರಿ 16ರಂದು ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ!

0

ಮೈಸೂರು: ಹಬ್ಬನಘಟ್ಟ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ನಡೆಯುತ್ತಿರುವ ಕಾಲುವೆ ಕ್ರಾಸಿಂಗ್ ಕಾಮಗಾರಿ ಕಾರಣ, ಫೆಬ್ರವರಿ 16ರ ಸೋಮವಾರ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಅರಸೀಕೆರೆ–ಮೈಸೂರು ಪ್ಯಾಸೆಂಜರ್, ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ ಮತ್ತು ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ರೈಲುಗಳು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮೈಸೂರು–ಅರಸೀಕೆರೆ ಮಾರ್ಗದಲ್ಲಿ ಭಾಗಶಃ ರದ್ದು ಮಾಡಲಾಗಿದ್ದು, ಅರಸೀಕೆರೆಯಿಂದ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭವಾಗಲಿದೆ. ಇತರ ರೈಲುಗಳಲ್ಲಿ ಮೈಸೂರು–ಅರಸೀಕೆರೆ ಪ್ಯಾಸೆಂಜರ್ 110 ನಿಮಿಷ ಮತ್ತು ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ 100 ನಿಮಿಷ ಮಾರ್ಗ ಮಧ್ಯೆ ನಿಯಂತ್ರಣಕ್ಕೆ ಒಳಗಾಗಲಿದೆ.

ಅರಸೀಕೆರೆ–ಮೈಸೂರು ಪ್ಯಾಸೆಂಜರ್ ಮತ್ತು ಮೈಸೂರು–ಎಸ್‌ಎಂವಿಟಿ ಬೆಂಗಳೂರು ಪ್ಯಾಸೆಂಜರ್ ವಿಶೇಷ ರೈಲುಗಳು 100 ನಿಮಿಷ ವಿಳಂಬದಿಂದ ಸಂಚಾರ ನಡೆಸಲಿವೆ. ಪ್ರಯಾಣಿಕರು ತಮ್ಮ ಪ್ರಯಾಣದ ವೇಳೆಯನ್ನು ಪರಿಶೀಲಿಸುವಂತೆ ರೈಲ್ವೆ ಇಲಾಖೆ ಸೂಚಿಸಿದೆ.

ಬೆಂಗಳೂರಿನಲ್ಲಿ ಮುಂದುವರೆದ ಪವರ್ ಕಟ್; ಶುಕ್ರವಾರವೂ ಈ ಏರಿಯಾದಲ್ಲಿ ಇರೋದಿಲ್ಲ ಕರೆಂಟ್

0

ಬೆಂಗಳೂರು:- ಕಳೆದ ಕೆಲವು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪವರ್ ಸಮಸ್ಯೆ ಬಿಟ್ಟು ಬಿಡದೇ ಕಾಡುತ್ತಿದ್ದು, ಸಿಟಿ ಮಂದಿ ಕಂಗಾಲಾಗಿದ್ದಾರೆ.

ಅದರಂತೆ ಶುಕ್ರವಾರವೂ ನಗರದ ವಿವಿಧ ಭಾಗಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆವಿಎ ಮಾನ್ಯತಾ ಟೆಕ್ ಪಾರ್ಕ್ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಫಿಡೆಲಿಟಿ, ಫಿಲಿಪ್ಸ್, ಇಂಕ್ಯುಬೇಟರ್, ಐಬಿಎಂ D1, D2, D3 ಮತ್ತು D4 ಬ್ಲಾಕ್ಗಳು, F2 ಬ್ಲಾಕ್, L5 ನೋಕಿಯಾ ಬ್ಲಾಕ್, L6 ಸಿಮೆನ್ಸ್ ಬ್ಲಾಕ್, G1 ಬ್ಲಾಕ್, ಎಎನ್ಜೆಡ್ H ಬ್ಲಾಕ್, C4 ಬ್ಲಾಕ್, ಮನ್ಯತಾ ರೆಸಿಡೆನ್ಸಿ, ಬಿ.ಟಿ.ಎಸ್. ಲೇಔಟ್, ಗೋದ್ರೆಜ್ ಅಪಾರ್ಟ್ಮೆಂಟ್ಸ್, ಹೆಬ್ಬಾಳ ಕೆಂಪಾಪುರ, ವಿನಾಯಕ ಲೇಔಟ್, ಚಿರಂಜೀವಿ ಲೇಔಟ್, ವೆಂಕಟೇಗೌಡ ಲೇಔಟ್, ಜೆಎನ್ಸಿ, ಎಂಎಫ್ಎಆರ್, ಮಧುವನ M2 ಬ್ಲಾಕ್ ಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಹಾಗೆಯೇ, ರಾಚೇನಹಳ್ಳಿ, ಶ್ರೀರಾಮಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್ಕ್ಲೇವ್, ಮೇಸ್ತ್ರಿ ಪಾಳ್ಯ, ತನಿಸಂದ್ರ, ಎಸ್ಎನ್ಎನ್ ಕ್ಲರ್ಮಾಂಟ್ ಅಪಾರ್ಟ್ಮೆಂಟ್ಸ್, ಕಾರ್ಲೆ ಟೌನ್ ಸೆಂಟರ್, ಬಿ. ನಾರಾಯಣಪುರ ಕ್ರಾಸ್, ಬಿಡಿಎಸ್ ಲೇಔಟ್, ಮಂತ್ರಿ ಲಿಥೋಸ್, ಕಾಫಿ ಬೋರ್ಡ್ ಲೇಔಟ್, ಫಾತಿಮಾ ಲೇಔಟ್, ಅಮರ್ಜ್ಯೋತಿ ಲೇಔಟ್, ಮರಿಯಣ್ಣಪಾಳ್ಯ, ಉಮಿಯಾ ವೆಲಾಸಿಟಿ, ಬ್ರಿಗೇಡ್ ಕ್ಯಾಲಾಡಿಯಂ ಏರಿಯಾದಲ್ಲಿ ವಿದ್ಯುತ್ ಕಟ್ ಆಗಲಿದೆ.

ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗರ‍್ಡೇನಿಯ ಅಪರ‍್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ರ‍್ಲಿ ಸ್ಡೀಟ್, ಲಿಯೋನಾರ್ಡ್ ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ವಿಲ್ಸನ್ ಗರ‍್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ರ‍್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗರ‍್ಡನ್, ಡಬಲ್ ರೋಡ್, ಸುಬ್ಬಯ್ಯ ರ‍್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.

₹14.38 ಕೋಟಿ ಆಸ್ತಿ ಪತ್ತೆ ಪ್ರಕರಣ: ಐಟಿ ಘೋಷಣೆ ವಿಚಾರಕ್ಕೆ ಹೈಕೋರ್ಟ್ ಸ್ಪಷ್ಟನೆ ಕೇಳಿ ತನಿಖೆ ಸ್ಥಗಿತ

0

ಬೆಂಗಳೂರು: ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹೈಕೋರ್ಟ್ ತನಿಖೆಗೆ ತಾತ್ಕಾಲಿಕ ತಡೆ ನೀಡಿದ್ದು, ಐಟಿ ಘೋಷಣೆಗಳ ಬಗ್ಗೆ ಸ್ಪಷ್ಟನೆ ಕೇಳಿದೆ.

ಲೋಕಾಯುಕ್ತ ಅಧಿಕಾರಿಗಳು ಡಿಸೆಂಬರ್ 24ರಂದು ಬೆಳಿಗ್ಗೆ 50ಕ್ಕೂ ಹೆಚ್ಚು ಅಧಿಕಾರಿಗಳೊಂದಿಗೆ 13 ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಬೆಂಗಳೂರಿನ ಹಲಸೂರು ನಿವಾಸ ಸೇರಿದಂತೆ ಒಟ್ಟು 7 ಮನೆಗಳು, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್‌ಗಳು, ಹೆಚ್.ಡಿ.ಕೋಟೆಯಲ್ಲಿನ ರೆಸಾರ್ಟ್ ಹಾಗೂ 35 ಎಕರೆ ಕೃಷಿ ಜಮೀನು ದಾಖಲೆಗಳು ಪತ್ತೆಯಾಗಿದ್ದವು.

ದಾಳಿಯಲ್ಲಿ ₹66,500 ನಗದು, ₹2.99 ಲಕ್ಷ ಮೌಲ್ಯದ ಚಿನ್ನ, ₹1.29 ಕೋಟಿ ಮೌಲ್ಯದ ಎಫ್‌ಡಿ ಸೇರಿ ಒಟ್ಟು ₹14.38 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಹೇಳಿತ್ತು.

ಲೋಕಾಯುಕ್ತ ವಾದ ಪ್ರಕಾರ, ಶೇ.131ರಷ್ಟು ಆದಾಯ ಮೀರಿದ ಆಸ್ತಿ ಗಳಿಕೆ ಕಂಡುಬಂದಿದೆ. ಆದರೆ ಅರ್ಜಿದಾರರ ಪರ, ಎಲ್ಲ ಆಸ್ತಿಗಳ ವಿವರಗಳನ್ನು ಆದಾಯ ತೆರಿಗೆ ಇಲಾಖೆಗೆ ಘೋಷಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಫೆ.27ರವರೆಗೆ ತನಿಖೆಗೆ ತಾತ್ಕಾಲಿಕ ತಡೆ ನೀಡಿ, ಐಟಿ ಇಲಾಖೆಯಿಂದ ವಿವರ ಸಲ್ಲಿಸಲು ಸೂಚಿಸಿದೆ. ಪ್ರಕರಣದ ಮುಂದಿನ ಹಂತದ ಬೆಳವಣಿಗೆಗಳತ್ತ ರಾಜಕೀಯ ಹಾಗೂ ಆಡಳಿತ ವಲಯದ ಕಣ್ಣು ನೆಟ್ಟಿದೆ.

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ₹262 ಕೋಟಿ ಪರಿಹಾರ ಘೋಷಣೆ

0

ವಾಷಿಂಗ್ಟನ್: ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಸಾವು ಪ್ರಕರಣ ಅಮೆರಿಕದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ₹262 ಕೋಟಿ ಪರಿಹಾರ ಒಪ್ಪಂದದೊಂದಿಗೆ ಈ ಪ್ರಕರಣ ಕಾನೂನು ಮತ್ತು ಪೊಲೀಸ್ ಹೊಣೆಗಾರಿಕೆಯ ದೊಡ್ಡ ಉದಾಹರಣೆಯಾಗಿ ಪರಿಣಮಿಸಿದೆ.

2023ರ ಜನವರಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ, ಪೊಲೀಸ್ ಅಧಿಕಾರಿ ಕೆವಿನ್ ಡೇವ್ 25 mph ಮಿತಿಯ ಪ್ರದೇಶದಲ್ಲಿ 74 mph ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು. ವರದಿಗಳ ಪ್ರಕಾರ, ಅವರು ಮಾದಕ ವಸ್ತು ಸೇವನೆ ಮಾಡಿಕೊಂಡಿದ್ದರೆಂಬ ಆರೋಪ ಮತ್ತು ಫೋನ್‌ನಲ್ಲಿ ಮಾತನಾಡುತ್ತಿದ್ದರು ಎಂಬ ವಿಷಯವೂ ಬೆಳಕಿಗೆ ಬಂದಿದೆ.

ಘಟನೆಯ ಬಳಿಕ ಮತ್ತೊಬ್ಬ ಅಧಿಕಾರಿಯ ಬಾಡಿ ಕ್ಯಾಮೆರಾದಲ್ಲಿ ದಾಖಲಾಗಿದ್ದ ದೃಶ್ಯಗಳು ಬಹಿರಂಗವಾದಾಗ ಪ್ರಕರಣ ಮತ್ತಷ್ಟು ವಿವಾದಕ್ಕೆ ಕಾರಣವಾಯಿತು. ಸಾರ್ವಜನಿಕ ಆಕ್ರೋಶದ ನಡುವೆ, ಅಧಿಕಾರಿಗೆ $5,000 ದಂಡ ವಿಧಿಸಿ ಸೇವೆಯಿಂದ ವಜಾಗೊಳಿಸಲಾಯಿತು. ಆದರೆ ಗಂಭೀರ ಕ್ರಿಮಿನಲ್ ಆರೋಪಗಳಿಂದ ಅವರು ತಪ್ಪಿಸಿಕೊಂಡರು.

ನಗರ ಅಟಾರ್ನಿ ಎರಿಕಾ ಇವಾನ್ಸ್ ಮಾತನಾಡಿ, “ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕ. ಈ ಆರ್ಥಿಕ ಇತ್ಯರ್ಥವು ಕುಟುಂಬಕ್ಕೆ ಸ್ವಲ್ಪ ಸಾಂತ್ವನ ನೀಡಬಹುದು” ಎಂದು ಹೇಳಿದ್ದಾರೆ. ಕುಟುಂಬದ ವಕೀಲರು ಈವರೆಗೆ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಈ ಪರಿಹಾರ ಮೊತ್ತ ಅಮೆರಿಕದ ಪೊಲೀಸ್ ನಿರ್ಲಕ್ಷ್ಯ ಪ್ರಕರಣಗಳಲ್ಲಿ ಅಪರೂಪದ ದೊಡ್ಡ ಇತ್ಯರ್ಥವೆಂದು ಪರಿಗಣಿಸಲಾಗುತ್ತಿದೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ವಶ

0

ಬೆಂಗಳೂರು: ಅಂತರಾಷ್ಟ್ರೀಯ ಮಾರ್ಗದ ಮೂಲಕ ನಡೆಯುತ್ತಿದ್ದ ಮಾದಕ ವಸ್ತುಗಳ ಕಳ್ಳಸಾಗಣೆ ಯತ್ನವನ್ನು ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬಳಿ ₹3.39 ಕೋಟಿ ಮೌಲ್ಯದ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.

ಲಗೇಜ್ ಸ್ಕ್ಯಾನಿಂಗ್ ವೇಳೆ ಅನುಮಾನ ಮೂಡಿದ ಹಿನ್ನೆಲೆ ಅಧಿಕಾರಿಗಳು ಸೂಕ್ಷ್ಮ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಕಳ್ಳಸಾಗಣೆ ಜಾಲದ ಸಂಪರ್ಕಗಳ ಬಗ್ಗೆ ವಿಚಾರಣೆ ಮುಂದುವರಿದಿದೆ.

ಫೆಬ್ರವರಿ 7ರಂದು ಸಹ ಕಸ್ಟಮ್ಸ್ ಇಲಾಖೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು ₹3 ಕೋಟಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿತ್ತು. ಕಳೆದ ಕೆಲ ದಿನಗಳಲ್ಲಿ ನಡೆದ ಈ ಕ್ರಮಗಳು ಅಂತರಾಷ್ಟ್ರೀಯ ಡ್ರಗ್ ಸ್ಮಗ್ಲಿಂಗ್ ಜಾಲಗಳು ಬೆಂಗಳೂರು ಮಾರ್ಗವನ್ನು ಬಳಸುತ್ತಿರುವುದನ್ನು ತೋರಿಸುತ್ತಿವೆ.

ಕಸ್ಟಮ್ಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ತಪಾಸಣೆ ಇನ್ನಷ್ಟು ಕಠಿಣಗೊಳಿಸಿದ್ದಾರೆ.

ನಟಿ ಸುಧಾರಾಣಿ ನಂದಿನಿ ರಾಯಭಾರಿ: ಬಮೂಲ್‌ನ ಸ್ವತಂತ್ರ ಕ್ರಮಕ್ಕೆ ಕೆಎಂಎಫ್ ಆಕ್ಷೇಪ

ನಂದಿನಿ ಹಾಲು ಉತ್ಪನ್ನಗಳಿಗೆ ಕನ್ನಡ ತಾರೆ ಸುಧಾರಾಣಿ ಹೊಸ ರಾಯಭಾರಿ ಆಗಿ ಆಯ್ಕೆಯಾಗಿರುವುದು ಸದ್ಯ ಸುದ್ದಿಯಾಗಿದೆ. ಕೆಲವರೆ ಪ್ರಮುಖರು ಬಮೂಲ್ನಿಂದ ಪರಭಾಷಾ ನಟಿ ತಮನ್ನಾ ಭಾಟಿಯಾ ನೇಮಕಗೊಂಡಿದ್ದಾಗ ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ ಸುಧಾರಾಣಿ ನೇಮಕದಿಂದ ಮತ್ತೆ ವಿವಾದದ ಅಣುಕು ಬಿದ್ದಿದೆ.

ಸುಧಾರಾಣಿ ತಮ್ಮ ಸಂತೋಷ ವ್ಯಕ್ತಪಡಿಸಿ, “ಬಮೂಲ್ನೊಂದಿಗೆ ಕೆಲಸ ಮಾಡುವ ಅವಕಾಶ ನನಗೆ ಹೆಮ್ಮೆ. ದೇಸಿ ಹಸುಗಳು, ರೈತರ ಭದ್ರತೆ ಮತ್ತು ಗ್ರಾಹಕರಿಗೆ ಶುದ್ಧ ಉತ್ಪನ್ನ ತಲುಪಿಸುವುದು ನನ್ನ ಮುಖ್ಯ ಉದ್ದೇಶ” ಎಂದು ಹೇಳಿದ್ದಾರೆ. ಅವರು A2 ಹಾಲು, A2 ತುಪ್ಪ ಸೇರಿದಂತೆ ನಂದಿನಿಯ ಹೊಸ ಉತ್ಪನ್ನಗಳನ್ನು ಪ್ರಚಾರ ಮಾಡುವ ಮೂಲಕ ಕನ್ನಡ ಸಂಪ್ರದಾಯ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಗುರಿಯಾಗಿದೆ ಎಂದು ಹೇಳಿದರು.

ಆದರೆ, ಕೆಎಂಎಫ್ ತನ್ನ ಆಕ್ಷೇಪ ವ್ಯಕ್ತಪಡಿಸಿದೆ. “ಮೂಲ ಸಂಸ್ಥೆಗೆ ಮಾಹಿತಿ ನೀಡದೆ ರಾಯಭಾರಿ ನೇಮಕ ಮಾಡುವುದೇ ನಿಯಮಕ್ಕೆ ವಿರುದ್ಧ,” ಎಂದು ಅಧಿಕಾರಿಗಳು ಹೇಳಿದ್ದಾರೆ. ನಂದಿನಿಯ ಹಿಂದಿನ ಬ್ರ್ಯಾಂಡ್ ಅಂಬಾಸಿಡರ್‌ಗಳು ಡಾ. ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಆಗಿದ್ದು, ಅವರ ಸೇವೆಯನ್ನು ಕೆಎಂಎಫ್ ಅನುಮೋದಿಸಿಕೊಂಡಿತ್ತು.

ಈ ನೇಮಕವು ಬಮೂಲ್ನ ಸ್ವತಂತ್ರ ನಿರ್ಧಾರ, ಹಾಲು ಕ್ಷೇತ್ರದಲ್ಲಿ ಪರಂಪರೆ ಮತ್ತು ನಿಯಮ ಪಾಲನೆ ಕುರಿತು ಹೊಸ ಸಂವಾದಕ್ಕೆ ಕಾರಣವಾಗಿದೆ.

ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

0

ಮೈಸೂರು: ಗಡಿ ಭಾಗದ ಮೂಲಕ ಕೇರಳ ಲಾಟರಿ ಟಿಕೆಟ್‌ಗಳನ್ನು ರಾಜ್ಯಕ್ಕೆ ತರಿಸಿ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸರ ವಿಶೇಷ ತಂಡ ಭೇದಿಸಿದೆ. ಕಾನೂನು ಉಲ್ಲಂಘನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಟಿಕೆಟ್ ಹಾಗೂ ನಗದು ಜಪ್ತಿ ಮಾಡಲಾಗಿದೆ.

ವೆಂಕಟೇಶ್ವರ ವೇ ಬ್ರಿಡ್ಜ್ ಬಳಿ ಲಾಟರಿ ಮಾರಾಟ ನಡೆಸುತ್ತಿದ್ದ ಅರುಣ್ ಕುಮಾರ್ ಹಾಗೂ ಸಿಂಚನ ಹೋಟೆಲ್‌ನಲ್ಲಿ ವ್ಯವಹಾರ ನಡೆಸುತ್ತಿದ್ದ ಸ್ವಾಮಿ ಬಂಧಿತರಾಗಿದ್ದಾರೆ.

ಪೊಲೀಸರ ದಾಳಿಯಲ್ಲಿ ಒಟ್ಟು ₹55,200 ಮೌಲ್ಯದ ಕೇರಳ ರಾಜ್ಯ ಲಾಟರಿ ಟಿಕೆಟ್‌ಗಳು ಹಾಗೂ ₹22,930 ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ₹78,130 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಕರ್ನಾಟಕದಲ್ಲಿ ಲಾಟರಿ ನಿಷೇಧಿತವಾಗಿದ್ದರೂ, ಗಡಿ ಮಾರ್ಗಗಳನ್ನು ಬಳಸಿಕೊಂಡು ಅಕ್ರಮ ವ್ಯವಹಾರ ನಡೆಯುತ್ತಿರುವುದು ಈ ದಾಳಿಯಿಂದ ಬಹಿರಂಗವಾಗಿದೆ. ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ, ಅಡಿಷನಲ್ ಎಸ್‌ಪಿ ಮಲ್ಲಿಕ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಗಡಿ ಭಾಗದ ಅಕ್ರಮ ಜಾಲಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ.

ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

error: Content is protected !!