ಡಿಕೆಶಿಗೆ ಸಿಎಂ ಯೋಗ ಲಿಂ. ವೀರಗಂಗಾಧರರ ಆಶೀರ್ವಾದದ ಫಲ
ಸೋಮೇಶ್ವರ ದೇವಸ್ಥಾನದ ಸುತ್ತ ಮಾಂಸ ಮಾರಾಟ ನಿಲ್ಲಿಸಿ
“ಒಂದು ತಿಂಗಳೊಳಗೆ ಮಾಂಸ ಅಂಗಡಿಗಳನ್ನು ಸ್ಥಳಾಂತರಿಸದಿದ್ದರೆ ಪುರಸಭೆ ಎದುರು ಸಮಸ್ತ ಹಿಂದೂ ಸಂಘಟನೆಗಳಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು.”ಈರಣ್ಣ ಪೂಜಾರ, ಶ್ರೀರಾಮ್ ಸೇನೆ ತಾಲೂಕು ಅಧ್ಯಕ್ಷ
- ಒಂದು ತಿಂಗಳ ಗಡುವು!
- ಸೋಮೇಶ್ವರ ದೇವಸ್ಥಾನ ಹಿಂಭಾಗದಲ್ಲೇ ಮಾಂಸ ಅಂಗಡಿಗಳ ಕಾರ್ಯಾಚರಣೆ
- ಅಕ್ರಮ ಕಸಾಯಿಖಾನೆಗಳ ವಿರುದ್ಧ ಕ್ರಮಕ್ಕೆ ಆಗ್ರಹ
- ನಾಲ್ಕು ವರ್ಷಗಳ ಹಿಂದೆ ಜಿಲ್ಲಾಧಿಕಾರಿಗಳಿಂದ ತೆರವು ಆದೇಶ
- ಇನ್ನೂ ತೆರವು ಕಾರ್ಯವಾಗಿಲ್ಲವೆಂದು ಆರೋಪ
- “ಅಧಿಕಾರಿಗಳು ಮಾಂಸ ವ್ಯಾಪಾರಿಗಳ ಜೊತೆ ಶಾಮೀಲು” ಎಂದು ಟೀಕೆ
- ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಿ: ವಿಶ್ವನಾಥ ಖಾನಾಪೂರ ಮನವಿ
“ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರಿಗೆ ಈ ಬಾರಿ ಸಚಿವ ಸ್ಥಾನ ನೀಡುವುದು ಗದಗ ಜಿಲ್ಲೆಯ ಜನರ ಒತ್ತಾಸೆಯಾಗಿದೆ.”ವಿಶ್ವನಾಥ ಖಾನಾಪೂರ, ಅಧ್ಯಕ್ಷರು, ಗದಗ ಜಿಲ್ಲಾ ವಿಕಾಸ ವೇದಿಕೆ
ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನಕ್ಕೆ ಒತ್ತಾಯ
ಬಿತ್ತನೆ ಕಾರ್ಯದಲ್ಲಿ ಬ್ಯುಸಿ ಆದ ಅನ್ನದಾತರು!
ಮುಖ್ಯಮಂತ್ರಿ ಯಾರೇ ಆದರೂ ಕಾಂಗ್ರೆಸ್ ಆಡಳಿತ ಶಾಶ್ವತ: ಕುರಿ ಶಿವಮೂರ್ತಿ
“ಮುಖ್ಯಮಂತ್ರಿ ಯಾರೇ ಆದರೂ ಕಾಂಗ್ರೆಸ್ ಆಡಳಿತ ಮಾತ್ರ ಐದು ವರ್ಷಪೂರ್ಣಗೊಳಿಸಿ ಶಾಶ್ವತ ಅಸ್ತಿತ್ವ ಪಡೆಯಲಿದೆ.”ಕುರಿ ಶಿವಮೂರ್ತಿವಿಜಯನಗರ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ
ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!
ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ ಮೃತದೇಹವನ್ನು ಆಸ್ಪತ್ರೆಯಲ್ಲಿ ಇಟ್ಟು ಪತಿ ಎಸ್ಕೇಪ್ ಆದ ಘಟನೆ ನಡೆದಿದೆ.
ಗುಲ್ಷನ್ ಬಾನು (34) ಮೃತ ಮಹಿಳೆಯಾಗಿದ್ದು, ಪತಿ ಸೈಫ್ ಅಲಿಖಾನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಇಬ್ಬರು 14 ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.
ಮದುವೆಯ ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿ ನಂತರ ವರದಕ್ಷಿಣೆ ಹಣಕ್ಕಾಗಿ ಜಗಳ ಆರಂಭಗೊಂಡಿದ್ದು, ಪತ್ನಿಗೆ ನಿರಂತರ ಕಿರುಕುಳ ಮತ್ತು ಹಲ್ಲೆ ನಡೆಯುತ್ತಿದ್ದುದಾಗಿ ಆರೋಪಿಸಲಾಗಿದೆ. ಈ ಕುರಿತು ಚನ್ನರಾಯಪಟ್ಟಣ ಹಾಗೂ ಹಾಸನ ಮಹಿಳಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.
ಕುಟುಂಬಸ್ಥರು ಹಲವು ಬಾರಿ ರಾಜಿ ಪಂಚಾಯ್ತಿ ನಡೆಸಿದ್ದರೂ ಪರಿಸ್ಥಿತಿ ಸುಧಾರಿಸಿಲ್ಲ ಎಂದು ತಿಳಿದುಬಂದಿದೆ. ಇತ್ತೀಚೆಗೆ ಹಬ್ಬಕ್ಕೆ ಹಣವಿಲ್ಲ ಎಂಬ ಕಾರಣಕ್ಕೆ ಜಗಳ ನಡೆದಿದ್ದು, ಆ ಸಂದರ್ಭದಲ್ಲಿ ಪತ್ನಿಯನ್ನು ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ನಂತರ ಮೃತದೇಹವನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ಆಟೋದಲ್ಲಿ ತಂದು ಬಿಟ್ಟು ಆರೋಪಿ ಸೈಫ್ ಅಲಿಖಾನ್ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಲ್ಲಿ ಮೃತದೇಹ ಕಂಡು ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮರಣೋತ್ತರ ಪರೀಕ್ಷೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ನಡೆಸಲಾಗಿದೆ.
ಬೆಂಗಳೂರಿನಲ್ಲಿ ಮಳೆ ಅವಾಂತರ: ಕ್ಲಬ್ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು!
ಬೆಂಗಳೂರು:- ಇಂದು ನಗರದಲ್ಲಿ ಸುರಿದ ಭಾರೀ ಮಳೆಗೆ ದುರಂತವೊಂದು ಸಂಭವಿಸಿದೆ.
ಭಾರೀ ಮಳೆ ಹಿನ್ನೆಲೆ ಕ್ಲಬ್ ಕಾಂಪೌಂಡ್ ಕುಸಿದು ಆಟೋ ಮೇಲೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಗಂಗೊಂಡನಹಳ್ಳಿ ನಿವಾಸಿಯಾದ ಶಿವಬೋರಯ್ಯ (56) ಮೃತ ವ್ಯಕ್ತಿ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ನಗರದಾದ್ಯಂತ ಸಂಜೆ ವೇಳೆ ಮತ್ತೆ ಮಳೆರಾಯ ಅಬ್ಬರಿಸಿದ್ದು, ರಸ್ತೆಗಳು ಸೇರಿ ಅಂಡರ್ಪಾಸ್ಗಳು ಜಲಾವೃತಗೊಂಡಿದೆ. ಅಷ್ಟೇ ಅಲ್ಲ ಕೆಲವೆಡೆ ಮರಗಳು ಧರೆಗುರುಳಿದ ಘಟನೆಗಳು ಕೂಡ ವರದಿಯಾಗಿವೆ.
ಕೆ.ಆರ್. ಸರ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಮಧ್ಯೆ GBA ಕಮಿಷನರ್ ಮಹೇಶ್ವರ್ ರಾವ್ ಅವರು ಅಂಡರ್ಪಾಸ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಅಂಡರ್ಪಾಸ್ಗಳಲ್ಲಿ ನೀರು ಸಂಗ್ರಹವಾಗದಂತೆ ಹಾಗೂ ರಸ್ತೆಗಳಲ್ಲಿ ಸರಾಗವಾಗಿ ನೀರು ಹರಿಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕಸದ ಸಮರ್ಪಕ ವಿಲೇವಾರಿ ಮತ್ತು ಒಣಗಿದ ಮರಗಳ ತೆರವಿಗೆ ವಿಶೇಷ ಗಮನ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ ನಿಗೂಢ ನಾಪತ್ತೆ ಪ್ರಕರಣವು ಇದೀಗ ಭೀಕರ ಕೊಲೆ ಪ್ರಕರಣವಾಗಿ ಬೆಳಕಿಗೆ ಬಂದಿದೆ.
18 ವರ್ಷದ ಯುವಕ ವಿಕಾಸ್ ದಳವಾಯಿ ಹತ್ಯೆಯಾಗಿರುವುದು ದೃಢಪಟ್ಟಿದ್ದು, ಪ್ರೇಮ ಸಂಬಂಧದ ತ್ರಿಕೋನವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 20ರಂದು ಓಂಕಾರೇಶ್ವರ ದೇವಿ ಜಾತ್ರೆ ಸಂದರ್ಭದಲ್ಲಿ ಗ್ರಾಮದಲ್ಲಿ ನಡೆದ ನಾಟಕ ವೀಕ್ಷಿಸಲು ಹೋಗಿದ್ದ ವಿಕಾಸ್ ದಳವಾಯಿ ಮನೆಗೆ ಮರಳದೆ ನಾಪತ್ತೆಯಾಗಿದ್ದ. ಬಳಿಕ ಕುಟುಂಬಸ್ಥರು ಬೀಳಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಆರಂಭದಲ್ಲಿ ಸುಳಿವು ಸಿಗದೇ ಇದ್ದರೂ, ನಂತರದ ವಿಚಾರಣೆಯಲ್ಲಿ ಪ್ರಕರಣಕ್ಕೆ ಭೀಕರ ತಿರುವು ಸಿಕ್ಕಿದೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಯುವತಿಯನ್ನೇ ಕೇಂದ್ರವಾಗಿಸಿಕೊಂಡ ತ್ರಿಕೋನ ಪ್ರೇಮಕಥೆಯಲ್ಲಿ ಮತ್ತೊಬ್ಬ ಪ್ರೇಮಿ ಕೃಷ್ಣಾ ಹಾಗೂ ಆಕೆಯ ಸಹೋದರ ರಾಜು ಸೇರಿಕೊಂಡು ವಿಕಾಸ್ನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ನಂತರ ಸಾಕ್ಷ್ಯ ನಾಶಪಡಿಸಲು ಶವವನ್ನು ಗೋಣಿ ಚೀಲದಲ್ಲಿ ತುಂಬಿ, ಕಲ್ಲುಗಳನ್ನು ಕಟ್ಟಿಹಾಕಿ ಘಟಪ್ರಭಾ ನದಿಗೆ ಎಸೆದಿರುವುದು ತಿಳಿದುಬಂದಿದೆ.
ನಾಪತ್ತೆ ಪ್ರಕರಣದ ತನಿಖೆ ಮುಂದುವರಿದಂತೆ ಶಂಕೆಯ ಆಧಾರದ ಮೇಲೆ ರಾಜುವಿನ ಸಹೋದರ ರವಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ ಎಂದು ತಿಳಿದುಬಂದಿದೆ.
ಈಗ ಪ್ರಮುಖ ಆರೋಪಿಗಳಾದ ಕೃಷ್ಣಾ ಮತ್ತು ರಾಜು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಮೃತ ಯುವಕನ ಕುಟುಂಬದಲ್ಲಿ ಆಕ್ರಂದನ ಮಡುಗಟ್ಟಿದ್ದು, ಗ್ರಾಮದಲ್ಲಿ ಶೋಕವಾತಾವರಣ ನಿರ್ಮಾಣವಾಗಿದೆ.

