“ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸುವುದು ಸರ್ಕಾರದ ಜವಾಬ್ದಾರಿ. ಅರ್ಹರಿಗೆ ಮನೆ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು.”ಎಚ್.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ“ನಮ್ಮ ಅಳಲಿಗೆ ಸ್ಪಂದಿಸಿ ಸಚಿವರು ಸ್ಥಳಕ್ಕೆ ಬಂದು ಪರಿಶೀಲಿಸಿರುವುದು ನಮಗೆ ಧೈರ್ಯ ತಂದಿದೆ.”ಗಂಗಿಮಡಿ ನಿವಾಸಿಗಳು
ಸಂತ್ರಸ್ತರ ಅಳಲು ಆಲಿಸಿದ ಸಚಿವ ಪಾಟೀಲ
ಬೆಂಗಳೂರು ರಸ್ತೆಯಲ್ಲಿ ಮತ್ತೆ ಪಂಕ್ಚರ್ ಮಾಫಿಯಾ ದಂಧೆ! ಪೊಲೀಸ್ ಠಾಣೆ ಕೂಗಳತೆಯಲ್ಲೇ ಕೃತ್ಯ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಕುಖ್ಯಾತ ‘ಪಂಕ್ಚರ್ ಮಾಫಿಯಾ’ ಮತ್ತೆ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ.
ನಗರದ ಕೆಲ ಪ್ರಮುಖ ರಸ್ತೆಗಳಲ್ಲಿಯೇ ತಡರಾತ್ರಿ ನೂರಾರು ಮೊಳೆಗಳನ್ನು ಉದ್ದೇಶಪೂರ್ವಕವಾಗಿ ಚೆಲ್ಲಿ ವಾಹನ ಸವಾರರಿಗೆ ಬಲೆ ಬೀಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಶೇಷವೆಂದರೆ ಈ ಬಾರಿ ಪೊಲೀಸ್ ಠಾಣೆಯೊಂದರ ಸಮೀಪದ ರಸ್ತೆಯಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ವರದಿಗಳ ಪ್ರಕಾರ, ಈ ಜಾಲವು ರಾತ್ರಿ ವೇಳೆ ರಸ್ತೆಗಳ ಮೇಲೆ ಚೂಪಾದ ಮೊಳೆಗಳನ್ನು ಹರಡುತ್ತದೆ. ಬೆಳಗ್ಗೆ ಆ ಮಾರ್ಗದಲ್ಲಿ ಸಾಗುವ ದ್ವಿಚಕ್ರ ವಾಹನ ಹಾಗೂ ಕಾರುಗಳ ಟೈರ್ಗಳು ಪಂಕ್ಚರ್ ಆಗುತ್ತವೆ. ನಂತರ ಸವಾರರು ಹತ್ತಿರದ ಪಂಕ್ಚರ್ ಅಂಗಡಿಗಳಿಗೆ ತೆರಳುವಂತೆ ಮಾಡಲಾಗುತ್ತದೆ. ಅಲ್ಲಿ ಅನಗತ್ಯವಾಗಿ ಟೈರ್ ಬದಲಾವಣೆ, ರಿಪೇರಿ ಹೆಸರಿನಲ್ಲಿ ಸಾವಿರಾರು ರೂಪಾಯಿ ವಸೂಲಿ ಮಾಡಲಾಗುತ್ತದೆ ಎಂಬ ಆರೋಪ ಇದೆ.
ಈ ರೀತಿಯ ದಂಧೆ ನಗರದಲ್ಲಿ ಹಿಂದೆಯೂ ಬೆಳಕಿಗೆ ಬಂದಿದ್ದರೂ, ಇದೀಗ ಪೊಲೀಸ್ ಠಾಣೆಯ ಸುತ್ತಮುತ್ತಲೇ ನಡೆದಿರುವ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಕಾನೂನು ವ್ಯವಸ್ಥೆಯ ಕಣ್ಣೆದುರಲ್ಲೇ ಇಂತಹ ಚಟುವಟಿಕೆ ನಡೆಯುತ್ತಿರುವುದು ಪೊಲೀಸ್ ಗಸ್ತು ಹಾಗೂ ಭದ್ರತಾ ವ್ಯವಸ್ಥೆಯ ಮೇಲೆ ಪ್ರಶ್ನೆ ಎತ್ತಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಅದನ್ನು @Karnataka Portfolio ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಸಾರ್ವಜನಿಕರು ಇಂತಹ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಸಲಹೆ ನೀಡಲಾಗಿದೆ.
ಮುಂಗಾರು ಅಬ್ಬರಕ್ಕೆ ನರೇಗಲ್ಲ ತತ್ತರ!
ಪ್ರಾಣ ಕೊಟ್ಟರೂ ಭೂಮಿ ಬಿಡೋದಿಲ್ಲ!
“ಪ್ರಾಣ ಕೊಟ್ಟರೂ ಭೂಮಿ ಬಿಡುವುದಿಲ್ಲ. ನಮ್ಮ ಭೂಮಿಗೆ ಕೈ ಹಾಕಿದರೆ ರೈತರು ಸುಮ್ಮನಿರುವುದಿಲ್ಲ”ಮಲ್ಲಿಕಾರ್ಜುನ ಕಿರೇಸೂರ,ಕರವೇ ಗೌರವಾಧ್ಯಕ್ಷ
ಇಂಧನ ದರ ಏರಿಕೆಗೆ ವೆಲ್ಫೇರ್ ಪಾರ್ಟಿ ಆಕ್ರೋಶ
“ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರಗಳ ನಿರಂತರ ಏರಿಕೆ ಸಾಮಾನ್ಯ ಜನರ ಮೇಲಿನ ಆರ್ಥಿಕ ಶೋಷಣೆಯಾಗಿದೆ”ತಾಹೇರ್ ಹುಸೇನ್ರಾಜ್ಯಾಧ್ಯಕ್ಷ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕ
ಜನರ ಯೋಜನೆಗಳೇ ಜಿಲ್ಲೆಯ ಅಭಿವೃದ್ಧಿಗೆ ದಿಕ್ಕು
“ಜನರ ಪಾಲ್ಗೊಳ್ಳುವಿಕೆಯಿಂದ ರೂಪುಗೊಳ್ಳುವ ಯೋಜನೆಗಳೇ ಶಾಶ್ವತ ಅಭಿವೃದ್ಧಿಗೆ ಅಡಿಪಾಯ.”ಡಾ. ಎಚ್.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ
ಕೋಮು ಗೂಂಡಾಗಳ ಕೇಸ್ ವಾಪಸ್ ನಿರ್ಧಾರ ರದ್ದುಪಡಿಸಿ
77 ದಿನಗಳಲ್ಲೇ ತೀರ್ಪು..! ಬಾಲಕಿ ಹತ್ಯೆ ಪ್ರಕರಣದ ಅಪರಾಧಿಗೆ ಮರಣದಂಡನೆ
ಚೆನ್ನೈ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪೋಕ್ಸೋ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ.
ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಧರ್ಮ ಮುನೀಶ್ವರನ್ ಎಂದು ಗುರುತಿಸಲಾಗಿದೆ. ಕೇವಲ 77 ದಿನಗಳಲ್ಲೇ ತನಿಖೆ ಹಾಗೂ ವಿಚಾರಣೆ ಪೂರ್ಣಗೊಂಡು ಕೋರ್ಟ್ ತೀರ್ಪು ಪ್ರಕಟಿಸಿದೆ.
ನ್ಯಾಯಾಲಯವು ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಎರಡೂ ಆರೋಪಗಳಲ್ಲಿ ಅಪರಾಧಿ ಎಂದು ತೀರ್ಮಾನಿಸಿ ಪ್ರತ್ಯೇಕವಾಗಿ ಮರಣದಂಡನೆ ಶಿಕ್ಷೆ ವಿಧಿಸಿದೆ.
ವಿಲಾತಿಕುಲಂನ 12ನೇ ತರಗತಿಯ 17 ವರ್ಷದ ವಿದ್ಯಾರ್ಥಿನಿ ಈ ವರ್ಷದ ಮಾರ್ಚ್ನಲ್ಲಿ ನಾಪತ್ತೆಯಾಗಿದ್ದಳು. ನಂತರ ಆಕೆಯ ಶವ ಮನೆಯ ಸಮೀಪದ ಕುರುಚಲು ಪ್ರದೇಶದಲ್ಲಿ ಪತ್ತೆಯಾಗಿತ್ತು.
ಘಟನೆ ಬಳಿಕ ಪೊಲೀಸರು ತೀವ್ರ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ತ್ವರಿತ ವಿಚಾರಣೆ ನಂತರ ಇದೀಗ ಗಂಭೀರ ಶಿಕ್ಷೆ ಪ್ರಕಟವಾಗಿದೆ.
“ಬದುಕಿದ್ದವರಿಗೇ ಡೆತ್ ಸರ್ಟಿಫಿಕೆಟ್!”- ಕೋಲಾರ ನಗರಸಭೆಯಲ್ಲಿ ನಕಲಿ ದಾಖಲೆಗಳ ದಂಧೆ ಶಂಕೆ; ಲೋಕಾಯುಕ್ತ ದಿಢೀರ್ ದಾಳಿ
ಕೋಲಾರ: ಜೀವಂತ ವ್ಯಕ್ತಿಗಳಿಗೆ ಮರಣ ಪ್ರಮಾಣ ಪತ್ರ ನೀಡಿರುವುದು ಸೇರಿದಂತೆ ಜನನ–ಮರಣ ದಾಖಲೆಗಳಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೋಲಾರ ನಗರಸಭೆ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.
ನಗರಸಭೆಯ ಆರೋಗ್ಯ ವಿಭಾಗದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ಒಂದೇ ನೋಂದಣಿಯಲ್ಲಿ ಇಬ್ಬರು ಮಕ್ಕಳಿಗೆ ಜನನ ಪ್ರಮಾಣ ಪತ್ರ ನೀಡಿರುವುದು ಹಾಗೂ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಜನನವಾಗದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣ ಪತ್ರ ವಿತರಿಸಿರುವ ಗಂಭೀರ ಆರೋಪಗಳ ಕುರಿತು ತನಿಖೆ ಆರಂಭಿಸಿದ್ದಾರೆ.
ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೋಲಾರ ಲೋಕಾಯುಕ್ತ ಎಸ್ಪಿ ಆಂಥೋಣಿ ಜಾನ್ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಆಂಜಿನಪ್ಪ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.
ಈ ಕೆಟ್ಟ ಅಭ್ಯಾಸಗಳು ನಿಮ್ಮ ಗೌರವ ಹಾಳು ಮಾಡಬಹುದು: ಆಚಾರ್ಯ ಚಾಣಕ್ಯರ ಎಚ್ಚರಿಕೆ..!
ಸಮಾಜದಲ್ಲಿ ಹಣಕ್ಕಿಂತ ಗೌರವ ದೊಡ್ಡದು ಎಂದು ಹೇಳಲಾಗುತ್ತದೆ. ವ್ಯಕ್ತಿಯ ನಡವಳಿಕೆ, ಮಾತು ಹಾಗೂ ದೈನಂದಿನ ಅಭ್ಯಾಸಗಳೇ ಅವನ ವ್ಯಕ್ತಿತ್ವವನ್ನು ರೂಪಿಸುತ್ತವೆ.
ಆದರೆ ತಿಳಿದೋ ತಿಳಿಯದೆಯೋ ಬೆಳೆಸಿಕೊಳ್ಳುವ ಕೆಲವು ಕೆಟ್ಟ ಅಭ್ಯಾಸಗಳು ವ್ಯಕ್ತಿಯ ಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ ಎಂದು ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಎಚ್ಚರಿಸಿದ್ದಾರೆ.
ಅತಿಯಾಗಿ ಮಾತನಾಡುವುದು:
ಪ್ರತಿಯೊಂದು ವಿಷಯದಲ್ಲೂ ಅನಗತ್ಯವಾಗಿ ಮಾತನಾಡುವ ವ್ಯಕ್ತಿ ತನ್ನ ಗಂಭೀರತೆಯನ್ನು ಕಳೆದುಕೊಳ್ಳುತ್ತಾನೆ ಎಂದು ಚಾಣಕ್ಯರು ಹೇಳಿದ್ದಾರೆ. ಹೆಚ್ಚು ಮಾತನಾಡುವುದರಿಂದ ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ವ್ಯಕ್ತಿಯ ಇಮೇಜ್ಗೆ ಹಾನಿಯಾಗಬಹುದು. ಹೀಗಾಗಿ ಎಲ್ಲಿ, ಹೇಗೆ ಮತ್ತು ಎಷ್ಟು ಮಾತನಾಡಬೇಕು ಎಂಬ ಅರಿವು ಅಗತ್ಯ.
ಕೋಪ ನಿಯಂತ್ರಣದ ಕೊರತೆ:
ಅತಿಯಾದ ಕೋಪ ಮನುಷ್ಯನ ದೊಡ್ಡ ಶತ್ರು ಎಂದು ಚಾಣಕ್ಯರು ಬಣ್ಣಿಸಿದ್ದಾರೆ. ಪದೇ ಪದೇ ಕೋಪಗೊಳ್ಳುವ ವ್ಯಕ್ತಿ ತನ್ನ ಮಾತು ಮತ್ತು ವರ್ತನೆಯಿಂದ ಇತರರ ಗೌರವ ಕಳೆದುಕೊಳ್ಳುತ್ತಾನೆ. ಕೋಪದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ನಂತರ ವಿಷಾದಕ್ಕೆ ಕಾರಣವಾಗುತ್ತವೆ.
ದುರಾಸೆ ಮತ್ತು ಸ್ವಾರ್ಥ:
ಅತಿಯಾದ ದುರಾಸೆ ವ್ಯಕ್ತಿಯನ್ನು ನೈತಿಕತೆಯಿಂದ ದೂರ ಮಾಡುತ್ತದೆ. ಪ್ರತಿಯೊಂದು ಕೆಲಸವನ್ನೂ ಸ್ವಾರ್ಥದ ದೃಷ್ಟಿಯಿಂದ ಮಾಡುವವರ ಮೇಲೆ ಜನರು ನಂಬಿಕೆ ಇಡುವುದಿಲ್ಲ. ಇದರ ಪರಿಣಾಮವಾಗಿ ಗೌರವವೂ ಕಡಿಮೆಯಾಗುತ್ತದೆ.
ಸಮಯದ ಮಹತ್ವ ಅರಿಯದಿರುವುದು:
ಸಮಯಕ್ಕೆ ಬೆಲೆ ಕೊಡದ ವ್ಯಕ್ತಿಯನ್ನು ಇತರರು ಬೇಜವಾಬ್ದಾರಿ ಎಂದು ಪರಿಗಣಿಸುತ್ತಾರೆ. ಸಮಯಕ್ಕೆ ಸರಿಯಾಗಿ ಕೆಲಸ ಮಾಡುವುದರಿಂದ ವಿಶ್ವಾಸ ಮತ್ತು ಗೌರವ ಸಿಗುತ್ತದೆ. ಕೆಲಸದಲ್ಲಿ ವಿಳಂಬ ಮಾಡಿದರೆ ವ್ಯಕ್ತಿಯ ವಿಶ್ವಾಸಾರ್ಹತೆ ಕುಸಿಯುತ್ತದೆ ಎಂದು ಚಾಣಕ್ಯರು ಹೇಳಿದ್ದಾರೆ.
ದುರಹಂಕಾರ:
ಅತಿಯಾದ ಹೆಮ್ಮೆ ಮತ್ತು ದುರಹಂಕಾರ ವ್ಯಕ್ತಿಯ ಪತನಕ್ಕೆ ಕಾರಣವಾಗುತ್ತದೆ. ದುರಹಂಕಾರ ಹೊಂದಿರುವ ವ್ಯಕ್ತಿಯನ್ನು ಸಮಾಜದಲ್ಲಿ ಹೆಚ್ಚು ಕಾಲ ಗೌರವಿಸುವುದಿಲ್ಲ ಎಂದು ಚಾಣಕ್ಯ ನೀತಿಯಲ್ಲಿ ಉಲ್ಲೇಖಿಸಲಾಗಿದೆ.
ನಕಾರಾತ್ಮಕ ಚಿಂತನೆ:
ಯಾವಾಗಲೂ ದೂರು ನೀಡುವುದು ಮತ್ತು ನಕಾರಾತ್ಮಕ ಚಿಂತನೆ ಹೊಂದಿರುವುದು ಕೂಡ ವ್ಯಕ್ತಿಯ ಖ್ಯಾತಿಗೆ ಧಕ್ಕೆ ತರುತ್ತದೆ. ಸದಾ ನಕಾರಾತ್ಮಕ ಯೋಚನೆ ಹೊಂದಿರುವವರಿಂದ ಜನ ದೂರವಾಗುತ್ತಾರೆ ಎಂದು ಚಾಣಕ್ಯರು ಹೇಳಿದ್ದಾರೆ.

