Home Blog Page 5

ಶಾಂತಿಯುತ ಹೋರಾಟವೇ ನಮ್ಮ ಧ್ಯೇಯ

0

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ವೇತನ ಪಾವತಿಯ ವಿಳಂಬದ ವಿರುದ್ಧ ಕಳೆದ ಐದು ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅಸಹಕಾರ ಚಳುವಳಿಯ ಭಾಗವಾಗಿ, ಗದಗ ತಾಲೂಕು ಪಂಚಾಯತ್‌ನಲ್ಲಿ ಪ್ರತಿಭಟನೆ 5ನೇ ದಿನಕ್ಕೆ ಮುಂದುವರೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ರಾಜ್ಯ ನೇವಾಕ ಸಂಘದ ಜಿಲ್ಲಾ ಪ್ರತಿನಿಧಿ ಕಿರಣಕುಮಾರ ಎಸ್.ಎಚ್. ಮಾತನಾಡಿ, ಕಳೆದ ಐದು ದಿನಗಳಿಂದ ರಾಜ್ಯ ನರೇಗಾ ಕುಟುಂಬದ ಸದಸ್ಯರು ಒಗ್ಗಟ್ಟಿನಿಂದ ಅಹಕಾರ ಚಳುವಳಿ ನಡೆಸುತ್ತಿದ್ದೇವೆ. ಈ ಅಸಹಕಾರ ಚಳುವಳಿಯಿಂದ ವೇತನ ಪಾವತಿ ಪ್ರಕ್ರಿಯೆಯ ವೇಗ ಹೆಚ್ಚುತ್ತಿದೆ. ಆದರೂ ಕಡಿಮೆ ಮೊತ್ತದ ಫಂಡ್ ಟ್ರಾನ್ಸ್ಫರ್ ಆರ್ಡರ್ ರಚನೆಯ ಪ್ರಕ್ರಿಯೆ ಯಶಸ್ವಿಯಾಗಿದೆ. ವೇತನ ಪಾವತಿಗೆ ಸಂಬಂಧಿಸಿದ ಸೃಜನೆ ಬಗ್ಗೆ ಜಿಲ್ಲಾ ಪಂಚಾಯಿತಿಯಿಂದ ಕ್ರಮ ವಹಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಐಇಸಿ ಸಂಯೋಜಕ ವೀರಭದ್ರಪ್ಪ ಸಜ್ಜನ ಮಾತನಾಡಿ, ಕಳೆದ ಅರು ತಿಂಗಳಿಂದ 130ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ವೇತನ ಪಾವತಿಯಾಗಿಲ್ಲ. ಈ ಅಸಹಕಾರ ಚಳುವಳಿಯಿಂದಾಗಿ ಸರ್ಕಾರದ ಗಮನ ಸೆಳೆಯಲಾಗಿದೆ. ರಾಜ್ಯ ಪಿಡಿಒ ಕ್ಷೇಮಾಭಿವೃದ್ಧಿ ಸಂಘ, ರಾಜ್ಯ ಗ್ರಾ.ಪಂ ಜನಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘ ಮತ್ತು ರಾಜ್ಯ ಡಿಇಒ ಸಂಘದಂತಹ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಾವು ಒಗ್ಗಟ್ಟಾಗಿ ಮುಂದುವರಿಯುತ್ತೇವೆ ಎಂದರು.

ಪ್ರತಿಭಟನೆಯಲ್ಲಿ ಮಹೇಶ್ ಚಿತವಾಡಗಿ, ಬಸವರಾಜ ಮಣ್ಣಮನವರ, ಮೋಹನ ಹೊಂಬಳ, ಚಂದ್ರು ಹಳ್ಳಿ, ನವೀನ ಬಸರಿ, ಅಜಯ ಅಬ್ಬಿಗೇರಿ, ಮಂಜುನಾಥ ತಳವಾರ, ಮಂಜುನಾಥ ಕುಲಕರ್ಣಿ, ವಿರೇಶ ಪಟ್ಟಣಶೆಟ್ಟಿ, ಸಚಿನ ಭಂಡಾರಿ, ಪ್ರಶಾಂತ ಯಾವಗಲಮಠ, ತಾಲೂಕಿನ ಬಿ.ಎಫ್.ಟಿಗಳು ಹಾಜರಿದ್ದರು.

ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣದೊಂದಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಆಳುವ ಎಲ್ಲ ಸರ್ಕಾರಗಳು ನಿರಂತರ ಪುನಶ್ಚೇತನಗೊಳಿಸುವ ಕಾರ್ಯ ಮಾಡುತ್ತಲೇ ಬಂದಿವೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅವರು ಶುಕ್ರವಾರ ಯಲ್ಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ವಿವೇಕ ಕೊಠಡಿ ಯೋಜನೆಯಡಿ 34.30 ಲಕ್ಷ ರೂಗಳಲ್ಲಿ 2 ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳವಾಗಬೇಕು ಮತ್ತು ಶಿಕ್ಷಣದ ಗುಣಮಟ್ಟದ ಎತ್ತರಕ್ಕೇರಬೇಕಾದಲ್ಲಿ ಮೊದಲ ಆದ್ಯತೆಯಾಗಿ ಹೆಚ್ಚಿನ ಅನುದಾನ, ಸೌಲಭ್ಯಗಳನ್ನು ಕಲ್ಪಿಸುವುದು ಮುಖ್ಯವಾಗಿದೆ. ಅದಕ್ಕೆ ತಕ್ಕಂತೆ ಶಿಕ್ಷಕರು ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಬೇಕು. ಪಾಲಕರೂ ಸಹ ಇಂಗ್ಲೀಷ್ ಮೀಡಿಯಂ ವ್ಯಾಮೋಹ ಬಿಟ್ಟು ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದರು.

ಈ ವೇಳೆ ದೊಡ್ಡೂರ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಈಳಿಗೇರ, ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಮಂಜಣ್ಣ ಅಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ನಾಣಕಿ ನಾಯಕ, ಮಹಾಂತಗೌಡ ಭರಮಗೌಡ್ರ, ತುಕ್ಕಪ್ಪ ಪೂಜಾರ, ಸಕ್ರಪ್ಪ ಕಡೆಮನಿ, ಫಕ್ಕೀರಗೌಡ ಭರಮಗೌಡ್ರ, ಮಹಾಂತೇಶ ಹರಕುಣಿ, ಹನುಮಂತಪ್ಪ ಲಮಾಣಿ, ರಾಮಣ್ಣ ಲಮಾಣಿ, ಕಿರಣ ಲಮಾಣಿ, ಕುಮಾರ ಲಮಾಣಿ, ಮಹಾಂತೇಶ ಮತ್ತೂರು, ಶಿವಪ್ಪ ಅಕ್ಕೂರ, ಸುನೀಲ ಲಮಾಣಿ, ಡಾಕಪ್ಪ ಲಮಾಣಿ, ರವಿ ಭಜಕ್ಕನವರ, ಎಫ್.ಎಚ್. ತಿಮ್ಮಾಪುರ, ಮಹೇಶ ಅಥಣಿ, ಯು.ಜಿ. ಹುಚ್ಚಯ್ಯನಮಠ, ಫಕ್ಕೀರೇಶ ಕಟಗಿ, ಮುಖ್ಯೋಪಾಧ್ಯಾಯ ಬಿ.ಎನ್. ಗಾಯಕವಾಡ, ಶಿಕ್ಷಕರು ಇದ್ದರು.

ಗುರುಗಳು ನಮ್ಮ ಜೀವನದ ಅವಿಭಾಜ್ಯ ಅಂಗ

0

ವಿಜಯಸಾಕ್ಷಿ ಸುದ್ದಿ, ಗದಗ: ಗುರುಪೂರ್ಣಿಮೆಗೆ ಧಾರ್ಮಿಕ ಹಾಗೂ ಶೈಕ್ಷಣಿಕ ಮಹತ್ವವಿದೆ. ಗುರು ಎಂದರೆ ಅಂಧಕಾರ, ಅಜ್ಞಾನವನ್ನು ದೂರ ಮಾಡುವವರು ಎಂಬ ನಂಬಿಕೆ ಬಹುತೇಕರದ್ದು. ಗುರುಗಳು ನಮ್ಮ ಜೀವನದ ಅವಿಭಾಜ್ಯ ಅಂಗ ಎಂಬ ನಂಬಿಕೆಯಿಂದ ನಾವೆಲ್ಲ ಜೀವನ ನಡೆಸುತ್ತಿದ್ದೇವೆ ಎಂದು ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪ.ಪೂ ಕಲ್ಲಯ್ಯಜ್ಜನವರು ಹೇಳಿದರು.

ಅವರು ಗುರುವಾರ ಗದಗ ಜಿಲ್ಲಾ ಜೇಂಟ್ಸ್ ಗ್ರುಪ್ ಆಫ್ ಸಖಿ ಸಹೇಲಿ ಸಂಘಟನೆಯಿಂದ ಗದುಗಿನ ವಿರೇಶ್ವರ ಪುಣ್ಯಾಶ್ರಮದಲ್ಲಿ ಜರುಗಿದ ಗುರುವಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಜೀವನದಲ್ಲಿ ಸರಿಯಾದ ಮಾರ್ಗ ತೋರಬಲ್ಲವನೇ ಗುರು. ಈ ಎರಡಕ್ಷರದಲ್ಲಿ ಗುರು-ಶಿಷ್ಯರ ಬಾಂಧವ್ಯವಿದೆ. ಮನುಷ್ಯನ ಸಾವಿರಾರು ತೊಂದರೆಗಳಿಗೆ ಸರಿಯಾದ ಮಾರ್ಗಗಳನ್ನು, ನ್ಯಾಯ-ನೀತಿ, ಧರ್ಮ-ಸಂಸ್ಕೃತಿಯ ಹಾದಿಯನ್ನು ತೋರಿ ಅವರನ್ನು ಸದ್ವಿಚಾರಿಗಳನ್ನಾಗಿ ಮಾಡುವವನೇ ಗುರುವಾಗಿದ್ದಾನೆ ಎಂದರು.

ಗದಗ ಜಿಲ್ಲಾ ಜೇಂಟ್ಸ್ ಗ್ರುಪ್ ಆಫ್ ಸಖಿ ಸಹೇಲಿ ಅಧ್ಯಕ್ಷೆ ಸುಮಾ ಪಾಟೀಲ ಮಾತನಾಡಿ, ಮನುಷ್ಯನ ಭವದ ತೊಂದರೆಗಳಿಗೆ ಸರಿಯಾದ ಬೋಧನೆಯ ಮೂಲಕ ಸೂಕ್ತವಾದ ದಾರಿಯನ್ನು ತೋರಿ, ಉತ್ತಮರನ್ನಾಗಿ ಮಾಡುವ ಕೆಲಸ ಗುರುವಿನಿಂದ ನಡೆಯುತ್ತದೆ ಎಂದರು.

ನಿರ್ಮಲಾ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಶಿಕಲಾ ಮಾಲೀಪಾಟೀಲ ಹಾಗೂ ಮಾಧುರಿ ಮಾಳೆಕೊಪ್ಪ ಪ್ರಾರ್ಥಿಸಿದರು. ಅಶ್ವಿನಿ ಮಾದಗುಂಡಿ ಸ್ವಾಗತಿಸಿದರು. ಚಂದ್ರಕಲಾ ಸ್ಥಾವರಮಠ ನಿರೂಪಿಸಿದರು. ಪ್ರಿಯಾಂಕಾ ಹಳ್ಳಿ ನಿರೂಪಿಸಿದರು. ವಿದ್ಯಾ ಶಿವನಗುತ್ತಿ ವಂದಿಸಿದರು.

ಕಾರ್ಯಕ್ರಮದಲ್ಲಿ ಮಧು ಕರಿಬಿಷ್ಠಿ, ರೇಖಾ ರೊಟ್ಟಿ, ಸುಷ್ಮೀತಾ ವೆರ್ಣಕರ, ಸುಗ್ಗಲಾ ಯಳಮಲಿ, ಶೋಭಾ ಹಿರೇಮಠ, ಶ್ರೀದೇವಿ ಮಹೇಂದ್ರಕರ, ಪದ್ಮಿನಿ ಮುಂತಾದವರು ಉಪಸ್ಥಿತರಿದ್ದರು.

ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ನಿತ್ಯ ನೂರಾರು ಸಂಖ್ಯೆಯಲ್ಲಿ ಬರುವ ಪ್ರಯಾಣಿಕರಿಗೆ ಬಸ್ ನಿಲ್ದಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಬಸ್ ನಿಲ್ದಾಣ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ಅವರು ಪಟ್ಟಣದಲ್ಲಿ ಶುಕ್ರವಾರ ಜರುಗಿದ ಪಂಚ ಗ್ಯಾರಂಟಿ ಯೋಜನೆಗಳ ಜನಸಂಪರ್ಕ ಸಮಾರಂಭದಲ್ಲಿ ಪಾಲ್ಗೊಂಡು ನಂತರ ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಹಲವಾರು ಸೌಲಭ್ಯಗಳಿಲ್ಲದೆ ಜನರು ಪರದಾಡುತ್ತಿದ್ದಾರೆ. ಪ್ರಯಾಣಿಕರು ಕುಳಿತುಕೊಳ್ಳುವ ಆಸನದ ಸಮರ್ಪಕ ವ್ಯವಸ್ಥೆಯಾಗಬೇಕು ಎಂದರು. ಇದೇ ವೇಳೆ ಶೌಚಾಲಯ ನಿರ್ವಹಣೆ ಮಾಡುವವರು ಪ್ರಯಾಣಿಕರಿಂದ 2 ರೂಗಳ ಬದಲು 10 ರೂ ಪಡೆಯುತ್ತಿರುವ ಕುರಿತು ಪ್ರಯಾಣಿಕರು ಆರೋಪಿಸಿದರು. ಕೂಡಲೇ ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ಘಟಕ ವ್ಯವಸ್ಥಾಪಕರಿಗೆ ಸೂಚಿಸಿದರಲ್ಲದೆ, ಸಾರ್ವಜನಿಕರಿಂದ ದೂರುಗಳು ಬರದಂತೆ ನಿಲ್ದಾಣದಲ್ಲಿ ಸ್ವಚ್ಛತೆ, ಸೌಲಭ್ಯಗಳನ್ನು ನೀಡುವಂತೆ ತಿಳಿಸಿದರು.

ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ, ರಾಮಣ್ಣ ಲಮಾಣಿ (ಶಿಗ್ಲಿ ) ಗೀತಾ ಬೀರಣ್ಣವರ, ತಿಪ್ಪಣ್ಣ ಸಂಶಿ, ವಿಜಯ ಹಳ್ಳಿ, ಶಿವರಾಜಗೌಡ ಪಾಟೀಲ, ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ದೇವರಾಜ, ಘಟಕ ವ್ಯವಸ್ಥಾಪಕಿ ಸವಿತಾ ಆದಿ ಸೇರಿದಂತೆ ಅನೇಕರು ಇದ್ದರು.

ದಾವಣಗೆರೆ: ಸಾಲದ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿಯ ಮೂಗು ಕಚ್ಚಿದ ಪತಿ!

0

ಶಿವಮೊಗ್ಗ: ಸಾಲದ ವಿಚಾರಕ್ಕೆ ಗಂಡ- ಹೆಂಡತಿಯ ನಡುವೆ ಜಗಳ ನಡೆದು ಪತಿಯೊರ್ವ ಪತ್ನಿಯ ಮೂಗನ್ನೇ ಹಲ್ಲಿನಿಂದ ಕಚ್ಚಿ ತುಂಡರಿಸಿದ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ.

ಪತ್ನಿ ವಿದ್ಯಾ (30) ರ ಮೂಗಿನ ಮುಂಭಾಗ ಸಂಪೂರ್ಣ ತುಂಡಾಗಿದ್ದು, ವಿದ್ಯಾ ಅವರ ಪತಿ ವಿಜಯ್ ಈ ಕೃತ್ಯ ಎಸಗಿದ್ದಾನೆ. ಜುಲೈ 8ರಂದು ಮಧ್ಯಾಹ್ನ, ದಂಪತಿಗೆ ಸಾಲದ ಕಂತು ಕಟ್ಟುವ ವಿಚಾರವಾಗಿ ಗಲಾಟೆ ನಡೆದಿದ್ದು, ವಿಚಾರ ವಿಕೋಪಕ್ಕೆ ತಿರುಗಿ ಪತಿ ವಿಜಯ್ ಪತ್ನಿಗೆ ನಿಂದನೆ ಮಾಡಿ ಹಲ್ಲೆ ಮಾಡಿದ್ದಾನೆ.

ಗಲಾಟೆ ವೇಳೆ ಕೆಳಗೆ ಬಿದ್ದ ಪತ್ನಿ ವಿದ್ಯಾ ಅವರ ಮೂಗನ್ನೇ ವಿಜಯ್ ಹಲ್ಲಿನಿಂದ ಕಚ್ಚಿ ಕಡಿದು ಹಾಕಿದ್ದಾನೆ. ಗಾಯಗೊಂಡ ವಿದ್ಯಾಳನ್ನು ಸ್ಥಳೀಯರು ಕೂಡಲೇ ಚೆನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಕುರಿತು ಪ್ರಾಥಮಿಕವಾಗಿ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಮೆಡಿಕೋ ಲೀಗಲ್ ಕೇಸ್ ದಾಖಲಾಗಿದ್ದು, ಬಳಿಕ ಪತ್ನಿಯ ದೂರಿನ ಆಧಾರದಲ್ಲಿ ಚೆನ್ನಗಿರಿ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಎಫ್ಐಆರ್ ದಾಖಲಿಸಿರುವ ಚೆನ್ನಗಿರಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶೂಟಿಂಗ್​ನಲ್ಲಿ ಭೀಕರ ಅನಾಹುತ: ಆಯ ತಪ್ಪಿ ರೋಪ್​ನಿಂದ ಕೆಳಗೆ ಬಿದ್ದ ನಟಿ ಶ್ರಾವ್ಯ ರಾವ್

ಸಿಂಪಲ್ ಸುನಿ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್‌ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿತ್ತು.  ಹಾಡಿನ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವೊಂದು ಸಂಭವಿಸಿದೆ. ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಾಯಕಿ ಶ್ರಾವ್ಯ ರಾವ್‌ ಆಯತಪ್ಪಿ ಕೆಳಗೆ ಬಿದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ಹೊಸ ಸಿನಿಮಾ ಶೂಟಿಂಗ್ ವೇಳೆ ಈ ದುರಂತ ನಡೆದಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಹೊಸ ಸಿನಿಮಾದ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಸಾಂಗ್ ಶೂಟಿಂಗ್ ವೇಳೆ ಹಗ್ಗದ ಮೇಲೆ ನೇತಾಡುತ್ತಿದ್ದ ನಟಿ ಶ್ರಾವ್ಯ ರಾವ್ ಮೇಲಿಂದ ಆಯಾ ತಪ್ಪಿ ಬಿದ್ದಿದ್ದಾರೆ. ಕೆಳಗೆ ಬೆಡ್ ಹಾಕಿದ್ದರಿಂದ ಬಚಾವ್ ಆಗಿದ್ದಾರೆ.

ಅಂದ ಹಾಗೆ ನಿರ್ದೇಶಕ ಓಂ ಪ್ರಕಾಶ್ ರಾವ್ ಪುತ್ರಿಯಾಗಿರುವ ಶ್ರಾವ್‌ ರಾವ್‌ ತಮ್ಮ ಹೆಸರನ್ನು ಸಾತ್ವಿಕಾ ಎಂದು ಬದಲಾಯಿಸಿಕೊಂಡಿದ್ದಾರೆ. ಸದ್ಯ ಸಾತ್ವಿಕಾ ಸಿಂಪಲ್‌ ಸುನಿ ನಿರ್ದೇಶನದ ಹೊಸ ಸಿನಿಮಾದ ಶೂಟಿಂಗ್‌ ನಲ್ಲಿ ಬ್ಯುಸಿಯಾಗಿದ್ದಾರೆ.

ಕಿರುತೆರೆ ನಟಿ ಶ್ರುತಿಗೆ ಚಾಕು ಇರಿದು ಕೊಲೆಗೆ ಯತ್ನ: ಪತಿ ಬಂಧನ

ಕನ್ನಡ ಕಿರುತೆರೆಯ ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್​ಗಳಲ್ಲಿ ನಟಿಸಿದ್ದ ನಟಿ ಮೇಲೆ ಪತಿಯೇ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್​ನಲ್ಲಿ ನಡೆದಿದೆ.

ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಯಾಗಿದ್ದ ಶ್ರುತಿ ಮೇಲೆ ಪತಿಯೇ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದು ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಶ್ರುತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಪಿ ಅಮರೇಶ್ ನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಜುಲೈ​ 4ರಂದು ನಟಿ ಶ್ರುತಿ ಮೇಲೆ ಹಲ್ಲೆ ನಡೆದಿದ್ದು ಇದೀಗ ಪ್ರಕರಣ ಬೆಳಕಿಗೆ ಬಂದಿದೆ.  20 ವರ್ಷದ ಹಿಂದೆ ಅಮರೇಶ್ ಎಂಬಾತನ ಪ್ರೀತಿಸಿ ಮದುವೆಯಾಗಿದ್ದ ನಟಿ ಶ್ರುತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ಹನುಮಂತ ನಗರದಲ್ಲಿ ಲೀಸ್​ಗೆ ಮನೆ ಪಡೆದು ವಾಸವಿದ್ದರು. ಆದರೆ ಇತ್ತೀಚೆಗೆ ಶ್ರುತಿ ಹಾಗೂ ಅಮರೇಶ್‌ ಮಧ್ಯೆ ಹೊಂದಾಣಿಕೆ ಇರಲಿಲ್ಲ. ಶ್ರುತಿ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ್ದ ಅಮರೇಶ್‌ ಆಕೆಯ ಮೇಲೆ ಹಲ್ಲೆ ನಡೆಸುತ್ತಿದ್ದನಂತೆ. ಇದರಿಂದ ಬೇಸತ್ತಿದ್ದ ಶ್ರುತಿ ಕಳೆದ ಏಪ್ರಿಲ್​ನಲ್ಲಿ ಗಂಡನಿಂದ ದೂರಾಗಿ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಇದರ ಜೊತೆಗೆ ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಸಹ ಜಗಳ ನಡೆದಿತ್ತಂತೆ.

ಈ ಬಗ್ಗೆ ನಟಿ ಶ್ರುತಿ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದರಂತೆ. ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂಧಾನ ಮಾಡಿ ಒಂದಾಗಿದ್ದಾರೆ. ರಾಜಿ ಸಂದಾನದ ಬಳಿಕ ಶ್ರುತಿ ಗಂಡನೊಂದಿಗೆ ಮನೆಗೆ ವಾಪಸ್‌ ಆಗಿದ್ದಾಳೆ. ಆದರೆ ಮನೆಗೆ ಬಂದ ಮರುದಿನವೇ ಮತ್ತೆ ಇಬ್ಬರ ನಡುವೆ ಜಗಳ ನಡೆದಿದೆ.ಈ ವೇಳೆ ಶ್ರುತಿಗೆ ಅಮರೇಶ್ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ಶುಕ್ರವಾರ ಮಕ್ಕಳು ಕಾಲೇಜಿಗೆ ಹೋದ ನಂತರ ಹೆಂಡತಿ ಮೇಲೆ ಪೆಪ್ಪರ್ ಸ್ಪ್ರೇ ಹೊಡೆದು ಪತಿ ಹಲ್ಲೆ ಮಾಡಿದ್ದಾನೆ.

ಪತ್ನಿಗೆ ಅಶ್ಲೀಲ ಮೆಸೇಜ್: ಕಾಮುಕನಿಗೆ ಬುದ್ಧಿ ಕಲಿಸಿದ ಹಾಸ್ಯ ನಟ ಸಂಜು ಬಸಯ್ಯ

ಸೋಶಿಯಲ್‌ ಮೀಡಿಯಾದಲ್ಲಿ ಹೆಣ್ಣುಮಕ್ಕಳಿಗೆ ಕೆಟ್ಟ ಕೆಟ್ಟ ಕಾಮೆಂಟ್‌ಗಳನ್ನು ಮಾಡೋದು ಅಥವಾ ಅಶ್ಲೀಲವಾಗಿ ಮೆಸೇಜ್‌ಗಳನ್ನ ಮಾಡೋದು ಕಾಮನ್‌ ಆಗಿದೆ. ಇದೀಗ ಪತ್ನಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಕಾಮುಕನಿಗೆ ಹಾಸ್ಯ ಕಲಾವಿದ ಸಂಜು ಬಸಯ್ಯ ಸರಿಯಾಗಿ ಬುದ್ದಿ ಕಲಿಸಿದ್ದು ಈ ಮೂಲಕ ಹಲವರಿಗೆ ಸಂಜು ಮಾದರಿಯಾಗಿದ್ದಾರೆ.

ಸಂಜು ಬಸಯ್ಯ ಅವರ ಪತ್ನಿ ಪಲ್ಲವಿ ಅವರಿಗೆ ವಿಜಯನಗರ ಮೂಲದ ಮನೋಜ್‌ ಎಂಬ ಪಿಯುಸಿ ವಿದ್ಯಾರ್ಥಿಯು ಇನ್ಸ್ಟಾಗ್ರಾಮ್‌ ಮೂಲಕ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನ ಕಳುಹಿಸಿದ್ದಾನೆ. ಈ ಬಗ್ಗೆ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಸಂಜು ಬಸಯ್ಯ ದೂರು ನೀಡಿದ್ದು ತಕ್ಷಣವೇ ಅಲರ್ಟ್‌ ಆದ ಪೊಲೀಸರು ಆರೋಪಿಯನ್ನು ಕರೆಸಿ ಶಿಕ್ಷೆ ನೀಡಿದ್ದಾರೆ. ಈ ವೇಳೆ ಯುವಕ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾನೆ.

ಈ ಬಗ್ಗೆ ಸಂಜು ಬಸಯ್ಯ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು, “ಮನೋಜ್‌ ಅಂತ ಈತ ನನ್ನ ಧರ್ಮಪತ್ನಿ ಪಲ್ಲವಿಗೆ ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲವಾಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದರು. ಇದರ ಜೊತೆಗೆ ನಾವು ಪರ್ಸನಲ್‌ ಐಡಿಯನ್ನು ಸೇವ್‌ ಮಾಡಿಕೊಂಡು ಬೈಲಹೊಂಗಲ ಸ್ಟೇಷನ್‌ನಲ್ಲಿ ಕಂಪ್ಲೇಂಟ್‌ ಕೊಟ್ಟಾಗ, ಈ ವ್ಯಕ್ತಿಯನ್ನು ಊರಿನಿಂದ ಕರೆದುಕೊಂಡು ಬಂದು, ಅವನಿಗೆ ಕಠಿಣವಾದ ಶಿಕ್ಷೆ ಕೊಟ್ಟಿದ್ದಾರೆ. ನಾವು ಕೇಳಿಕೊಳ್ಳುವುದು ಇಷ್ಟೇ. ಕೆಟ್ಟ ಕೆಟ್ಟದಾಗಿ ಕಾಮೆಂಟ್‌ಗಳು ಅಥವಾ ಮೆಸೇಜ್‌ಗಳು ಮಾಡಿದ್ರೂ ಕೂಡ ನಾವು ಓದುತ್ತಾ ಇರ್ತೇವೆ ಹಾಗೂ ಗಮನಿಸುತ್ತಿರುತ್ತೇವೆ ಅನ್ನೋದು ನಿಮ್ಮ ಗಮನಕ್ಕಿರಲಿ” ಎಂದು ಸಂಜು ಬಸಯ್ಯ ಹೇಳಿದ್ದಾರೆ.

“ಕೆಟ್ಟ ಕೆಟ್ಟ ಕಾಮೆಂಟ್‌ಗಳಿಗೆ ನಾವು ರಿಯಾಕ್ಟ್‌ ಮಾಡಲ್ಲ ಅಂತ ನೀವು ಪದೇ ಪದೇ ಮಾಡ್ತಾ ಇದ್ರೆ, ಇವನಿಗೆ ಆದ ಶಿಕ್ಷೆ ನಿಮಗೂ ಖಂಡಿವಾಗಿಯೂ ಆಗುತ್ತದೆ. ಈ ಬಗ್ಗೆ ನಾವು ಇಷ್ಟು ದಿನ ತಲೆ ಕೆಡಿಸಿಕೊಂಡಿಲ್ಲ. ಆದರೆ ಇನ್ಮೇಲೆ ತಲೆ ಕೆಡಿಸಿಕೊಳ್ಳಬೇಕಾಗುತ್ತದೆ. ಯಾಕಂದ್ರೆ ನಮಗೂ ಲೈಫ್‌ ಇದೆ. ನಾವು ಸೋಶಿಯಲ್‌ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದೇವೆ. ನಮಗೆ ಅದರಿಂದ ಲೈಫ್‌ ಇದೆ. ಹೀಗಾಗಿ ನೀವು ಅರಿವಿಟ್ಟುಕೊಂಡು ಮೆಸೇಜ್‌ಗಳನ್ನು ಮಾಡಿ. ನಿಮ್ಮ ಫ್ಯಾಮಿಲಿ ಆಗಲಿ ಅಥವಾ ನಮ್ಮ ಫ್ಯಾಮಿಲಿ ಎಲ್ಲವೂ ಕೂಡ ಒಂದೇ ಆಗಿರುತ್ತದೆ. ನಿಮ್ಮ ಅಕ್ಕ-ತಂಗಿಯರು ನಮ್ಮ ಅಕ್ಕ-ತಂಗಿಯರಿದ್ದಂತೆ” ಎಂದು ಸಂಜು ಬಸಯ್ಯ ತಿಳಿಸಿದ್ದಾರೆ.

ಪಕ್ಷ ನನಗೆ ಸಂಘಟನೆ ಜವಾಬ್ದಾರಿ ಹಾಗೂ ಡಿಸಿಎಂ ಸ್ಥಾನ ನೀಡಿದ್ದು, ನನ್ನ ಗಮನ ಅವುಗಳತ್ತ ಮಾತ್ರ ಇದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ ಎಂದು ಕೇಳಿದಾಗ, “ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮಗೆ ಬಲಿಯಾಗುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷವಾಗಿ ಸ್ವೀಕರಿಸಿದ್ದೇವೆ. ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ನಾವು ಸುರ್ಜೆವಾಲ ಅವರ ಹೊರತಾಗಿ ಬೇರೆ ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಲ್ಲ. ರಾಜ್ಯ ಉಸ್ತುವಾರಿಗಳ ಜೊತೆ ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲಾ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ಸಚಿವರ ಅಭಿಪ್ರಾಯ ಸಂಗ್ರಹಿಸಬೇಕಿದೆ.

ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ. ಈ ಪ್ರಕ್ರಿಯೆ ಈಗಾಗಲೇ ತಡವಾಗಿದೆ. ಇದು ಅಂತಿಮ ಹಂತಕ್ಕೆ ಬಂದಿದೆ. ಅಧ್ಯಕ್ಷನಾಗಿ ನಾನು ಪಕ್ಷದ ಸಂಘಟನೆಗೆ ಶ್ರಮಿಸಿದವರ ಹೆಸರನ್ನು ಸೇರಿಸಿ ಇದರ ಪ್ರಸ್ತಾವನೆಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು” ಎಂದರು.

ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ದರೋಡೆ: ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್

0

ಕಲಬುರಗಿ: ಕಲ್ಬುರ್ಗಿಯ ಹೃದಯಭಾಗವಾದ ಸರಾಫ್ ಬಜಾರ್‌ನಲ್ಲಿ, ಹಾಡಹಗಲೇ ನಡೆದ ದರೋಡೆ ಘಟನೆಯು ಇಡೀ ನಗರವನ್ನು ಬೆಚ್ಚಿ ಬೀಳಿಸಿದೆ. ಸಿನಿಮಾ ಶೈಲಿಯಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಮಾಲೀಕನಿಗೆ ಗನ್ ತೋರಿಸಿ ಸುಮಾರು ಎರಡೂವರೆ ಕೆಜಿ ಚಿನ್ನಾಭರಣವನ್ನು ಲೂಟಿ ಮಾಡಿದ್ದಾರೆ.

ಹೌದು ಮಧ್ಯಾಹ್ನ ಸುಮಾರು 12.30ರಿಂದ 1 ಗಂಟೆ ನಡುವೆ ನಾಲ್ವರು ಖದೀಮರು ನುಗ್ಗಿ ಸಿನಿಮಾ ಸ್ಟೈಲ್ ನಲ್ಲಿ ದರೋಡೆ ಮಾಡಿದ್ದಾರೆ. ಮುಖಕ್ಕೆ ಮಾಸ್ಕ್, ತಲೆಗೆ ಕ್ಯಾಪ್‌ ಹಾಕಿಕೊಂಡು ಬಂದ ಖದೀಮರು ಅಂಗಡಿ ಮಾಲೀಕನಿಗೆ ಗನ್ ತೋರಿಸಿ ಬೆದರಿಸಿ 2-3 ಕೆ.ಜಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಈ ಘಟನೆ ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖದೀಮರು ಚಿನ್ನದಂಗಡಿಗೆ ನುಗ್ಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

error: Content is protected !!