Home Blog Page 5

ಕನ್ನಡ ನಮ್ಮ ತಾಯಿ ಭಾಷೆ: ಹರ್ಷಲತಾ ದೇಶಪಾಂಡೆ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕನ್ನಡ ಭಾಷೆ ನಮ್ಮ ತಾಯಿ ಭಾಷೆ ಎಂದು ಹರ್ಷಲತಾ ದೇಶಪಾಂಡೆ ಹೇಳಿದರು.

ಅವರು ಪಟ್ಟಣದ ಕಾಳಿಕಾ ದೇವಸ್ಥಾನದ ಬಳಿಯ ಅಂಗನವಾಡಿ ನಂ. 142ರಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ಕನ್ನಡ ಅಕ್ಷರ ಕಲಿಕೆಯ ಮೂಲ ಕೇಂದ್ರಗಳು ಅಂಗನವಾಡಿಗಳು. ಸರ್ಕಾರ ಇಂದು ಅಂಗನವಾಡಿ ಕೇಂದ್ರಗಳಿಗೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸುವ ಮೂಲಕ ಮಕ್ಕಳ ಕಲಿಕೆಗೆ ಸಹಾಯಕವಾಗಿದ್ದು, ಪೋಷಕರು ಮಕ್ಕಳನ್ನು ನಿತ್ಯ ಅಂಗನವಾಡಿಗಳಿಗೆ ಕಳಿಸಬೇಕು. ಮಕ್ಕಳಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ತಾಯಂದಿರು ಮಕ್ಕಳಿಗೆ ನಿತ್ಯವೂ ತಾಯಿ ಭಾಷೆಯಾದ ಕನ್ನಡವನ್ನು ಕಲಿಸುವ ಮೂಲಕ ಕನ್ನಡ ಭಾಷೆ ಉಳಿಸಿ ಬೆಳೆಸಬೇಕು ಎಂದರು.

ಮಕ್ಕಳ ಕಲಿಕೆಗಾಗಿ ಸಾಕಷ್ಟು ಮಹನೀಯರು ಚೇರ್‌, ಪೆನ್ಸಿಲ್, ಕಲಿಕಾ ಸಾಮಗ್ರಿಗಳನ್ನು ನೀಡಿದರು. ನಿವೃತ್ತಿ ಹೊಂದಿದ ಅಂಗನವಾಡಿ ಶಿಕ್ಷಕಿ ಎಸ್.ಎಂ. ಪಟ್ಟಣಶೆಟ್ಟಿ ಅವರನ್ನು, ಅಂಗನವಾಡಿಯಲ್ಲಿ ಕಲಿತು ಸರಕಾರಿ ಹುದ್ದೆ ಅಲಂಕರಿಸಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ಗೊಂವಿಂದ ಇಂಗಳಗಿ ವಹಿಸಿದ್ದರು. ಶ್ರೀಪಾದ ತಮ್ಮಣ್ಣವರ, ವಿ.ಡಿ. ದೇಸಾಯಿ, ಶಂಕರಪ್ಪ ತೆಂಬದಮನಿ, ಸೋಮಶೇಖರ ಬಟ್ಟೂರ, ಯೋಗರಾಜ ಹುಲಿ, ಜಿ.ಜಿ. ಗುಡಿ, ಇಸ್ಮಾಯಿಲ್ ಖಾಗದ, ವಿ.ಡಿ. ಸಿದ್ದನಗೌಡರ, ವಿದ್ಯಾ ಸೊರಟೂರ, ಹಸೀನಾ ಖಾಗದ, ನಿರ್ಮಲಾ ಬಟ್ಟೂರ, ಗೀತಾ ಕೋಳಿವಾಡ, ಸರೋಜಾ ಅರಳಿ, ಎಸ್.ಎಂ. ಪಟ್ಟಣಶೆಟ್ಟಿ, ಖುಷ್ಬು ಖಾಗದ ಇದ್ದರು.

ಉದ್ಯಮಿಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಳಿಕೆ

0

ದೆಹಲಿ: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಆಹಾರೋದ್ಯಮ ವಲಯಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಇಂದು ಹೊಸ ದರಗಳು ಜಾರಿಗೆ ಬಂದಿದ್ದು, ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡುವವರಿಗೆ ಸ್ವಲ್ಪ ನಿರಾಳತೆ ದೊರಕಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಈ ಬೆಲೆ ಇಳಿಕೆಯ ಘೋಷಣೆ ಮಾಡಿದ್ದು, ಪ್ರತಿ 19 ಕೆಜಿ ವಾಣಿಜ್ಯ ಸಿಲಿಂಡರ್‌ಗೆ 5 ರೂಪಾಯಿಯಷ್ಟು ಕಡಿತ ಮಾಡಲಾಗಿದೆ. ಇದರಿಂದಾಗಿ ದೆಹಲಿಯಲ್ಲಿ ಸಿಲಿಂಡರ್‌ನ ಹೊಸ ಬೆಲೆ ₹1,590.50 ಆಗಿದ್ದು, ಮೊದಲು ಅದು ₹1,595.50 ಇತ್ತು. ಕೋಲ್ಕತ್ತಾದಲ್ಲಿ 6.50 ರೂಪಾಯಿ ಇಳಿಕೆ ಆಗಿ ಹೊಸ ಬೆಲೆ ₹1,694 ಆಗಿದೆ. ಚೆನ್ನೈನಲ್ಲಿ ₹1,750 (₹4.50 ಇಳಿಕೆ) ಮತ್ತು ಮುಂಬೈನಲ್ಲಿ ₹1,542 (₹5 ಇಳಿಕೆ)ಗೆ ಮಾರಾಟವಾಗುತ್ತಿದೆ.

ಈ ಬೆಲೆ ಇಳಿಕೆಯು ಹೋಟೆಲ್‌, ಊಟಗೃಹ, ಕೇಟರಿಂಗ್‌ ಮತ್ತು ಆಹಾರೋದ್ಯಮ ವಲಯದವರಿಗೆ ಕೆಲವು ಮಟ್ಟಿಗೆ ನೆರವಾಗಲಿದೆ ಎಂದು ಉದ್ಯಮಿಗಳು ತಿಳಿಸಿದ್ದಾರೆ. ಆದರೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮನೆಗಳಲ್ಲಿ ಬಳಸುವ ಸಾಮಾನ್ಯ ಸಿಲಿಂಡರ್‌ಗಳಿಗೆ ಹಳೆಯ ದರಗಳೇ ಮುಂದುವರಿಯಲಿವೆ. ಸಾಮಾನ್ಯ ಜನರಿಗೆ ಬೆಲೆ ಇಳಿಕೆಯ ನಿರೀಕ್ಷೆ ಇದ್ದರೂ ಈ ಬಾರಿ ಇಳಿಕೆ ಕೇವಲ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗೆ ಮಾತ್ರ ಸೀಮಿತವಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇದೆ: ಸಚಿವ ಎಂ.ಸಿ ಸುಧಾಕರ್

0

ಚಿಕ್ಕಬಳ್ಳಾಪುರ:- ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆ ಇದೆ ಎಂದು ಸಚಿವ ಎಂ.ಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ.

ನವೆಂಬರ್‌ನಲ್ಲಿ ಕ್ರಾಂತಿ ಚರ್ಚೆ ವಿಚಾರಕ್ಕೆ ನಗರದಲ್ಲಿ ಮಾತನಾಡಿದ ಅವರು, ಯಾವ ಕ್ರಾಂತಿಯೂ ಇಲ್ಲ ಬರೀ ಭ್ರಾಂತಿ ಅಷ್ಟೆ. ಕಾಂಗ್ರೆಸ್ ಹೈಕಮಾಂಡ್ ಪ್ರಸ್ತುತ ಬಿಹಾರ ಚುನಾವಣೆ ಕಡೆ ಗಮನ ಇದೆ. ಕ್ರಾಂತಿಯ ಬಗ್ಗೆ ನಮಗ್ಯಾರಿಗೂ ಮಾಹಿತಿ ಇಲ್ಲ. ಕಾಂಗ್ರೆಸ್ ಹೈಕಮಾಂಡ್, ಸಿಎಂ, ಡಿಸಿಎಂ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುವ ಇಂಗಿತದ ಬಗ್ಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಅವಕಾಶ ಇದೆ ಅಂದ್ರೆ ಯಾರಾದ್ರೂ ಬೇಡ ಅಂತಾರಾ? ಡಿಕೆಶಿಗೆ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಜೋಡೆತ್ತುಗಳಾಗಿ ಕೆಲಸ ಮಾಡಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳೊ ತಿರ್ಮಾನಕ್ಕೆ ನಾವು ಬದ್ಧ ಎಂದರು.

ಜಿಲ್ಲೆಯನ್ನು ರಾಜ್ಯದಲ್ಲೇ ನಂ.1 ಮಾಡುವ ಗುರಿ: ಡಾ. ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: 2025ರ ಕನ್ನಡ ರಾಜ್ಯೋತ್ಸವ ಗದಗ ಜಿಲ್ಲೆಯಲ್ಲಿ ಶಿಸ್ತುಬದ್ಧವಾಗಿ, ವಿಜೃಂಭಣೆಯಿಂದ ನಡೆದಿದೆ. ನಾಡಿನ ಗತವೈಭವ ಸ್ಮರಿಸುತ್ತಾ ನಾಡಹಬ್ಬ ಆಚರಿಸಿದ್ದೇವೆ. 2023 ನವೆಂಬರ್ ತಿಂಗಳಲ್ಲಿ ಗದುಗಿನ ಇತಿಹಾಸದಲ್ಲಿ ಸುವರ್ಣ ಅಕ್ಷರಗಳಿಂದ ಬರೆದಿಡುವ ಕಾರ್ಯಕ್ರಮ ಮಾಡಲಾಗಿತ್ತು. 1961ರಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣ ಮಾಡಬೇಕೆಂದು ಸರ್ವಾನುಮತದಿಂದ ನಿರ್ಣಯ ಕೈಗೊಂಡು ಸಾರ್ವಜನಿಕ ಸಭೆಯ ಮೂಲಕ ಕರ್ನಾಟಕ ಎಂದು ನಾಮಕರಣ ಮಾಡಲಾಯಿತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದಿನ ಗತವೈಭವ ಮರುಕಳಿಸುವಂತೆ 2023ರಲ್ಲಿ ವೀರನಾರಾಯಣ ದೇವಸ್ಥಾನದಿಂದ 20ಕ್ಕೂ ಹೆಚ್ಚು ಸಚಿವ ಸಂಪುಟದ ಸದಸ್ಯರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಸಹಸ್ರ ಸಂಖ್ಯೆಯ ಜನರ ಸಮ್ಮುಖದಲ್ಲಿ ಮತ್ತೊಮ್ಮೆ ದೊಡ್ಡ ಕಾರ್ಯಕ್ರಮ ನಡೆಸಿ, ಕರ್ನಾಟಕ ಸಂಭ್ರಮ 50 ಹೆಸರಿನಲ್ಲಿ ಗತವೈಭವ ಮರುಸೃಷ್ಟಿ ಮಾಡಿದ್ದೇವೆ ಎಂದರು.

ನಮ್ಮ ಕನ್ನಡ ನಾಡಿನಲ್ಲಿ ಬಡತನವನ್ನು ಸಂಪೂರ್ಣ ನಿರ್ಮೂಲನೆ ಮಾಡಿದ್ದೇವೆ. ಕನ್ನಡದ ಪ್ರತಿ ಅರ್ಹ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ. ಇದಕ್ಕಾಗಿ ಪ್ರತಿ ವರ್ಷ 60 ಸಾವಿರ ಕೋಟಿ ರೂ ಹಣ ಖರ್ಚು ಮಾಡಿ ಜನರ ಬದುಕು ಹಸನುಗೊಳಿಸಿ ಬಡತನ ದೂರ ಮಾಡಿದ್ದೇವೆ. ಜಿಲ್ಲೆಯಲ್ಲಿ ಶೇ. 99.4ರಷ್ಟು ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪಿವೆ ಎಂದರು.

ಮಳೆಯಿಂದ ರೈತರು ತತ್ತರಿಸಿ ಹೋಗಿದ್ದಾರೆ. ಬಹಳಷ್ಟು ಬೆಳೆಗಳು ಮಳೆಯಿಂದ ಹಾನಿಯಾಗಿವೆ. ಭಾನುವಾರ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಹೆಬ್ಬೆಟ್ಟು ಒತ್ತುವ ಮೂಲಕ ಪರಿಹಾರದ ಹಣ ನೀಡಲಿದ್ದೇವೆ. ಅಭಿವೃದ್ಧಿ ವಿಚಾರದಲ್ಲಿ ರಾಜ್ಯದಲ್ಲಿ ಸಮೀಕ್ಷೆಯಲ್ಲಿ 7ನೇ ಸ್ಥಾನವನ್ನು ಗದಗ ಜಿಲ್ಲೆ ಪಡೆದುಕೊಂಡಿದ್ದು, ಇದು ನಾವೆಲ್ಲರೂ ಸಂತೋಷಪಡುವ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೇ ನಂಬರ್ ಒನ್ ಜಿಲ್ಲೆ ಮಾಡುವ ಗುರಿ ಹೊಂದಲಾಗಿದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್, ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ ಅಸೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ದಲಿಂಗೇಶ ಪಾಟೀಲ ಉಪಸ್ಥಿತರಿದ್ದರು.

ನಗರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಪ್ರಭುವಿನೆಡೆಗೆ ಪ್ರಭುತ್ವ ಯೋಜನೆ, ರಾಜ್ಯದಲ್ಲೇ ಮೊದಲ ಬಾರಿಗೆ ಥರ್ಡ್ ಐ, ಶಾಲಾ ಶಿಕ್ಷಕರಿಗೆ ಮೊಬೈಲ್ ಮೂಲಕ ಹಾಜರಾತಿ ಕಲ್ಪಿಸಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದೇವೆ. ಈ ಮೂಲಕ ರಾಜ್ಯದಲ್ಲಿ ಗದಗ ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಇದಕ್ಕೆ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ಸಚಿವ ಎಚ್.ಕೆ. ಪಾಟೀಲ ಹೆಮ್ಮೆ ವ್ಯಕ್ತಪಡಿಸಿದರು.

ಸಾಮರಸ್ಯದ ಕನ್ನಡ ರಾಜ್ಯೋತ್ಸವ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ್ರ ಬಣ ಗದಗ ಜಿಲ್ಲಾ ಘಟಕದ ನೇತೃತ್ವದಲ್ಲಿ ದಲಿತಪರ, ಕನ್ನಡಪರ, ಹಿಂದೂಪರ, ವಿವಿಧ ಜನಪರ ಹೋರಾಟಗಾರರ ಮುಂದಾಳತ್ವದಲ್ಲಿ ನಗರದ ಗಾಂಧಿ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾಧ್ಯಕ್ಷ ಮಂಜುನಾಥ ಪರ್ವತಗೌಡ್ರ ಮಾತನಾಡಿ, ಕರ್ನಾಟಕದ ಏಕೀಕರಣದ ಸ್ಮರಣಾರ್ಥವಾಗಿ ಇಂದು ಕರ್ನಾಟಕ ರಾಜ್ಯೋತ್ಸವವನ್ನು ನಾವೆಲ್ಲರೂ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ. ಈ ನಾಡು ಸಾಧು-ಸಂತರು, ದಾಸರು, ಶಿವಶರಣರು, ಕವಿಗಳಿಂದ ಕಂಗೊಳಿಸುವ ಹೆಮ್ಮೆಯ ಬೀಡಾಗಿದ್ದು, ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಡಾಗಿದೆ ಎಂದರು.

ವಕೀಲರ ಸಂಘದ ಉಪಾಧ್ಯಕ್ಷ ಎಂ.ಎಸ್. ಸಂಗನಾಳ ಮಾತನಾಡಿ, ಕರ್ನಾಟಕ ರಾಜ್ಯವು ಇಡೀ ದೇಶದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಅದರಲ್ಲೂ ಮಾಹಿತಿ ತಂತ್ರಜ್ಞಾನದಲ್ಲಿ, ಕಾಯ್ದೆ-ಕಾನೂನುಗಳ ವಿಷಯದಲ್ಲಿ ಐತಿಹಾಸಿಕ ಕೊಡುಗೆಯನ್ನು ನೀಡಿದೆ ಎಂದರು.

ಶ್ರೀರಾಮ ಸೇನೆ ಗದಗ ಜಿಲ್ಲಾಧ್ಯಕ್ಷ ರಾಜು ಖಾನಪ್ಪನವರ ಮಾತನಾಡಿ, ನಮ್ಮ ಸಮಾಜಗಳ ಶ್ರೀರಕ್ಷೆಯ ಜೊತೆಗೆ ಈ ನಾಡಿನ ರಕ್ಷಣೆಯೂ ಬಹುಮುಖ್ಯವಾಗಿದೆ. ನಾಡಿನ ವಿಷಯ ಬಂದಾಗ ನಾವೆಲ್ಲರೂ ಕಟಿಬದ್ಧರಾಗಿ ಈ ನಾಡಿಗಾಗಿ ಹೋರಾಡೋಣ ಎಂದರು.

ಇದೇ ಸಂದರ್ಭದಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಾಜು ಖಾನಪ್ಪನವರ, ವಕೀಲರ ಸಂಘದ ಉಪಾಧ್ಯಕ್ಷ ಎಂ.ಎಸ್. ಸಂಗನಾಳ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ, ಶ್ರೀರಾಮ ಸೇನೆ ಮುಖಂಡರಾದ ಶಿವರಾಜ ಪೂಜಾರ, ನಗರಸಭಾ ಸದಸ್ಯ ಅನಿಲ ಅಬ್ಬಿಗೇರಿ, ಮಲ್ಲಿಕಾರ್ಜುನ ಕಿರೇಸೂರ ಸೇರಿದಂತೆ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಮುಳ್ಳಾಳ, ಗೌರವಾಧ್ಯಕ್ಷ ಗುರುರಾಜ ಕಲಕೇರಿ, ಉತ್ತರ ಕರ್ನಾಟಕ ರೈತ ಜಿಲ್ಲಾಧ್ಯಕ್ಷ ಬಸಯ್ಯ ಗುಡ್ಡಿಮಠ, ಪರಶುರಾಮ ಬನ್ನೂರ, ವಾದಿರಾಜ ಕೌಜಲಗಿ, ಬಸವರಾಜ ದೇಸಾಯಿ, ಅಪ್ಪಣ್ಣ ಕಾಳೆ, ಬಸೀರ ಮುಳಗುಂದ, ಉದಯ ದಳವಾಯಿ, ಕರವೇ ಮಹಿಳಾ ಘಟಕದ ಪಾರ್ವತಿ ಪಾಟೀಲ, ಲಕ್ಷ್ಮೀ ಶಿವಶಿಂಪಿ, ಜ್ಯೋತಿ ರಾಮಣ್ಣವರ, ಗಾಂಧಿ ವೃತ್ತದ ಅಟೋ ಸ್ಟ್ಯಾಂಡಿನ ಚಾಲಕರು-ಮಾಲಕರು ಸೇರಿದಂತೆ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

ಕನ್ನಡಾಭಿಮಾನ ಮೂಡಿಸುವ ಕಾರ್ಯವಾಗಲಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದ ವತಿಯಿಂದ 70ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ತಾಯಿ ಭುವನೇಶ್ವರಿಗೆ ಪೂಜೆ ಹಾಗೂ ಕನ್ನಡದ ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು.

ಗದುಗಿನ ಗಾಂಧಿ ವೃತದಲ್ಲಿ ಕನ್ನಡದ ಧ್ವಜಾರೋಹಣವನ್ನು ನೆರವೇರಿಸಿದ ಹನಮಂತಪ್ಪ ಹೆಚ್. ಅಬ್ಬಿಗೇರಿ ಮಾತನಾಡಿ, ಗದಗ ಜಿಲ್ಲೆಯ ಕಪ್ಪತಗುಡ್ಡವು ಸುಮಾರು 80 ಸಾವಿರ ಎಕರೆ ಸಂರಕ್ಷಿತ ಅರಣ್ಯ ಪ್ರದೇಶವಾಗಬೇಕು. ಮುಂದಿನ ನಾಗರಿಕರಾಗುವ ಇಂದು ಶಾಲಾ, ಕಾಲೇಜುಗಳಲ್ಲಿ ಓದುತ್ತಿರುವ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಅಭಿಮಾನ ಮೂಡಿಸುವ ಕೆಲಸವಾಗಬೇಕಾಗಿದೆ. ಅದಕ್ಕಾಗಿ ಶಾಲಾ–ಕಾಲೇಜುಗಳಲ್ಲಿ ಕನ್ನಡ ಭಾಷೆಯ ಬಗ್ಗೆ ತಿಳುವಳಿಕೆ ಮೂಡಿಸುವ, ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕಾರ್ಯಕ್ರಮಗಳು ಸರ್ಕಾರ, ಕನ್ನಡದ ಸಾಹಿತಿಗಳು, ಕಲಾವಿದರು, ಕನ್ನಡ ಪರ ಚಿಂತಕರಿಂದ ಆಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಮುತ್ತಣ್ಣ ಚೌಡಣ್ಣವರ, ಬಸವರಾಜ್ ಮೇಟಿ, ಲಕ್ಷ್ಮೀ ಮುತ್ತಲಮನೆ, ನಿಂಗನಗೌಡ, ಮಾರುತಿ ಎಂಗ್ಲೆ, ಕುಮಾರ್ ರೇವಣ್ಣವರ್, ಎಂ. ಎಂ. ತಹಸೀಲ್ದಾರ್, ರವಿ ಮಲ್ನಾಡ, ಯಶೋಧ ಬಾಲಾಜಿ, ಗಂಗಮ್ಮ, ಶುಭ ಕಲಾಲ್, ಹುಸೇನ, ಸಲೀಂ ಬೋದ್ಲೆಖಾನ್ ಸೇರಿದಂತೆ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

ಕನ್ನಡ ಕಟ್ಟವ ಕೆಲಸಕ್ಕೆ ಮುಂದಾಗಿ: ಮಂಜುಳಾ ದೇಗಿನಾಳ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಏಕೀಕರಣಗೊಂಡು 69 ವರ್ಷಗಳು ಪೂರ್ಣಗೊಂಡಿದ್ದು, ಎಲ್ಲೆಡೆ ಸುಖ, ಶಾಂತಿ ನೆಲೆಸುವಂತಾಗಲಿ. ಆಲೂರು ವೆಂಕಟರಾಯರು, ಬಿ.ಎಂ. ಶ್ರೀಕಂಠಯ್ಯ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕುವೆಂಪು, ಶಿವರಾಂ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಹೀಗೆ ಅನೇಕರು ಕನ್ನಡದ ಬೆಳವಣಿಗೆಗೆ ಶ್ರಮಿಸಿದ್ದಾರೆ ಎಂದು ಪ್ರಧಾನ ಅಂಚೆ ಪಾಲಕರಾದ ಮಂಜುಳಾ ದೇಗಿನಾಳ ಹೇಳಿದರು.

ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರೂ ದಿನನಿತ್ಯ ವ್ಯವಹಾರ ಮತ್ತು ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಕನ್ನಡ ಬಳಸುವುದರೊಂದಿಗೆ ಜನಸಾಮಾನ್ಯರೂ ಕನ್ನಡ ಕಟ್ಟುವ ಕೆಲಸವನ್ನು ಮಾಡಬೇಕು ಎಂದರು.

ಉಪ ಅಂಚೆ ಪಾಲಕರಾದ ದೊಡ್ಡಪ್ಪ ಇಟಗಿ, ವೀರಣ್ಣ ಅಂಗಡಿ, ವೆಂಕಟೇಶ ಆಕಳವಾಡಿ, ಸಾವಿತ್ರಿ ಮಲ್ಲಾಡದ, ಸೌಮ್ಯ, ಯಂಕಪ್ಪ ಗುಗ್ಗರಿ, ಸಿದ್ಧಲಿಂಗೇಶ ಯಂಡಿಗೇರಿ, ಮಂಜುನಾಥ ಪಾಮೇನಹಳ್ಳಿ, ವಾಣಿ ಮಾಂಡ್ರೆ, ಸರೋಜ ಪಟ್ಟಣಶೆಟ್ಟಿ, ವಿದ್ಯಾ ಗದಗ, ಶ್ರೀದೇವಿ ಕಲಕೇರಿ, ಬಸವರಾಜ ಮೊರಬದ, ಜಾಫರ್ ನದಾಫ್, ಉಮೇಶ ಸಂದಿಮನಿ, ರವಿ ಜಾದವ, ಶಿವಕುಮಾರ ಸುಳ್ಳದ, ಶಿವರಾಜ ಕ್ಷತ್ರಿಯವರ, ಕುಮಾರ ಅರಿಸಿದ್ಧಿ ಮತ್ತಿತರರು ಪಾಲ್ಗೊಂಡಿದ್ದರು.

ನನಗೂ ಸಚಿವನಾಗಬೇಕೆನ್ನುವ ಆಸೆ ಇದೆ; ಮನದ ಆಸೆ ಹೊರಹಾಕಿದ ಪ್ರದೀಪ್ ಈಶ್ವರ್

0

ಚಿಕ್ಕಬಳ್ಳಾಪುರ:-ನನಗೂ ಸಚಿವನಾಗಬೇಕೆನ್ನುವ ಆಸೆ ಇದೆ ಎಂದು ಸಚಿವ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ನವೆಂಬರ್‌ನಲ್ಲಿ ಕ್ರಾಂತಿ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅದೇನು ಕ್ರಾಂತಿ ಆಗುತ್ತೊ ಗೊತ್ತಿಲ್ಲ. ಒಟ್ಟಿನಲ್ಲಿ ಸಿಎಂ, ಡಿಸಿಎಂ, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದರು.

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೂ ಒಂದು ಅವಕಾಶ ಸಿಗಲಿ. ನಾನು ಯಾವುದೋ ಒಂದು ರೂಪದಲ್ಲಿ ರಾಜಭವನಕ್ಕೆ ಹೋಗ್ತೇನೆ. ಬಲಿಜ ಸಮುದಾಯದಲ್ಲಿ ನಾನೊಬ್ಬನೇ ಶಾಸಕ ಎಂದು ಸಚಿವನಾಗುವ ಆಸೆ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾಲಿ ಸಚಿವ ಡಾ ಎಂ ಸಿ ಸುಧಾಕರ್ ರನ್ನ ಮುಂದುವರೆಸಲು ತಕರಾರು ಇಲ್ಲ, ಬಾಗೇಪಲ್ಲಿ ಹಿರಿಯ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ಕೊಟ್ಟರೂ ತಕರಾರಿಲ್ಲ. ನಾನೇನೂ ಸನ್ಯಾಸಿಯಲ್ಲ. ನನಗೂ ಸಚಿವ ಆಗೋ ಆಸೆ ಇದೆ ಎಂದರು.

ಗುಂಡಿಗಳ ಬಗ್ಗೆ ಡಿಸಿಎಂ ಅವರನ್ನು ಕೇಳಿ ಎಂದ ಸಿಎಂಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

0

ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಸಪ್ನ ಪುಸ್ತಕ ಮಳಿಗೆ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಶುಕ್ರವಾರದ ದಿನ ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದ್ದೇನೆ. ಅವರ ಹೇಳಿಕೆ ಬೇಜವಾಬ್ದಾರಿತನದ್ದು ಎಂಬುದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾ? ಅಥವಾ ಡಿ.ಕೆ. ಶಿವಕುಮಾರ್ ಅವರಾ? ಎನ್ನುವ ಪ್ರಶ್ನೆ ಬರುತ್ತೆ.

ಮುಖ್ಯಮಂತ್ರಿಗಳೇ ಸಭೆ ಮಾಡಿ ಗುಂಡಿ ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದರು. ಆದರೆ ರಸ್ತೆಗಳಲ್ಲಿ ಗುಂಡಿಗಳು ಹಾಗೆಯೇ ಇವೆ. ಮುಖ್ಯಮಂತ್ರಿಗಳ ಮಾತಿಗೂ ಸಹ ಎಷ್ಟು ಬೆಲೆ ಅಧಿಕಾರಿಗಳು ಕೊಡುತ್ತಿದ್ದಾರೆ ಎನ್ನುವುದು ಇದರಿಂದ ಗೊತ್ತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ಹೇಳಿಕೆ ನೋಡಿದಾಗ ಅವರು ಈ ರಾಜ್ಯದ ಸಿಎಂ ಆಗಿ ಕಾರ್ಯ ನಿರ್ವಹಣೆ ಮಾಡುವುದಕ್ಕೆ ಅಸಮರ್ಥ ಆಗಿದ್ದೇನೆ ಎಂದು ಹೇಳಿದ ರೀತಿ ಇದೆ. ಅವರು ಇಂಥ ಹೇಳಿಕೆ ನೀಡಬಾರದು ಎಂದು ಅವರು ಹೇಳಿದರು.

ನವೆಂಬರ್ ಕ್ರಾಂತಿ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟಿದ್ದು:

ನವೆಂಬರ್ 21ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗಿ ಪದಗ್ರಹಣ ಮಾಡುತ್ತಾರೆ ಎಂಬ ಚರ್ಚೆ ಬಗ್ಗೆ ಗಮನ ಸೆಳೆದಾಗ, ಅದು ಅವರ ಪಕ್ಷದಲ್ಲಿನ ತೀರ್ಮಾನಗಳು. ಅವರಿಗೆ ಬಿಟ್ಟಿರೋದು, ನಾನು ಈ ವಿಷಯದಲ್ಲಿ ಮಾತಮಾಡುವುದು ಸಣ್ಣತನ ಆಗುತ್ತದೆ. ಅವರ ಪಕ್ಷದಲ್ಲಿ ಏನು ತೀರ್ಮಾನ ಮಾಡುತ್ತಾರೋ ಮಾಡಿಕೊಳ್ಳಲಿ ಎಂದರು ಕುಮಾರಸ್ವಾಮಿ ಅವರು.

ಸರ್ಕಾರದ ಅವಧಿ ಇನ್ನು ಎರಡೂವರೆ ವರ್ಷ ಇದೆ. ಆದರೆ ಎರಡೂವರೆ ವರ್ಷ ಸರ್ಕಾರ ನಡೆಸುವಲ್ಲಿ ಕಾಂಗ್ರೆಸ್ ನವರೇ ಪ್ರತಿನಿತ್ಯ ನಗೆಪಾಟಿಗೆ ಒಳಗಾಗುತ್ತಿದ್ದಾರೆ. ವಿರೋಧ ಪಕ್ಷಗಳು ಮಾತಾಡುವ ಅವಶ್ಯಕತೆ ಇಲ್ಲ. ಮಂತ್ರಿಗಳು, ಜವಾಬ್ದಾರಿ ಸ್ಥಾನದಲ್ಲಿ ಇರುವವರು ಅವರವರೇ ಮಾತನಾಡುತ್ತಿರುವಾಗ ನಾವು ಯಾವ ದೃಷ್ಟಿಯಿಂದ ನೋಡೋದು? ಅವರ ಭಿನ್ನಮತ ನೋಡುವ ಅಗತ್ಯ ಎನ್ಡಿಎ ಮೈತ್ರಿಕೂಟಕ್ಕೆ ಇಲ್ಲ. ಅವರ ಪಕ್ಷದಲ್ಲಿರುವ ಶಾಸಕರು, ಮಂತ್ರಿಗಳೇ ದೊಡ್ಡ ಮಟ್ಟದಲ್ಲಿ ನೋಡ್ತಾ ಇದ್ದಾರೆ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದರು.

ಮನೆಗಳ ಮುಂದೆ ಕಸ; ಸರ್ಕಾರದ ಹೊಸ ಕಾರ್ಯಕ್ರಮ ಎಂದು ಲೇವಡಿ

ಬಿಬಿಎಂಪಿ ಸಿಬ್ಬಂದಿ ಮನೆಗಳ ಮುಂದೆ ಕಸ ಸುರಿಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಮನೆಗಳ ಮುಂದೆ ಕಸ ಹಾಕುವುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದೆ. ಜನರು ಕಸ ಬೀದಿಯಲ್ಲಿ ಹಾಕಿದರು ಎಂದು ಬೀದಿಯಲ್ಲಿರೋ ಕಸ ತಂದು ಜನರ ಮನೆ ಮುಂದೆ ಹಾಕಿದರೆ ಅರ್ಥ ಇದೀಯಾ? ಅದರಿಂದ ಏನು ಸಾಧನೆ ಮಾಡುತ್ತಾರೆ. ಸರಕಾರ ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಮಾಡುವ ಜವಾಬ್ದಾರಿ ಮಾಡುವಲ್ಲಿ ವೈಜ್ಞಾನಿಕ ತೀರ್ಮಾನ ಮಾಡಬೇಕು.

ಅದು ಬಿಟ್ಟು ಲಾರಿಯಲ್ಲಿ ಕಸ ತುಂಬಿಕೊಂಡು ಒಂದು ಮನೆ ಮುಂದೆ ಹೊರಗಡೆ ಹಾಕುವುದು ಎಷ್ಟು ಸರಿ? ಸರ್ಕಾರಕ್ಕೆ ಸಮಸ್ಯೆ ಇದೆ, ಅವರಿಗೆ ಕಸ ವಿಲೇವಾರಿ ಮಾಡುವುದಕ್ಕೆ ಜಾಗ ಇಲ್ಲ. ಅದಕ್ಕೆ ಮನೆಗಳ ಮುಂದೆ ತಂದು ಹಾಕಿದರೆ ಜನರೇ ಕಸ ವಿಲೇವಾರಿ ಮಾಡಿಕೊಳ್ಳುತ್ತಾರೆ ಎನ್ನುವ ಭಾವನೆ ಇರಬಹುದು. ಆ ಉದ್ದೇಶದಿಂದ ಸರ್ಕಾರ ಮನೆಗಳ ಮುಂದೆ ಕಸ ಸುರಿಯುವ ಹೊಸ ವಿನೂತನ ಕಾರ್ಯಕ್ರಮ ಮಾಡಿದೆ ಎಂದು ಹೆಚ್ಡಿಕೆ ಕಿಡಿಕಾರಿದರು.

ಸುರಂಗ ರಸ್ತೆ ಬಗ್ಗೆ ಪ್ರತಿಕ್ರಿಯೆ:

ಸುರಂಗ ಯೋಜನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು, ನೋಡೋಣ.. ಇವರು ಟನಲ್ ರಸ್ತೆ ಕೆಲಸ ಯಾವಾಗ ಪ್ರಾರಂಭ ಮಾಡುತ್ತಾರೆ ಎಂದು. ನುರಿತ ತಜ್ಞರು ಅಭಿಪ್ರಾಯ ಪಡೆದು ಕೆಲಸ ಆರಂಭ ಮಾಡುತ್ತಾರೋ ಅಥವಾ ಹಾಗೆಯೇ ಕಾಮಗಾರಿ ಆರಂಭ ಮಾಡುತ್ತಾರೋ ನೋಡೋಣ.

ನಾನು ಹೇಳೋದು ಬೆಂಗಳೂರು ಜನರ ಪ್ರತಿನಿತ್ಯ ಜನರ ಸಮಸ್ಯೆ ಬಗ್ಗೆ. ಅದು ಬಗೆಹರಿಯಬೇಕು. ಇಲ್ಲಿ ಟನಲ್ ರೋಡ್ ಮಾಡ್ತಾರೋ, ಎಲಿವೆಟೆಡ್ ರಸ್ತೆ ಮಾಡುತ್ತಾರೋ ಅದು ಸರ್ಕಾರಕ್ಕೆ ಬಿಟ್ಟಿದ್ದು. ಜನರು ಪ್ರತಿನಿತ್ಯ ಜನಪ್ರತಿನಿಧಿಗಳು ಮತ್ತು ಸರ್ಕಾರದ ವೈಫಲ್ಯಗಳ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನರ ಬದುಕಿನಲ್ಲಿ ಚಲ್ಲಾಟ ಆಡಬೇಡಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಎನ್. ಚಲುವರಾಯಸ್ವಾಮಿ

0

ಮಂಡ್ಯ: ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಎಂಇಎಸ್ ಪುಂಡಾಟಿಕೆ ನಡೆದಿರುವ ವಿಚಾರವಾಗಿ ಮಾತನಾಡಿದ ಅವರು,

ಭಾಷೆ, ನೆಲ, ಜಲದ ವಿಚಾರದಲ್ಲಿ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆ ಖಂಡನೀಯ ಎಂದು ಹೇಳಿದರು. “ಈ ರೀತಿಯ ಆಕ್ರಮಣವನ್ನು ತಡೆಯಲು ನಮ್ಮ ಸರ್ಕಾರ ಅಗತ್ಯವಿದ್ದರೆ ಕಠಿಣ ಕ್ರಮಕ್ಕೂ ಹಿಂಜರಿಯುವುದಿಲ್ಲ,” ಎಂದು ಸಚಿವರು ಸ್ಪಷ್ಟಪಡಿಸಿದರು.

“ಭಾಷೆ, ನೆಲ, ಜಲದ ಸಮಸ್ಯೆ ಬಗೆಹರಿಸಲು ತಿಲಾಂಜಲಿ ಹೇಳುವ ಅಧಿಕಾರ ಕೇಂದ್ರ ಸರ್ಕಾರಕ್ಕಷ್ಟೆ ಇದೆ. ಕೇಂದ್ರ ಸರ್ಕಾರವೇ ಸಂಬಂಧಿತ ರಾಜ್ಯಗಳನ್ನು ಕರೆದು ಮಾತನಾಡಬೇಕು. ಪರಿಸ್ಥಿತಿ ವಿಶ್ಲೇಷಿಸಿ ತೀರ್ಮಾನ ತೆಗೆದುಕೊಂಡರೆ ಮಾತ್ರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ,” ಎಂದರು.

ತಮಿಳುನಾಡು–ಕರ್ನಾಟಕ ನೀರು ವಿವಾದದ ಕುರಿತು ಮಾತನಾಡಿದ ಸಚಿವರು, “ತಮಿಳುನಾಡು ಸಮಸ್ಯೆ ಎಂದೇನಿಲ್ಲ. ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಪೀಲ್ ಸಲ್ಲಿಸಿದರೆ ಒಂದು ದಿನದಲ್ಲೇ ವಿಷಯ ಬಗೆಹರಿಯುತ್ತದೆ. ನೀರು ಇದ್ದಾಗ ಬಿಡುತ್ತೇವೆ, ಇಲ್ಲದಾಗ ಮಾತ್ರ ಸಮಸ್ಯೆ ಬರುವುದು. ಇದು ರಾಜಕೀಯ ಹಿತಾಸಕ್ತಿಯಿಂದ ನಡೆಯುತ್ತಿದೆ,” ಎಂದು ಹೇಳಿದರು.

“ಮಹಾರಾಷ್ಟ್ರದಲ್ಲಿಯೂ ಕನ್ನಡಿಗರಿದ್ದಾರೆ. ಅವರಿಗೂ ನಮ್ಮ ಸಹಕಾರ ಬೇಕು, ನಮಗೂ ಅವರ ಸಹಕಾರ ಅಗತ್ಯ. ಎಲ್ಲ ಅಂಶಗಳನ್ನು ಅವಲೋಕಿಸಿ ನಮ್ಮ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಯೇ ನಮ್ಮ ಸರ್ಕಾರದ ಆದ್ಯತೆ,” ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

error: Content is protected !!