Home Blog Page 5

ಬುದ್ದಿ ಹೇಳಿದ್ದೇ ತಪ್ಪಾಯ್ತಾ? ಮೊಬೈಲ್ ಗೇಮ್ ಆಡ್ಬೇಡ ಎಂದಿದ್ದಕ್ಕೆ 15 ವರ್ಷದ ಬಾಲಕ ಆತ್ಮಹತ್ಯೆ

0

ಜೈಪುರ:- ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಕುರ್ರೆಂಡಾ ಗ್ರಾಮದಲ್ಲಿ ಮೊಬೈಲ್ ಗೇಮ್ ಆಡಬೇಡ ಎಂದು ತಂದೆ ಬೈದಿದ್ದಕ್ಕೆ 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ.

ರಾಜವೀರ್ ಬಘೇಲ್ ಮೃತ ಬಾಲಕ. ಬಾಲಕ ಫ್ರೀ ಫೈರ್ ಎಂಬ ಮೊಬೈಲ್ ಗೇಮ್​ಗೆ ಅಡಿಕ್ಟ್​ ಆಗಿದ್ದ, ಇದರಿಂದಾಗಿ ತಂದೆ ಕೋಪಗೊಂಡು ಮೊಬೈಲ್ ಗೇಮ್ ಬಿಟ್ಟು ಓದಿನೆಡೆಗೆ ಹೆಚ್ಚು ಗಮನಕೊಡು ಎಂದು ಗದರಿದ್ದರು.

ಅಷ್ಟೇ ಅಲ್ಲದೆ ತಂದೆ ರಾಜವೀರ್ ಬಘೇಲ್ ಆಟ ಆಡುತ್ತಿದ್ದಾಗ ಅವನ ಫೋನ್ ಅನ್ನು ಕಸಿದುಕೊಂಡು ವಶಪಡಿಸಿಕೊಂಡಿದ್ದರು. ಕೋಪಗೊಂಡ ಹುಡುಗ ನೇರವಾಗಿ ತನ್ನ ಕೋಣೆಗೆ ಹೋಗಿ ನೇಣಿಗೆ ಶರಣಾಗಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ದುರಾದೃಷ್ಟವಶಾತ್ ಅಷ್ಟರಲ್ಲಿ ಬಾಲಕನ ಪ್ರಾಣಪಕ್ಷಿ ಹಾರಿ ಹೋಗಿತ್ತು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಕೆಎಸ್‌ಎಂಸಿಎ ಸಂಸ್ಥೆಯಿಂದ ಸರ್ಕಾರಕ್ಕೆ ವಿಶೇಷ ಲಾಭಾಂಶ ಮೊತ್ತ ನೀಡಿಕೆ

ವಿಜಯಸಾಕ್ಷಿ ಸುದ್ದಿ, ಕಾರವಾರ: ಕರ್ನಾಟಕ ರಾಜ್ಯ ಸರ್ಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಮೆ|| ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಶನ್ ಲಿಮಿಟೆಡ್ (ಕೆಎಸ್‌ಎಂಸಿಎ) ಕಂಪನಿಯು ವಿಶೇಷ ಲಾಭಾಂಶದ ಮೊತ್ತ ರೂ.34.13 ಕೋಟಿಗಳನ್ನು ಗುರುವಾರ ಸರ್ಕಾರಕ್ಕೆ ನೀಡಿತು.

ಕಂಪನಿಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಮತ್ತು ಕೆಎಸ್‌ಎಂಸಿಎ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಸತೀಶ ಕೃಷ್ಣ ಸೈಲ್ ಅವರು ವಿಧಾನಸೌಧದಲ್ಲಿ ವಿಶೇಷ ಲಾಭಾಂಶದ ಚೆಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಚಿವ ಎಂ.ಬಿ. ಪಾಟೀಲ್ ಮಾತನಾಡಿ, ಸಂಸ್ಥೆಯು ಇದುವರೆಗೆ ಯಶಸ್ಸಿನ ಪಥದಲ್ಲಿ, ಲಾಭದಾಯಕವಾಗಿ ಮುನ್ನಡೆಯುತ್ತಿರುವುದು ಶ್ಲಾಘನೀಯ. ಆದರೆ, ಸಂಸ್ಥೆಯು ಈ ಹಿಂದೆ ನಿರ್ವಹಿಸಿಕೊಂಡು ಬಂದಿದ್ದ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವು ಸಂಸ್ಥೆಯಿಂದ ಕೈಬಿಟ್ಟು ಹೋಗಿರುವುದರಿಂದ ಸಂಸ್ಥೆಯ ವಹಿವಾಟು ಮತ್ತು ಲಾಭದಾಯಕತೆ ಕಡಿಮೆಯಾಗಿದೆ. ಮುಖ್ಯಮಂತ್ರಿಗಳು ಈ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವನ್ನು ಮತ್ತೆ ಕೆಎಸ್‌ಎಂಸಿಎ ಸಂಸ್ಥೆಗೆ ವಹಿಸಿಕೊಡಬೇಕು ಹಾಗೂ ಸಂಸ್ಥೆಯ ಆರ್ಥಿಕಾಭಿವೃದ್ಧಿಗೆ ಬೆಂಬಲಿಸಬೇಕೆಂದು ಕೋರಿದರು.

ಕೆಎಸ್‌ಎಂಸಿಎ ಅಧ್ಯಕ್ಷ ಸತೀಶ ಕೃಷ್ಣ ಸೈಲ್ ಮಾತನಾಡಿ, ಸರ್ಕಾರವು ಸಂಸ್ಥೆಗೆ ನೀಡಲಾಗಿರುವ 4ಜಿ ವಿನಾಯಿತಿಯಲ್ಲಿ ಹೆಚ್ಚುವರಿಯಾಗಿ ಡಿಜಿಟಲೈಜೇಶನ್ ಕಾರ್ಯ ಚಟುವಟಿಕೆಗಳನ್ನು ಸೇರ್ಪಡೆ ಮಾಡಲು ಹಾಗೂ ಸಂಸ್ಥೆಯ ಜಾಹೀರಾತು ಬಿಡುಗಡೆ ಬಾಕಿ ಮೊತ್ತವನ್ನು ಸಕಾಲದಲ್ಲಿ ಪಾವತಿ ಮಾಡಲು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳು ಇದನ್ನು ಪರಿಗಣಿಸಿ ಅನುಮೋದನೆ ನೀಡಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಅತೀಕುಲ್ಲಾ ಶರೀಫ್ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ ಪಿ.ಎಸ್. ನಂದೀಶ ಉಪಸ್ಥಿತರಿದ್ದರು.

 

ವೋಟ್ ಚೋರಿ ನಿರ್ಲಜ್ಜ ಕೃತ್ಯ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕಾಂಗ್ರೆಸ್ ನಾಯಕ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಲವು ರಾಜ್ಯಗಳಲ್ಲಿ ನಡೆದಿರುವ ವೋಟ್ ಚೋರಿ ಬಗ್ಗೆ ದಾಖಲೆ ಸಮೇತ ದೇಶದ ಜನರ ಮುಂದೆ ಮಾಹಿತಿ ಇಡುತ್ತಿರುವದು ಸತ್ಯವಾಗಿದೆ. ಈ ದುರುದ್ದೇಶ ದೇಶಕ್ಕೆ ಗೊತ್ತಾದ ಮೇಲೆ ವೋಟ್ ಚೋರಿ, ಬೂತ್ ಚೋರಿ, ಆಯೋಗ ಚೋರಿ ಅಂತಹ ನಿರ್ಲಜ್ಜ ಕೆಲಸಕ್ಕೆ ಕೈಹಾಕಿದ್ದು ಅತ್ಯಂತ ಹೇಸಿಗೆ ತರಿಸುವ ಕೃತ್ಯವಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ.ಗೌಡಬಾಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಾದ್ಯಂತ ನಡೆಯುತ್ತಿರುವ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ ಕೊಪ್ಪಳದಲ್ಲೂ ಅಭಿಯಾನ ನಡೆದಿದ್ದು, ಮಹಿಳಾ ಘಟಕವೂ ಸಹ ಸಹಿ ಸಂಗ್ರಹ ಕೆಲಸದಲ್ಲಿ ತೊಡಗಿದೆ. ಎಲ್ಲಾ ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಅಲ್ಲಲ್ಲಿ ಮನೆ ಮನೆಗೆ ತೆರಳಿ ವೋಟ್ ಚೋರಿ ಕುರಿತು ಮಾಹಿತಿ ನೀಡಿ ಸಹಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದೇಶದ ರಕ್ಷಣೆಗೆ ರಾಹುಲ್ ಗಾಂಧಿಯಂತಹ ನೇತಾರನ ಅಗತ್ಯವನ್ನು ದೇಶ ಕಂಡುಕೊಂಡಿದೆ. ಈಗ ಬಿಹಾರ ಚುನಾವಣೆಯನ್ನು ಇಂಡಿಯಾ ಘಟಬಂಧನ್ ಗೆಲ್ಲುವ ಎಲ್ಲಾ ಭರವಸೆ ಮೂಡಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಬಹುಮತದೊಂದಿಗೆ ಕಾಂಗ್ರೆಸ್ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿದ್ದೇವೆ ಎಂದು ಜ್ಯೋತಿ ಎಂ.ಗೌಡಬಾಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಲಿ ದಾಳಿಗೆ ಮತ್ತೊಂದು ಜೀವ ಬಲಿ: ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಸಾವು!

0

ಮೈಸೂರು:- ಹುಲಿ ದಾಳಿಗೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೆ ಹೆಗ್ಗೂಡಿಲು ಗ್ರಾಮದಲ್ಲಿ ಜರುಗಿದೆ.

ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಏಕಾಏಕಿ ದಾಳಿ ಮಾಡಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚೌಡನಾಯಕ (58) ಸ್ಥಳದಲ್ಲಿಯೇ ಸಾವನ್ನಪ್ಪಿರುವ ರೈತ. ರೈತನ ತೊಡೆ, ತಲೆ ಭಾಗವನ್ನು ಹುಲಿ ತೀವ್ರ ಹಾನಿ ಮಾಡಿತ್ತು. ಪರಿಣಾಮ ರೈತ ಸಾವನ್ನಪ್ಪಿದ್ದಾನೆ.

ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ಜರುಗಿದೆ.

ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ!

0

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗಿದ್ದರೂ ಕೂಡ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಾತ್ರ ಒಣಹವೆ ಮುಂದುವರಿಯಲಿದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ, ಶೋರಾಪುರಗಳಲ್ಲಿ ಮಳೆಯಾದ ವರದಿಯಾಗಿದೆ. ಮೈಸೂರಿನಲ್ಲಿ ಕನಿಷ್ಠ 18.2 ಡಿಗ್ರಿ ಸೆಲ್ಸಿಯಸ್ ತಂಪು ಉಷ್ಣಾಂಶ ದಾಖಲಾಗಿದ್ದು, ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾದರೆ, ಶುಕ್ರವಾರವೂ ಮೋಡಕವಿದ ವಾತಾವರಣ ಕಂಡುಬಂದಿದೆ.

ಎಚ್​ಎಎಲ್​ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿಗರ ಗಮನಕ್ಕೆ: ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ – ಕಂಪ್ಲೀಟ್ ವಿವರ ಇಲ್ಲಿದೆ!

0

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಸಂಚಾರದಲ್ಲಿ ಬದಲಾವಣೆ ಇರಲಿದೆ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಯಿಂದ ಮೆರವಣಿಗೆಯು ಬೊಮ್ಮನಹಳ್ಳಿ ಜಂಕ್ಷನ್‌ನಲ್ಲಿ ಸಾಗಲಿರುವ ಕಾರಣ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಹೊಸೂರು ರಸ್ತೆ ಬೊಮ್ಮನಹಳ್ಳಿ ಜಂಕ್ಷನ್, ರೂಪೇನ ಅಗ್ರಹಾರ, ಗಾರೇಭಾವಿಪಾಳ್ಯ ಜಂಕ್ಷನ್ ಮೂಲಕ ಬೆಂಗಳೂರು ನಗರದಿಂದ ಹೊರ ಹೋಗುವ ಮತ್ತು ಬೆಂಗಳೂರು ನಗರಕ್ಕೆ ಪ್ರವೇಶಿಸುವ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮಧ್ಯಾಹ್ನ 3 ಗಂಟೆಯ ನಂತರ ಹೊಸೂರು ರಸ್ತೆ ಬೊಮ್ಮನಹಳ್ಳಿ ಜಂಕ್ಷನ್ ಮೂಲಕ ಸಂಚರಿಸುವ ಸಾರ್ವಜನಿಕರು ಬದಲಿ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ.

ಪರ್ಯಾಯ ಮಾರ್ಗ:
ವಿಲ್ಸನ್‌ಗಾರ್ಡನ್, ಆಡುಗೋಡಿ, ಕಡೆಯಿಂದ ಬರುವ ವಾಹನಗಳು ಡೈರಿ ಸರ್ಕಲ್ ಮೂಲಕ ಬನ್ನೇರುಘಟ್ಟ ರಸ್ತೆಗೆ ಸಾಗಿ ಅಲ್ಲಿಂದ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ಸಂಚರಿಸಬಹುದು.

ಬನಶಂಕರಿಯಿಂದ ಕಡೆಯಿಂದ ಡಬಲ್ ಡೆಕ್ಕರ್ ಮೂಲಕ ಬರುವ ವಾಹನಗಳು ಜಯದೇವ ಜಂಕ್ಷನ್‌ನಲ್ಲಿ ಬಲ ತಿರುವುದು ಕಡೆದು ಬನ್ನೇರುಘಟ್ಟ ರಸ್ತೆ ಮೂಲಕ ಸಾಗಿ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ಸಂಚಾರ.

ಹೊರವರ್ತುಲ ರಸ್ತೆ ಮಾರತಹಳ್ಳಿ ಕಡೆಯಿಂದ ಬರುವ ವಾಹನಗಳು 27ನೇ ಮುಖ್ಯರಸ್ತೆ ಎಡ ತಿರುವು ಪಡೆದು ವೇಮನ ಜಂಕ್ಷನ್ ಮೂಲಕ ಸೋಮಸುಂದರ್‌ಪಾಳ್ಯ ಮಾರ್ಗವಾಗಿ ಕೂಡ್ಲುಗೆ ತೆರಳಿ ಹೊಸೂರು ಮುಖ್ಯ ರಸ್ತೆ
ಹೊಸೂರು ಕಡೆಯಿಂದ ಬೆಂಗಳೂರು ನಗರಕ್ಕೆ ಬರುವ ವಾಹನಗಳು ಎಲೆಕ್ಟ್ರಾನಿಕ್‌ಸಿಟಿ ಎಲಿವೇಟೆಡ್ ಪ್ರೈಓವರ್ ಮೂಲಕ ಸಂಚರಿಸಬಹುದು.

9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ: 25 ವರ್ಷದ ಯುವಕ ಅರೆಸ್ಟ್, ಸಂತ್ರಸ್ತೆ ಆಸ್ಪತ್ರೆಗೆ ದಾಖಲು

0

ರಾಯಚೂರು: ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ವೈದ್ಯಕೀಯ ಪರೀಕ್ಷೆಯ ವೇಳೆ ಈ ವಿಚಾರ ದೃಢಪಟ್ಟಿದೆ. ಈ ಕುರಿತು ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು, ಆರೋಪಿಯಾಗಿರುವ 25 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಯುವಕ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಘಟನೆ ನಂತರ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು.

ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾದ ಹಿನ್ನೆಲೆಯಲ್ಲಿ, ಆರೋಪಿಯನ್ನು ಜೈಲಿಗಟ್ಟಿದ್ದು, ವಿದ್ಯಾರ್ಥಿನಿಯನ್ನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Bengaluru Crime News: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಹತ್ಯೆ – ಆರೋಪಿ ಅರೆಸ್ಟ್‌

0

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಜರುಗಿದೆ.

ಅಂಜಲಿ (20) ಕೊಲೆಯಾದ ಮಹಿಳೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಆರೋಪಿ ಟ್ರಾವೆಲ್ಸ್ ಕಚೇರಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಂಜಲಿ ಸುರಪುರ ಮೂಲದ ರವಿಚಂದ್ರನ ಜೊತೆ ಮಹಿಳೆ 2ನೇ ಮದುವೆಯಾಗಿದ್ದಳು. ಮದುವೆ ನಂತರ ಅಮೃತಹಳ್ಳಿಯಲ್ಲಿ ವಾಸವಿದ್ದರು. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿ ರವಿಚಂದ್ರನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

RTO ಭರ್ಜರಿ ಕಾರ್ಯಾಚರಣೆ; 13 ದಿನದಲ್ಲೇ 102 ಖಾಸಗಿ ಬಸ್ ಸೀಜ್: 1 ಕೋಟಿ ದಂಡ ಸಂಗ್ರಹ!

0

ಬೆಂಗಳೂರು:- ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಎಸಿ ಸ್ಲೀಪರ್ ಬಸ್ ಅಕ್ಟೋಬರ್ 24ರಂದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿತ್ತು. ಈ ದುರಂತದಲ್ಲಿ 19 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದರು.

ಈ ಘಟನೆ ಬಳಿಕ ಸಾರಿಗೆ ಸಚಿವರು ಖಾಸಗಿ ಬಸ್ಸುಗಳ ಸುರಕ್ಷತಾ ಕ್ರಮಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅವರ ಆದೇಶದ ಮೇರೆಗೆ, ಸಾರಿಗೆ ಇಲಾಖೆ ದೊಡ್ಡ ಮಟ್ಟದ ತಪಾಸಣೆ ಆರಂಭಿಸಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಉಪ ಸಾರಿಗೆ ಆಯುಕ್ತರ ನೇತೃತ್ವದಲ್ಲಿ 12 ತಂಡಗಳನ್ನು ರಚಿಸಿ ಬಸ್ಸುಗಳ ಪರಿಶೀಲನೆ ನಡೆಯಿತು. ಬಸ್‌ಗಳಲ್ಲಿ ತುರ್ತು ನಿರ್ಗಮನ ಬಾಗಿಲು, ಬೆಂಕಿ ನಂದಿಸುವ ಸಾಧನ, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಇವೆಯೇ ಎಂಬುದನ್ನು ತಪಾಸಣೆ ಮಾಡಲಾಯಿತು. ಜೊತೆಗೆ ಕೆಲವು ಬಸ್ಸುಗಳಲ್ಲಿ ಅನಧಿಕೃತ ಸರಕು ಸಾಗಾಣಿಕೆ ನಡೆಯುತ್ತಿದೆಯೇ ಎಂಬುದನ್ನೂ ಪರಿಶೀಲಿಸಲಾಯಿತು.

ಅಕ್ಟೋಬರ್ 24ರಿಂದ ನವೆಂಬರ್ 5ರವರೆಗೆ — 13 ದಿನಗಳ ಅವಧಿಯಲ್ಲಿ — ಒಟ್ಟು 4,452 ಖಾಸಗಿ ಬಸ್ಸುಗಳನ್ನು ತಪಾಸಣೆ ಮಾಡಲಾಗಿದೆ. ಅವುಗಳಲ್ಲಿ 604 ಬಸ್ಸುಗಳ ಮೇಲೆ ಕೇಸ್ ದಾಖಲಿಸಲಾಗಿದೆ. 102 ಬಸ್ಸುಗಳನ್ನು ಸೀಜ್ ಮಾಡಲಾಗಿದ್ದು, ದಂಡ ಮತ್ತು ತೆರಿಗೆಯ ರೂಪದಲ್ಲಿ ₹1,09,91,284 ವಸೂಲಿ ಮಾಡಲಾಗಿದೆ.

ಕರ್ನೂಲು ದುರಂತದ ನಂತರ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, ಸುರಕ್ಷತಾ ನಿಯಮ ಪಾಲಿಸದ ಬಸ್ ಮಾಲೀಕರಿಗೆ ಈಗಾಗಲೇ ಬಿಸಿ ಮುಟ್ಟಿಸಿದೆ. ಈಗಾದರೂ ಬಸ್ ಮಾಲೀಕರು ಎಚ್ಚೆತ್ತುಕೊಳ್ಳುತ್ತಾರೆಯೇ ಎಂಬುದನ್ನು ನೋಡಬೇಕಾಗಿದೆ.

ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!

0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರವೊಂದನ್ನು ಬರೆದಿದ್ದಾರೆ.

ರಾಜ್ಯದ ರೈತರ ಸಮಸ್ಯೆಗಳ ಕುರಿತಂತೆ ತಮ್ಮೊಡಗೆ ತುರ್ತಾಗಿ ಚರ್ಚೆ ಮಾಡಬೇಕಿದ್ದು, ಅದಕ್ಕೆ ಅವಕಾಶ ನೀಡುವಂತೆ ಪತ್ರದಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ದಿನದಿಂದ ದಿನಕ್ಕೆ ರೈತರ ಹೋರಾಟ ತೀವ್ರಗೊಂಡಿದ್ದು, ಕಬ್ಬಿನ ಬೆಲೆಗಾಗಿ ಅವರ ಪಟ್ಟು ಯಾವತ್ತೂ ತಣ್ಣಗಾಗಿಲ್ಲ. ದಿನಕ್ಕೊಬ್ಬರಂತೆ ಸಚಿವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದರೂ ಸಮಸ್ಯೆ ಇನ್ನೂ ಬಗೆಹರಿಯುತ್ತಿಲ್ಲ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ತುರ್ತು ಚರ್ಚೆಗಾಗಿ ಪತ್ರ ಬರೆದಿದ್ದಾರೆ.

ಸಿಎಂ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ರೈತರು ತಮ್ಮ ಹೋರಾಟವನ್ನು ತೀವ್ರ ಸ್ವರೂಪದಲ್ಲಿ ಮುಂದುವರೆಸುತ್ತಿದ್ದಾರೆ.

ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಂಧಾನಿಸಲು ನಿರಂತರ ಪ್ರಯತ್ನ ಮಾಡಿದ್ದರೂ, ರೈತರು ಎದುರಿಸುತ್ತಿರುವ ವೆಚ್ಚ ಮತ್ತು ಲಾಭದ ಅಸಮತೋಲನ ಸಮಸ್ಯೆ ಸುಲಭವಾಗಿ ಬಗೆಹರಿಯುತ್ತಿಲ್ಲ. ಕಟಾವು, ಸಾರಿಗೆ ವೆಚ್ಚಗಳನ್ನು ಕಡಿಮೆ ಮಾಡಿದ ಬಳಿಕವೂ, ರೈತರಿಗೆ ಪ್ರತಿ ಟನ್‌ಗೆ 2,600–3,000 ರೂ. ಮಾತ್ರ ಲಾಭ ಸಿಗುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರದ ಸಹಾಯವಾಣಿ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.

error: Content is protected !!