Home Blog Page 5

ಆನ್‍ಲೈನ್ ಗೇಮ್‍ ಚಟ: ಬರೋಬ್ಬರಿ 18 ಲಕ್ಷ ಕಳೆದುಕೊಂಡ ಯುವಕ ನೇಣಿಗೆ ಶರಣು!

ದಾವಣಗೆರೆ:- ಆನ್‍ಲೈನ್ ಗೇಮ್‍ನಲ್ಲಿ ಬರೋಬ್ಬರಿ 18 ಲಕ್ಷ ಕಳೆದುಕೊಂಡ ಯುವಕನೋರ್ವ ಮನನೊಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

25 ವರ್ಷದ ಶಶಿ ಕುಮಾರ್ ಮೃತ ಯುವಕ. ಯುವಕ ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ನೊಂದು ಆನ್‍ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ. ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ನೋವು ತೋಡಿಕೊಂಡಿದ್ದಾನೆ. ಬಳಿಕ ನೇಣಿಗೆ ಶರಣಾಗಿದ್ದಾನೆ.

ಡೆತ್‍ನೋಟ್‍ನಲ್ಲಿ ಗೇಮ್‍ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ.

ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್‌ ನಿರ್ಬಂಧ ಮಾಡಬೇಕು: ಸಂಸದ ಯದುವೀರ್ ಒಡೆಯರ್!

ಮೈಸೂರು:- ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್‌ ನಿರ್ಬಂಧ ಮಾಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರದ ಕೂಗಿಗೆ ಧ್ವನಿಗೂಡಿಸಿದ್ದಾರೆ. ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು ಎಂದು ಆಗ್ರಹಿಸಿದ್ದಾರೆ.

ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೋ ದೇವಿಯ ಮೂಲ ವಿಗ್ರಹದ ವೀಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದಿದ್ದಾರೆ.

ಕುಡುಕರೇ… ವಾರದಲ್ಲಿ ಎಷ್ಟು ಬಿಯರ್ ಕುಡಿದ್ರೆ ಒಳ್ಳೆಯದು? ನೀವು ತಿಳಿಯಲೇಬೇಕು!

ಅತಿಯಾದರೆ ಅಮೃತವೂ ವಿಷ ಅನ್ನೋದನ್ನು ನೀವು ಕೇಳಿರಬಹುದು. ಅದು ಯಾವುದಾದರೂ ಸರಿ. ಮಿತಿಮೀರಿದರೆ ಅಪಾಯ ಕಟ್ಟಿಟ್ಟಬುತ್ತಿ. ಇದು ಆಹಾರ-ಪಾನೀಯದ ವಿಷಯದಲ್ಲೂ ನಿಜ. ಹಾಗೆಯೇ ನಮ್ಮಲ್ಲಿ, ಆಲ್ಕೋಹಾಲ್‌ ಅಂಶವಿರುತ್ತದೆ ಎಂಬ ಕಾರಣಕ್ಕೆ ಬಿಯರ್‌ ಸೇವಿಸುವುದು ಆರೋಗ್ಯಕ್ಕೆ ಹಾನಿಕರ ಎಂದು ಹೇಳಲಾಗುತ್ತದೆ. ಆದರೆ ಅದನ್ನೂ ಹಿತಮಿತವಾಗಿ ಸೇವಿಸಿದರೆ ಅನೇಕ ಆರೋಗ್ಯ ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು. ಬಿಯರ್‌ಅನ್ನು ಮಿತವಾಗಿ ಸೇವಿಸುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳು ಇಲ್ಲಿವೆ.

ಭಾರತದಲ್ಲಿ ಮಾದಕ ವ್ಯಸನಿಗಳು ಹೆಚ್ಚು ಸೇವಿಸುವ ಆಲ್ಕೊಹಾಲ್ಯುಕ್ತ ಪಾನೀಯಗಳಲ್ಲಿ, ಬಿಯರ್ ಮುಂಚೂಣಿಯಲ್ಲಿದೆ. ಗೋಧಿ ಮತ್ತು ಬಾರ್ಲಿಯಂತಹ ಧಾನ್ಯಗಳನ್ನು ಹುದುಗಿಸುವ ಮೂಲಕ ಇದನ್ನು ತಯಾರಿಸಲಾಗುತ್ತದೆ. ಭಾರತದಲ್ಲಿ ಹಲವಾರು ಬ್ರಾಂಡ್‌ಗಳ ಬಿಯರ್ ಲಭ್ಯವಿದೆ. ಈ ಆಲ್ಕೊಹಾಲ್ಯುಕ್ತ ಪಾನೀಯವು 4% ರಿಂದ 6% ರಷ್ಟು ಆಲ್ಕೋಹಾಲ್ ಅನ್ನು ಹೊಂದಿರುತ್ತದೆ.

ಹಿತಮಿತವಾಗಿ ಬಿಯರ್ ಕುಡಿಯುವುದರಿಂದ ಆರೋಗ್ಯಕ್ಕೆ ಕೆಲವು ಪ್ರಯೋಜನಗಳಿವೆ ಎಂದು ತಜ್ಞರು ಹೇಳ್ತಾರೆ. ಆದರೆ ಅತಿಯಾದರೆ, ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಬನ್ನಿ ಬಿಯರ್ ಕುಡಿಯುವುದರ ಹಿಂದಿನ ಆರೋಗ್ಯ ಪ್ರಯೋಜನಗಳು ಮತ್ತು ಅನಾನುಕೂಲಗಳ ಬಗ್ಗೆ ತಿಳಿದುಕೊಳ್ಳಬೇಕು. ಒಂದು ವಾರದಲ್ಲಿ ಎಷ್ಟು ಬಿಯರ್‌ಗಳನ್ನು ಕುಡಿಯುವುದು ಸುರಕ್ಷಿತ..? ಬನ್ನಿ ಈ ಕುರಿತು ತಿಳಿಯೋಣ..

ರಾಷ್ಟ್ರೀಯ ಆರೋಗ್ಯ ಸೇವೆ ವರದಿಯ ಪ್ರಕಾರ, ಪುರುಷರು ಮತ್ತು ಮಹಿಳೆಯರು ವಾರದಲ್ಲಿ 14 ಯೂನಿಟ್‌ಗಳಿಗಿಂತ ಹೆಚ್ಚು ಮದ್ಯಪಾನ ಮಾಡಬಾರದು ಎಂದು ತಿಳಿಸಿದೆ. 14 ಯೂನಿಟ್‌ ಅಂದ್ರೆ, 10 ಮಿಲಿಲೀಟರ್ ಅಥವಾ 8 ಗ್ರಾಂ ಶುದ್ಧ ಆಲ್ಕೋಹಾಲ್. ಉದಾಹರಣೆಗೆ 568 ಮಿಲಿಲೀಟರ್ ಕ್ಯಾನ್ ಸಾಮಾನ್ಯ ಬಿಯರ್ 5% ಆಲ್ಕೋಹಾಲ್ ಅನ್ನು ಹೊಂದಿರುತ್ತದೆ. ಇದು ಸುಮಾರು 3 ಯೂನಿಟ್ ಆಲ್ಕೋಹಾಲ್ ಅನ್ನು ಹೊಂದಿರುತ್ತದೆ.

ಅಂದರೆ ಒಂದು ವಾರದಲ್ಲಿ 6 ಕ್ಯಾನ್ ಸಾಮಾನ್ಯ ಬಿಯರ್ ಕುಡಿದರೆ 14 ಯೂನಿಟ್ ಮಿತಿಯಲ್ಲಿರುತ್ತೀರಿ. ಅದಕ್ಕಿಂತ ಹೆಚ್ಚು ಕುಡಿಯಬೇಡಿ ಎನ್ನುತ್ತಾರೆ ತಜ್ಞರು. ಅಲ್ಲದೆ ನಿಯಮಿತವಾಗಿ ಕುಡಿಯುವವರು ಪ್ರತಿ ವಾರ ಕನಿಷ್ಠ ಎರಡು ದಿನಗಳಾದರೂ ಬಿಡಬೇಕು. ಹೀಗೆ ಮಾಡುವುದರಿಂದ ದೇಹವು ಮದ್ಯದ ಪರಿಣಾಮದಿಂದ ಚೇತರಿಸಿಕೊಳ್ಳಲು ಸಮಯ ನೀಡಿದಂತಾಗುತ್ತದೆ.

ಬಿಯರ್‌ನಲ್ಲಿರುವ ಎಚ್‌ಡಿಎಲ್ ಅಥವಾ ಉತ್ತಮ ಕೊಲೆಸ್ಟ್ರಾಲ್ ಹೃದಯಕ್ಕೆ ಒಳ್ಳೆಯದು. ಇದು ಅಧಿಕವಾಗಿದ್ದರೆ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯಗಳು ಕಡಿಮೆಯಾಗುತ್ತವೆ. ಈ ಆಲ್ಕೊಹಾಲ್ಯುಕ್ತ ಪಾನೀಯವು ಅಲ್ಪ ಪ್ರಮಾಣದ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಅವು ಮೂಳೆಗಳನ್ನು ಬಲಗೊಳಿಸುತ್ತವೆ. ಪರಿಣಾಮವಾಗಿ, ಆಸ್ಟಿಯೊಪೊರೋಸಿಸ್ ಅಪಾಯವು ಕಡಿಮೆಯಾಗುತ್ತದೆ.

ಜರ್ನಲ್ ಆಫ್ ನ್ಯೂಟ್ರಿಷನಲ್ ಬಯೋಕೆಮಿಸ್ಟ್ರಿಯಲ್ಲಿ ಪ್ರಕಟವಾದ ಅಧ್ಯಯನವು ಬಿಯರ್‌ನಲ್ಲಿ ಪಾಲಿಫಿನಾಲ್ಸ್ ಎಂಬ ಪದಾರ್ಥಗಳಿವೆ ಎಂದು ಕಂಡುಹಿಡಿದಿದೆ. ಪಾಲಿಫಿನಾಲ್‌ಗಳು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸಂಶೋಧನೆಯ ಪ್ರಕಾರ, ಮಹಿಳೆಯರು ದಿನಕ್ಕೆ ಒಂದು ಬಿಯರ್ ಮತ್ತು ಪುರುಷರು ದಿನಕ್ಕೆ ಎರಡು ಬಿಯರ್ ಕುಡಿಯುತ್ತಿದ್ದರೆ ಅವರಿಗೆ ಹೃದಯ ಕಾಯಿಲೆ ಬರುವುದಿಲ್ಲ ಎಂದು ತಿಳಿಸಿದೆ..

“ಅತೀಯಾದ್ರೆ ಅಮೃತವೂ ವಿಷ” ಎನ್ನುವಂತೆ.. ಇದು ಬಿಯರ್‌ಗೂ ಅನ್ವಯಿಸುತ್ತದೆ. ತಜ್ಞರ ಪ್ರಕಾರ, ಮಿತಿಗಿಂತ ಹೆಚ್ಚು ಬಿಯರ್ ಕುಡಿಯುವುದರಿಂದ ಯಕೃತ್ತು ಮತ್ತು ಹೃದಯ ಸಮಸ್ಯೆಗಳು ಹಾಗೂ ಕ್ಯಾನ್ಸರ್ ಅಪಾಯ ಹೆಚ್ಚು. ನೀವು ಹೆಚ್ಚು ಬಿಯರ್ ಕುಡಿದರೆ, ನಿಮ್ಮ ದೇಹವು ನೀರನ್ನು ಕಳೆದುಕೊಳ್ಳುತ್ತದೆ. ಇದು ನಿರ್ಜಲೀಕರಣದಿಂದ ತಲೆನೋವು, ಒಣ ಬಾಯಿ ಮತ್ತು ಆಲಸ್ಯದಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಬಿಯರ್ ಕುಡಿಯುವುದರಿಂದ ನಿದ್ರಾಹೀನತೆ ಉಂಟಾಗುತ್ತದೆ. ಬಿಯರ್ ಆಲ್ಕೋಹಾಲ್ ಆಗಿದ್ದು, ಇದರ ಹೆಚ್ಚಿನ ಸೇವನೆ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳುತ್ತದೆ. ಅದಕ್ಕಾಗಿಯೇ ಮದ್ಯಪಾನವನ್ನು ಸಂಪೂರ್ಣವಾಗಿ ನಿಲ್ಲಿಸುವುದು ಉತ್ತಮ. ಮದ್ಯ ಸೇವನೆ ಅಭ್ಯಾಸ ಇರುವವರು ಸುರಕ್ಷಿತ ಮಿತಿ ಮೀರಿ ಕುಡಿಬೇಡಿ.. ಆರೋಗ್ಯದ ಕಡೆ ಎಚ್ಚರ ವಹಿಸಿ..

ಗುಡ್ಡ ಕುಸಿತ: ಕೊಡಸಳ್ಳಿ ವಿದ್ಯುತ್’ಗಾರದ ಬಳಿ ಸಂಚಾರ ಬಂದ್!

ಕಾರವಾರ: ಧಾರಕಾರ ಮಳೆಯಿಂದಾಗಿ ಕೊಡಸಳ್ಳಿ ವಿದ್ಯುತ್‌ಗಾರದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದ್ದು, ಕದ್ರಾ ಭಾಗದ ಬಾಳೆಮನೆ, ಸುಳಗೇರಿ ಕೊಡಸಳ್ಳಿ ಸಂಪರ್ಕ ರಸ್ತೆ ಕಡಿತವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಅವಾಂತರ ಸಂಭವಿಸಿದೆ.

ಕದ್ರಾದಿಂದ ಕೊಡಸಳ್ಳಿ ಡ್ಯಾಮ್ ಸಂಪರ್ಕಿಸುವ ರಸ್ತೆ ಭೂಕುಸಿತವಾದ್ದರಿಂದ ಕೊಡಸಳ್ಳಿ ಜಲ ವಿದ್ಯುತ್‌ಗಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಪಿಸಿ ಸಿಬ್ಬಂದಿಗೆ ತೆರಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಅದೃಷ್ಟವಶಾತ್ ಬೆಳಗ್ಗೆ ರಸ್ತೆಯಲ್ಲಿ ಯಾವ ಸಂಚಾರವೂ ಇಲ್ಲದ ಸಂದರ್ಭದಲ್ಲಿ ಗುಡ್ಡ ಕುಸಿದಿದ್ದು, ದೊಡ್ಡ ಅನಾಹುತ ತಪ್ಪಿದೆ. ಈ ಹಿಂದೆ ಕೊಡಸಳ್ಳಿ ಬಳಿ ಗುಡ್ಡ ಕುಸಿಯುವ ಎಚ್ಚರಿಕೆಯನ್ನು ಜಿಯಾಲಜಿಕಲ್ ಸರ್ವೆ ಆಪ್ ಇಂಡಿಯಾ ವಿಜ್ಞಾನಿಗಳು ನೀಡಿದ್ದರು.

ಕಾಂಗ್ರೆಸ್‌’ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ, ಕಾದು ನೋಡೋಣ: ನಿಖಿಲ್ ಕುಮಾರಸ್ವಾಮಿ!

ಬೀದರ್: ಕಾಂಗ್ರೆಸ್‌ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ, ಕಾದು ನೋಡೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಸೆಪ್ಟೆಂಬರ್‌ಗೆ ಕ್ರಾಂತಿ ಆಗುತ್ತೆ, ಕ್ರಾಂತಿಯಾಗುತ್ತದೆ ಎನ್ನುತ್ತಿದ್ದಾರೆ. ಆದರೆ ಆ ಕ್ರಾಂತಿಯಾಗುತ್ತದೋ ಇಲ್ವೋ ಗೊತ್ತಿಲ್ಲ. ಆದರೆ ಕಾಂಗ್ರೆಸ್‌ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ. ಕಾದು ನೋಡೋಣ ಎಂದರು

ಸಿದ್ದರಾಮಯ್ಯನವರು ಐದು ವರ್ಷ ನಾನೇ ಸಿಎಂ ಎಂದು ಹೇಳುತ್ತಿದ್ದಾರೆ. ಆದರೆ ಒಂದAತು ಸತ್ಯ ಕಾಂಗ್ರೆಸ್‌ನಲ್ಲಿ ಹಲವು ಗುಂಪುಗಳಿದ್ದು, ಕೆಲವು ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ. ಕೆಲವು ಗುಂಪುಗಳು ನೇರವಾಗಿಯೇ ಗುಂಪುಗಾರಿಕೆ ಮಾಡುತ್ತಿದ್ದು, ಈ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಸರ್ಕಾರದ ಮೇಲೆ ರಾಜ್ಯದ ಜನರು ವಿಶ್ವಾಸ ಕಳೆದುಕೊಂಡು ಬಹಳ ದಿನವಾಗಿದ್ದು, ಸರ್ಕಾರ ಕಾಲಹರಣ ಮಾಡುತ್ತಿದೆ ಎಂದರು.

ಡಿ.ಕೆ. ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ: ಡಿ.ಕೆ. ಸುರೇಶ್

ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ ಬದ್ಧರಾಗಿದ್ದಾರೆ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸುರೇಶ್ ಅವರು ಗುರುವಾರ ಮಾತನಾಡಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಕೂಗಿನ ನಡುವೆ ನಾನೇ ಐದು ವರ್ಷ ಸಿಎಂ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ್ದರಲ್ಲಿ ತಪ್ಪೇನಿದೆ. ಮುಖ್ಯಮಂತ್ರಿ ಯಾಗಿರುವವರು ಮುಂದುವರಿಯುತ್ತೇನೆ ಎಂದು ಹೇಳಿದರೆ ಅದರಲ್ಲಿ ತಪ್ಪೇನಿದೆ? ಅವರು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕಾಂಗ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನು ಸಿಎಂ ಮಾಡಿದೆ. ಅವರು ಸರ್ಕಾರ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಚರ್ಚೆ ಏನು?” ಎಂದು ತಿಳಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನನ್ನ ಮುಂದೆ ಯಾವುದೇ ಆಯ್ಕೆ ಇಲ್ಲ, ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರು ಮೊದಲಿನಿಂದಲೂ ಅದನ್ನೇ ಹೇಳುತ್ತಿದ್ದಾರೆ, ಈಗಲೂ ಅದನ್ನೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹಿಂದೆಯೂ ಹೇಳಿದ್ದರು. ಈಗಲೂ ಹೇಳಿದ್ದಾರೆ. ಮುಂದೆಯೂ ಹೇಳುತ್ತಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಹೈಕಮಾಂಡ್ ತೀರ್ಮಾನವನ್ನು ಪಾಲಿಸಿ ಶಿಸ್ತು ಕಾಪಾಡುವುದು ಅವರ ಕರ್ತವ್ಯ. ಹಾಗಾಗಿ ಅವರು ಕೆಲವು ವಿಚಾರವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ” ಎಂದರು.

ಡಿ.ಕೆ. ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ

ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಆಸೆಯನ್ನು ನೀವು ವ್ಯಕ್ತಪಡಿಸಿದ್ದೀರಿ ಎಂದು ಕೇಳಿದಾಗ, “ಆ ಭರವಸೆ ಇಂದೂ ಇದೆ, ನಾಳೆಯೂ ಇರುತ್ತದೆ. ನಂಬಿಕೆ ಎಂಬುದು ನಮ್ಮ ಜೀವನ ನಡೆಸಲು ಪ್ರೇರಣೆ. ನಂಬಿಕೆ ಇಲ್ಲದಿದ್ದರೆ ಜೀವನ ಮಾಡುವುದೇ ಕಷ್ಟವಾಗುತ್ತದೆ. ನನಗೆ ಈಗಲೂ ಆಸೆ ಇದೆ. ಅವರು ಪಕ್ಷಕ್ಕೆ ಬಹಳ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಕೆಲವು ಭಾಗದ ಜನರು ವಿಶ್ವಾಸ ಇಟ್ಟು ಶಿವಕುಮಾರ್ ಅವರಿಗೆ ಒಂದು ಬಾರಿ ಅವಕಾಶ ಸಿಗಲಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಈಗ ಸಿಎಂ ಸೀಟು ಖಾಲಿ ಇಲ್ಲ” ಎಂದು ತಿಳಿಸಿದರು.

ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಗೆ ಬುನಾದಿ ಹಾಕಿದ್ದು ಕಾಂಗ್ರೆಸ್: ಡಿ.ಕೆ.ಶಿವಕುಮಾರ್

ಬೆಂಗಳೂರು:ಜನರ ಕಣ್ಣು, ದೃಷ್ಟಿಗೆ ತೊಂದರೆ ಬಂದರೆ ಚಿಕಿತ್ಸೆ ನೀಡುವ ʼದೃಷ್ಟಿ ಗ್ಯಾರಂಟಿʼಯನ್ನು ಆಶಾಕಿರಣ ಯೋಜನೆ ಮೂಲಕ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಗೋವಿಂದರಾಜನಗರದ ಎಂ.ಸಿ ಲೇಔಟ್ ನಲ್ಲಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ʼಆಶಾಕಿರಣ ದೃಷ್ಟಿ ಕೇಂದ್ರʼವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಇದೇ ವೇಳೆ ಯೋಜನೆಯ ಲಾಭ ಪಡೆದವರಿಗೆ ಉಚಿತ ಕನ್ನಡಕಗಳನ್ನು ವಿತರಣೆ ಮಾಡಿದರು.

ರಾಜ್ಯದಾದ್ಯಂತ 393 ಕಡೆ ಆಶಾಕಿರಣ ದೃಷ್ಟಿ ಕೇಂದ್ರಗಳ ಉದ್ಘಾಟನೆಯಾಗುತ್ತಿದೆ. ಉಚಿತವಾಗಿ ಕನ್ನಡಕ ನೀಡಲಾಗುತ್ತಿದೆ. ಜನರಿಗೆ ಇದರಿಂದ ಕನ್ನಡಕ ಸೇರಿದಂತೆ ಚಿಕಿತ್ಸೆಯ ಸಾವಿರಾರು ಮೊತ್ತ ಹಣ ಉಳಿಯುತ್ತದೆ. ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಇವರು ಆರೋಗ್ಯ ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ಮೇಲೆ ಕ್ರಾಂತಿಕಾರಕ ಹಾಗೂ ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ” ಎಂದು ಹೇಳಿದರು.

ಹಿಂದಿನಿಂದಲು ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಗೆ ಬುನಾದಿ ಹಾಕಿದ್ದು ಕಾಂಗ್ರೆಸ್ ಸರ್ಕಾರ. ಕರ್ನಾಟಕದಲ್ಲಿ 70 ವೈದ್ಯಕೀಯ ಕಾಲೇಜುಗಳಿವೆ. ಅತ್ಯಂತ ಹೆಚ್ಚು ವೈದ್ಯರನ್ನು ತಯಾರು ಮಾಡುತ್ತಿರುವ ಪಟ್ಟಿಯಲ್ಲಿ ಕರ್ನಾಟಕವಿದ್ದು. ಇಲ್ಲಿ ಕಲಿತವರು ಹೊರ ದೇಶಗಳಿಗೆ ತೆರಳಿ ದೇಶಕ್ಕೆ ಉತ್ತಮ ಹೆಸರು ತರುತ್ತಿದ್ದಾರೆ ಎಂದು ಹೇಳಿದರು.

“ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ʼಯಶಸ್ವಿನಿʼ ಯೋಜನೆ ಮೂಲಕ ರೈತರ, ಬಡವರ ಆರೋಗ್ಯ ಕಾಳಜಿಗೆ ಮುನ್ನುಡಿ ಬರೆದಿದ್ದು ನಮ್ಮ ಸರ್ಕಾರ. ಇದನ್ನು ನೋಡಿದ ಕೇಂದ್ರ ಸರ್ಕಾರ ಆರೋಗ್ಯ ಯೋಜನೆಗಳನ್ನು ಪ್ರಾರಂಭ ಮಾಡಿತು. ನಮ್ಮದು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿರುವ ಗ್ಯಾರಂಟಿ ಸರ್ಕಾರ. ಐದು ಗ್ಯಾರಂಟಿಗಳ ಜೊತೆಗೆ ಭೂಮಿ ಗ್ಯಾರಂಟಿಯನ್ನು ಸರ್ಕಾರಕ್ಕೆ ಎರಡು ವರ್ಷ ತುಂಬಿದ ಘಳಿಗೆಯಲ್ಲಿ ನಮ್ಮ ಜನತೆಗೆ ನೀಡಿದ್ದೇವೆ” ಎಂದರು.

ಮಂಡ್ಯವನ್ನು ನಿಮಗೆ, ನಿಮ್ಮ ಕುಟುಂಬಕ್ಕೆ ಗುತ್ತಿಗೆ ಕೊಟ್ಟಿಲ್ಲ: ನಿಖಿಲ್ ವಿರುದ್ದ ಗಣಿಗ ರವಿಕುಮಾರ್ ಕಿಡಿ

ಮಂಡ್ಯ: ಮಂಡ್ಯವನ್ನು ನಿಮಗೆ, ನಿಮ್ಮ ಕುಟುಂಬಕ್ಕೆ ಗುತ್ತಿಗೆ ಕೊಟ್ಟಿಲ್ಲ ಎಂದು ಮಂಡ್ಯದಲ್ಲಿ ನಿಖಿಲ್ ವಿರುದ್ದ ಶಾಸಕ ಗಣಿಗ ರವಿಕುಮಾರ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಅವರ ದೊಡ್ಡಪ್ಪ 1500 ಓಟ್ ನಲ್ಲಿ ಗೆದ್ದಿದ್ದು,

ನನಗೆ 62 ಸಾವಿರ ಜನ ಓಟ್ ಹಾಕಿದ್ದಾರೆ ಅವರಿಗೆ ನೀವು ಅವಮಾನ ಮಾಡ್ತಿದ್ದಿರಾ? ಪ್ರಜಾಪ್ರಭುತ್ವದಲ್ಲಿ ಪ್ರತಿಯೋಂದು ಓಟಿಗೆ ಬೆಲೆ ಇದೆ. ಸುಮ್ಮನೆ ಟೈಮ್ ಪಾಸ್ ಗಿರಾಕಿಗಳು ಟೂರ್ ಗೆ ಬಂದಿದ್ಯಾ 7 ದಿನ ಟೂರ್ ಹೊಡ್ಕೊಂಡು ಹೋಗು ಎಂದು ಏಕವಚನದಲ್ಲೇ ವಾಗ್ಧಾಳಿ ನಡೆಸಿದ್ದಾರೆ.

ಸುಮ್ಮನೆ ನೀವು ಅರ್ಚೋದು, ಕಿರಿಚೊದು, ಕೂಗೋದ್ರಿಂದ ಮಂಡ್ಯ ಅಭಿವೃದ್ಧಿ ಆಗಲ್ಲ, ಕೆಲಸ ಮಾಡಿ ಸ್ವಾಗತಿಸುತ್ತೇವೆ ಆದ್ರೆ ಕೆಲಸ ಮಾಡೋರನ್ನ ಟೀಕೆ ಮಾಡಿ ಮತದಾರರಿಗೆ ಅವಮಾನ ಮಾಡಬೇಡಿ ಎಂದರು. ಕುಮಾರಸ್ವಾಮಿಗೆ ರಾಜ್ಯ ಸರ್ಕಾರದ ಸಹಕಾರ ಇಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅತ್ರ ದುಡ್ಡು ಇಸ್ಕೊಳ್ಳಕ್ಕೆ ನಾವು ರೆಡಿ ಇದ್ದೇವೆ. ಅಭಿವೃದ್ಧಿ ಮಾಡ್ತೇವೆ. ಎಲೆಕ್ಷನ್ ಜನರಿಗೆ ಬಿಟ್ಟಿದ್ದು, ಅಭಿವೃದ್ಧಿಗೆ ಯಾರು ಬೇಕಾದರೂ ದುಡ್ಡು ಕೊಡಬಹುದು ಎಂದರು.

ಈ ಕುಟುಂಬಕ್ಕೆ ಹೃದಯಾಘಾತ ಶಾಪವೇ..? ಒಂದೇ ಕುಟುಂಬದ 7 ಮಂದಿ ಹಾರ್ಟ್ ಅಟ್ಯಾಕ್’ನಿಂದ ಸಾವು..!

ಬಾಗಲಕೋಟೆ: ರಾಜ್ಯದಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸರಣಿ ಪ್ರಕರಣಗಳು ಮುಂದುವರಿದಿವೆ. ಇದರ ನಡುವೆ ಅಚ್ಚರಿ ವಿಷಯವೊಂದು ಬೆಳಕಿಗೆ ಬಂದಿದೆ.  ಈ ಒಂದು ಕುಟುಂಬಕ್ಕೆ ಹೃದಯಾಘಾತ ಶಾಪವಾಗಿ ಪರಿಣಮಿಸಿದ್ದು, ಕಳೆದ 15 ವರ್ಷಗಳಲ್ಲಿ ಹೃದಯಾಘಾತದಿಂದ 7 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಹೌದು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಚೌಡಾಪುರ ತೋಟ ವಸತಿ ಪ್ರದೇಶದಲ್ಲಿ ವಾಸವಾಗಿರುವ ಯಲ್ಲಪ್ಪ ಯಮನವ್ವ ದಂಪತಿಯ ಕುಟುಂಬದಲ್ಲಿ ಕಳೆದ 15 ವರ್ಷದಲ್ಲಿ ಹೃದಯಾಘಾತದಿಂದ 7 ಮಂದಿ ಮೃತಪಟ್ಟಿದ್ದಾರೆ. ಯಲ್ಲಪ್ಪ ಮತ್ತು ಯಮನವ್ವ ದಂಪತಿಗೆ ದುರಗಪ್ಪ, ಸಂತಪ್ಪ, ರಾಮಪ್ಪ, ರಾಮಣ್ಣ, ಸಂತವ್ವ, ನೀಲವ್ವ, ಹನುಮವ್ವ ಎಂಬ ಏಳು ಮಕ್ಕಳಿದ್ದರು.

ಯಮನವ್ವ ತಾನು ಮಲಗಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದಾದ ನಂತರ, ಆಕೆಯ ಮಕ್ಕಳಾದ ಸಂತಪ್ಪ, ರಾಮಪ್ಪ, ರಾಮಣ್ಣ, ಸಂತವ್ವ, ಸಂತಪ್ಪನ ಮಗಳು ಪಾರವ್ವ, ಸಂತವ್ವನ ಮಗ ಕಾಶಪ್ಪ ಒಬ್ಬೊಬ್ಬರಾಗಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಇನ್ನೂ 7 ಜನ ಈಗಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದು, ಕುಟುಂಬದ ಇತರ ನಾಲ್ವರು ಸದಸ್ಯರಾದ ನೀಲವ್ವ,

ಆಕೆಯ ಹಿರಿಮಗ ಈರಣ್ಣ, ದುರಗಪ್ಪನ ಮೊಮ್ಮಗ ಯಲ್ಲಪ್ಪ, ಮತ್ತು ಹನುಮವ್ವನ ಮೊಮ್ಮಗ ಸಂಗಮೇಶ್‌ ಬೈಪಾಸ್‌ ಸರ್ಜರಿ ಮಾಡಿಸಿಕೊಂಡು ತಪಾಸಣೆ, ಚಿಕಿತ್ಸೆ, ಔಷಧಿಯಿಂದ ದಿನದೂಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಒಂದೇ ಕುಟುಂಬದಲ್ಲಿ ಇಷ್ಟೊಂದು ಜನರಿಗೆ ಹೃದಯಾಘಾತದಿಂದ ಸಾವು ಮತ್ತು ಗಂಭೀರ ಆರೋಗ್ಯ ಸಮಸ್ಯೆಯು ಸ್ಥಳೀಯ ಜನರಲ್ಲಿ ಆತಂಕ ಮಾಡಿದೆ.

 

 

Mysore: ಚಾಮುಂಡೇಶ್ವರಿ ದೇವಾಲಯದಲ್ಲಿ ತಾಳಿ ಕಳ್ಳತನ..! ಖದೀಮನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಮೈಸೂರು: ದೇವಾಲಯದಲ್ಲಿ ಕಳ್ಳತನಕ್ಕೂ ಮುನ್ನ ದೇವರಿಗೆ ಕೈ ಮುಗಿದು ಹುಂಡಿ ಹಣವನ್ನು, ದೇವರ ಕಿರೀಟವನ್ನು ಕದ್ದ ಕಳ್ಳರ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು,

ಇಲ್ಲೊಬ್ಬ ಕಳ್ಳ ದೇವಾಲಯಕ್ಕೆ ಬಂದು ಅಮ್ಮಾ ನೀನೇ ನನ್ನನ್ನು ಕಾಪಾಡ್ಬೇಕು ಎಂದು ಭಕ್ತಿಯಿಂದ ಕೈ ಮುಗಿದು ದೇವಿಯ ತಾಳಿಯನ್ನೇ ಎಗರಿಸಿದ್ದಾನೆ.

ಹೌದು ಮೈಸೂರಿನ ಗಾಯತ್ರಿಪುರಂ ನಲ್ಲಿರುವ ಚಾಮುಂಡೇಶ್ವರಿ ದೇವಾಲಯದಲ್ಲಿ ಕೈಮುಗಿಯುವ ಸೋಗಿನಲ್ಲಿ ಬಂದು ಖದೀಮ ತಾಳಿ ಕಳ್ಳತನ ಮಾಡಿದ್ದಾನೆ. ತಾಳಿ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!