Home Blog Page 5

ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಡ್ಡಾದಿಡ್ಡಿ ಚಾಲನೆ; ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು!

0

ಮಡಿಕೇರಿ:- ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ವಾಹನದ ಕಾಗದಪತ್ರಗಳು ಇಲ್ಲದ ಹಿನ್ನೆಲೆ ಪೊಲೀಸರನ್ನು ನೋಡಿ ಗಾಬರಿಯಾದ ಬೈಕ್​​ ಸವಾರ ಏಕಾಏಕಿ ವಾಹನ ತಿರುಗಿಸುವ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಮರೂರು ಗ್ರಾಮದ‌ ನಟೇಶ್ (31) ಮೃತ ವ್ಯಕ್ತಿ. ಅವರ ಪತ್ನಿ ದಿವ್ಯಾ (30) ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ದಿವ್ಯಾರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದೆ.

ಈ ಬಗ್ಗೆ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾಸ್ ಸಿಲಿಂಡರ್ ಗೆ ಏಕಾಏಕಿ ಬೆಂಕಿ; ಅಗ್ನಿಶಾಮಕದಳ ಸಿಬ್ಬಂದಿಯಿಂದ ತಪ್ಪಿದ ಭಾರೀ ಅನಾಹುತ, ಗ್ರಾಮಸ್ಥರ ಮೆಚ್ಚುಗೆ!

0

ಗದಗ:- ಗ್ಯಾಸ್ ಸಿಲಿಂಡರ್ ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಜಿಲ್ಲೆಯ ರೋಣ ತಾಲ್ಲೂಕಿನ ಕೊತಬಾಳ ಗ್ರಾಮದ ಅಂಗಡಿಯೊಂದರಲ್ಲಿ ಜರುಗಿದೆ.

ಬೆಂಕಿ ನೋಡಿದ ಗ್ರಾಮಸ್ಥರು ಭಯಭೀತರಾದರು, ಜೊತೆಗೆ ಸುತ್ತಲಿನ ವಾಹನ ಚಾಲಕರೂ ಸ್ಫೋಟ ಸಂಭವಿಸಬಹುದು ಎಂಬ ಭೀತಿಯಿಂದ ತಮ್ಮ ವಾಹನಗಳನ್ನು ದೂರದಲ್ಲಿ ನಿಲ್ಲಿಸಿದ್ದರು. ಅದೇ ಸಂದರ್ಭದಲ್ಲಿ ಅಗ್ನಿಶಾಮಕದಳದ ಪ್ರವೀಣ್ ಹೊಸಕೋಟೆ ಕರ್ತವ್ಯಕ್ಕೆ ತೆರಳುತ್ತಿರುವಾಗ ಮಾರ್ಗ ಮದ್ಯೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ತಮ್ಮ ಜೀವದ ಹಂಗನ್ನು ತೊರೆದು ಗ್ಯಾಸ್ ಸಿಲಿಂಡರ್ ನ ರೆಗ್ಯುಲೇಟರ್ ಬಂದ್ ಮಾಡಿ ಭಾರೀ ಅನಾಹುತ ತಪ್ಪಿಸಿದ್ದಾರೆ.

ಅಗ್ನಿಶಾಮಕ ದಳ ಸಿಬ್ಬಂದಿಯ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಯಚೂರು| ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ!

0

ರಾಯಚೂರು: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ.

ಪ್ರಸ್ತುತ, ಸ್ವಾಮೀಜಿಯನ್ನು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿರುವ ಶ್ರೀಗಳು, ನಿನ್ನೆ ರಾತ್ರಿ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು.

ಈ ಸಮಯದಲ್ಲಿ ಅವರು ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆಯನ್ನು ಅನುಭವಿಸಿದರು. ತಕ್ಷಣವೇ ಅವರನ್ನು ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗೆ ಅಪೋಲೋ ಆಸ್ಪತ್ರೆ, ಹೈದರಾಬಾದ್ ಗೆ ಸ್ಥಳಾಂತರಿಸಲಾಗಿದೆ. ವೈದ್ಯರ ಮೇಲ್ವಿಚಾರಣೆಯಲ್ಲಿ ಶ್ರೀಗಳು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠ ಮತ್ತು ಆಸ್ಪತ್ರೆ ಮೂಲಗಳು ತಿಳಿಸಿದ್ದಾರೆ.

ಶ್ರೀಗಳ ಆರೋಗ್ಯ ಹದಗೆಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯದ ಭಕ್ತರು ಮತ್ತು ಅನುಯಾಯಿಗಳಲ್ಲಿ ಆತಂಕ ಉಂಟಾಗಿದೆ. ಅಭಿಮಾನಿಗಳು ಶ್ರೀಗಳು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಒಂಟಿಯಾಗಿ ಮನೆಯಲ್ಲಿದ್ದ ವೃದ್ಧ ಸಾವು!

0

ಬೆಂಗಳೂರು:- ಶಾರ್ಟ್ ಸರ್ಕ್ಯೂಟ್ ನಿಂದ ಒಂಟಿಯಾಗಿ ಮನೆಯಲ್ಲಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಮೈಲಾರಪ್ಪ(80) ಮೃತಪಟ್ಟಿರುವ ವ್ಯಕ್ತಿ. ಮೈಲಾರಪ್ಪ ಅವರು, ಕೆಂಗೇರಿಯಲ್ಲಿ ಮೊಮ್ಮಗನೊಂದಿಗೆ ವಾಸವಿದ್ದರು. ನಿನ್ನೆ ಮೊಮ್ಮಗ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಘಟನೆ ಜರುಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಮೈಲಾರಪ್ಪ ಸಾವಾಗಿರುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಕೆಂಗೇರಿ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಬೆಂಗಳೂರು| ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಕಾರಿಗೆ ಬೆಂಕಿ!

0

ಬೆಂಗಳೂರು:- ಹಲವು ದಿನಗಳಿಂದ ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಜರುಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಅಗ್ನಿ ಕೆನ್ನಾಲಿಗೆಗೆ ಇಡೀ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೂ ಹರಡುವ ಸಾಧ್ಯತೆಯಿದ್ದುದರಿಂದ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರೈಲ್ವೆ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಇಂತಹ ಅಗ್ನಿ ಅವಘಡ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

9 ವರ್ಷಗಳಿಂದ ಪೊಲೀಸರಿಗೆ ಸವಾಲಾಗಿದ್ದ ರೌಡಿಶೀಟರ್ ಸೆರೆ: 31 ಪ್ರಕರಣಗಳ ಆರೋಪಿ ಸಫ್ವಾನ್ ಹುಸೈನ್ ಬಂಧನ

0

ಮಂಗಳೂರು: ಆರೋಪಿಗಳು ಚಾಪೆ ಕೆಳಗೆ ತೂರಿದರೆ ಪೊಲೀಸರು ರಂಗೋಲಿ ಕೆಳಗೆ ತೂರುತ್ತಾರೆ ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಒಂದೆರಡಲ್ಲ, ಬರೋಬ್ಬರಿ 31 ಪ್ರಕರಣಗಳಲ್ಲಿ ಆರೋಪಿಯಾಗಿದ್ದರೂ 9 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ಕಣ್ಣಾಮುಚ್ಚಾಲೆ ಆಡುತ್ತಿದ್ದ ರೌಡಿಶೀಟರ್ ಸಫ್ವಾನ್ ಹುಸೈನ್ (42) ಕೊನೆಗೂ ಬಂಧನಕ್ಕೊಳಗಾಗಿದ್ದಾನೆ.

ಮಂಗಳೂರು ನಗರದ ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿ ಸೆರೆ ಸಿಕ್ಕಿದ್ದಾನೆ. ಹೆಸರು ಬದಲಿಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ ಈತ ರಂಜಾನ್ ಹಿನ್ನೆಲೆ ಭಾರತಕ್ಕೆ ಬಂದಿರುವ ಮಾಹಿತಿ ಆಧರಿಸಿ, ಆಂಧ್ರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಟಾರ್ಗೆಟ್ ಗ್ಯಾಂಗ್‌ನಲ್ಲಿ ಸಕ್ರಿಯನಾಗಿದ್ದ ಸಫ್ವಾನ್ ಹುಸೈನ್ ವಿರುದ್ಧ 2 ಕೊಲೆ, ಗ್ಯಾಂಗ್ ರೇಪ್, ಕೊಲೆಯತ್ನ, ದರೋಡೆ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 31 ಪ್ರಕರಣಗಳಿವೆ. ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ ಹಾಗೂ ಸರಗಳ್ಳತನದಲ್ಲಿಯೂ ಭಾಗಿಯಾಗಿದ್ದಾನೆ ಎನ್ನಲಾಗಿದೆ. ನಕಲಿ ಹೆಸರಿನಲ್ಲಿ ಆಧಾರ್ ಪಡೆದು ಆಂಧ್ರ ಪ್ರದೇಶದಲ್ಲಿ ಉಮ್ಮರ್ ಮೊಹಮ್ಮದ್ ನಾಸಿರ್ ಎಂದು ಹೆಸರು ಬದಲಿಸಿಕೊಂಡಿದ್ದ ಆತ 2018ರಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ.

ರಂಜಾನ್ ಹಬ್ಬದ ಹಿನ್ನೆಲೆ ದೇಶಕ್ಕೆ ಮರಳಿರುವ ಮಾಹಿತಿ ಸಿಕ್ಕ ತಕ್ಷಣ ಎಸಿಪಿ ಮನೋಜ್ ಕುಮಾರ್ ನೇತೃತ್ವದ ತಂಡ ಆಂಧ್ರ ಪ್ರದೇಶದ ರಾಯ್ ಚೋಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

ಅರಿಯರ್ಸ್ ಮತ್ತು ವೇತನ ಪರಿಷ್ಕರಣೆಗಾಗಿ ಸಿಡಿದೆದ್ದ ನೌಕರರು: ಫ್ರೀಡಂ ಪಾರ್ಕ್‌ನಲ್ಲಿ ಮಹಾ ಪ್ರತಿಭಟನೆ, ಬಸ್ ಸಂಚಾರ ಸ್ಥಗಿತ ಭೀತಿ

0

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಡಿದೆದ್ದಿರುವ ಸಾರಿಗೆ ನೌಕರರನ್ನು ಸರ್ಕಾರ ಎಷ್ಟೇ ಮನವೊಲಿಸಲು ಯತ್ನಿಸಿದರೂ ಫಲಕಾರಿಯಾಗಿಲ್ಲ. ಸರ್ಕಾರ ನೀಡಿರುವ ಹೊಸ ಆಫರ್‌ಗೂ ಬಗ್ಗದ ನೌಕರರು ಅದನ್ನು ತಿರಸ್ಕರಿಸಿ, ಪ್ರತಿಭಟನೆ ಮಾಡಿಯೇ ತೀರುತ್ತೇವೆ ಎಂಬ ಹಠಕ್ಕೆ ಬಿದ್ದಿದ್ದಾರೆ.

ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಜಗ್ಗಾಟ ಹೊಂದಾಣಿಕೆ ಹಂತ ತಲುಪದೆ ಮುಂದುವರಿದಿದೆ. ತಮ್ಮ ಸಂಪೂರ್ಣ ಬೇಡಿಕೆ ಈಡೇರಲೇಬೇಕು ಎಂಬ ಒತ್ತಾಯದೊಂದಿಗೆ ನೌಕರರು ಇಂದು ‘ಬೆಂಗಳೂರು ಚಲೋ’ಗೆ ಕರೆ ನೀಡಿದ್ದಾರೆ.

ನೌಕರರ ಬೇಡಿಕೆ ಪ್ರಕಾರ 38 ತಿಂಗಳ ಅರಿಯರ್ಸ್ ಹಾಗೂ 2024ರಿಂದಲೇ ವೇತನ ಪರಿಷ್ಕರಣೆ ಜಾರಿಗೊಳಿಸಬೇಕೆಂದು ಆಗ್ರಹಿಸಲಾಗಿದೆ. ಆದರೆ ಸರ್ಕಾರ 26 ತಿಂಗಳ ಅರಿಯರ್ಸ್ ನೀಡುವ ಜೊತೆಗೆ 2025ರಿಂದ ವೇತನ ಪರಿಷ್ಕರಣೆ ಜಾರಿಗೊಳಿಸುವ ಪ್ರಸ್ತಾವವನ್ನು ಮುಂದಿಟ್ಟಿತ್ತು. ಈ ಆಫರ್ ಅನ್ನು ನೌಕರರು ತಿರಸ್ಕರಿಸಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಸಂಜೆ 4 ಗಂಟೆಯವರೆಗೆ ಸರ್ಕಾರಕ್ಕೆ ಬೇಡಿಕೆ ಈಡೇರಿಸಲು ಅವಕಾಶ ನೀಡಲಾಗಿದೆ. ಸಂಜೆ ಒಳಗಾಗಿ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ, ಇಂದು ರಾತ್ರಿ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸುವ ಸಾಧ್ಯತೆ ಇದೆ.

ಈ ಬೆಳವಣಿಗೆಯಿಂದ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರುವ ಭೀತಿ ಎದುರಾಗಿದೆ.

 

ಬೆಂಗಳೂರಿನ ಹೊರವಲಯದಲ್ಲಿ ಭೀಕರ ಕೃತ್ಯ: ಚಿನ್ನಾಭರಣಕ್ಕಾಗಿ ವೃದ್ಧೆಯ ಕೊಲೆ, ಆರೋಪಿಗಳು ಪರಾರಿ

0

ನೆಲಮಂಗಲ: ನಗರದ ಪೇಟೆ ಬೀದಿಯಲ್ಲಿ ಕತ್ತು ಹಿಸುಕಿ ವೃದ್ಧೆಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಶೋಭಾ (69) ಮೃತ ಮಹಿಳೆ. ವೃದ್ಧ ದಂಪತಿ ಇಬ್ಬರೇ ಮನೆಯಲ್ಲಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿದ್ದಾರೆ. ಮೃತ ಮಹಿಳೆಯ ಪತಿ ರಂಗನಾಥ್ ವೀಲ್ ಚೇರ್‌ನಲ್ಲಿ ಇದ್ದರು ಎಂದು ತಿಳಿದುಬಂದಿದೆ.

ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವುದನ್ನು ಗಮನಿಸಿದ್ದ ದರೋಡೆಕೋರರು ಚಿನ್ನಾಭರಣದ ಮೇಲೆ ಕಣ್ಣು ಹಾಕಿದ್ದರು ಎನ್ನಲಾಗಿದೆ. ಬುಧವಾರ (ಫೆ.18) ಸಂಜೆ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿ, ತಲೆಗೆ ಹೊಡೆದು ಕೊಲೆ ಮಾಡಿ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಚಿನ್ನಾಭರಣ ದೋಚಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆನೆಲಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ವಾನದಳವನ್ನು ಕರೆಸಲಾಗಿದೆ. ದರೋಡೆ ಕುರಿತ ಮಾಹಿತಿ ಸಂಗ್ರಹಿಸಲು ಪೊಲೀ

 

ಹಾಸನ ಫ್ಯಾಕ್ಟರಿಯಲ್ಲಿ ಅನುಮಾನಾಸ್ಪದ ಸಾವು: ನೀರಿನ ಸಂಪ್‌ನಲ್ಲಿ ಎಲೆಕ್ಟ್ರಿಷಿಯನ್ ಮೃತದೇಹ ಪತ್ತೆ

0

ಹಾಸನ: ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯಲ್ಲಿ ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಪುನೀತ್ (27) ಮೃತ ಯುವಕ. ಕಳೆದ 6 ತಿಂಗಳಿನಿಂದ ಅವರು ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಬುಧವಾರ ಎಂದಿನಂತೆ ಸಮವಸ್ತ್ರ ಧರಿಸಿ ಕೆಲಸಕ್ಕೆ ತೆರಳಿದ್ದರು. ಆದರೆ ಮಧ್ಯಾಹ್ನ ವೇಳೆಗೆ ಕಾರ್ಖಾನೆಯ ನೀರಿನ ಸಂಪ್‌ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ರಾತ್ರಿ ಪುನೀತ್ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಪೊಲೀಸರು ಸಾಗಿಸಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಶವಾಗಾರದ ಬಳಿ ನೂರಾರು ಮಂದಿ ಜಮಾಯಿಸಿದರು.

ಘಟನೆ ಕುರಿತು ಕಾರ್ಖಾನೆ ಮೇಲಾಧಿಕಾರಿಗಳ ವಿರುದ್ಧ ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನವೇ ಮೃತದೇಹ ಪತ್ತೆಯಾದರೂ ತಕ್ಷಣ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿದೆ. ಬೆಳಿಗ್ಗೆ ಸಮವಸ್ತ್ರದಲ್ಲೇ ಕೆಲಸಕ್ಕೆ ತೆರಳಿದ್ದ ಪುನೀತ್ ಮೃತಪಟ್ಟ ಬಳಿಕ ಸಮವಸ್ತ್ರ ಬದಲಾಯಿಸಲಾಗಿದೆ ಎಂದು ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಇದು ಸಹಜ ಸಾವು ಅಲ್ಲ, ಕೊಲೆ ಎಂಬ ಅನುಮಾನವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಕಾರ್ಖಾನೆಯಲ್ಲಿ ಶೇ.80ಕ್ಕೂ ಹೆಚ್ಚು ಹೊರರಾಜ್ಯದ ಕಾರ್ಮಿಕರು ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಪದೇ ಪದೇ ಸಾವುಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಪುನೀತ್ ಸ್ಥಳೀಯರಾಗಿರುವುದರಿಂದ ಪ್ರಕರಣವನ್ನು ಮುಚ್ಚಿಹಾಕಲು ಸಾಧ್ಯವಾಗದೇ ನಾಟಕವಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಮೃತ ಪುನೀತ್ ಕಳೆದ ವಾರ ಪಾದಯಾತ್ರೆಯ ಮೂಲಕ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ದೇವಸ್ಥಾನದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಫೆ.15ರಂದು ಗ್ರಾಮಕ್ಕೆ ಮರಳಿದ್ದರು. ಅವರಿಗೆ ಯಾವುದೇ ದುಶ್ಚಟಗಳೂ ಇರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಒಬ್ಬನೇ ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

ಅಹಿಂದ ಸಂಘಟನೆಯ ಜಿಲ್ಲಾ ಅಧ್ಯಕ್ಷರಾಗಿ ಇಮಾಮ್ ಕಲೇಗಾರ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ಅಲ್ಪಸಂಖ್ಯಾತರ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ರಾಜ್ಯ ಘಟಕ ರಾಜ್ಯ ಸಮಿತಿಯು ಇಮಾಮಸಾಬ ಬಿ. ಕಲೇಗಾರ ಅವರನ್ನು ರಾಷ್ಟ್ರೀಯ ಅಹಿಂದ ಸಂಘಟನೆ ಗದಗ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್. ಶಿವಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!