Home Blog Page 5

ಮುಂದಿನ ಚುನಾವಣೆಯಲ್ಲಿ ಜೆಡಿಎಸ್’ನಿಂದ ನಾನೇ ಅಭ್ಯರ್ಥಿಯಾಗಿರುತ್ತೇನೆ: ರವೀಂದ್ರ ಶ್ರೀಕಂಠಯ್ಯ

ಮಂಡ್ಯ: ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌’ನಿಂದ ನಾನೇ ಅಭ್ಯರ್ಥಿಯಾಗಿರುತ್ತೇನೆ ಎಂದು ಶ್ರೀರಂಗಪಟ್ಟಣದ ಮಾಜಿ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ನಿಂದ ನಾನೇ ಅಭ್ಯರ್ಥಿಯಾಗಿರುತ್ತೇನೆ.

ನನ್ನ ಪಕ್ಷ ಜೆಡಿಎಸ್, ನನ್ನ ನಾಯಕ ಕುಮಾರಸ್ವಾಮಿ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಮೈತ್ರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಮಧ್ಯೆ ಒಗ್ಗಟ್ಟಿನ ಕೊರತೆಯಿಂದ ಕಾಂಗ್ರೆಸ್ ಲಾಭ ಪಡೆಯಬಹುದು ಎಂಬ ಊಹಾಪೋಹಗಳು ಕೇಳಿಬಂದಿವೆ. ಮಂಡ್ಯದ ಜೆಡಿಎಸ್ ಕಾರ್ಯಕರ್ತರು ರವೀಂದ್ರ ಶ್ರೀಕಂಠಯ್ಯನವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಆಘಾತಕಾರಿ ಘಟನೆ: ಮನೆ ಕೆಲಸದವನಿಂದ ಡಬಲ್ ಮರ್ಡರ್!

ದೆಹಲಿ;- ದೆಹಲಿಯ ಲಜ್‌ಪತ್ ನಗರದಲ್ಲಿ ಕೆಲಸದವನಿಂದಲೇ ತಾಯಿ ಹಾಗೂ ಮಗನ ಹತ್ಯೆಗೈದಿರುವ ಘಟನೆ ಜರುಗಿದೆ. 42 ವರ್ಷದ ತಾಯಿ ರುಚಿಕಾ, 14 ವರ್ಷದ ಕ್ರಿಶ್ ಕೊಲೆಯಾದವರು.

ಮುಖೇಶ್ (24) ಬಂಧಿತ ಆರೋಪಿ. ರುಚಿಕಾ ಹಾಗೂ ಆಕೆಯ ಪತಿ ಸೇರಿಕೊಂಡು ಬಟ್ಟೆ ಅಂಗಡಿಯೊAದನ್ನು ನಡೆಸುತ್ತಿದ್ದರು. ಇದೇ ಅಂಗಡಿಯಲ್ಲಿ ಆರೋಪಿ ಮುಖೇಶ್ ಚಾಲಕ ಹಾಗೂ ಸಹಾಯನಾಗಿ ಕೆಲಸ ಮಾಡುತ್ತಿದ್ದ. ಕೊಲೆ ನಡೆದ ದಿನ ಆರೋಪಿ ಮುಖೇಶ್ ಮನೆಗೆ ಬಂದಿದ್ದ. ಈ ವೇಳೆ ರುಚಿಕಾ ಆತನಿಗೆ ಬೈದಿದ್ದಳು ಎನ್ನಲಾಗಿದ್ದು, ಇದೇ ಕೋಪದಿಂದ ಆಕೆ ಹಾಗೂ ಮಗನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಕುರಿತು ರುಚಿಕಾ ಪತಿ ಕುಲದೀಪ್ ಮಾತನಾಡಿ, ನನ್ನ ಹೆಂಡತಿ ಹಾಗೂ ಮಗನಿಗೆ ನಿರಂತರವಾಗಿ ಕರೆ ಮಾಡಿದ್ದು, ಅವರು ಉತ್ತರಿಸಿರಲಿಲ್ಲ. ಅದೇ ಗಾಬರಿಯಿಂದ ಮನೆಯ ಬಳಿ ಬಂದಾಗ ಬಾಗಿಲು ಲಾಕ್ ಆಗಿತ್ತು ಹಾಗೂ ಮೆಟ್ಟಿಲು, ನೆಲದ ಮೇಲೆ ರಕ್ತದ ಕಲೆ ಇತ್ತು. ತಕ್ಷಣವೇ ನಾನು ಪೊಲೀಸರಿಗೆ ಕರೆ ಮಾಡಿದೆ ಎಂದು ತಿಳಿಸಿದ್ದಾರೆ.

ಹಾಸನದಲ್ಲಿ ನಿಲ್ಲದ ಹೃದಯಾಘಾತ ಸರಣಿ ಸಾವು; ಮತ್ತಿಬ್ಬರು ಸಾವು- ಜನರಲ್ಲಿ ಹೆಚ್ಚಿದ ಆತಂಕ!

ಹಾಸನ:- ಹೃದಯಾಘಾತದಿಂದ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ಜರುಗಿದ್ದು, ಸರಣಿ ಸಾವು ಕಂಡು ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸೇರಿ 70 ವರ್ಷದ ವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೃದಯಾಘಾತಕ್ಕೆ 70ರ ವೃದ್ಧ ಬಲಿ:

ಸಕಲೇಶಪುರ ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಹೃದಯಾಘಾತದಿಂದ 70 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಜರುಗಿದೆ. ಸಿ. ಬಿ ವಿರುಪಾಕ್ಷ ಮೃತ ವ್ಯಕ್ತಿ. ಕಳೆದ ರಾತ್ರಿ 11:30 ರಲ್ಲಿ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬದವರು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ದುರಾದೃಷ್ಟವಶಾತ್ ಮಾರ್ಗ ಮಧ್ಯೆ ವಿರೂಪಾಕ್ಷ ಸಾವನ್ನಪ್ಪಿದ್ದಾರೆ.

ಹೃದಯಾಘಾತಕ್ಕೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಬಲಿ:

ಹೃದಯಾಘಾತದಿಂದ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸಾವನ್ನಪ್ಪಿರುವ ಘಟನೆ ಆಲೂರು ತಾಲ್ಲೂಕಿನ ಕಲ್ಲಾರೆ ಗ್ರಾಮದಲ್ಲಿ ಜರುಗಿದೆ. ಸಂತೋಷ್ (40) ವರ್ಷ ಮೃತ ಯುವಕ. ಮಲಗಿದ್ದಾಗಲೇ ಬೆಳಗ್ಗಿನ ಜಾವ 5 ಗಂಟೆಯಲ್ಲಿ ಹೃದಯಾಘಾತ ಸಂಭವಿಸಿದೆ.

ಗ್ರಾಮ ಪಂಚಾಯ್ತಿ ಸದಸ್ಯರಾಗಿದ್ದ ಸಂತೋಷ್ ಸಮಾಜ ಸೇವಕರಾಗಿದ್ದರು. ಇವರ ಅಗಲಿಕೆಯಿಂದ ಗ್ರಾಮದಲ್ಲಿ ಮೌನ ಆವರಿಸಿದೆ. ಇದರಿಂದ 42 ದಿನಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಮತ ಪಟ್ಟವರ ಸಂಖ್ಯೆ 30ಕ್ಕೆ ಏರಿಕೆ ಆಗಿದೆ.

ಕಮಲ್‌ ಹಾಸನ್‌ ಗೆ ಭಾರೀ ಮುಖಭಂಗ: ದಿಢೀರ್ ಓಟಿಟಿಗೆ ಎಂಟ್ರಿಕೊಟ್ಟ ‘ಥಗ್ ಲೈಫ್’ ಸಿನಿಮಾ

ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಮಕಾಡೆ ಮಲಗಿದೆ. ಹಾಕಿದ ಬಂಡವಾಳವೂ ಬರದೆ ನಿರ್ಮಾಪಕರು ಕೈ ಕೈ ಹೊಸಕಿಕೊಳ್ಳುತ್ತಿದ್ದಾರೆ. ಈ ವರ್ಷದ ಈ ವರೆಗಿನ ಅತ್ಯಂತ ಹೀನಾಯವಾಗಿ ಸೋತ ಸ್ಟಾರ್ ಸಿನಿಮಾ ಎಂಬ ಕುಖ್ಯಾತಿಗೆ ‘ಥಗ್ ಲೈಫ್’ ಪಾತ್ರವಾಗಿದೆ. ಇದೀಗ ಈ ಸಿನಿಮಾ ಸದ್ದಿಲ್ಲದೆ ಒಟಿಟಿಯಲ್ಲಿ ಬಿಡುಗಡೆ ಆಗಿದ್ದು ಇದು ಕಮಲ್‌ ಹಾಸನ್‌ ಗೆ ಭಾರಿ ಮುಖಭಂಗ ಉಂಟು ಮಾಡಿದೆ.

ಥಗ್‌ ಲೈಫ್‌ ಸಿನಿಮಾ ಜೂನ್ 5 ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಪ್ರಚಾರ ಸಂದರ್ಭದಲ್ಲಿ ಕಮಲ್ ಹಾಸನ್, ಕನ್ನಡ ಭಾಷೆಯ ಬಗ್ಗೆ ಆಡಿದ ಮಾತಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ನಿಷೇಧ ಹೇರಲಾಗಿತ್ತು. ಥಗ್‌ ಲೈಫ್‌ ಸಿನಿಮಾವನ್ನು  8 ವಾರಗಳ ಬಳಿಕ ಚಿತ್ರವನ್ನು ಓಟಿಟಿಯಲ್ಲಿ ಬಿಡುಗಡೆ ಮಾಡಲು ಒಪ್ಪಂದವಾಗಿತ್ತು. ಆದರೆ 4 ವಾರ ಕಳೆಯುವ ಮುನ್ನ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆರಂಭವಾಗಿದೆ.

ಥಗ್‌ ಲೈಫ್‌ ಸಿನಿಮಾ ಚಿತ್ರಮಂದಿರದಲ್ಲಿ ಹೀನಾಯ ಸೋಲು ಕಂಡ ಕಾರಣ, ಸಿನಿಮಾವನ್ನು ಬೇಗನೆ ಒಟಿಟಿಗೆ ಬಿಡುಗಡೆ ಮಾಡಲು ನೆಟ್​ಫ್ಲಿಕ್ಸ್ ನಿರ್ಮಾಪಕರ ಮೇಲೆ ಒತ್ತಡ ಹೇರಿತು. ಇಲ್ಲವಾದರೆ ಒಪ್ಪಂದದಲ್ಲಿರುವಂತೆ 110 ಕೋಟಿ ಹಣದ ಬದಲಾಗಿ ಕಡಿಮೆ ಹಣ ನೀಡುವುದಾಗಿ ಹೇಳಿದ್ದಾರೆ. ಇದೀಗ ಒಟಿಟಿಯ ಒತ್ತಡಕ್ಕೆ ಮಣಿದಿರುವ ‘ಥಗ್ ಲೈಫ್’ ನಿರ್ಮಾಪಕರು, ಎಂಟು ವಾರಕ್ಕೆ ಮುಂಚೆಯೇ ‘ಥಗ್ ಲೈಫ್’ ಸಿನಿಮಾವನ್ನು ಒಟಿಟಿಗೆ ಬಿಡುಗಡೆ ಮಾಡಿದ್ದಾರೆ. ‘ಥಗ್ ಲೈಫ್’ ಸಿನಿಮಾವನ್ನು ಮುಂಚಿತವಾಗಿ ಒಟಿಟಿಯಲ್ಲಿ ಬಿಡುಗಡೆ ಮಾಡಿದರೆ, ನಷ್ಟ ತುಂಬಿಕೊಡಬೇಕು ಎಂದು ಮಲ್ಟಿಪ್ಲೆಕ್ಸ್​ಗಳು ನಿರ್ಮಾಪಕರಿಗೆ ನೊಟೀಸ್ ಕಳಿಸಿತ್ತು. ಆದರೆ ಅದನ್ನು ನಿರ್ಲಕ್ಷಿಸಿ ಇದೀಗ ಅವಧಿಗೆ ಮುಂಚಿತವಾಗಿ ಒಟಿಟಿಗೆ ಬಿಡುಗಡೆ ಮಾಡಲಾಗಿದೆ.

ಗೋಲ್ಡ್ ಪ್ರಿಯರು ಕಂಗಾಲು: ಚಿನ್ನದ ದರ ಗುರುವಾರವೂ ಹೆಚ್ಚಳ.. ಗ್ರಾಂ ಎಷ್ಟಿದೆ?

ಗುರುವಾರವಾದ ಇಂದು ಕೂಡ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿಕೆ ಕಂಡಿದ್ದು, ಗೋಲ್ಡ್ ಪ್ರಿಯರು ಕಂಗಾಲಾಗಿದ್ದಾರೆ.

ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​​ಗೆ 55 ರೂ ಹೆಚ್ಚಳಗೊಂಡಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ಏರಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಇವತ್ತು ಹೆಚ್ಚಿದೆ. ಗ್ರಾಮ್​​ಗೆ ಇದರ ಬೆಲೆ 1 ರೂ ಏರಿಕೆ ಕಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 3ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,050 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,330 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,500 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,050 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,330 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ.

‘ಲಕ್ಷ್ಮಿ ನಿವಾಸ’ ಧಾರಾವಾಹಿಯಿಂದ ಪ್ರಮುಖ ನಟನೇ ಔಟ್‌: ಮತ್ತೋರ್ವ ಸ್ಟಾರ್‌ ಎಂಟ್ರಿ

ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಧಾರವಾಹಿಯ ಪ್ರಮುಖ ಪಾತ್ರಗಳು ಒಬ್ಬರ ಹಿಂದೊಬ್ಬರಂತೆ ಬದಲಾಗುತ್ತಿದ್ದಾರೆ. ಈ ಹಿಂದೆ ತನು ಪಾತ್ರಧಾರಿ ಬದಲಾಗಿದ್ದರು. ಆ ಬಳಿಕ ಕಳೆದ ಒಂದು ವಾರಗಳ ಹಿಂದಷ್ಟೇ ಕಥಾ ನಾಯಕಿ ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದ ನಟಿ ಹೊರ ಬಂದರು.  ಇದೀಗ ಸೀರಿಯಲ್ ಮತ್ತೊಂದು ಪ್ರಮುಖ ಪಾತ್ರಧಾರಿ ಲಕ್ಷ್ಮೀ ನಿವಾಸ ತಂಡಕ್ಕೆ ಗುಡ್‌ ಬೈ ಹೇಳಿದ್ದಾರೆ.

ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದ ನಟಿ ಶ್ವೇತಾ ವೈಯಕ್ತಿಕ ಕಾರಣದಿಂದ ಧಾರವಾಹಿ ತೊರೆದಿದ್ದಾರೆ. ಶ್ವೇತಾ ಜಾಗಕ್ಕೆ ನಟಿ ಮಾಧುರಿ ಎಂಟ್ರಿಕೊಟ್ಟಿದ್ದಾರೆ. ಇದೀಗ ಲಕ್ಷ್ಮೀ ಸೋದರನ ಪಾತ್ರದಲ್ಲಿ ನಟಿಸುತ್ತಿದ್ದ ನೀನಾಸಂ ಅಶ್ವಥ್ ಧಾರವಾಹಿ ತಂಡದಿಂದ ಹೊರ ಬಂದಿದ್ದಾರೆ.

ಲಕ್ಷ್ಮೀ ನಿವಾಸ ಧಾರವಾಹಿಯಲ್ಲಿ ನರಸಿಂಹ ಪಾತ್ರದಲ್ಲಿ ನಟಿಸುತ್ತಿದ್ದ ನೀನಾಸಂ ಅಶ್ವಥ್ ಧಾರವಾಹಿಯಿಂದ ಹೊರ ಬಂದಿದ್ದಾರೆ. ನೀನಾಸಂ ಅಶ್ವಥ್ ಸೀರಿಯಲ್‌ನಿಂದ ಹೊರ ಬಂದಿರೋದು ಯಾಕೆ ಎಂಬುದು ತಿಳಿದು ಬಂದಿಲ್ಲ. ಸದ್ಯ ನರಸಿಂಹಕ್ಕೆ ಪಾತ್ರಕ್ಕೆ ಮತ್ತೋರ್ವ ಖ್ಯಾತ ಹಿರಿಯ ನಟ ಧರ್ಮೆಂದ್ರ  ಎಂಟ್ರಿಕೊಟ್ಟಿದ್ದು ಸದ್ಯ ಆ ಪ್ರೋಮೋವನ್ನು ಝೀ ಕನ್ನಡ ವಾಹಿನಿ ಸೋಷಿಯಲ್‌ ಮೀಡಯಾದಲ್ಲಿ ಶೇರ್‌ ಮಾಡಿದೆ.

ಚಾಮರಾಜನಗರದಲ್ಲೂ ಹೃದಯಾಘಾತ ಭೀತಿ: ಕೋಲ್ಡ್ ಜ್ಯೂಸ್ ಕುಡಿಯುತ್ತಿದ್ದಂತೆ ಕುಸಿದು ‘ಚಾಲಕ’ ಸಾವು!

ಚಾಮರಾಜನಗರ;- ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಖಾಸಗಿ ಬಸ್ ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ರಮೇಶ್ (೪೭) ಮೃತ ಚಾಲಕ.

ಮೃತ ರಮೇಶ್, ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಿಂದ ಕೊಳ್ಳೇಗಾಲಕ್ಕೆ ಬಸ್ ಚಾಲನೆ ಮಾಡಿಕೊಂಡು ತೆರಳುತ್ತಿದ್ದಾಗ ಮಧುವನಹಳ್ಳಿ ಗ್ರಾಮದ ಬಳಿ ಎದೆ ನೋವು ಕಾಣಿಸಿಕೊಂಡಿದೆ. ಚಾಲಕ ರಮೇಶ್ ತಕ್ಷಣ ಬಸ್ ನಿಲ್ಲಿಸಿ ಆಟೋದ ಮೂಲಕ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದಾರೆ. ಈ ವೇಳೆ ಅಲ್ಲಿದ್ದ ಸಿಬ್ಬಂದಿಗಳು ಊಟದ ವ್ಯತ್ಯಾಸದಿಂದ ಎದೆ ಉರಿ ಕಾಣಿಸಿಕೊಂಡಿರಬಹುದು ಎಂದು ತಿಳಿಸಿದ್ದಾರೆ.

ನಂತರ ಚಾಲಕ ರಮೇಶ್ ಖಾಸಗಿ ಬಸ್ ನಿಲ್ದಾಣದಲ್ಲಿ ತೆರಳಿ ಕೋಲ್ಡ್ ಜ್ಯೂಸ್ ಕುಡಿಯುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಜನನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರ ವೇಳೆಗೆ ಚಾಲಕ ಮೃತಪಟ್ಟಿದ್ದಾರೆ.

ನಾಯಿ ಅಡ್ಡ ಬಂದು ಬೈಕ್ ಅಪಘಾತ: ವಚನಾನಂದ ಶ್ರೀ ಸಹೋದರ ಸಾವು!

ಬೆಳಗಾವಿ:- ಬೈಕ್ ಅಪಘಾತದಲ್ಲಿ ಯೋಗಗುರು ಹಾಗೂ ಹರಿಹರ ಪೀಠದ ಶ್ರೀ ವಚನಾನಂದ ಸ್ವಾಮೀಜಿಯವರ ಸಹೋದರ ಅಶೋಕ್ ಗೌರಗೊಂಡ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಥಣಿ ಸಮೀಪದ ಭರಮೋಕೋಡಿ ಬಳಿ ಜರುಗಿದೆ.

ತಾಂವಶಿ ಗ್ರಾಮದಿಂದ ಅಥಣಿ ಕಡೆಗೆ ಸಾಗುವಾಗ ‌ಭರಮೋಕೋಡಿ ಹತ್ತಿರ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ನಾಯಿ ಅಡ್ಡ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ. ಪರಿಣಾಮ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಶೋಕ್‌ ಅವರು ತಾಯಿ ಹೆಂಡತಿ ಹಾಗೂ ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ನಂದಿನಿ ಪಾರ್ಲರ್‌ಗೆ ನುಗ್ಗಿ ದಾಂಧಲೆ: ವಸ್ತುಗಳನ್ನು ಪುಡಿಗೈದ ನಿವೃತ್ತ ಡಿಜಿ ಓಂಪ್ರಕಾಶ್ ಪುತ್ರಿ!

ಬೆಂಗಳೂರು:- ನಿವೃತ್ತ ಡಿಜಿ ಓಂಪ್ರಕಾಶ್ ಪುತ್ರಿ ದಾಂಧಲೆ ನಡೆಸಿದ್ದು, ನಗರದ ನಂದಿನಿ ಪಾರ್ಲರ್‌ ಒಂದಕ್ಕೆ ನುಗ್ಗಿ ವಸ್ತುಗಳನ್ನು ಪೀಸ್ ಪೀಸ್ ಮಾಡಿದ್ದಾರೆ.

ಎಸ್, ಕೆಲವು ತಿಂಗಳ ಹಿಂದೆ ಪತ್ನಿಯಿಂದಲೇ ಬರ್ಬರವಾಗಿ ಹತ್ಯೆಯಾಗಿದ್ದ ನಿವೃತ್ತ ಡಿಜಿ ಓಂ ಪ್ರಕಾಶ್ ಅವರ ಪುತ್ರಿ ದಾಂಧಲೆ ಮಾಡಿಕೊಂಡಿದ್ದಾರೆ. ನಂದಿನಿ ಪಾರ್ಲರ್‌ಗೆ ನುಗ್ಗಿ ವಸ್ತುಗಳನ್ನು ಪೀಸ್ ಪೀಸ್ ಮಾಡಿದ್ದಾರೆ.

ಸಿಬ್ಬಂದಿಗೂ ಕೂಡ ಕೃತಿಕಾ ಥಳಿಸಿದ್ದಾರೆ. ಅವರ ವರ್ತನೆಗೆ ಸ್ಥಳೀಯರು ಶಾಕ್ ಆಗಿದ್ದಾರೆ. ನಿವೃತ್ತ ಡಿಜಿ ಓಂ ಪ್ರಕಾಶ್ ಕೊಲೆಯಾದ ನಂತರ ಸಹೋದರ ಬೇರೆ ಕಡೆಗೆ ಶಿಫ್ಟ್ ಆಗಿದ್ದಾರೆ. ಇಡೀ ಮನೆಯಲ್ಲಿ ಮಗಳು ಕೃತಿಕಾ ಒಂಟಿಯಾಗಿ ವಾಸವಾಗಿದ್ದಾರೆ.

ಕಳೆದ ಸೋಮವಾರ ಸಂಜೆ ಮನೆಯ ಪಕ್ಕದ ನಂದಿನಿ ಪಾರ್ಲರ್‌ಗೆ ಕೃತಿಕಾ ಬಂದಿದ್ದರು. ಅಂಗಡಿ ಮುಂದೆ ಸ್ವಲ್ಪ ಹೊತ್ತು ಹಾಗೇ ನಿಂತು ಅಲ್ಲಿನ ಮಾಲೀಕನನ್ನು ದಿಟ್ಟಿಸಿ ನೋಡಿದ್ರು. ಇದನ್ನು ನೋಡಿದ ಮಾಲೀಕ, ‘ಯಾಕೆ ಮೇಡಂ ಏನಾಯ್ತು’ ಅಂತಾ ಕೇಳಿದ್ದ. ಈ ವೇಳೆ ಕೋಪಗೊಂಡ ಕೃತಿಕಾ ಏಕಾಏಕಿ ಅಂಗಡಿಗಳಲ್ಲಿದ್ದ ಎಲ್ಲಾ ವಸ್ತುಗಳನ್ನು ಹೊಡೆದು ಪೀಸ್ ಪೀಸ್ ಮಾಡಿದ್ದಾರೆ.

ಅಷ್ಟೇ ಅಲ್ಲದೇ, ತಡೆಯೋಕೆ ಬಂದ ಮಾಲೀಕನ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಆಕೆಯ ವರ್ತನೆಯಿಂದ ಭಯಗೊಂಡ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರನ್ನು ನೋಡಿ ಏನೂ ಆಗೇ ಇಲ್ಲ ಎಂಬಂತೆ ಕೃತಿಕಾ ಮನೆಗೆ ಹೋಗಿದ್ದಾರೆ. ಪ್ರಕರಣ ದಾಖಲಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಭೀಕರ ಅಪಘಾತ: ಕ್ಯಾಂಟರ್ ಲಾರಿ ಹರಿದು ಗೃಹಿಣಿ ಸ್ಥಳದಲ್ಲೇ ಸಾವು!

ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಹೊರವಲಯದ ಮಾಕಳಿ ಬಳಿ ಕ್ಯಾಂಟರ್ ಲಾರಿ ಹರಿದು ಗೃಹಿಣಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.

24 ವರ್ಷದ ಯಶೋಧ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಹೆಗ್ಗಡ ದೇವನಪುರದಿಂದ ಫಂಕ್ಷನ್ ಮುಗಿಸಿ ಅಂಚೆಪಾಳ್ಯ ಕಡೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಎಡಕ್ಕೆ ಬಂದ ಕ್ಯಾಂಟರ್ ಚಾಲಕ ಬೈಕ್ ಗೆ ಗುದ್ದಿದ್ದಾನೆ.

ಈ ವೇಳೆ ಮಹಿಳೆಯು, ಬೈಕ್ ನಿಂದ ಕೆಳಕ್ಕೆ ಬಿದ್ದಿದ್ದಾರೆ. ಆಗ ಯಶೋಧ ಮೇಲೆ ಲಾರಿ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ಮಹಿಳೆ ಶವವನ್ನು ನೆಲಮಂಗಲ ಸರ್ಕಾರಿ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

error: Content is protected !!