Home Blog Page 5

ಕರವೇ ಮಹಿಳಾ ಘಟಕದ ಉಪಾಧ್ಯಕ್ಷರ ನೇಮಕ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಗದಗ ಜಿಲ್ಲಾ ಉಪಾಧ್ಯಕ್ಷರನ್ನಾಗಿ ರಾಜೇಶ್ವರಿ ಶಿ. ಹೊಸತೋಟದ ಇವರನ್ನು ನೇಮಕ ಮಾಡಿ ಆದೇಶಿಸಿದೆ.

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಅನೇಕ ವರ್ಷಗಳಿಂದ ನಾಡು, ನುಡಿ, ನೆಲ, ಕನ್ನಡಪರ ನ್ಯಾಯಕ್ಕಾಗಿ ಹೋರಾಟಗಳನ್ನು ಮಾಡುತ್ತಾ ಬಂದಿರುವ ಇವರನ್ನು ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾಧ್ಯಕ್ಷ ಹನಮಂತಪ್ಪ ಹೆಚ್.ಅಬ್ಬಿಗೇರಿಯವರು ಇವರನ್ನು ಗದಗ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.

ಕಾಯಕ, ಕಲೆಗಳಿಗೆ ಲಿಂಗದ ಹಂಗಿಲ್ಲ

ವಿಜಯಸಾಕ್ಷಿ ಸುದ್ದಿ, ಗದಗ: ಮಂಗಳಮುಖಿಯರ ಜೀವನದ ತಲ್ಲಣಗಳು ಬಡತನ, ಸಿರಿತನ ಭವಿಷ್ಯದ ಭಯವಿಲ್ಲದೆ ಭಾವನೆಗಳಿಗೆ ಬಣ್ಣ ತುಂಬಿ, ನಾರಿಯರ ಅಂಗದ ಅಭಿನಯದಲ್ಲಿ ಗುರುತಿಸಿಕೊಂಡು ಭವ್ಯ ಬದಕನ್ನೇ ತೊರೆದು, ಭಿಕ್ಷೆಯ ಬದುಕನ್ನು ಆಯ್ಕೆ ಮಾಡಿಕೊಂಡು, ತನ್ನತನದ ಅರಿವಿಗೆ ಮೆರಗನ್ನು ನೀಡಿದವರು. ಮಾನವನಾದ ಮೇಲೆ ಯಾವದೇ ಲಿಂಗವಾಗಲಿ ಕಾಯಕಕ್ಕೆ ಮತ್ತು ಕಲಾ ಕೌಶಲ್ಯಕ್ಕೆ ಲಿಂಗದ ಹಂಗಿಲ್ಲ. ಎಂದು ಸಾಹಿತಿ ಎ.ಎಸ್. ಮಕಾನದಾರ ಅಭಿಪ್ರಾಯಪಟ್ಟರು.

ಬೆಂಗಳೂರಿನ ಪಯಣ ಸಂಸ್ಥೆಯು ಕರ್ನಾಟಕ ನವಜ್ಯೋತಿ ಸೇವಾ ಸಂಸ್ಥೆ ನಾಗಾವಿ, ನವಜ್ಯೋತಿ ವ್ಯಸನ ಮುಕ್ತಿ ಹಾಗೂ ಪುನರ್ವಸತಿ ಕೇಂದ್ರ ಗದಗ, ನಿರ್ಮಲ ವಿವಿಧೋದ್ದೇಶಗಳ ಸೇವಾ ಸಂಸ್ಥೆ ಮುಂಡರಗಿ ಹಾಗೂ ಕೆ.ವಿ.ಕೆ ಸೇವಾ ಫೌಂಡೇಶನ್ ಗದಗ ಇವುಗಳ ಸಹಯೋಗದಲ್ಲಿ ನವಜ್ಯೋತಿ ವ್ಯಸನ ಮುಕ್ತಿ ಹಾಗೂ ಪುನರ್ವಸತಿ ಕೇಂದ್ರದಲ್ಲಿ `ತಲ್ಕಿ’ ನಾಟಕ ಪ್ರದರ್ಶನ ಹಾಗೂ ಕೆ.ವಿ.ಕೆ ಸೇವಾ ಫೌಂಡೇಶನ್ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳಮುಖಿಯರು ಕಡುಕಷ್ಟವನ್ನು ಮೆಟ್ಟಿನಿಂತು ದಿಟ್ಟವಾಗಿ ಸಮಾಜದಲ್ಲಿ ಅಸ್ತಿತ್ವ ಕಂಡುಕೊಂಡಿದ್ದಾರೆ. ನಮಗೆಲ್ಲಾ ಇದ್ದೂ ನೂರಾರು ವ್ಯಸನಕ್ಕೆ ಬಲಿಯಾಗುತಿದ್ದೇವೆ. ಇದರಿಂದ ಅನಾರೋಗ್ಯಯುತ ಸವಜ ನಿರ್ಮಾಣವಾಗಿದೆ. ಸಮಾಜದ ಜಾಗೃತಿಗಾಗಿ ಸಮಾಜದ ಒಳಿತಿಗಾಗಿ ಕೆ.ವಿ.ಕೆ ಸೇವಾ ಫೌಂಡೇಶನ್ ಅನಾವರಣಗೊಂಡಿದೆ. ಸಮಾಜದ ಬೆಳವಣಿಗೆಗೆ ಮತ್ತು ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಫೌಂಡೇಶನ್ ಅಧ್ಯಕ್ಷರಾದ ಕಸ್ತೂರಿ ಕಡಗದವರು ಶ್ರಮಿಸಲಿ ಎಂದು ಹಾರೈಸಿದರು.

ಕಾರಾಗೃಹದ ಅಧೀಕ್ಷಕರಾದ ಈರಣ್ಣ ರಂಗಾಪೂರ ಮಾತನಾಡಿ, ಯಾವುದೋ ಒಂದು ವ್ಯಸನಕ್ಕೆ ಬಲಿಯಾಗಿ ಅದೊಂದೇ ನನ್ನ ಜೀವನ, ಇದನ್ನು ಬಿಟ್ಟರೆ ನನಗೆ ಮುಂದೆ ಬದುಕಿಲ್ಲ ಎನ್ನುವ ಭಾವ ತೊರೆದು ಕಾಯಕ ಮಾಡುವವನಿಗೆ ನೂರಾರು ಕೆಲಸಗಳು. ಇದು ಇಲ್ಲದಿದ್ದರೆ ಇನ್ನೊಂದು ಇದೆ ಎಂಬ ಆತ್ಮಸ್ಥೈರ್ಯ ಹೊಂದಬೇಕು. ನೀವು ಸದೃಢ ಸಮಾಜದ ಶಕ್ತಿಯಾಗಿ ಬೆಳೆಯಬೇಕು. ಕೆಟ್ಟ ವ್ಯಸನ ಮರೆತು ಹೊಸ ಬದುಕನ್ನು ಕಟ್ಟಿಕೊಳ್ಳಿ ಎಂದು ವ್ಯಸನಿಗಳಿಗೆ ಕಿವಿಮಾತುಗಳನ್ನು ಹೇಳಿದರು.

ವೇದಿಕೆಯ ಮೇಲೆ ಗಾಯಕಿ ಪಲ್ಲವಿ ಗಜೇಂದ್ರಗಡ, ಸಾಹಿತಿ ಮರುಳಸಿದ್ದಪ್ಪ ದೊಡ್ಡಮನಿ, ಚಂದ್ರು ನಾವಿ, ನಿರ್ಮಲಾ ತರವಾಡೆ, ಕಸ್ತೂರಿ ಕಡಗದ, ಗಣೇಶ ಕಬಾಡಿ, ಹನಮಂತಗೌಡ ಪಾಟೀಲ, ವ್ಯವಸ್ಥಾಪಕರಾದ ಶ್ವೇತಾ ಕೋಳೆಕರ, ಕುಮಾರ ಈಶ್ವರ ಹಟ್ಟಿ, ಚಾಂದಿನಿ, ಸವಿತಾ, ನಿರ್ದೇಶಕ ಶ್ರೀಜಿತ್ ಸುಂದರ, ಮಹಾಲಕ್ಷ್ಮೀ ಉಪಸ್ಥಿತರಿದ್ದರು. ಮಂಗಳಮುಖಿಯರ ಬದುಕನ್ನಾಧರಿಸಿದ ತಲ್ಕಿ ನಾಟಕ ಪ್ರದರ್ಶನ ಜನ ಮನ ಸೆಳೆಯಿತು. ಮಂಗಳಮುಖಿಯರಿಗೆ ವಿಶೇಷ ಗೌರವ ಸಮರ್ಪಿಸಲಾಯಿತು.

ಕೆ.ವಿ.ಕೆ ಫೌಂಡೇಶನ್ ಕಾರ್ಯದರ್ಶಿ ಬಸವರಾಜ ನೆಲಜೇರಿ ನಿರೂಪಿಸಿ ವಂದಿಸಿದರು. ನವಜ್ಯೋತಿ ಸೇವಾ ಸಂಸ್ಥೆಯ ಸರ್ವ ಸಿಬ್ಬಂದಿಗಳು ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನವಜ್ಯೋತಿ ಸೇವಾ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ಬೇವಿನಮರದ ಮಾತನಾಡಿ, ಬುದ್ಧಿವಂತರ ಬದುಕನ್ನು ಬದಲಾಯಿಸಬಹುದು, ಆದರೆ ಬುದ್ಧಿ ಕೆಟ್ಟವರನ್ನು ಬದಲಾಯಿಸಿ ಅವರನ್ನು ಸಮಾಜದಲ್ಲಿ ತಲೆ ಎತ್ತುವಂತೆ ಮಾಡುವದು ಕಠಿಣ. ಇಂತಹ ಅನುಭವಗಳ ಮೂಲಕ ಸಮಾಜದ ನಿರ್ಗತಿಕರನ್ನು ಸಾಕಿ ಸಲುಹಿ, ಮಕ್ಕಳ ಮರೆತಿರುವ ವೃದ್ಧರ ಅಂತ್ಯ ಸಂಸ್ಕಾರ ಮಾಡಿದ್ದೇವೆ. ಅವರ ಆಶೀರ್ವಾದದ ಫಲವೇ ಸಮಾಜ ಸೇವೆಗೆ ಶಕ್ತಿ. ವ್ಯಸನಿಗಳನ್ನು ಬದಲಾಯಿಸುವದೆಂದರೆ ತಪ್ಪಸ್ಸು ಇದ್ದಂತೆ ಎಂದು ತಮ್ಮ ಶ್ರಮದ ಒಳಹುಗಳನ್ನು ತಿಳಿಸಿದರು.

ದೇಶದಲ್ಲಿ ಪ್ರಾಮಾಣಿಕ ಸಿಎಂ ಯಾರಾದ್ರು ಇದ್ದರೆ ಅವರು ಸಿದ್ದರಾಮಯ್ಯ ಮಾತ್ರ: CM ಪರ ಬೈರತಿ ಸುರೇಶ್ ಬ್ಯಾಟಿಂಗ್

ಬೆಂಗಳೂರು: ದೇಶದಲ್ಲಿ ಪ್ರಾಮಾಣಿಕ ಸಿಎಂ ಯಾರಾದ್ರು ಇದ್ದರೆ ಅವರು ಸಿದ್ದರಾಮಯ್ಯ ಮಾತ್ರ ಎಂದು ಸಿಎಂ ಪರ ಸಚಿವ ಬೈರತಿ ಸುರೇಶ್ ಬ್ಯಾಟಿಂಗ್ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಾಮಾಣಿಕ ಸಿಎಂ ಯಾರಾದ್ರು ಇದ್ದರೆ ಅವರು ಸಿದ್ದರಾಮಯ್ಯ.

ಸಿಎಂ ಮೇಲೆ ಏನೇನೋ ಆರೋಪ ಮಾಡಿ ಗಾಳಿಯಲ್ಲಿ ಗುಂಡು ಹೊಡೆಯೋ ಕೆಲಸ ಬೇರೆ ರಾಜಕಾರಣಿಗಳು ಮಾಡ್ತಾರೆ. ಆದ್ರೆ ಈ ಆರೋಪಗಳು ಸಿದ್ದರಾಮಯ್ಯ ಅವರ ಹತ್ತಿರವೂ ಬರುವುದಿಲ್ಲ. ಸಿಎಂ ಮೇಲಿನ ಹೊಟ್ಟೆ ಉರಿಗೆ ಆರೋಪ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ ಯಾರು ಏನು ಮಾಡೋಕೆ ಆಗೊಲ್ಲ. ನಾನು ಅವರ ಕ್ಯಾಬಿನೆಟ್‌ನಲ್ಲಿ ಮಂತ್ರಿ ಆಗಿರೋದು ನನ್ನ ಪುಣ್ಯ ಎಂದು ಹೇಳಿದ್ದಾರೆ.

Nelamangala: ಯುವತಿ ವಿಚಾರಕ್ಕೆ ಗಲಾಟೆ: ಇಬ್ಬರಿಗೆ ಚಾಕು ಇರಿತ

0

ಬೆಂಗಳೂರು ಗ್ರಾಮಾಂತರ: ಇತ್ತಿಚೆಗೆ ರಾಜ್ಯದಲ್ಲಿ ಕ್ಷುಲಕ ವಿಚಾರಕ್ಕೆ ಹೊಡೆದಾಟ, ಕೊಲೆಗಳು ಹೀಗೆ ಹಲವಾರು ಘಟನೆಗಳು ನಡೆಯುತ್ತಲೇ ಇವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದೆ. ನೆಲಮಂಗಲದಲ್ಲಿ ಮಾಜಿ ಪ್ರೇಯಸಿಗೆ ಕೊಟ್ಟ ಹಣವನ್ನು ವಾಪಸ್‌ ಕೇಳಿದ್ದನೆಂಬ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನೆಲಮಂಗಲದ ಜ್ಯೂಸ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿದ್ದ ಸುದೀಪ್‌ ಹಾಗೂ ಆತನ ಸ್ನೇಹಿತ ಚೇತನ್‌ ಚೂರಿ ಇರಿತದಿಂದ ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ.  ಸುದೀಪ್‌ ಎರಡು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ.

ಆದರೆ ಕೆಲವು ತಿಂಗಳ ಹಿಂದೆ ಇಬ್ಬರ ನಡುವೆ ಬ್ರೇಕಪ್‌ ಆಗಿತ್ತು. ಈ ವೇಳೆ ತಾನು ನೀಡಿದ್ದ 2 ಸಾವಿರ ರೂ. ಹಣವನ್ನು ಹಿಂದಿರುಗಿಸುವಂತೆ ಸುದೀಪ್‌ ತಾಕೀತು ಮಾಡಿದ್ದ. 1 ಸಾವಿರ ರೂ. ಹಣ ಹಿಂದಿರುಗಿಸಿದ್ದ ಯುವತಿ ಮತ್ತೊಂದು ಸಾವಿರ ರೂ. ಹಣ ನೀಡಿರಲಿಲ್ಲ. ಇದಕ್ಕೆ ಸುದೀಪ್‌ ಫೋನ್‌ ಮಾಡಿ ಹಣ ಹಿಂದಿರುಗಿಸುವಂತೆ ಕೇಳಿದ್ದ.

ಮೂರು ದಿನದ ಹಿಂದೆ ಕೆಲವು ಯುವಕರು ಜ್ಯೂಸ್‌ ಅಂಗಡಿಯ ಬಳಿ ಯುವತಿ ಬಳಿ ಹಣ ಕೇಳ್ತೀಯಾ ಎಂದು ಜಗಳ ತೆಗೆದು ಹಲ್ಲೆ ನಡೆಸಿದ್ದರು. ಅಲ್ಲದೇ ತಡೆಯಲು ಬಂದ ಚೇತನ್‌ ಮೇಲೂ ಸಹ ಚೂರಿಯಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಈಗ ಇಬ್ಬರೂ ಸಹ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಠಾಣೆಯ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಹುಟ್ಟುಹಬ್ಬದಂದು ತಮಗೆ ಟ್ರೀಟ್ಮೆಂಟ್ ಕೊಟ್ಟ ವೈದ್ಯರನ್ನು ಗೌರವಿಸಿದ ಶಿವರಾಜ್‌ ಕುಮಾರ್‌

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್‌ಗೆ ಇಂದು ಜನುಮದಿನದ ಸಂಭ್ರಮ. ಶಿವಣ್ಣ ಇಂದು 63ನೇ ವಸಂತಕ್ಕೆ ಕಾಲಿಟ್ಟಿದ್ದು ಈ ವೇಳೆ ಅಭಿಮಾನಿಗಳ ಸಮ್ಮುಖದಲ್ಲಿ ಶಿವಣ್ಣ ಕೇಕ್‌ ಕತ್ತರಿಸಿ ಸಂಭ್ರಮಿಸಿದ್ದಾರೆ. ಇದೇ ವೇಳೆ ಯುಎಸ್ ನಲ್ಲಿ ತಮಗೆ ಶಸ್ತ್ರ ಚಿಕಿತ್ಸೆ ನೀಡಿದ ಮೂವರು ಡಾಕ್ಟರ್ ಗಳಿಗೆ ಶಿವಣ್ಣ ಗೌರವ ಸಲ್ಲಿಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಅಮೆರಿಕಾದಲ್ಲಿ ಶಿವರಾಜ್‌ ಕುಮಾರ್‌ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಮುರುಗೇಶ್ ಮನೋಹರನ್ ಎನ್ನುವವರು ಶಿವಣ್ಣನಿಗೆ ಶಸ್ತ್ರ ಚಿಕಿತ್ಸೆ ನೀಡಿದ್ದರು. ಶಿವಣ್ಣನ 63 ನೇ ಹುಟ್ಟು ಹಬ್ಬದ ಸಂಭ್ರಮದ ವೇಳೆ ಈ ವೈದ್ಯರಿಗೆ ಗೌರವ ಸಲ್ಲಿಸಲಾಗಿದೆ. ತಮಗೆ ವಿದೇಶದಲ್ಲಿ ಚಿಕಿತ್ಸೆ ನೀಡಿದ್ದ ಮೂವರು ವೈದ್ಯರನ್ನು ಕರೆಸಿ ಸನ್ಮಾನಿಸಿದ ಶಿವರಾಜ್ ಕುಮಾರ್ ಅವರು ಅವರಿಗೆ ಈ ಮೂಲಕ ಗೌರವ ಸಲ್ಲಿಸಿದ್ದಾರೆ.

ಶಿವಣ್ಣನ ಹುಟ್ಟುಹಬ್ಬದ ಪ್ರಯುಕ್ತ USA ನಿಂದ ಆಗಮಿಸಿರುವ ವೈದ್ಯರು ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಶಿವಣ್ಣನಿಗೆ USA ನಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯ ಡಾ.ಶ್ರೀನಿವಾಸ್, ಡಾ. ಮುರುಗೇಶ್, ಡಾ.ಮನೋಹರ & ಟೀಂಗೆ ಸನ್ಮಾನ ಮಾಡಲಾಗಿದೆ.

ವಾಕಿಂಗ್ ವೇಳೆ ಹೃದಯಾಘಾತ: ಕುಸಿದು ಬಿದ್ದು ನರ್ಸಿಂಗ್ ಹೋಂ ಮಾಲೀಕ ಸಾವು..!

ರಾಮನಗರ: ಕನಕಪುರ ನಗರದಲ್ಲಿ ಬೆಳಗಿನ ವಾಕಿಂಗ್ ವೇಳೆ ಹೃದಯಾಘಾತ ಸಂಭವಿಸಿ ನರ್ಸಿಂಗ್ ಹೋಂ ಮಾಲೀಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಂಜುನಾಥ್ (50) ಎಂದು ಗುರುತಿಸಲಾಗಿದೆ. ಅವರು ಕನಕಪುರದ ಪ್ರಸಿದ್ಧ ಗಣೇಶ್ ನರ್ಸಿಂಗ್ ಹೋಮ್ ಹಾಗೂ ಗಣೇಶ್ ಮೆಡಿಕಲ್‌ ಮಾಲೀಕರಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಖ್ಯಾತಿ ಪಡೆದವರಾಗಿದ್ದರು.

ಈ ದಿನ ಬೆಳಗ್ಗೆ ವಾಕಿಂಗ್ ಗೆ ತೆರಳಿದ್ದ ವೇಳೆ ಅವರು ತೀವ್ರ ಎದೆನೋವಿನಿಂದ ಕುಸಿದು ಬಿದ್ದರು. ತಕ್ಷಣವೇ ಕುಟುಂಬಸ್ಥರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ವೈದ್ಯರು ಮಂಜುನಾಥ್ ಅವರನ್ನು ಮೃತ ಎಂದು ಘೋಷಿಸಿದರು.

ಮಂಜುನಾಥ್ ಅವರು ಕನಕಪುರ ಗ್ರಾಹಕರ ವೇದಿಕೆ ಹಾಗೂ ಔಷಧ ಮಾರಾಟಗಾರರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಅವರ ಅಕಾಲಿಕ ನಿಧನದಿಂದ ವೈದ್ಯಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಆಘಾತ ಹಾಗೂ ದುಃಖದ ಛಾಯೆ ನಿರ್ಮಾಣವಾಗಿದೆ.

ಗಂಡನ ಮನೆಯಲ್ಲಿ ಗೃಹಿಣಿ ಆತ್ಮಹತ್ಯೆ..! ಕುಟುಂಬಸ್ಥರಿಂದ ಕೊಲೆ ಆರೋಪ

0

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ. ಮೃತ ಮಹಿಳೆಯನ್ನು 27 ವರ್ಷದ ಸಂದ್ಯಾ ಎಂದು ಗುರುತಿಸಲಾಗಿದೆ.

ಮದುವೆಯಾದ 7 ವರ್ಷಗಳಿಂದ ಗಂಡ ಅನಂತ್ ಕುಮಾರ್ ಹಾಗೂ ಅವರ ಮನೆಯವರು ಸಂದ್ಯಾಳಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಸ್ಥಳೀಯರ ಮತ್ತು ಕುಟುಂಬಸ್ಥರಾಗಿದೆ. ಹಿನ್ನೆಲೆಯಲ್ಲಿ, ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ನಿಜವಾಗಿ ಆತ್ಮಹತ್ಯೆಯೇ ಅಲ್ಲದೆ ಕೊಲೆ ಎಂದು ಮಹಿಳೆಯ ತವರು ಮನೆಯವರು ಆರೋಪಿಸಿದ್ದಾರೆ.

ಮಹಿಳೆಯ ಮೃತದೇಹವನ್ನು ಕುಟುಂಬಸ್ಥರು ಪೋಲೀಸ್ ಠಾಣೆ ಬಳಿ ಕಾರಿನಲ್ಲಿ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಗಂಡನ ಮನೆಯವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ವ್ಯಕ್ತಪಡಿಸಿದ್ದಾರೆ.ಘಟನೆ ಬಳಿಕ ಗಂಡ ಮತ್ತು ಇತರ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ. ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರು ತನಿಖೆ ಮುಂದುವರಿಸಿದ್ದಾರೆ.

MRPL ತೈಲ ಘಟಕದಲ್ಲಿ ದುರಂತ: ಇಬ್ಬರು ಕಾರ್ಮಿಕರು ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ ತೈಲ ಚಲನೆ ವಿಭಾಗದಲ್ಲಿ ಸಂಭವಿಸಿದ ಭಯಾನಕ ದುರಂತದಲ್ಲಿ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.

ಮೃತರನ್ನು ದೀಪ್ ಚಂದ್ರ ಮತ್ತು ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಟ್ಯಾಂಕ್ FB7029A ನ ಮೇಲ್ಭಾಗದ ಪ್ಲಾಟ್‌ಫಾರ್ಮ್‌ನಲ್ಲಿ ದೋಷ ಪರಿಶೀಲನೆಗಾಗಿ ಹೋದ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಈ ಸಂದರ್ಭ ರಕ್ಷಣೆಗೆ ಧಾವಿಸಿದ್ದ ಮೂರನೇ ಕಾರ್ಮಿಕ ವಿನಾಯಕ ಮ್ಯಾಗೇರಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಘಟನೆ ಕುರಿತು ತನಿಖೆ ಮುಂದುವರಿದಿದೆ.

ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ: ಡಿ.ಕೆ. ಸುರೇಶ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು.

ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ನಿರ್ದೇಶನವಿದ್ದರೂ ಸಿಎಂ ಮೂರು ಬಾರಿ ನಾನೇ 5 ವರ್ಷ ಸಿಎಂ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.

ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ. ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ” ಎಂದರು.

ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು” ಎಂದು ತಿಳಿಸಿದರು. ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದಮೇಲೆ ಸಿಎಂ ಪದೇ ಪದೆ ನಾನೇ ಸಿಎಂ ಎಂದು ಹೇಳುವ ಅಗತ್ಯವಿದೆ ಎಂದು ಕೇಳಿದಾಗ, “ಈ ವಿಚಾರವಾಗಿ ಮಾತನಾಡಲು ನಾನು ಬಹಳ ಸಣ್ಣವನು” ಎಂದರು.

ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ

ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಶಾಸಕರ ಬೆಂಬಲ ಕೇಳುವ ಸಮಯವಲ್ಲ. ಸಿದ್ದರಾಮಯ್ಯ ಅವರು 2 ವರ್ಷಗಳಿಂದ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಿರುವಾಗ ಈ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ನಮಗೆ ಗೊತ್ತಿಲ್ಲ.

ನೀವು ಈ ವಿಚಾರ ಚರ್ಚೆ ಮಾಡುತ್ತಿರುವವರನ್ನೇ ಕೇಳಿ. ಶಿವಕುಮಾರ್ ಅವರದ್ದು ಬಲಾಬಲ ಪ್ರದರ್ಶನ ಮಾಡುವ ವ್ಯಕ್ತಿತ್ವವಿಲ್ಲ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ. ಕಾಂಗ್ರೆಸ್ ವರಿಷ್ಠರಿಗೆ ಗೌರವ ನೀಡುವ ವ್ಯಕ್ತಿತ್ವ ಹೊಂದಿರುವವರು. ಅವರು ಬೇರೆಯವರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ” ಎಂದರು.

ಡಿ.ಕೆ. ಶಿವಕುಮಾರ್ ಅವರು ನಂಬುವ ಗುರುಗಳೇ ಈ ಅವಧಿಯಲ್ಲಿ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ ಎಂದು ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ಪ್ರತಿಯೊಬ್ಬರಿಗೂ ಒಬ್ಬೊಬ್ಬರು ಸಿಎಂ ಆಗಲಿ ಎಂದು ಆಸೆ ಪಡುತ್ತಾರೆ. ಪ್ರತಿ ಜಿಲ್ಲೆ, ಸಮುದಾಯದವರು ನಮ್ಮವರು ಸಿಎಂ ಆಗಲಿ ಎಂದು ಆಶಯ ವ್ಯಕ್ತಪಡಿಸುವುದು ಸಹಜ. ಇದು ಇಂದು ನಡೆದಿರುವ ವಿಚಾರವಲ್ಲ. ಪ್ರತಿ ಅವಧಿಯಲ್ಲೂ ಇಂತಹ ಬೆಳವಣಿಗೆ ನಡೆದುಕೊಂಡು ಬಂದಿದೆ. ಇಂತಹ ಅಭಿಪ್ರಾಯವನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ” ಎಂದರು.

ಎರಡು ಬಾರಿ ಇಡಿ ವಿಚಾರಣೆ ಎದುರಿಸಿದ್ದೀರಿ ಅವರ ಉದ್ದೇಶವೇನು ಎಂದು ತಿಳಿಯಿತೇ ಎಂದು ಕೇಳಿದಾಗ, “ನನಗೆ ಕಾರಣ ಗೊತ್ತಿಲ್ಲ. ಆದರೆ ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಕರೆದಾಗ ಬರಬೇಕು ಎಂದು ತಿಳಿಸಿದ್ದಾರೆ. ಜವಾಬ್ದಾರಿಯುತ ಪ್ರಜೆಯಾಗಿ ವಿಚಾರಣೆಗೆ ಸಹಕಾರ ನೀಡಲು ಸಿದ್ಧನಿದ್ದೇನೆ” ಎಂದು ತಿಳಿಸಿದರು.

ತಾವೇ ಹಾಕಿಕೊಂಡ ಲಕ್ಷ್ಮಣ ರೇಖೆ ಹೇಗೆ ದಾಟುತ್ತಾರೆ?

75 ವರ್ಷಕ್ಕೆ ನಿವೃತ್ತಿ ಪಡೆಯಬೇಕು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಬಗ್ಗೆ ಕೇಳಿದಾಗ, “ರಾಜಕಾರಣದಲ್ಲಿ ನಿವೃತ್ತಿ ಇಲ್ಲ ಎಂದು ನಾನು ಹೇಳಿದ್ದೇನೆ. ರಾಜಕೀಯ ಇಚ್ಛಾಶಕ್ತಿ ಜೊತೆಗೆ ಅವರವರು ಹಾಕಿಕೊಂಡಿರುವ ಲಕ್ಷ್ಮಣ ರೇಖೆಗಳನ್ನು ದಾಟುವುದು ಹೇಗೆ ಎಂಬುದು ಮುಖ್ಯ. ಯಾವಾಗಲೂ ಇನ್ನೊಬ್ಬರಿಗೆ ಮಾರ್ಗದರ್ಶಕರಾಗಿ ಮಾದರಿಯಾಗಿರಬೇಕು. ಈ ರೀತಿ ದಿಟ್ಟ ಹೆಜ್ಜೆ ಇಟ್ಟಾಗ ಅವರ ಹೆಸರು ಶಾಶ್ವತವಾಗಿ ಉಳಿಯುತ್ತದೆ” ಎಂದು ತಿಳಿಸಿದರು.

ಕಾಲ್ತುಳಿತ ಕೇಸ್: ಅವರೇ ನೇರ ಹೊಣೆ – ನ್ಯಾ. ಮೈಕಲ್ ಕುನ್ಹಾ ಸಲ್ಲಿಸಿದ ವರದಿಯಲ್ಲಿ ಸ್ಫೋಟಕ ಅಂಶ ಬಯಲು

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗವು RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಸಂಬಂಧಿತ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಕರ್ತವ್ಯ ಲೋಪ, ನಿರ್ಲಕ್ಷ್ಯ: ದುರಂತಕ್ಕೆ KSCA, DNA, RCB ಹಾಗೂ ಪೊಲೀಸರು ನೇರ ಹೊಣೆದಾರರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾರ್ಯಕ್ರಮ ಆಯೋಜನೆಯು ಸಾಧ್ಯವಿಲ್ಲ ಎಂಬುದು ಗೊತ್ತಿದ್ದರೂ, ಎಲ್ಲ ಸಂಘಟನೆಗಳು ಸೇರಿ ನಿರ್ಲಕ್ಷ್ಯತೆಯಿಂದ ಕಾರ್ಯಕ್ರಮ ಮುಂದುವರಿಸಿದ್ದಾರೆ.

ಭದ್ರತಾ ವೈಫಲ್ಯ: ಕ್ರೀಡಾಂಗಣದಲ್ಲಿ ಕೇವಲ 79 ಪೊಲೀಸರನ್ನೇ ನಿಯೋಜಿಸಲಾಗಿತ್ತು. ಹೊರಗೆ ಯಾವುದೇ ಭದ್ರತೆ ಇರಲಿಲ್ಲ. ಆ್ಯಂಬುಲೆನ್ಸ್ ವ್ಯವಸ್ಥೆಯೂ ಇರಲಿಲ್ಲ. ಇದು ತೀವ್ರ ವೈಫಲ್ಯಕ್ಕೆ ಕಾರಣವಾಗಿದೆ.

ಪೊಲೀಸರು ತಡವಾಗಿ ಪ್ರತಿಕ್ರಿಯೆ: ಕಾಲ್ತುಳಿತ 3.25 ಹೊತ್ತಿಗೆ ಆರಂಭವಾದರೂ, ನಗರ ಪೊಲೀಸ್ ಆಯುಕ್ತರಿಗೆ 5.30ರವರೆಗೂ ಮಾಹಿತಿ ತಲುಪಿರಲಿಲ್ಲ. ಜಂಟಿ ಪೊಲೀಸ್ ಆಯುಕ್ತರು 4 ಗಂಟೆಗೆ ಸ್ಥಳಕ್ಕೆ ಆಗಮಿಸಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮುಂದಿನ ಕ್ರಮ: ವರದಿಯನ್ನು ವಿಧಾನಸೌಧದಲ್ಲಿ ಸಿಎಂ ಅವರಿಗೆ ಸಲ್ಲಿಸಲಾಗಿದ್ದು, ಮುಂದಿನ ಹಂತದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.

error: Content is protected !!