Home Blog Page 7

ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ; ನಿಖಿಲ್ ಕುಮಾರಸ್ವಾಮಿ ಭಾಗಿ

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಎಖೇಳ್ಳಿಯ ಹೊರವಲಯದಲ್ಲಿರುವ (ಮೀನಕೇರಾ ಕ್ರಾಸ್) ವಿಜಯಲಕ್ಷ್ಮಿ ಫಂಕ್ಷನ್ ಹಾಲ್ ನಲ್ಲಿ ಗುರುವಾರ ನಡೆದ, ‘ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ’ ಯಲ್ಲಿ ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಪಾಲ್ಗೊಂಡರು.

ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಬೆಳಗ್ಗೆ ನಡೆದ ‘ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ’ ಮುಗಿಸಿ, ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ಬಂಡೆಪ್ಪ ಖಾಶೆಂಪುರ್ ರವರ ನಿವಾಸದಲ್ಲಿ ಮಧ್ಯಾಹ್ನದ ಊಟ ಮುಗಿಸಿದ ನಿಖಿಲ್ ಕುಮಾರಸ್ವಾಮಿರವರು ಸಂಜೆಯ ವೇಳೆಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಎಖೇಳ್ಳಿಯ ಹೊರವಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದರು.

ವೇದಿಕೆ ಕಾರ್ಯಕ್ರಮಕ್ಕೆ ತೆರಳುವ ಮೊದಲು ಅವರು, ಮನ್ನಾಎಖೇಳ್ಳಿಯ ಹೊರವಲಯದಲ್ಲಿರುವ ಪ್ರಸಿದ್ಧ ದೇವಸ್ಥಾನವಾಗಿರುವ ಶ್ರೀ ಬಾಲಮ್ಮ ದೇವಿಯ ಮಂದಿರಕ್ಕೆ ಭೇಟಿ ನೀಡಿ, ಬಾಲಮ್ಮ ತಾಯಿಯ ದರ್ಶನ ಪಡೆದರು. ಅಲ್ಲಿಂದ ವೇದಿಕೆ ಕಾರ್ಯಕ್ರಮದ ಸ್ಥಳಕ್ಕೆ ರ್ಯಾಲಿಯಲ್ಲಿ ತೆರಳಬೇಕಾಗಿದ್ದ ನಿಖಿಲ್ ಕುಮಾರಸ್ವಾಮಿರವರು ಮಳೆಯ ಕಾರಣದಿಂದಾಗಿ ಕಾರ್ ನಲ್ಲೇ ವೇದಿಕೆ ಕಾರ್ಯಕ್ರಮದ ಕಡೆಗೆ ಸಾಗಿದರು.

ಈ ವೇಳೆ ಜಿಟಿಜಿಟಿ ಮಳೆಯೇ ನಡುವೆಯೇ ಮಾರ್ಗ ಮಧ್ಯದಲ್ಲಿ ಅನೇಕ ಕಡೆಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ನಾಯಕರಿಗೆ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಜೆಸಿಬಿಗಳ ಮೂಲಕ ಬೃಹತ್ ಗಾತ್ರದ ಹಾರಗಳನ್ನು ಹಾಕಿ, ಹೂಮಳೆ ಸುರಿಸಿ, ಹೆಚ್.ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪುರ್ ಸೇರಿದಂತೆ ಜೆಡಿಎಸ್ ಪಕ್ಷದ ನಾಯಕರ ಪರವಾಗಿ ಜಯ ಘೋಷ ಮೊಳಗಿಸಿದರು.

ನಂತರ ನಿಖಿಲ್ ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪುರ್, ರಮೇಶ್ ಪಾಟೀಲ್ ಸೋಲ್ಪೂರ್ ಸೇರಿದಂತೆ ಜೆಡಿಎಸ್ ಪಕ್ಷದ ನಾಯಕರು, ಮುಖಂಡರು ಜ್ಯೋತಿ ಬೆಳಗಿಸುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದುದ್ದಕ್ಕೂ ಜೆಡಿಎಸ್ ನಾಯಕರಿಗೆ ಶಾಲು, ದೊಡ್ಡ ದೊಡ್ಡ ಹಾರಗಳನ್ನು ಹಾಕಿ, ಸನ್ಮಾನಿಸಿ ಗೌರವಿಸಿದ ಮುಖಂಡರು, ಕಾರ್ಯಕರ್ತರು, ತಮ್ಮ ಪಕ್ಷದ ನಾಯಕರ ಪರವಾಗಿ ಜಯ ಘೋಷ ಮೊಳಗಿಸಿದರು. ಕಾರ್ಯಕ್ರಮದ ನಂತರ ನಿಖಿಲ್ ಕುಮಾರಸ್ವಾಮಿರವರು ಮನ್ನಾಎಖೇಳ್ಳಿಯಲ್ಲಿರುವ ಜೆಡಿಎಸ್ ಮುಖಂಡರಾದ ಸಂತೋಷ ರಾಸೂರ್ ರವರ ಮನೆಗೆ ಭೇಟಿ ನೀಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲ್ಪೂರ್, ಬೀದರ್ ದಕ್ಷಿಣ ಜೆಡಿಎಸ್ ಅಧ್ಯಕ್ಷ ಸಂಜುರೆಡ್ಡಿ ನಿರ್ಣಾ, ಮಾಜಿ ಶಾಸಕರಾದ ನಾಗಮಂಗಲದ ಸುರೇಶ್ ಗೌಡ, ಬಸವಕಲ್ಯಾಣದ ಮಲ್ಲಿಕಾರ್ಜುನ್ ಖೂಬಾ, ಪ್ರಮುಖರಾದ ಸೂರ್ಯಕಾಂತ್ ನಾಗಮಾರಪಳ್ಳಿ, ಐಲಿಂಜಾನ್ ಮಠಪತಿ, ಸಂತೋಷ ರಾಸೂರ್, ಶಾಂತಲಿಂಗ ಸಾವಳಗಿ, ರಾಜಶೇಖರ್ ಜವಳೆ, ಅಶೋಕ್ ಕೊಡ್ಗೆ, ಮನೋಹರ್ ದಂಡಿ, ಶಿವರಾಜ ಹುಲಿ, ಬಸವರಾಜ್ ಪಾಟೀಲ್ ಹಾರೂರಗೇರಿ, ಮಹಮ್ಮದ್ ಅಶೋದೊದ್ದೀನ್, ಸಜ್ಜದ್ ಸಾಹೇಬ್, ಸಿದ್ರಾಮಪ್ಪ ವಂಕ್ಕೆ, ಮಲ್ಲಿಕಾರ್ಜುನ ನೆಳ್ಗೆ, ಅಭಿ ಕಾಳೆ, ಸುದರ್ಶನ್ ಸುಂದದರಾಜ್, ಜಾಫೇಡ್ ಕಡ್ಯಾಳ, ಶಂಕರ್ ರವರು ಸೇರಿದಂತೆ ಅನೇಕರಿದ್ದರು.

ರಕ್ತಕ್ಕೆ ರಕ್ತವೇ ಉತ್ತರವಾಗಬೇಕು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್!

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ.

ಕರಾವಳಿಯಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಫುಲ್ ಆ್ಯಕ್ಟೀವ್ ಆಗಿದ್ದು, ಪ್ರಚೋದನಾಕಾರಿ ಪೋಸ್ಟ್ ಹಾಕುವವರನ್ನು ಬೆನ್ನಟ್ಟಿ ಬೆಂಡೆತ್ತುತ್ತಿದೆ. “ರಕ್ತಕ್ಕೆ ರಕ್ತವೇ ಬೇಕು” ಎಂದು ಸ್ಟೇಟಸ್ ಹಾಕಿದವನು ಬಂಧಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ, ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್​​ ಎಂಬಾತನನ್ನು ಸ್ಪೆಷಲ್ ಆ್ಯಕ್ಷನ್ ಫೋರ್ಸ್​ ಬಂಧಿಸಿದೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”. “ಜೀವಕ್ಕೆ ಜೀವನೇ ಬೇಕು” ಎಂದು ಮಾರಕಾಯುಧಗಳ ಚಿಹ್ನೆ ಬಳಸಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ.

ಈ ಹಿನ್ನಲೆ ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, BNS ಕಲಂ.196, 353(2),351(3) ಯಡಿ ಎಫ್​ಐಆರ್ ದಾಖಲಾಗಿದೆ. ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪಾದಚಾರಿ ಬಾಲಕನ ಮೇಲೆ ಹರಿದ ಕಾರು: ಸ್ಥಳದಲ್ಲೇ ದುರ್ಮರಣ!

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ 10ರ ಬಾಲಕನ ಕಾರು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.

ಅಗಸ್ತ್ಯ ಕನಮಡಿ (10) ಮೃತ ದುರ್ದೈವಿ ಬಾಲಕ. ಈತ ಅಥಣಿ ತಾಲೂಕಿನ ರಡ್ಡೆರಟ್ಟಿ ಗ್ರಾಮದ ನಿವಾಸಿ ಎನ್ನಲಾಗಿದೆ. ಮೃತ ಬಾಲಕ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಕಾರೊಂದು ಬಾಲಕನ ಮೇಲೆ ಹರಿದು ಹೋಗಿದೆ.

ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಸಿಸಿಟಿವಿ ಆಧಾರದ ಮೇಲೆ ಆರೋಪಿ ರಾಹುಲ್ ಹುಂಡೇಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮದುವೆಯಾಗದ ಭಾವನಾ ರಾಮಣ್ಣ ಈಗ 6 ತಿಂಗಳ ಗರ್ಭಿಣಿ: ಅವಳಿ ಮಕ್ಕಳಿಗೆ ಜನ್ಮ ನೀಡಲಿರುವ ನಟಿ

ಕನ್ನಡ ನಟಿ ಹಾಗೂ ರಾಜಕಾರಣಿ ಭಾವನಾ ರಾಮಣ್ಣ ತಮ್ಮ 40ನೇ ವಯಸ್ಸಿನಲ್ಲಿ ಒಂಟಿಯಾಗಿ ತಾಯಿಯಾಗಲು ರೆಡಿಯಾಗಿದ್ದಾರೆ. ಐವಿಎಫ್‌ ಮೂಲಕ ಗರ್ಭಿಣಿಯಾಗಿರುವ ಭಾವನಾ ಸದ್ಯ ಆರು ತಿಂಗಳ ಗರ್ಭಿಣಿಯಾಗಿದ್ದಾರೆ. ಈ ವರ್ಷದ ಕೊನೆಯಲ್ಲಿ ಅವಳಿ ಮಕ್ಕಳ ನಿರೀಕ್ಷೆಯಲ್ಲಿದ್ದಾರೆ ನಟಿ ಭಾವನಾ ರಾಮಣ್ಣ.

ತಾವು ತಾಯಿಯಾಗುತ್ತಿರುವ ಬಗ್ಗೆ ಮಾತನಾಡಿರುವ ನಟಿ ಭಾವನಾ ರಾಮಣ್ಣ, ತಾನು ಬಾಲ್ಯದಿಂದಲೂ ಮಕ್ಕಳ ಜೊತೆಗಿರುವುದನ್ನು ಇಷ್ಟಪಡುತ್ತಿದ್ದೆ. ಆದರೆ ತಮ್ಮ 20ನೇ ವಯಸ್ಸಿನಲ್ಲಿ ತಾಯಿಯಾಗುವ ಯೋಚನೆ ಗಂಭೀರವಾಗಿ ತಟ್ಟಿರಲಿಲ್ಲ. 30ನೇ ವಯಸ್ಸಿನಲ್ಲಿ ಪ್ರೀತಿಯ ಆಕಾಂಕ್ಷೆಯಿದ್ದರೂ, ತಾಯಿಯಾಗುವ ಬಗ್ಗೆ ಯೋಚನೆ ಮಾಡಿರಲಿಲ್ಲ. “ನಾನು ಯಾವಾಗಲೂ ಮಕ್ಕಳ ಸುತ್ತಲಿರುವ ವಾತಾವರಣದಲ್ಲಿ ಬೆಳೆದೆ. ನನ್ನ ತಂದೆ-ತಾಯಿ, ಮೂವರು ಸಹೋದರ-ಸಹೋದರಿಯರು, ಸಂಬಂಧಿಕರು ಮತ್ತು ಸ್ನೇಹಿತರ ಜೊತೆ ತುಂಬಿದ ಮನೆಯಲ್ಲಿ ಬೆಳೆದೆ. ಆದರೆ 40 ತಲುಪಿದಾಗ ತಾಯಿಯಾಗಬೇಕೆಂಬ ಕರೆಯನ್ನು ತಡೆಯಲಾಗಲಿಲ್ಲ” ಎಂದಿದ್ದಾರೆ.

ತಾಯಿಯಾಗುವ ತಮ್ಮ ಆಸೆಯನ್ನು ಸಾಂಪ್ರದಾಯಿಕ ರೀತಿಯಲ್ಲಿ ಪೂರೈಸಲು ಮೊದಲು ಯೋಚಿಸಿದೆ. ಆದರೆ ಅದು ಸಾಧ್ಯವಾಗದಿದ್ದಾಗ ಸಹಾಯಕ ಗರ್ಭಧಾರಣೆ ಕಡೆಗೆ ಗಮನ ಹರಿಸಿದರು. ಆದರೆ, ಈ ದಾರಿಯೂ ಸುಲಭವಾಗಿರಲಿಲ್ಲ. ಒಂಟಿ ಮತ್ತು ಅವಿವಾಹಿತ ಮಹಿಳೆಯಾಗಿ ಐವಿಎಫ್‌ ಚಿಕಿತ್ಸೆ ಪಡೆಯಲು ಹಲವು ಅಡೆತಡೆಗಳನ್ನು ಎದುರಿಸಿದೆ. “ನನ್ನ ಮಕ್ಕಳಿಗೆ ತಂದೆ ಇರದಿರಬಹುದು, ಆದರೆ ಅವರು ದಯಾಳು ಪುರುಷರ ಸುತ್ತಲಿರುತ್ತಾರೆ” ಎಂದಿದ್ದಾರೆ.

ನಮ್ಮ ಮನೆ ಬಳಿ ಇರುವ ಕ್ಲಿನಿಕ್‌ ಹೋಗಿ ಅಲ್ಲಿ ಚಿಕಿತ್ಸೆ ಪಡೆದೆ. ವೈದ್ಯರು ನನಗೆ ತುಂಬ ಸಲಹೆ ಕೊಟ್ಟರು. ಮೊದಲ ಪ್ರಯತ್ನದಲ್ಲೇ ನಾನು ತಾಯಿಯಾಗಿರೋದು ಖುಷಿ ಕೊಟ್ಟಿದೆ. ನಾನು ತಾಯಿ ಆಗ್ತಿದೀನಿ ಅಂತ ಗೊತ್ತಾದಾಗ ನನ್ನ ತಂದೆ ತುಂಬ ಖುಷಿಪಟ್ಟರು. ನೀನು ಮಹಿಳೆ, ನಿನಗೆ ತಾಯಿ ಆಗುವ ಹಕ್ಕಿದೆ ಎಂದು ನನ್ನ ತಂದೆ ಹೇಳಿದ್ದಾರೆ. ನನ್ನ ಕನಸು, ಆಸೆಗೆ ನನ್ನ ತಂದೆ, ಒಡಹುಟ್ಟಿದವರು ಬೆಂಬಲ ನೀಡಿದ್ದಾರೆ. ಇನ್ನೂ ಕೆಲವರು ಇದರ ಬಗ್ಗೆ ಪ್ರಶ್ನೆ ಮಾಡುತ್ತಾರೆ, ಏನೂ ಮಾಡಲು ಸಾಧ್ಯವಿಲ್ಲ. ನನ್ನನ್ನು ನೋಡಿ ಓರ್ವ ಮಹಿಳೆಗೆ ಪ್ರೇರಣೆ ಸಿಕ್ಕಿ, ಆಕೆ ನಾನು ಜೀವನದಲ್ಲಿ ಒಂಟಿಯಲ್ಲ ಎಂದು ಯೋಚಿಸಿದರೆ ಅದುವೇ ನನ್ನ ಜಯ ಎಂದುಕೊಳ್ಳುತ್ತೇನೆ ಎಂದು ಭಾವನಾ ಹೇಳಿದ್ದಾರೆ.

ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣಗಳು: ಹಾರ್ಟ್ ಅಟ್ಯಾಕ್’ಗೆ ಮಹಿಳೆ ಸಾವು..!

ಹಾಸನ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಜಸ್ಟ್​​ 40 ದಿನಗಳಲ್ಲಿ ಹೃದಯಾಘಾತದಿಂದ ಹಲವಾರು ಮಂದಿ ಬಲಿಯಾಗಿದ್ದಾರೆ. ಇದೀಗ ಹೃದಯಾಘಾತದಿಂದ ಮತ್ತೋರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ನಡೆದಿದೆ.

ಬಿ.ಎನ್.ವಿಮಲಾ (55) ಹೃದಯಾಘಾತದಿಂದ ಮೃತಪಟ್ಟ ಗೃಹಿಣಿಯಾಗಿದ್ದು, ಬಿ.ಎನ್.ವಿಮಲಾ ಸಕಲೇಶಪುರ ತೋಟದಗದ್ದೆ ಗ್ರಾಮದ ಕುಮಾರ್ ಎಂಬುವವರ ಪತ್ನಿಯಾಗಿದ್ದು, ನಿನ್ನೆ ರಾತ್ರಿ ಮನೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಳೆದ ಒಂದೂವರೆ ತಿಂಗಳಿನಲ್ಲಿ 35 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳು ಆತಂಕ ಸೃಷ್ಟಿಸಿವೆ. ಇದರ ಬಗ್ಗೆ ನಾನಾ ಚರ್ಚೆಗಳು ಶುರುವಾಗಿವೆ. ಹಠಾತ್ ನಿಧನಕ್ಕೆ ಏನು ಕಾರಣ ಎಂಬುದನ್ನು ಹೇಳಲು ರಾಜ್ಯ ಸರ್ಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲ.

ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಅಂತ ನಾನು ನಂಬಿದ್ದೇನೆ: ಡಿಕೆ ಶಿವಕುಮಾರ್

ಮೈಸೂರು: ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಅಂತ ನಾನು ನಂಬಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಚಾಮುಂಡಿ ದರ್ಶನ ಪಡೆದ ನಂತರ ಮಾತನಾಡಿದ ಅವರು,

ಯಾವುದೇ ಕೆಲಸ ಆರಂಭಿಸುವ ಮೊದಲು ಚಾಮುಂಡಿ ತಾಯಿಗೆ ಸಲ್ಲಿಸುವುದು ನಮ್ಮಲ್ಲಿರುವ ಪದ್ಧತಿ, ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಅಂತ ನಾನು ನಂಬಿದ್ದೇನೆ, ನನಗೇನು ಬೇಕೋ ಅದನ್ನು ದೇವಿಯಲ್ಲಿ ಪ್ರಾರ್ಥಿಸಿಕೊಂಡಿದ್ದೇನೆ ಎಂದರು.

ಇನ್ನು ನನಗೆ ಏನು ಬೇಕು ಅನ್ನೋದನ್ನ ನಾನು ದೇವರ ಬಳಿ ಪ್ರಾರ್ಥನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನಮಗೆ ಬುದ್ಧಿವಾದ ಹೇಳಿದ್ದಾರೆ. ಹೈಕಮಾಂಡ್ ಕೂಡ ಕೆಲ ವಿಚಾರದ ಕುರಿತು ಚರ್ಚೆ ಮಾಡಿದೆ. ದೇವಸ್ಥಾನದಲ್ಲಿ ರಾಜಕೀಯ ಚರ್ಚೆ ಬೇಡ ಎಂದು ಹೇಳಿದ್ದಾರೆ.

ರವಿಕುಮಾರ್ ವಿವಾದಾತ್ಮಕ ಹೇಳಿಕೆ ವಿಚಾರ: ಐಎಎಸ್ ಅಸೋಸಿಯೇಷನ್ ದೂರಿಗೆ ವಿಜಯೇಂದ್ರ ಆಕ್ಷೇಪ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಎಮ್‌ಎಲ್‌ಸಿ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂಬ ಆರೋಪ ಭಾರೀ ಚರ್ಚೆಗೆ ಗುರಿಯಾಗಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,

ಈಗಾಗ್ಲೇ ಎಂಎಲ್ಸಿ ರವಿಕುಮಾರ್ ಅವರು ಅವರ ಹೇಳಿಕೆಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ‌. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಸೋಸಿಯೇಷನ್ ನವರು ಸಿಎಂಗೆ ದೂರು ಕೊಟ್ಟಿದ್ದಾರೆ‌‌. ಆದರೆ ಖುದ್ದು ಸಿಎಂ ಅವರೇ ಸಾರ್ವಜನಿಕ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ನಡೆದುಕೊಂಡಾಗ ಆಗ ಎಲ್ಲಿ‌ ಹೋಗಿದ್ವು ಈ ಅಸೋಸಿಯೇಷನ್ ಗಳು.? ಎಂದು ಪ್ರಶ್ನಿಸಿದ್ದಾರೆ. ಸಿಎಂ ವಿರುದ್ಧ ಯಾಕೆ ದೂರು ನೀಡಿರಲಿಲ್ಲ ಎಂದಿದ್ದಾರೆ.

 

ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ!

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ಕಾವೇರಿ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಸ್ಥಳೀಯರ ಸಹಾಯದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಾನೂನು ವಿದ್ಯಾರ್ಥಿ ಪವಿತ್ರ(20) ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯಾಗಿದ್ದು,

ಆತ್ಮಹತ್ಯೆಗೆಂದು ನಿಮಿಷಾಂಭ ದೇಗುಲದ ಸೇತುವೆ ಬಳಿ ನದಿಗೆ ಹಾರಿದ್ದಳು. ನದಿ ಪ್ರವಾಹದಲ್ಲಿ ಐದಾರು ಕಿ.ಮೀ ಕೊಚ್ಚಿಹೋಗಿ ನದಿ ಮಧ್ಯೆ ನಡುಗಡ್ಡೆಗೆ ಸಿಲುಕಿ ಇಡೀ ರಾತ್ರಿ ನರಳಾಡಿದ್ದಾಳೆ. ಮುಂಜಾನೆ ಯುವತಿಯ ಕಿರುಚಾಟ ಕೇಳಿ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಸ್ಥಳಕ್ಕೆ ಬಂದು ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ ಮಾಡಲಾಯಿತು. ಮನೆಯಲ್ಲಿನ ಗಲಾಟೆಯಿಂದಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. ಸದ್ಯ ರಕ್ಷಣೆ ನಂತರ ಆಕೆಯನ್ನು ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ನಟಿ ಜಾಕ್ವೆಲಿನ್‌ ಗೆ ಮತ್ತಷ್ಟು ಸಂಕಷ್ಟ: ಹೈಕೋರ್ಟ್‌ನಿಂದ ಅರ್ಜಿ ವಜಾ

ಬರೋಬ್ಬರಿ 200 ಕೋಟಿ ರೂಪಾಯಿ ವಂಚಿಸಿದ ವಂಚಕ ಸುಖೇಶ್ ಚಂದ್ರಶೇಖರ್ ಜೊತೆ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಭಾಗಿಯಾಗಿದ್ದಾರೆ ಎಂಬ ಆರೋಪ ಈ ಮೊದಲಿನಿಂದಲೂ ಕೇಳಿ ಬಂದಿದೆ, ಹೀಗಾಗಿ ಇಡಿ ಅಧಿಕಾರಿಗಳು ನಟಿಯ ವಿರುದ್ಧ ದೂರು ದಾಖಲಿಸಿದ್ದರು. ಈ ದೂರನ್ನು ರದ್ದುಗೊಳಿಸಬೇಕು ಎಂದು ನಟಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ದೆಹಲಿ ಹೈಕೋರ್ಟ್ ನಟಿಯ ಅರ್ಜಿಯನ್ನ ವಜಾಗೊಳಿಸಿದೆ.

ಈ ಕೇಸ್​​ನಲ್ಲಿ ಸುಖೇಶ್ ಚಂದ್ರಶೇಖರ್ ತನ್ನನ್ನು ಸಿಲುಕಿಸಿದ್ದಾರೆ ಎಂದು ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹೈಕೋರ್ಟ್​​ನಲ್ಲಿ ವಾದಿಸಿದ್ದರು. ತಾನು ಯಾವುದೇ ಆಕ್ರಮ ಹಣ ವರ್ಗಾವಣೆ ಮಾಡಿಲ್ಲ. ಅಪರಾಧದ ಹಣವೂ ನನ್ನ ಬಳಿ ಇಲ್ಲ ಎಂದು ಹೈಕೋರ್ಟ್​​ನಲ್ಲಿ ಜಾಕ್ವೆಲಿನ್ ವಾದಮಂಡನೆ ಮಾಡಿದ್ದರು. ಸುಕೇಶ್‌ ಜೊತೆ ವಂಚನ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡ ಇದ್ದಾರೆ ಎಂದು ಇಡಿ ಇಡಿ ಸೂಕ್ತ ಆಧಾರದ ಮೇಲೇನೆ ಜಾಕ್ವಲಿನ್ ವಿರುದ್ಧ ಕೇಸ್‌ ದಾಖಲಿಸಿತ್ತು.

ಆದರೆ, ಇದನ್ನ ಪ್ರಶ್ನಿಸಿ ಜಾಕ್ವೆಲಿನ್ ಫರ್ನಾಂಡಿಸ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ತಮ್ಮ ಮೇಲಿನ ಕೇಸ್ ಅನ್ನ ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿದ್ದರು. ಆದರೆ ನಟಿ ಸಲ್ಲಿಸುರವ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ್ದು ಸದ್ಯಕ್ಕಂತು ನಟಿಗೆ ಈ ಕೇಸ್‌ ನಿಂದ ಮುಕ್ತಿ ಸಿಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಈ ಕೇಸ್​​ನಲ್ಲಿ ಈಗಾಗಲೇ ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. ಪೂರಕ ಚಾರ್ಜ್​ಶೀಟ್ ಕೂಡ ಕೆಳ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಈ ಹಂತದಲ್ಲಿ ಕೇಸ್ ರದ್ದತಿಯನ್ನು ಕೋರಿ ಜಾಕ್ವೆಲಿನ್ ಫರ್ನಾಂಡೀಸ್ ಸಲ್ಲಿಸಿರುವ ಈ ಅರ್ಜಿಯೇ ವಿಚಾರಣೆಗೆ ಯೋಗ್ಯವಲ್ಲ ಎಂದು ಇಡಿ ವಾದಿಸಿದೆ.

‘ಅವಳು ಕೃಪೆಯಿಂದ ಆವೃತವಾದ ಬೆಂಕಿಯಾಗಿದ್ದಳುʼ: ಶೆಫಾಲಿ ಬಗ್ಗೆ ಭಾವುಕ ಪೋಸ್ಟ್‌ ಹಂಚಿಕೊಂಡ ಪತಿ ಪರಾಗ್‌ ತ್ಯಾಗಿ

ಬಾಲಿವುಡ್‌ ನಟಿ ಹಾಗೂ ಮಾಡೆಲ್‌ ಶೆಫಾಲಿ ಜರಿವಾಲಾ ಕೇವಲ 42 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ನಟಿಯ ಸಾವು ಪ್ರತಿಯೊಬ್ಬರಿಗೂ ಶಾಕ್‌ ನೀಡಿದೆ. ನಟಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಪತ್ನಿಯ ನಿಧನದ ಬಳಿಕ ಶೆಫಾಲಿ ಪತಿ ಪರಾಗ್‌ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಶೆಫಾಲಿ ನಿಧನರಾದ 5 ದಿನಗಳ ನಂತರ, ಪರಾಗ್ ತಮ್ಮ ಪತ್ನಿ ಶೆಫಾಲಿಗೆ ತುಂಬಾ ಭಾವನಾತ್ಮಕ ಪೋಸ್ಟ್ ಬರೆದಿದ್ದಾರೆ. ಪತ್ನಿಯ ಅಪರೂಪದ ಚಿತ್ರವನ್ನು ಸಾಮಾಜಿಕ ಜಾಲಾ ತಾಣದಲ್ಲಿ ಹಂಚಿಕೊಂಡಿದ್ದಾರೆ.

“ಶೆಫಾಲಿ ಕೇವಲ ಕಾಂಟಾ ಲಗಾ ಹುಡುಗಿಯಲ್ಲ, ಅವಳು ಅದಕ್ಕಿಂತ ಹೆಚ್ಚಿನವಳು. ಅವಳು ಘನತೆಯಿಂದ ಸುತ್ತುವರಿದ ಬೆಂಕಿ. ತೀಕ್ಷ್ಣ, ಕೇಂದ್ರೀಕೃತ ಮತ್ತು ದೃಢನಿಶ್ಚಯ ಹೊಂದಿರುವಾಕೆ ಎಂದಿದ್ದಾರೆ.

ಉದ್ದೇಶ, ತನ್ನ ವೃತ್ತಿ, ಮನಸ್ಸು, ದೇಹದೊಂದಿಗೆ ಬದುಕಿದ ಮಹಿಳೆ. ಶೆಫಾಲಿ ಯಾವಾಗಲೂ ಇತರರಿಗೆ ಸಹಾಯ ಮಾಡಲು ಸಿದ್ಧಳಾಗಿದ್ದಳು. ಶೆಫಾಲಿ ಜರಿವಾಲಾ ಸಂತೋಷವನ್ನು ಹಂಚಿಕೊಳ್ಳುತ್ತಿದ್ದರು. “ಆದರೆ ಅವರ ಎಲ್ಲಾ ಬಿರುದುಗಳು ಮತ್ತು ಸಾಧನೆಗಳನ್ನು ಮೀರಿ, ಶೆಫಾಲಿ ಅತ್ಯಂತ ನಿಸ್ವಾರ್ಥ ರೀತಿಯಲ್ಲಿ ಪ್ರೀತಿಯಿಂದ ಕೂಡಿದ್ದರು. ಅವರು ಯಾವಾಗಲೂ ಇತರರನ್ನು ಮೊದಲು ಇಡುತ್ತಿದ್ದರು, ತಮ್ಮ ಉಪಸ್ಥಿತಿಯಿಂದ ಸಾಂತ್ವನ ಮತ್ತು ಸಂತೋಷವನ್ನು ನೀಡುತ್ತಿದ್ದರು. ಉದಾರ ಮನಸಿನವಳು ಎಂದು ಪರಾಗ್ ತ್ಯಾಗಿ ಪತ್ನಿಯ ಬಗ್ಗೆ ಬರೆದುಕೊಂಡಿದ್ದಾರೆ..

ಶೆಫಾಲಿ ಪ್ರೀತಿಯ ಹೆಂಡತಿ ಮತ್ತು ಅದ್ಭುತ ತಾಯಿ. ರಕ್ಷಣಾತ್ಮಕ ಮತ್ತು ಮಾರ್ಗದರ್ಶಕ ಸಹೋದರಿ ಮತ್ತು ಚಿಕ್ಕಮ್ಮ. ಧೈರ್ಯ ಮತ್ತು ಸಹಾನುಭೂತಿಯಿಂದ ತಾನು ಪ್ರೀತಿಸಿದವರ ಜೊತೆ ನಿಂತಿದ್ದ ಪ್ರೀತಿಯ ಸ್ನೇಹಿತೆ ಎಂದಿದ್ದಾರೆ.

“ಈ ದುಃಖದ ಸಮಯದಲ್ಲಿ, ಶಬ್ದ ಮತ್ತು ಊಹಾಪೋಹಗಳಿಂದ ದೂರವಾಗುವುದು ಸುಲಭ. ಆದರೆ ಶೆಫಾಲಿಯನ್ನು ಅವರ ಬೆಳಕಿನಿಂದ ನೆನಪಿಸಿಕೊಳ್ಳಬೇಕು – ಅವರು ಜನರನ್ನು ಅನುಭವಿಸುವಂತೆ ಮಾಡಿದ ರೀತಿ. ಅವರು ಹುಟ್ಟಿಸಿದ ಸಂತೋಷ. ಅವರು ಎತ್ತಿದ ಜೀವನಗಳು. ಇದು ಅವರ ಪರಂಪರೆಯಾಗಿರಲಿ – ಅವರನ್ನು ಎಂದಿಗೂ ಮರೆಯಲಾಗದು ಎಂದಿದ್ದಾರೆ.

error: Content is protected !!