Home Blog Page 76

Cauvery Water: ಮೆಟ್ರೋ ಆಯ್ತು ಈಗ ಕಾವೇರಿ ನೀರಿನ ದರವೂ ಏರಿಕೆ!

0

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯ ಬೆನ್ನಲ್ಲೇ, ಇದೀಗ ಬೆಂಗಳೂರಿನಲ್ಲಿ ಕಾವೇರಿ ನೀರಿನ ದರವೂ ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಶೀಘ್ರವೇ ನೀರಿನ ದರವನ್ನು ಶೇ.3ರಷ್ಟು ಹೆಚ್ಚಿಸುವ ಕುರಿತು ಚಿಂತನೆ ನಡೆಸುತ್ತಿದೆ.

ಪ್ರತಿ ವರ್ಷ ನೀರಿನ ದರವನ್ನು ಪರಿಷ್ಕರಿಸಬೇಕು ಎಂದು ಆಡಳಿತ ಸುಧಾರಣಾ ಸಮಿತಿ ಶಿಫಾರಸು ಮಾಡಿದ್ದ ಹಿನ್ನೆಲೆಯಲ್ಲಿ, ಈ ಶಿಫಾರಸಿನ ಅನುಸಾರವಾಗಿ ನೀರಿನ ದರ ಏರಿಕೆಗೆ BWSSB ಮುಂದಾಗಿದೆ. ಎಲ್ಲವೂ ಯೋಜನೆಯಂತೆ ನಡೆದರೆ, ಏಪ್ರಿಲ್ 1ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ.

ಕಳೆದ ವರ್ಷದ ಏಪ್ರಿಲ್‌ನಲ್ಲಿ ಗೃಹ ಬಳಕೆದಾರರಿಗೆ ಪ್ರತಿ ಲೀಟರ್‌ಗೆ ಕನಿಷ್ಠ 0.15 ಪೈಸೆಯಿಂದ ಗರಿಷ್ಠ 1 ಪೈಸೆಯವರೆಗೆ ನೀರಿನ ದರ ಹೆಚ್ಚಳ ಮಾಡಲಾಗಿತ್ತು. ವಾಣಿಜ್ಯ ಬಳಕೆಗೆ ಪ್ರತಿ ಲೀಟರ್‌ಗೆ ಗರಿಷ್ಠ 1.90 ಪೈಸೆಯವರೆಗೆ ದರ ಏರಿಕೆ ಜಾರಿಗೆ ಬಂದಿತ್ತು.

ಈ ಬಾರಿ ಕೂಡ ಶೇ.3ರಷ್ಟು ದರ ಏರಿಕೆ ಜಾರಿಯಾದರೆ, ಗೃಹ ಹಾಗೂ ವಾಣಿಜ್ಯ ಬಳಕೆದಾರರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ. ನೀರಿನ ದರ ಏರಿಕೆ ಕುರಿತು ಅಂತಿಮ ನಿರ್ಧಾರವನ್ನು BWSSB ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.

Gold Silver Price: ಏರಿದಷ್ಟೇ ವೇಗವಾಗಿ ಇಳಿದ ಚಿನ್ನ ಮತ್ತು ಬೆಳ್ಳಿ ಬೆಲೆಗಳು! ಇಲ್ಲಿದೆ ಲೇಟೆಸ್ಟ್ ದರ

0

ಬೆಂಗಳೂರು: ಬುಧವಾರ ಚಿನ್ನಬೆಳ್ಳಿ ದರಗಳಲ್ಲಿ ಭಾರೀ ಏರಿಕೆ ಕಂಡು ಜನರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಗುರುವಾರ ದರಗಳಲ್ಲಿ ದೊಡ್ಡ ಮಟ್ಟದ ಇಳಿಕೆ ದಾಖಲಾಗಿದೆ. ಚಿನ್ನದ ಬೆಲೆ ಒಂದೇ ದಿನದಲ್ಲಿ 10 ಗ್ರಾಂಗೆ 5,020 ರೂಪಾಯಿ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯೂ ಕುಸಿತ ಕಂಡಿದೆ.

ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 502 ರೂಪಾಯಿ ಇಳಿಕೆಯಾಗಿದ್ದು, ಇದೀಗ 1 ಗ್ರಾಂ ಚಿನ್ನದ ಬೆಲೆ 15,442 ರೂಪಾಯಿಗೆ ತಲುಪಿದೆ. ಇದರಿಂದ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,54,420 ರೂಪಾಯಿಯಾಗಿದೆ.

ಅದೇ ರೀತಿ, 22 ಕ್ಯಾರೆಟ್ ಚಿನ್ನದ ಬೆಲೆಯೂ ಇಳಿಕೆ ಕಂಡಿದ್ದು, ಪ್ರತಿ ಗ್ರಾಂಗೆ 460 ರೂಪಾಯಿ ಹಾಗೂ 10 ಗ್ರಾಂಗೆ 4,600 ರೂಪಾಯಿ ಕಡಿಮೆಯಾಗಿದೆ. ಪರಿಣಾಮವಾಗಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,41,550 ರೂಪಾಯಿಗೆ ಇಳಿದಿದೆ.

ಬೆಂಗಳೂರು ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ದರ 1 ಗ್ರಾಂಗೆ 15,442 ರೂಪಾಯಿ ಇದ್ದು, 10 ಗ್ರಾಂಗೆ 1,54,420 ರೂಪಾಯಿ ಇದೆ. ದರದಲ್ಲಿ ಜಿಎಸ್ಟಿ ಸೇರಿಲ್ಲ. ಹೀಗಾಗಿ ಆಭರಣ ಮಳಿಗೆಗಳಲ್ಲಿನ ಬೆಲೆಯಲ್ಲಿ ವ್ಯತ್ಯಾಸ ಇರಲಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದ್ದು, ಪ್ರತಿ ಗ್ರಾಂಗೆ 20 ರೂಪಾಯಿ ಇಳಿಕೆಯಾಗಿ 300 ರೂಪಾಯಿಯಾಗಿದೆ. ಇದರೊಂದಿಗೆ 1 ಕೆಜಿ ಬೆಳ್ಳಿ ಬೆಲೆ 3,00,000 ರೂಪಾಯಿಗೆ ಇಳಿದಿದೆ.

T20 World Cup: ಟಿ20 ವಿಶ್ವಕಪ್ʼ​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್..!

0

ನವದೆಹಲಿ: ಟಿ20 ವಿಶ್ವಕಪ್ 2026ರಲ್ಲಿ ಭಾರತ ತಂಡದ ಆರಂಭಿಕ ಬ್ಯಾಟರ್‌ಗಳು ಯಾರು ಎಂಬ ಪ್ರಶ್ನೆಗೆ ಇದೀಗ ಸ್ಪಷ್ಟ ಉತ್ತರ ದೊರೆತಿದೆ. ವಿಶ್ವಕಪ್ ಆರಂಭಕ್ಕೆ ಕೇವಲ ಎರಡು ದಿನಗಳು ಬಾಕಿಯಿರುವಾಗಲೇ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಆರಂಭಿಕ ಜೋಡಿಯನ್ನು ಘೋಷಿಸಿದ್ದಾರೆ.

ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಅದರಂತೆ ಅಭ್ಯಾಸ ಪಂದ್ಯದಲ್ಲೂ ಈ ಇಬ್ಬರೂ ತಂಡಕ್ಕೆ ಆರಂಭಿಕರಾಗಿ ಕಣಕ್ಕಿಳಿದರು.

ಈ ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ 53 ರನ್‌ಗಳ ಭರ್ಜರಿ ಇನಿಂಗ್ಸ್ ಆಡಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡರು. ಇಶಾನ್ ಅವರ ಈ ಫಾರ್ಮ್ ವಿಶ್ವಕಪ್‌ನಲ್ಲಿ ಅವರಿಗೆ ಆರಂಭಿಕ ಸ್ಥಾನ ಖಚಿತವಾಗುವಂತೆ ಮಾಡಿದೆ.

ಇದರಿಂದಾಗಿ ಈ ಬಾರಿಯ ವಿಶ್ವಕಪ್‌ನಲ್ಲೂ ಸಂಜು ಸ್ಯಾಮ್ಸನ್ ಬೆಂಚ್ ಕಾಯುವುದು ಬಹುತೇಕ ಖಚಿತವಾಗಿದೆ. ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆರಂಭಿಕನಾಗಿ ಆಡಿದ್ದ ಸ್ಯಾಮ್ಸನ್ ಒಟ್ಟು ಕೇವಲ 46 ರನ್‌ಗಳನ್ನು ಮಾತ್ರ ಗಳಿಸಿದ್ದರು.

ಅದೇ ವೇಳೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಇಶಾನ್ ಕಿಶನ್ ನಾಲ್ಕು ಪಂದ್ಯಗಳಲ್ಲಿ ಕ್ರಮವಾಗಿ 8, 76, 28 ಮತ್ತು 103 ರನ್‌ಗಳ ಇನಿಂಗ್ಸ್ ಆಡಿದ್ದರು. ಇದೀಗ ನ್ಯೂಝಿಲೆಂಡ್ ಸರಣಿಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ಮೂರನೇ ಕ್ರಮಾಂಕಕ್ಕೆ ಮರಳಿದ್ದಾರೆ.

ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಉತ್ತಮ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ ಅವರನ್ನು ಅಭಿಷೇಕ್ ಶರ್ಮಾ ಜೊತೆಗೆ ಆರಂಭಿಕರಾಗಿ ಕಣಕ್ಕಿಳಿಸಲು ತಂಡ ನಿರ್ಧರಿಸಿದೆ. ಫೆಬ್ರವರಿ 7ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ ಪರ ಈ ಜೋಡಿ ಇನಿಂಗ್ಸ್ ಆರಂಭಿಸುವುದು ಖಚಿತವಾಗಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಹಾಸನ: ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ರೈತ ಆತ್ಮಹತ್ಯೆ

ಹಾಸನ: ಕೊತ್ತನಘಟ್ಟ ಗ್ರಾಮದಲ್ಲಿ ತೀವ್ರ ಮಾನಸಿಕ ಒತ್ತಡದಿಂದ ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಗ್ರಾಮದ ಜನರನ್ನು ಭಯಭೀತನಾಗಿಸಿದೆ. ಯೋಗೇಶ್ (50), ಚನ್ನರಾಯಪಟ್ಟಣದ ಫೈನಾನ್ಸ್ ಸಂಸ್ಥೆಯಿಂದ 7 ಲಕ್ಷ ರೂ. ಸಾಲ ಪಡೆದಿದ್ದರು, ಪ್ರತಿದಿನವೂ ಹಣಕಾಸಿನ ಒತ್ತಡದಲ್ಲಿದ್ದರು. ಕಳೆದ ಎರಡು ತಿಂಗಳ ಕಂತನ್ನು ಪಾವತಿಸದ ಕಾರಣ, ಫೆ.4 ರ ರಾತ್ರಿ ಫೈನಾನ್ಸ್ ಸಿಬ್ಬಂದಿಗಳು ಯೋಗೇಶ್ ಮನೆಗೆ ಬಂದು “ಮನೆ ಸೀಜ್ ಮಾಡುತ್ತೇವೆ” ಎಂದು ಬೆದರಿಸಿದರು.

ಈ ನಿರಂತರ ಭೀತಿಯಿಂದ ಯೋಗೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರು. ಅವರ ಕುಟುಂಬ ಮತ್ತು ಗ್ರಾಮಸ್ಥರು ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯೋಗೇಶ್‌ ಜೀವನದಿಂದ ಹಿಂತಿರುಗಲು ಬಾಧೆಯಾದ ಈ ಘಟನೆ, ಗ್ರಾಮದಲ್ಲಿ ಫೈನಾನ್ಸ್ ಸಂಸ್ಥೆಗಳ ಕಠಿಣ ನೀತಿ ಮತ್ತು ಸಾಲದ ಬಡ್ಡಿದಾರರ ಹಿಂಸಾತ್ಮಕ ವರ್ತನೆಗೆ ಎಚ್ಚರಿಕೆ ಸೂಚಿಸಿದೆ.

ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾನೂನು ಕ್ರಮ ಕೈಗೊಳ್ಳಲು ತ್ವರಿತ ಕ್ರಮ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ, ರೈತರಿಗೆ ಸುರಕ್ಷಿತ ಹಣಕಾಸಿನ ಮಾರ್ಗದರ್ಶನದ ಅಗತ್ಯವನ್ನು ಮತ್ತೊಮ್ಮೆ ತಿಳಿಸುತ್ತದೆ.

ಗ್ರಾಮಸ್ಥರು ಕಠಿಣ ಕ್ರಮಕ್ಕಾಗಿ ಒತ್ತಾಯಿಸುತ್ತಿರುವುದರಿಂದ, ಸ್ಥಳೀಯ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳ ಗಮನ ಈ ಪ್ರಕರಣಕ್ಕೆ ಸೆಳೆಯಲಾಗಿದೆ.

ಹಗರಿ ಹಳ್ಳದಲ್ಲಿ ಭಾರೀ ಗಾತ್ರದ ಮೊಸಳೆ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು!

0

ಹಗರಿಬೊಮ್ಮನಹಳ್ಳಿ: ತಾಲೂಕಿನ ಬ್ಯಾಲಾಳ ಸಮೀಪದ ಹಗರಿ ಹಳ್ಳದಲ್ಲಿ ಭಾರೀ ಗಾತ್ರದ ಮೊಸಳೆವೊಂದು ಪ್ರತ್ಯಕ್ಷವಾಗಿರುವ ಘಟನೆ ಸ್ಥಳೀಯರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ.

ಕಳೆದ ಮೂರು ತಿಂಗಳಿಂದ ಹಗರಿ ಹಳ್ಳದಲ್ಲಿ ನಿರಂತರವಾಗಿ ನೀರು ಹರಿಯುತ್ತಿದ್ದು, ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ಮೊಸಳೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪ್ರತಿನಿತ್ಯ ಮೊಸಳೆ ಹಗರಿ ಹಳ್ಳದ ದಂಡೆಯಲ್ಲಿ ಬಂದು ಮಲಗುತ್ತಿರುವುದು ಕುರಿಗಾಹಿಗಳು, ದನ ಕಾಯುವವರು ಹಾಗೂ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಕುರಿ ಮತ್ತು ದನಗಳನ್ನು ಮೇಯಿಸಲು ತೆರಳುವ ವೇಳೆ ಮೊಸಳೆ ಕಾಣಿಸುತ್ತಿರುವುದರಿಂದ ಜನರು ಆತಂಕಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ತಕ್ಷಣ ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಕುರಿಗಾಹಿಗಳು ಮತ್ತು ದನ ಕಾಯುವವರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ಭದ್ರತೆ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಮನಗರ| ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿ ಹೊತ್ತೊಯ್ದ ಚಿರತೆ; ಗ್ರಾಮಸ್ಥರಲ್ಲಿ ಆತಂಕ!

0

ರಾಮನಗರ:- ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಜರುಗಿದೆ.

ಚಿರತೆ ಹಾವಳಿಯಿಂದ ಗ್ರಾಮಸ್ಥರು ಹೈರಾಣಾಗಿದ್ದು, ರಾತ್ರಿ ವೇಳೆ ಮನೆಯಿಂದ ಆಚೆಬರಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಜಮೀನುಗಳಿಗೆ ತೆರಳಲು ಆತಂಕ ವ್ಯಕ್ತಪಡಿಸಿದ್ದಾರೆ. ಚಿರತೆ ಕಾಟ ತಪ್ಪಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಡರಾತ್ರಿ ಗ್ರಾಮದ ಹೊರವಲಯದ ಕೋಳಿಫಾರಂ ಬಳಿ ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ. ಒಂದು ನಾಯಿಯನ್ನ ಚಿರತೆ ಹೊತ್ತೊಯ್ದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಪಬ್ಲಿಕ್ ಪ್ಲೇಸ್ ನಲ್ಲಿ ‘ಧಮ್’ ಹೊಡೆಯುತ್ತಾ ಫೋಟೋಶೂಟ್; ರಜತ್ ವಿರುದ್ದ ನೆಟ್ಟಿಗರ ಆಕ್ರೋಶ!

0

ಮೈಸೂರು: ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ಬಿಗ್‌ಬಾಸ್ ಸ್ಪರ್ಧಿ ರಜತ್ ಸಿಗರೇಟ್ ಹಿಡಿದು ಬಿಂದಾಸ್ ಫೋಟೋಶೂಟ್ ನಡೆಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾರಿನಿಂದ ಇಳಿಯುತ್ತಲೇ ವಿಲನ್ ಲುಕ್ಕಿನಲ್ಲಿ ನಡೆಸಿದ ಈ ಫೋಟೋಶೂಟ್‌ನ್ನು ರಜತ್ ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ನಿಷೇಧವಾಗಿರುವ ಹಿನ್ನೆಲೆಯಲ್ಲಿ, ಈ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆ ಶೂಟಿಂಗ್ ಸೆಟ್‌ನಲ್ಲಿ ಮಚ್ ಹಿಡಿದು ಜೈಲಿಗೆ ಹೋಗಿ ಬೇಲ್ ಮೇಲೆ ಹೊರಬಂದ ರಜತ್, ಈಗಲೂ ತಮ್ಮ ಹುಚ್ಚಾಟದ ಕಾರಣದಿಂದ ಸದ್ದು ಮಾಡಿದ್ದಾರೆ. ಸಿಗರೇಟ್ ಮತ್ತು ಅತಿ ಧೈರ್ಯಶಾಲಿ ಲುಕ್ಕಿನ ಫೋಟೋಶೂಟ್, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ತೀವ್ರ ಚಳಿ ಹಿನ್ನೆಲೆ: ಜೀವ ಧ್ವನಿ ಫೌಂಡೇಶನ್ ವತಿಯಿಂದ 400 ಸ್ವೆಟರ್ ವಿತರಣೆ

0

ಸವದತ್ತಿ: ತೀವ್ರ ಚಳಿ ಪರಿಸ್ಥಿತಿಯಿಂದ ಬಳಲುತ್ತಿರುವ ವೃದ್ಧರು ಹಾಗೂ ನಿರ್ಗತಿಕರಿಗೆ ನೆರವಾಗುವ ಉದ್ದೇಶದಿಂದ ಜೀವ ಧ್ವನಿ ಫೌಂಡೇಶನ್ ವತಿಯಿಂದ ಸಾಮಾಜಿಕ ಜವಾಬ್ದಾರಿಯ ಅಂಗವಾಗಿ ಸ್ವೆಟರ್ ವಿತರಣಾ ಕಾರ್ಯಕ್ರಮ ನಡೆಸಲಾಯಿತು.

ಮಹಾಂತೇಶ ಕಟ್ಟಿಕರ್ ಅವರ ಉಪಸ್ಥಿತಿಯಲ್ಲಿ, ಸಂಸ್ಥಾಪಕ ನಿಖಿಲ್ ಹಂಜಗಿ ಅವರ ನೇತೃತ್ವದಲ್ಲಿ ಹಾಗೂ ಗೌರವಾಧ್ಯಕ್ಷ ಸಂತೋಷ್ ಆರ್. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಸೇವಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಈ ಕಾರ್ಯಕ್ರಮದಡಿ ಒಟ್ಟು 400 ಸ್ವೆಟರ್‌ಗಳನ್ನು ಸವದತ್ತಿ ತಾಲೂಕು ಸೇರಿದಂತೆ ಹುಬ್ಬಳ್ಳಿಯ ಸಿದ್ಧಿವಿನಾಯಕ ವೃದ್ಧಾಶ್ರಮ, ಧಾರವಾಡದ ದಯಾಶಂಕರ ಆಶ್ರಮ, ಛಬ್ಬಿಯ ಸಮೃದ್ಧಿ ವೃದ್ಧಾಶ್ರಮ, ಸಿದ್ದರೂಢ ಆಶ್ರಮ (ಬಗಡಗೇರಿ–ಮಿಶ್ರಿಕೋಟಿ) ಹಾಗೂ ವಿವಿಧೆಡೆ ಇರುವ ನಿರ್ಗತಿಕರು ಮತ್ತು ಆಶ್ರಯವಿಲ್ಲದ ಜನರಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಫೌಂಡೇಶನ್‌ನ ಗುರು ಉಂಕಿ, ಪರೋಕ್ಷ ಹೂಲಿ, ಜಾನ್ವಿ ಸುನಗರ, ಕಾರ್ತಿಕ್ ಕಿಂಟಿಗೊಂಡ್, ರಾಘವೇಂದ್ರ ಬಳ್ಳಾರಿ, ಅವಿನಾಶ್ ತೆಗ್ಗಿಹಳ್ಳಿ, ಕಿರಣ್ ಕೊಪ್ಪದ್, ಕೃಷ್ಣ ಸಾಬೋಜಿ, ಅನಿಕೇತ್ ಅರ್ಚಕ, ಶ್ರೀನಿವಾಸ್, ಶರವಣ, ಪರಮ್, ವಿನಾಯಕ್, ಉಮೇಶ್ ಬದ್ದಿ, ರೋಹಿತ್, ವಿಜಯ ಮೆಹರ್‌ವಾಡೆ, ಅಪೇಕ್ಷ ಹೂಲಿ, ಬೂಮಿಕಾ ಮಂಡ್ರೆ, ರೇಣುಕಾ, ಶಾಹೀನ್ ಕಿರೆಸೂರ್, ವೈಷ್ಣವಿ ಹಣಬರತ್ತಿ, ಅರುಣ್, ಪ್ರೀತಿ, ಸಂಜನಾ ಸೇರಿದಂತೆ ಕಮಿಟಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಚಳಿಯಿಂದ ಬಳಲುತ್ತಿರುವ ಸಮಾಜದ ದುರ್ಬಲ ವರ್ಗಗಳಿಗೆ ಅಗತ್ಯ ಸಹಾಯ ಒದಗಿಸುವ ನಿಟ್ಟಿನಲ್ಲಿ ಇಂತಹ ಸೇವಾ ಚಟುವಟಿಕೆಗಳನ್ನು ಮುಂದುವರಿಸಲಾಗುವುದು ಎಂದು ಜೀವ ಧ್ವನಿ ಫೌಂಡೇಶನ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

ದೇವನಹಳ್ಳಿ: ಪ್ರಿಯಕರನಿಗಾಗಿ ಪತಿಯ ಹತ್ಯೆ; ಅಪಘಾತ ನಾಟಕ ಬಯಲು, ಪತ್ನಿ ಸೇರಿ ನಾಲ್ವರು ಅರೆಸ್ಟ್

0

ದೇವನಹಳ್ಳಿ: ಪ್ರಿಯಕರನಿಗಾಗಿ ಹೆಂಡತಿಯೇ ತನ್ನ ಪತಿಯನ್ನು ಹತ್ಯೆ ಮಾಡಿ, ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಪ್ರಕರಣವನ್ನು ಸೂಲಿಬೆಲೆ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ಜನವರಿ 24ರಂದು ನಡೆದ ಅಶೋಕ್ (40) ಹತ್ಯೆಯ ರಹಸ್ಯ ಇದೀಗ ಬಹಿರಂಗವಾಗಿದೆ.

ಮೃತನ ಪತ್ನಿ ಪುಷ್ಪಾ ಹಾಗೂ ಆಕೆಯ ಪ್ರಿಯಕರ ದೇವರಾಜ್ ಅವರನ್ನು ಪೊಲೀಸರು ಬಂಧಿಸಿದ್ದು, ಇವರ ಜೊತೆಗೆ ಸಹಚರರಾದ ಮುನಿಂದ್ರ ಮತ್ತು ಸಿದ್ದಪ್ಪನನ್ನೂ ವಶಕ್ಕೆ ಪಡೆಯಲಾಗಿದೆ. ಲವರ್ ದೇವರಾಜ್ಗಾಗಿ ಪುಷ್ಪಾ ಪೂರ್ವಯೋಜಿತವಾಗಿ ಪತಿ ಅಶೋಕ್‌ನ ಹತ್ಯೆಗೆ ಸಂಚು ರೂಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 24ರಂದು ಗ್ರಾಮದ ಸಮೀಪದ ರಸ್ತೆಯ ತಿರುವಿನಲ್ಲಿ ಅಶೋಕ್ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಇದು ರಸ್ತೆ ಅಪಘಾತವೆಂದು ಹೇಳಲಾಗಿತ್ತು. ಆದರೆ ಘಟನೆಯ ಸನ್ನಿವೇಶಗಳು ಸಂಶಯ ಹುಟ್ಟಿಸಿದ್ದರಿಂದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತನಿಖೆ ನಡೆಸಿದ ಸೂಲಿಬೆಲೆ ಪೊಲೀಸರು ಇದು ಕೊಲೆ ಎಂಬುದನ್ನು ಪತ್ತೆಹಚ್ಚಿದ್ದಾರೆ.

ಪೊಲೀಸರ ಪ್ರಕಾರ, ಎಣ್ಣೆ ಪಾರ್ಟಿ ಮಾಡುವ ನೆಪದಲ್ಲಿ ಅಶೋಕ್ರನ್ನು ಕರೆದುಕೊಂಡು ಹೋಗಿ, ಕೆರೆಯ ಬಳಿ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಬಳಿಕ ಶವವನ್ನು ರಸ್ತೆಯ ತಿರುವಿನಲ್ಲಿ ಬಿಸಾಡಿ ಅಪಘಾತದಂತೆ ಬಿಂಬಿಸಲು ಯತ್ನಿಸಲಾಗಿದೆ.

ಪ್ರಕರಣದ ಬಳಿಕ ಪತ್ನಿ ಹಾಗೂ ಪ್ರಿಯಕರ ಅನುಮಾನ ತಪ್ಪಿಸಲು ಹೈಡ್ರಾಮಾ ನಡೆಸಿದ್ದರು ಎನ್ನಲಾಗಿದೆ. ಸದ್ಯ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರ ವಿಚಾರಣೆ ಮುಂದುವರೆದಿದೆ.

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ; ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್

0

ಚಾಮರಾಜನಗರ: ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದಲ್ಲಿ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.

ಮೊದಲ ಆರೋಪಿಯಾಗಿ ಹೆಸರು ಬಂದ ಇಮ್ಮಡಿ ಮಹದೇವಸ್ವಾಮಿ ಅವರ ಬಗ್ಗೆ ಹೈಕೋರ್ಟ್‌ ಅನಾರೋಗ್ಯದ ಕಾರಣದಿಂದ ಜಾಮೀನು ನೀಡಿದ್ದಿತ್ತು. ಎರಡನೇ ಆರೋಪಿ ಅಂಬಿಕಾ, ಮೂರನೇ ಆರೋಪಿ ಮಾದೇಶ ಮತ್ತು ನಾಲ್ಕನೇ ಆರೋಪಿ ದೊಡ್ಡಯ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾ ನ್ಯಾಯಾಲಯವು ಈ ಅರ್ಜಿಗಳನ್ನು ನಿರಾಕರಿಸಿದೆ. ಹೀಗಾಗಿ ಮೊದಲ ಆರೋಪಿಗೆ ಜಾಮೀನು ನೀಡಿದ ಬಳಿಕ ಸಂತ್ರಸ್ತರು ಪ್ರತಿಭಟನೆ ನಡೆಸಿದ್ದರು.

error: Content is protected !!