Home Blog Page 8

ಯುವಕರು ವಿವೇಕದೊಂದಿಗೆ ಸತ್ಪ್ರಜೆಗಳಾಗಿ: ಫಕೀರೇಶ್ವರ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಸ್ವಾಮಿ ವಿವೇಕಾನಂದರು ಯುವ ಜನಾಂಗದ ಮನಸ್ಸಿನಲ್ಲಿ ಏಕತೆ, ಐಕ್ಯತೆ ಹಾಗೂ ವಿವೇಕವನ್ನು ತುಂಬುವ ಮೂಲಕ ಅವರಲ್ಲಿ ಭಾರತೀಯ ಸಂಸ್ಕೃತಿ ಸಂಸ್ಕಾರ ಮೂಡಿ ಬರುವಂತೆ ಪ್ರೇರಣೆ ನೀಡಿದವರು. ಯುವಕರು ವಿವೇಕಾನಂದರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವಿವೇಕದೊಂದಿಗೆ ಸತ್ಪ್ರಜೆಗಳಾಗಿ ಬಾಳಬೇಕೆಂದು ಮಲ್ಲಸಮುದ್ರದ ಓಂಕಾರಗಿರಿಯ ಓಂಕಾರೇಶ್ವರ ಮಠದ ಪೂಜ್ಯ ಫಕೀರೇಶ್ವರ ಮಹಾಸ್ವಾಮಿಗಳು ಹೇಳಿದರು.

ಅವರು ಗದುಗಿನ ವಿವೇಕಾನಂದ ನಗರದ ಕಾಶೀ ವಿಶ್ವನಾಥ ದೇವಸ್ಥಾನದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಭವನದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಮಿತಿಯ `ಜೀವನ ದರ್ಶನ 53ನೇ ಮಾಲಿಕೆ, ಪಾಲಕಿ ಸೇವೆ ಮತ್ತು ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ವಿವೇಕ ಎಂದರೆ ಪ್ರಜ್ಞೆ, ಜ್ಞಾನ, ಬೆಳಕು ಎಂದು ಅರ್ಥೈಸಬಹುದು. ವಿವೇಕದ ಮೂಲಕ ಆನಂದವನ್ನು ಕಂಡುಕೊಳ್ಳುವುದೇ ವಿವೇಕಾನಂದ. ಜ್ಞಾನ ಬೆಳಕಿನ ವೇದಿಕೆಯಾದ ಇಲ್ಲಿ ಜೀವನದ ದರ್ಶನವನ್ನು ಮಾಡಲಾಗುತ್ತಿದೆ. ಮಠಾಧೀಶರು, ಜ್ಞಾನಿಗಳು, ಪಂಡಿತರು, ಉಪನ್ಯಾಸಕರನ್ನು ಆಮಂತ್ರಿಸಿ ಜೀವನಕ್ಕೆ ಬೇಕಾಗುವ ಜ್ಞಾನ ಸನ್ಮಾರ್ಗವನ್ನು ನೀಡುವ ‘ಜೀವನ ದರ್ಶನ’ ಮಾಲಿಕೆ ನಿರಂತರವಾಗಿ ಸಾಗಿಬರಲು ವಿವೇಕಾನಂದ ನಗರದ ಹಿರಿಯರು, ಸಮಿತಿಯ ಪದಾಧಿಕಾರಿಗಳು ಕಾರಣರಾಗಿದ್ದಾರೆ. ಸಮಾಜಮುಖಿ ಕಾರ್ಯ ಮಾಡುತ್ತಿರುವ ಈ ಸಮಿತಿಯ ಸರ್ವ ಪದಾಧಿಕಾರಿಗಳು ಅಭಿನಂದನಾರ್ಹರು ಎಂದರು.

ಹೆತ್ತ ತಂದೆ-ತಾಯಿ, ಹಿರಿಯರನ್ನು ಪ್ರೀತಿಸುವ, ಗೌರವಿಸುವ ಹಾಗೂ ಮಾರ್ಗದರ್ಶನ ಪಡೆದು ಕಾಯಕ, ದಾಸೋಹ ಮಾಡಬೇಕು ಎಂದ ಅವರು, ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ಕಲಿಸಬೇಕು. ಜೊತೆಗೆ ಒಳ್ಳೆಯ ಶಿಕ್ಷಣ ನೀಡಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಎ.ಟಿ. ನರೇಗಲ್ ‘ಜೀವನ ದರ್ಶನ’ ಮಾಲಿಕೆಯ ಮುಖ್ಯ ಉದ್ದೇಶ ಜೀವನ ನಡೆಸುವ ಬಗೆ, ಸಾಧನೆಯ ಬಗೆ, ಸಂಸ್ಕಾರ, ಸಂಸ್ಕೃತಿಯನ್ನು ಯುವ ಜನಾಂಗಕ್ಕೆ ಪರಿಚಯಿಸಿ ಅವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ಹಿರಿದಾದ ಉದ್ದೇಶದೊಂದಿಗೆ ನಮ್ಮ ಸಮಿತಿ ಪ್ರತಿ ತಿಂಗಳು ಅಮವಾಸ್ಯೆ ದಿನ ಈ ಕಾರ್ಯಕ್ರಮವನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ. ಈ ಮಹತ್ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿಕೊಂಡರು.

ವೇದಿಕೆಯ ಮೇಲೆ ಸಮಿತಿಯ ಗೌರವಾಧ್ಯಕ್ಷ ಜಿ.ಜಿ. ಕುಲಕರ್ಣಿ, ಉಪಾಧ್ಯಕ್ಷ ಆರ್.ಆರ್. ಕಾಶಪ್ಪನವರ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಕಾಶೀವಿಶ್ವನಾಥನ ಪಾಲಕಿ ಸೇವೆ ಮತ್ತು ಕಾರ್ತಿಕ ಮಾಸದ ದೀಪೋತ್ಸವವು ಸಕಲ ಸದ್ಭಕ್ತರಿಂದ ಶ್ರದ್ದಾಭಕ್ತಿಯೊಂದಿಗೆ ಜರುಗಿತು.

ಸವಿತಾ ಗುಡ್ಡದ, ಕಸ್ತೂರಿ ಕಮ್ಮಾರ ಮತ್ತು ಸಂಗಡಿಗರಿಂದ ಸುಮಧುರ ಸಂಗೀತ ಜರುಗಿತು. ಕಸ್ತೂರಿಬಾಯಿ ಕಮ್ಮಾರ, ವಿಶಾಲಾಕ್ಷೀ ಕಲ್ಲನಗೌಡರ ಪ್ರಾರ್ಥಿಸಿದರು. ಸಮಿತಿಯ ಕಾರ್ಯದರ್ಶಿ ಕೆ.ಪಿ. ಗುಳಗೌಡ್ರ ಸ್ವಾಗತಿಸಿದರು. ವ್ಹಿ.ಕೆ. ಗುರುಮಠ ಪರಿಚಯಿಸಿದರು. ಕೋಶಾಧ್ಯಕ್ಷ ಎಸ್.ಎಸ್. ಪಾಳೇಗಾರ ನಿರೂಪಿಸಿದರು. ಸಂಗೀತಾ ಕುರಿ ವಂದಿಸಿದರು.

ಸಮಾರಂಭದಲ್ಲಿ ಸಮಿತಿಯ ನಿರ್ದೇಶಕರಾದ ಆರ್.ಬಿ. ಅಂದಪ್ಪನವರ, ವ್ಹಿ.ಆರ್. ಗೊಬ್ಬರಗುಂಪಿ, ಸಾಗರ ಬಿಂಗಿ, ರೇಣುಕಾ ಕರಿಗೌಡರ, ಸಂಗೀತಾ ಕುರಿ ಅಲ್ಲದೆ ಸಿ.ಕೆ. ಕಡಣಿ, ರಾಜೇಂದ್ರ ಗಡಾದ, ಎಸ್.ಎಸ್. ಪಾಟೀಲ, ಎಂ.ಬಿ. ಚನ್ನಪ್ಪಗೌಡ್ರ, ಕೆ.ಐ. ಕುರಗೋಡ, ವೀರಣ್ಣ ಕೊಟಗಿ, ಸುದರ್ಶನ ಹಾನಗಲ್ಲ, ಎಂ.ಕೆ. ತುಪ್ಪದ, ವ್ಹಿ.ಆರ್. ಗೊಬ್ಬರಗುಂಪಿ, ಬಿ.ಎಚ್. ಗರಡಿಮನಿ, ಎಂ.ಎನ್. ಕಾಮನಹಳ್ಳಿ, ಐ.ಬಿ. ಮೈದರಗಿ ಮುಂತಾದವರು ಪಾಲ್ಗೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ಮಾತನಾಡಿ, ಮನುಷ್ಯ ಕಷ್ಟಪಟ್ಟು ದುಡಿಯಬೇಕು. ಪರಿಶ್ರಮದ ದುಡಿಮೆ ಫಲ ನೀಡುವುದು ನಿಶ್ಚಿತ. ದೂರದ ಪ್ರಯಾಣ ಸಣ್ಣ ಹೆಜ್ಜೆಯಿಂದ ಆರಂಭಗೊಳ್ಳುವ ಹಾಗೆ ಸಣ್ಣಪುಟ್ಟ ವ್ಯಾಪಾರ ಮಾಡುವ ಮೂಲಕ ವ್ಯಾಪಾರ ವಹಿವಾಟನ್ನು ಹೆಚ್ಚಿಸಿಕೊಳ್ಳುತ್ತ ಹೋಗಬೇಕು. ಆಳಾಗಿ ದುಡಿದು ಅರಸನಾಗಿ ಉಣ್ಣಬೇಕು ಎಂಬ ಹಿರಿಯರ ಮಾತಿನಂತೆ ಸಾಧನೆಗೆ ಪ್ರಯತ್ನ ಬೇಕು ಎಂದರು.

ಟಿಎಪಿಸಿಎಂಎಸ್‌ಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶುಕ್ರವಾರ ಶಿರಹಟ್ಟಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿಶ್ವನಾಥ ಕಪ್ಪತ್ತನವರ, ಉಪಾಧ್ಯಕ್ಷರಾಗಿ ಲಕ್ಷ್ಮಣಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಶಿವಯೋಗಿ ನಂದಿಬೇವೂರಮಠ, ಬಸವರಾಜ ಭರಮಣ್ಣವರ, ಸೂರ್ಯಕಾಂತ ಕಪ್ಪತ್ತನವರ, ನಾಗರಾಜ ಲಕ್ಕುಂಡಿ, ಚಂದ್ರಪ್ಪ ತಳವಾರ, ಪಾರ್ವತಿ ಅಕ್ಕಿ, ಸುಮಾ ಮಹಾಜನಶೆಟ್ಟರ, ಪರಪ್ಪ ಹೊನಗಣ್ಣವರ, ಕೊಟ್ರೇಶ ಸಜ್ಜನರ, ರಾಜಶೇಖರ ಪಾಟೀಲ, ಸಂದೇಶ ಗಾಣಗೇರ, ವಸಂತ ಜಗ್ಗಲರ ಆಯ್ಕೆಯಾಗಿದ್ದಾರೆ.

ಹುಮಾಯೂನ್ ಮಾಗಡಿ, ಸಂದೀಪ ಕಪ್ಪತ್ತನವರ, ಚುನಾವಣಾಧಿಕಾರಿಯಾಗಿ ಪ್ರಶಾಂತ ಮುಧೋಳ, ಅಕ್ಕಮ್ಮ ಚಂದರಗಿ, ಸಂಘದ ಮುಖ್ಯ ಕಾರ್ಯನಿರ್ವಾಹಕ ಮಹೇಶ ಮತ್ತೂರ, ತಿಪ್ಪಣ್ಣ ಕೊಂಚಿಗೇರಿ ಉಪಸ್ಥಿತರಿದ್ದರು.

ಮತಾಂತರಕ್ಕೊಳಗಾದ ಬಾಲಕನ ರಕ್ಷಣೆಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಅಲ್ಪವಯಸ್ಕ ಬಾಲಕನನ್ನು ಒತ್ತಾಯದಿಂದ ಮತಾಂತರಗೊಳಿಸಿ ಜೀತಕ್ಕಿಟ್ಟುಕೊಂಡಿದ್ದು, ಬಾಲಕನಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಶಿರಹಟ್ಟಿಯಲ್ಲಿ ರಾಜ್ಯ ಹಿಂದೂ ಸಂಘಟನೆಗಳ ಒಕ್ಕೂಟದ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ ಸಂಚಾಲಕ ಸಂತೋಷ ಕುರಿ, ಜಿಲ್ಲೆಯಾದ್ಯಂತ ಮುಗ್ಧ ಹಿಂದೂಗಳನ್ನು ಬಲವಂತದಿಂದ ಮತಾಂತರಗೊಳಿಸುವ ಜಾಲ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಲಕ್ಷ್ಮೇಶ್ವರದಲ್ಲಿ ಗದುಗಿನ ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜಿಗೆ ಅಧ್ಯಯನಕ್ಕೆ ಬರುತ್ತಿದ್ದ ಹಿಂದೂ ಯುವತಿಯೋರ್ವಳನ್ನು ಲಕ್ಷ್ಮೇಶ್ವರದ ಮುಸ್ಲಿಂ ಯುವಕನೋರ್ವ ಪುಸಲಾಯಿಸಿ ಮತಾಂತರಗೊಳಿಸಿ ಲವ್ ಜಿಹಾದ್ ನಡೆಸಿದ್ದಾನೆ. ಯುವತಿಯ ಪಾಲಕರು ಪ್ರತಿನಿತ್ಯ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಈ ಘಟನೆ ಮಾಸುವ ಮುನ್ನವೇ ಲಕ್ಷ್ಮೇಶ್ವರದ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯೋರ್ವನನ್ನು ಪುರಸಭೆಯ ಮುಂದೆ ಚಹದ ಅಂಗಡಿ ನಡೆಸುತ್ತಿರುವ ವ್ಯಕ್ತಿ ಬೆದರಿಸಿ ಮತಾಂತರಗೊಳಿಸಿ ತಮ್ಮ ಹೋಟೆಲ್‌ನಲ್ಲಿ ಬಲವಂತವಾಗಿ ಕೆಲಸಕ್ಕಿರಿಸಿಕೊಂಡಿದ್ದರು.

ಇಂತಹ ಅನೇಕ ಮತಾಂತರ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ಪರೋಕ್ಷವಾಗಿ ಮತಾಂಧರಿಗೆ ಸಹಕರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಮುಗ್ಧ ಹಿಂದೂಗಳು ಜೀವನ ನಿರ್ವಹಣೆ ಮಾಡುವದೇ ಕಷ್ಟವಾಗಿದೆ. ಆದ್ದರಿಂದ ತಾವು ಮಧ್ಯಪ್ರವೇಶಿಸಿ ಕೂಡಲೇ ಜೀತಕ್ಕಿಟ್ಟುಕೊಂಡಿರುವ ಹೋಟೆಲ್ ಮಾಲೀಕರ ಮೇಲೆ ಸೂಕ್ತ ಪ್ರಕರಣ ದಾಖಲಿಸಿ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಮನವಿ ಮೂಲಕ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗೂಳಪ್ಪ ಕರಿಗಾರ, ಪರಶುರಾಮ ಡೊಂಕಬಳ್ಳಿ, ರಮೇಶ ಬಟ್ಟೂರ, ಬೀರೇಶ ಬಟ್ಟೂರ, ಸಂತೋಷ ಕಂಬಳಿ, ಮಾರುತಿ ಕುಳಗೇರಿ, ಮಲ್ಲಪ್ಪ, ನಾಗರಾಜ್, ಮುತ್ತು, ಲೋಕೇಶ, ಬೀರೇಶ, ಪ್ರಶಾಂತ, ಆತ್ಮಾನಂದ ಮುಂತಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ನ ಎರಡುವರೆ ವರ್ಷದ ಸಾಧನೆ ‘ಲೂಟಿ’, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ – ಆರ್ ಅಶೋಕ್!

0

ಬೆಂಗಳೂರು:- ಕಾಂಗ್ರೆಸ್ ನ ಎರಡುವರೆ ವರ್ಷದ ಸಾಧನೆ ಕೇವಲ ‘ಲೂಟಿ’ ಮಾತ್ರ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕೆ ಮಾಡಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇದು ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ ಅಥವಾ ಕಸದ ಬೆಂಗಳೂರೇ ಎಂದು ಟೀಕೆ ಮಾಡಿದ್ದಾರೆ. ಇವರು ಅಧಿಕಾರ ಹಂಚಿಕೆಯಲ್ಲಿದ್ದಾರೆ. ಹಳ್ಳ ಗುಂಡಿಗಳ ಕಡೆ ಗಮನ ಕೊಡುತ್ತಿಲ್ಲ, ಇದು ದುರಹಂಕಾರದ ಪರಮಾವಧಿ ಎಂದು ಟೀಕಿಸಿದರು. ಇಡೀ ಕರ್ನಾಟಕದಲ್ಲಿ ಹಳ್ಳ ಬಿದ್ದ ರಸ್ತೆಗಳು, ಕಸದ ರಾಶಿ, ಅಭಿವೃದ್ಧಿ ಶೂನ್ಯ, ಲೂಟಿ- ಇಷ್ಟೇನಾ ನಿಮ್ಮ ಎರಡೂವರೆ ವರ್ಷದ ಸಾಧನೆ ಎಂದು ಕೇಳಿದರು.

ಮಾನ ಮರ್ಯಾದೆ ಇದ್ದರೆ ಗುಂಡಿ ಮುಚ್ಚಬೇಕು. ರಸ್ತೆ ಡಾಂಬರೀಕರಣ ಮಾಡಿ ಎಂದು ಒತ್ತಾಯಿಸಿದರು. ಮಾತೆತ್ತಿದರೆ ಹಣ ಬಿಡುಗಡೆ ಮಾಡಿದ್ದೇವೆ ಎನ್ನುತ್ತಾರೆ. ಆ ಹಣ ಎಲ್ಲಿ ಹೋಗಿದೆ? ಕಳೆದ 4 ತಿಂಗಳಿನಿಂದ ಹಣ ಬಿಡುಗಡೆ ಮಾಡಿದ್ದೇವೆ ಎನ್ನುತ್ತೀರಲ್ಲವೇ?. ಇದು ಆಸ್ಪತ್ರೆ ರಸ್ತೆ. ಇಲ್ಲಿ ಪ್ರತಿಭಟನೆ, ಪರಿಶೀಲನೆಗೆ ಬಂದಿದ್ದೇವೆ. ಈ ರಸ್ತೆಯಲ್ಲಿ ಹೋದರೆ ತನ್ನಿಂತಾನೇ ಹೆರಿಗೆ ಆಗುತ್ತದೆ ಎಂದು ವ್ಯಂಗ್ಯವಾಗಿ ತಿಳಿಸಿದರು. ಒಂದು ಕಿಮೀ ರಸ್ತೆಯಲ್ಲಿ 400 ಹಳ್ಳ ಬಿದ್ದಿದೆ ಎಂದು ಹರಿಹಾಯ್ದಿದ್ದಾರೆ.

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಐ ವಿಶ್ ಹಿಮ್ ಆಲ್ ದ ಬೆಸ್ಟ್ ಅಂದ್ರೂ ಡಿಕೆಶಿ

0

ಬೆಂಗಳೂರು:- ನಮ್ಮ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಕೆಲವು ಶಾಸಕರು, ಮಂತ್ರಿಗಳು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ, ಮತ್ತೊಂದೆಡೆ ಡಿನ್ನರ್ ಮೀಟಿಂಗ್ ನಡೆಯುತ್ತಿದೆ ಎಂದು ಕೇಳಿದಾಗ, “ಯಾವ ಗುಂಪನ್ನು ದೆಹಲಿಗೆ ಕರೆದುಕೊಂಡು ಹೋಗಲು ನನಗೆ ಇಚ್ಛೆ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ.

ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ. ಕೆಲವರು ಮುಖ್ಯಮಂತ್ರಿಗಳ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರೆ, ಮತ್ತೆ ಕೆಲವರು ತಾವಾಗಿಯೇ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ನಾವು ಯಾರನ್ನೂ ತಡೆಯಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಒಂದು ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ. ಮಾನ್ಯ ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್ (ಅವರಿಗೆ ಶುಭ ಕೋರುತ್ತೇನೆ”) ಎಂದರು.

ಯಾರೇ ಆದರೂ ಆಡಿದ ಮಾತು ಮುಖ್ಯ ಅಲ್ಲವೇ ಎಂದು ಕೇಳಿದಾಗ, “ಸಿಎಂ ತಮ್ಮ ವಿಚಾರಧಾರೆ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನುಂಟು ಹೈಕಮಾಂಡ್ ಉಂಟು. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಸಿಎಂ ಹೇಳಿದ್ದಾರೆ. ನಾನೂ ಹೇಳಿದ್ದೇನೆ. ಅದಕ್ಕೆ ನಾವು ಬದ್ಧ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದರು.

5 ವರ್ಷ ನಾನೇ ಸಿಎಂ, ಇನ್ನೂ 2 ಬಜೆಟ್ ಮಂಡಿಸ್ತೀನಿ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು:- 5 ವರ್ಷ ನಾನೇ ಸಿಎಂ, ನಾನೇ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಧಿಕಾರ ಹಂಚಿಕೆ ಕುರಿತು ಮಾತನಾಡಿದ ಅವರು, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ. ನಿಮಗೆ ಯಾಕೆ ಅನುಮಾನ? ಯಾಕೆ ಮತ್ತೆ ಮತ್ತೆ ಅದನ್ನ ಕೇಳುತ್ತೀರಾ? ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ್ಯಾ? ನಾಯಕತ್ವ ಬದಲಾವಣೆ ಸಂಪುಟ ಪುನಾರಚನೆ ಎಲ್ಲದನ್ನ ತೀರ್ಮಾನ ಮಾಡುವುದು ಹೈಕಮಾಂಡ್. ಈ ಬಗ್ಗೆ ಹೈಕಮಾಂಡ್ ಇಲ್ಲಿಯವರೆಗೆ ಏನಾದರು ಮಾತನಾಡಿದ್ಯಾ? ಇಲ್ಲ ತಾನೇ, ಹಾಗಾದ್ರೆ ಮತೆ ಯಾಕೆ ಆ ಪ್ರಶ್ನೆ. ಹೈಕಮಾಂಡ್ ಹೇಳುವುದನ್ನ ನಾನು, ಶಾಸಕರು ಪಾಲಿಸಬೇಕು ಎಂದು ತಿಳಿಸಿದರು.

ದೆಹಲಿಗೆ ಹೋಗಿರುವ ಚೆಲುವರಾಯಸ್ವಾಮಿ ಜೊತೆ ನಾನೇ ಮಾತಾಡಿದ್ದೇನೆ. ಇಲಾಖೆ ಕೆಲಸದ ಹಿನ್ನೆಲೆಯಲ್ಲಿ ಹೋಗಿದ್ದೇನೆ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ. ಶಾಸಕರು, ಸಚಿವರು ದೆಹಲಿಗೆ ಹೋಗಬಾರದಾ? ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮತ್ತೆ ನಾನು ಯಾಕೆ ಈ ಬಗ್ಗೆ ವಿವರಣೆ ಕೊಡಲಿ. ನಾಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡ್ತೀನಿ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯರ ಹೊಸ ಮನೆಗೆ ಸಿಗ್ತಿಲ್ಲ ವಿದ್ಯುತ್ ಸಂಪರ್ಕ: ಸಿಎಂಗೆ ಹೀಗಾದ್ರೆ ಹೇಗೆ?

0

ಮೈಸೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ಮನೆ ಸಿದ್ಧಗೊಂಡು ಗೃಹ ಪ್ರವೇಶಕ್ಕೆ ರೆಡಿಯಾಗಿದೆ. ಆದ್ರೆ ಈ ಮನೆಗೆ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ ಎನ್ನಲಾಗಿದೆ.

ಮೈಸೂರಿನ‌ ಕುವೆಂಪು ನಗರದಲ್ಲಿ 80 & 120 ಅಳತೆಯಲ್ಲಿ ಮನೆಯನ್ನು ಸಿಎಂ ಕಟ್ಟಿಸಿದ್ದಾರೆ. ಮನೆಯ ಕೆಲಸ ಮುಗಿದಿದೆ. ಆದರೆ, ಹೊಸ ಮನೆಗೆ ಇನ್ನೂ ವಿದ್ಯುತ್ ಸಂಪರ್ಕ ಮಾತ್ರ ಸಿಗುತ್ತಿಲ್ಲ. ವಿದ್ಯುತ್ ಸಂಪರ್ಕ ಸಿಗದೆ ಗೃಹಪ್ರವೇಶ ಮಾಡಲು ಆಗಲ್ಲ. ಗೃಹ ಪ್ರವೇಶ ಮಾಡಿದರೂ ಮನೆಯಲ್ಲಿ ವಾಸಿಸಲು ಆಗಲ್ಲ.

ಹೀಗಾಗಿ, ಸಿಎಂಗೆ ಸಮಸ್ಯೆ ಎದುರಾಗಿದೆ. ಹೊಸ ಮನೆ ವಿದ್ಯುತ್ ಸಂಪರ್ಕಕ್ಕೆ ಈಗ ಓಸಿ ಅಂದರೆ ಸ್ವಾಧೀನಾನುಭವ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ. ಈ ಪತ್ರವನ್ನು ಸಿಎಂ ಸಲ್ಲಿಸದ ಕಾರಣ ವಿದ್ಯುತ್ ನಿಗಮವು ಸಿಎಂ ಕುಟುಂಬದ ಅರ್ಜಿಯನ್ನು ಪುರಸ್ಕರಿಸಿಲ್ಲ ಎನ್ನಲಾಗಿದೆ.

ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಡಿಕೆಶಿ ಸಿಎಂ ಆದ್ರೆ ಒಳ್ಳೆಯದು: ಕದಲೂರು ಉದಯ್

0

ಮಂಡ್ಯ:- ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿದ್ರೆ ಒಳ್ಳೆಯದು ಎಂದು ಕದಲೂರು ಉದಯ್ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರು ಪಕ್ಷಕ್ಕೆ ಮಾಡಿದ ಕೆಲಸ ಹಾಗೂ ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಉಪಯೋಗವಾಗುವುದು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಆಗಿ ಮಾಡಬೇಕೆಂದು ಉದಯ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು. ಸದ್ಯ ರಾಜ್ಯದಲ್ಲಿ ಇದೇ ವಿಚಾರ ಚರ್ಚೆಯಾಗುತ್ತಿದೆ. ಹೀಗಾಗಿ ಈ ಗೊಂದಲಗಳಿಗೆ ತೆರೆ ಎಳೆಯಿರಿ ಎಂದು ಶಾಸಕರ ನಿಯೋಗ ದೆಹಲಿಗೆ ಹೋಗಿದೆ. ಹೈಕಮಾಂಡ್ ಮುಂದೆ ಇದೇ ವಿಚಾರವನ್ನು ಅವರುಗಳು ಮಾತನಾಡುತ್ತಾರೆ ಎಂದು ಅವರಲ್ಲಿ ಇದ್ದ ಇಬ್ಬರು ನನಗೆ ಹೇಳಿದ್ದಾರೆ ಎಂದರು.

ಎಲ್ಲಾ ಗೊಂದಲಗಳಿಗೂ ಶೀಘ್ರದಲ್ಲಿ ಪರಿಹಾರವನ್ನು ಹೈಕಮಾಂಡ್ ಕೊಡುತ್ತೆ ಎಂಬ ನಂಬಿಕೆ ಇದೆ. ಸಿದ್ದರಾಮಯ್ಯ ಅವರ ಆಡಳಿತ ಹಾಗೂ ನಾಯಕತ್ವದ ಬಗ್ಗೆ ನಮಗೆ ಪ್ರಶ್ನೆಗಳಿಲ್ಲ. ಡಿ.ಕೆ ಶಿವಕುಮಾರ್ ಅವರ ಪಕ್ಷ ಸಂಘಟನೆ ದೃಷ್ಟಿಯಿಂದ ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡಬೇಕೆಂದು ನನ್ನನ್ನು ಒಳಗೊಂಡಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ. ಹೈಕಮಾಂಡ್ ಯಾವ ನಿರ್ಧಾರಕ್ಕೆ ಬರುತ್ತೆ ಅದಕ್ಕೆ ನಾವು ಬದ್ಧವಾಗಿ ಇರುತ್ತೇವೆ ಎಂದರು.

ನವೆಂಬರ್ ಕ್ರಾಂತಿ, ಭ್ರಾಂತಿ ಎಲ್ಲವೂ ಸುಳ್ಳು: ಓನ್ಲಿ ಶಾಂತಿ ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

0

ರಾಮನಗರ:- ನವೆಂಬರ್ ಕ್ರಾಂತಿ, ಭ್ರಾಂತಿ ಎಲ್ಲವೂ ಸುಳ್ಳು. ಆಗ ಏನಿದ್ದರೂ ಶಾಂತಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಡಿಸಿಎಂ ಡಿಕೆಶಿ ಬಣದ ಶಾಸಕರು ದೆಹಲಿ ಯಾತ್ರೆ ವಿಚಾರ ಕುರಿತು ನಗರದಲ್ಲಿ ಮಾತನಾಡಿದ ಅವರು, ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ. ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ಗೊತ್ತಿಲ್ಲ. ದೆಹಲಿಯಲ್ಲಿ ಏನೇನು ಆಗಿದ್ಯೋ ನಮಗೆ ಗೊತ್ತಿಲ್ಲ. ನಿಮಗೆ ಸಂಪೂರ್ಣ ಮಾಹಿತಿ ಬೇಕಿದ್ರೆ ಡಿಕೆಶಿ, ಡಿ.ಕೆ.ಸುರೇಶ್ ಜೊತೆ ಮಾತನಾಡಿ.

ನಾಯಕತ್ವ ಬದಲಾವಣೆ ಬಗ್ಗೆ ನನಗೇನು ಗೊತ್ತಿಲ್ಲ. ದಲಿತ ಸಚಿವರು ಸಭೆ ಮಾಡಿರೋದು ನನಗೆ ಗೊತ್ತಿಲ್ಲ. ಏನೂ ನಾಲ್ಕು ಜನ ಊಟಕ್ಕೆ ಸೇರಿಕೊಂಡ್ರೆ ಅದರ ಬಗ್ಗೆ ಮಾತನಾಡಲು ಆಗುತ್ತಾ? ಡಿನ್ನರ್ ಪಾಲಿಟಿಕ್ಸ್ಗೆ ನನ್ನನ್ನು ಯಾರೂ ಕರೆಯುತ್ತಿಲ್ಲ. ನಾನು ಯಾವ ಬಣವೂ ಅಲ್ಲ, ಕಾಂಗ್ರೆಸ್ ಬಣ. ಸರ್ಕಾರದಲ್ಲಿ ಯಾರೂ ಗೊಂದಲ ಮಾಡಿಕೊಳ್ಳಬಾರದು. ಎಲ್ಲವನ್ನೂ ಹೈಕಮಾಂಡ್ ತೀರ್ಮಾನಕ್ಕೆ ಬಿಡಬೇಕು ಎಂದರು.

ನಮ್ಮಲ್ಲಿ ಬಿಜೆಪಿಯಲ್ಲಿದ್ದಷ್ಟು ಬಣ ಇಲ್ಲ, ಬಿಜೆಪಿಯಲ್ಲಿ ನಾಲ್ಕೈದು ಬಣ ಇದೆ. ನಮ್ಮಲ್ಲಿ ಒಂದೇ ಬಣ ಕಾಂಗ್ರೆಸ್ ಬಣ. ನಮ್ಮಲ್ಲಿ ಹತ್ತಾರು ಹಿರಿಯ ನಾಯಕರು ಇದ್ದಾರೆ. ನಮ್ಮ ಪಕ್ಷ ಸದೃಢವಾಗಿದೆ. ಸರ್ಕಾರ ಎರಡೂವರೆ ವರ್ಷ ಪೂರೈಸಿದೆ. ಇದು ಸೆಕೆಂಡ್ ಇನ್ನಿಂಗ್ಸ್ ಅಂತ ಏನಿಲ್ಲ, ಐದು ವರ್ಷ ಒಂದೇ ಇನ್ನಿಂಗ್ಸ್. ಐದು ವರ್ಷವೂ ಸರ್ಕಾರ ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದರು.

ರಣ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 4,000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ DRI

ಸ್ಯಾಂಡಲ್‌ವುಡ್ ನಟಿ ಮತ್ತು ಆರೋಪಿ ರನ್ಯಾರಾವ್ ಸಂಬಂಧಿಸಿದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ತನಿಖೆ ಅಂತಿಮ ಹಂತಕ್ಕೆ ತಲುಪಿದೆ. ಕಳೆದ ಆರು ತಿಂಗಳಿಂದ ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದ ಡಿಆರ್‌ಐ ಇಂದು ಸುಮಾರು 4,000 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ತನಿಖೆಯ ವೇಳೆ ಒಟ್ಟಾರೆ 123 ಕೋಟಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಲಾಗಿದೆ ಎಂಬ ಸಂಗತಿ ಸ್ಪಷ್ಟವಾಗಿದೆ.

ತನಿಖೆಯಲ್ಲಿಯೇ ರನ್ಯಾರಾವ್ ಒಬ್ಬರೇ 104 ಕೋಟಿ ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಾಟ ಮಾಡಿದ್ದಾರೆ ಎನ್ನುವುದು ಬಹಿರಂಗವಾಗಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದ ಐವರು ಆರೋಪಿಗಳಿಗೆ ಶೋಕಾಸ್ ನೋಟೀಸ್ ನೀಡಲಾಗಿತ್ತು. ಉಳಿದ ನಾಲ್ವರಿಗೆ ಪ್ರತ್ಯೇಕ ನೋಟೀಸುಗಳನ್ನೂ ಜಾರಿ ಮಾಡಲಾಗಿದೆ.

ಚಾರ್ಜ್‌ಶೀಟ್‌ನಲ್ಲಿ ರನ್ಯಾರಾವ್ ತಂದೆ ರಾಮಚಂದ್ರರಾವ್ ಅವರ ಕಾರಿನ ದುರ್ಬಳಕೆ, ಕೆಲವು ರಾಜಕಾರಣಿಗಳ ಹೆಸರನ್ನು ಬಳಸಿಕೊಂಡಿರುವ ಆರೋಪ, ಎಲ್ಲ ವಿವರಗಳೂ ಸಮಗ್ರವಾಗಿ ದಾಖಲಿಸಲಾಗಿದೆ. ಈಗ ದೋಷಾರೋಪ ಪಟ್ಟಿ ಸಲ್ಲಿಕೆಯಿಂದ ಪ್ರಕರಣ ಇನ್ನಷ್ಟು ಗಂಭೀರ ಹಂತಕ್ಕೆ ಪ್ರವೇಶಿಸಿದೆ.

error: Content is protected !!