Home Blog Page 9

ಎಸ್‌ಸಿ ಜನಗಣತಿ: ಇದು ಸರ್ಕಾರದ ಕಣ್ಣೊರೆಸುವ ತಂತ್ರ ಎಂದ ಛಲವಾದಿ!

ಬೆಂಗಳೂರು:- ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲು ಸಾಧ್ಯವೇ ಇಲ್ಲ. ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಗಣತಿ ನಡೆಯುತ್ತಿದೆ. ಆಗುತ್ತಿರುವ ಅನಾಹುತಗಳ ಬಗ್ಗೆ ಮಾಧ್ಯಮಗಳು ತಿಳಿಸುತ್ತಿವೆ. ನಮ್ಮ ಮನೆಗೂ ಯಾರೂ ಬಂದಿಲ್ಲ. ಆದರೆ, ಸ್ಟಿಕ್ಕರ್ ಅಂಟಿಸಿ ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪರಿಶಿಷ್ಟ ಜಾತಿಯವರ ಮನೆಗೆ ಬಂದು ಸ್ಟಿಕ್ಕರ್ ಅಂಟಿಸಿ ಹೋಗಿದ್ದಾರೆ. ಅದನ್ನು ನಾವು ಒಪ್ಪಬಹುದಿತ್ತು. ಎಲ್ಲ ಮನೆಗಳಿಗೂ ಸ್ಟಿಕ್ಕರ್ ಅಂಟಿಸಿಕೊಂಡು ಹೋಗುತ್ತಿದ್ದಾರೆ. ಆನ್‌ಲೈನ್‌ನಲ್ಲೂ ಅವಕಾಶ ಇದೆ ಎಂದು ಸಿಎಂ ಹೇಳಿದ್ದಾರೆ. ಆದರೆ, ಅಲ್ಲಿ ಪರಿಶಿಷ್ಟ ಜಾತಿ ಸರ್ಟಿಫಿಕೇಟ್ ನಂಬರ್ ಹೇಳಬೇಕು. ಬೇರೆ ಬೇರೆ ಮಾಹಿತಿ ಕೇಳುತ್ತದೆ. ಅದನ್ನು ಒದಗಿಸಲು ಸಾಧ್ಯವೇ ಇಲ್ಲ. ಎಲ್ಲರೂ ವಿದ್ಯಾವಂತರಲ್ಲ, ಕೆಲವರಿಗೆ ಸರ್ಟಿಫಿಕೇಟ್ ಇದೆ. ಇನ್ನೂ ಕೆಲವರಿಗೆ ಇಲ್ಲ. ಇದು ಸರ್ಕಾರದ ಕಣ್ಣೊರೆಸುವ ತಂತ್ರವೇ ಹೊರತು, ಇದರಲ್ಲಿ ಸರಿಯಾದ ಅಂಕಿ-ಅಂಶ ಸಿಗಲು ಸಾಧ್ಯವಿಲ್ಲ ಎಂದಿದ್ದಾರೆ.

ನಿಮಗೆ ಆತ್ಮಸಾಕ್ಷಿ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಿ: MLC ರವಿಕುಮಾರ್ ವಿರುದ್ಧ ಹೆಚ್ ಕೆ ಪಾಟೀಲ್ ಕಿಡಿ!

ಹಾವೇರಿ:– ಬಿಜೆಪಿ ಮುಖಂಡ ರವಿಕುಮಾರ್ ಗೆ ಆತ್ಮಸಾಕ್ಷಿ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸಚಿವ ಹೆಚ್ ಕೆ ಪಾಟೀಲ್ ಆಗ್ರಹಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ MLC ರವಿಕುಮಾರ್ ನೀಡಿದ ಅವಹೇಳನಕಾರಿ ಹೇಳಿಕೆಗೆ ರಾಣೆಬೆನ್ನೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಹೆಚ್ ಕೆ ಪಾಟೀಲ್, ಬಿಜೆಪಿ ಎಂ.ಎಲ್ ಸಿ ರವಿಕುಮಾರ್ ವಿರುದ್ದ ಕಿಡಿಕಾರಿದರು.

ಇದು ಆತ್ಯಂತ ದುರ್ದೈವ. ಶಾಸನ ಸಭೆ ಸದಸ್ಯರು, ಬಿಜೆಪಿ ನಾಯಕರು ಹಿರಿಯ ಅಧಿಕಾರಿಯೊಬ್ಬರ ಮೇಲೆ ಲಘುವಾಗಿ ಮಾತಾಡಿರೋದು ನೀಚ ಕೆಲಸ. ಮಹಿಳೆಯರಿಗೆ ಸಣ್ಣ ಅಗೌರವ ಆದರೂ ನಮ್ಮ ಸಮಾಜ‌ ಸಹಿಸಲ್ಲ. ಈ ಲಘುವಾದ , ಅವಮಾನಕರ ಮಾತನ್ನು ನಾವು ತೀವ್ರವಾಗಿ ಖಂಡನೆ ಮಾಡಲೇಬೇಕು. ರವಿ ಕುಮಾರ್ ಅವರಿಗೆ ಆತ್ಮ ಸಾಕ್ಷಿ ಇದ್ದರೆ ಕ್ಷಮೆ ಕೇಳಲಿ. ಅದೂ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಅಪೇಕ್ಷೆ ಪಡುತ್ತೇನೆ. ಇಲ್ಲದಿದ್ದರೆ ಜನರಿಗೆ ಅವಮಾನ ಮಾಡಿದ ಹಾಗೆ ಎಂದರು.

RSS ಬ್ಯಾನ್ ವಿಚಾರಕ್ಕೆ ಹೆಚ್ ಕೆ ಪಾಟೀಲ್ ಹೇಳಿದ್ದೇನು?

ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿ, ಅದನ್ನ ಅವರ ಹತ್ರ ಕೇಳಬೇಕು. ಆರ್ ಎಸ್ ಎಸ್ ಸಂಘಟನೆ ಬಿಜೆಪಿ ಉಪಯೋಗಿಸಿಕೊಂಡು ಸಮಾಜ ವಿಭಜನೆ ಮಾಡ್ತಿದೆ ಅಂತ ಬಿಜೆಪಿ ನಾಯಕರೇ ಹೇಳ್ತಾರೆ. ಅದಕ್ಕಾಗಿ ಆ ಹೇಳಿಕೆ ಕೊಟ್ಟಿರಬಹುದು ಎಂದರು.

ಸಿಎಂ ಬದಲಾವಣೆ ವಿಚಾರವಾಗಿ ಮಾತಾಡಲ್ಲ:

ಸಿಎಂ ಬದಲಾವಣೆ ವಿಚಾರವಾಗಿ ನನ್ನ ಪ್ರಾರ್ಥನೆ ಫಲಿಸಬಹುದು ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇಷ್ಟೇ ಹೇಳ್ತಿನಿ ನಮ್ಮ ಮುಖ್ಯಸ್ಥರು ಮಲ್ಲಿಕಾರ್ಜುನ ಖರ್ಗೆಯವರು. ಸಿಎಂ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಯಾರೂ ಮಾತಾಡತಕ್ಕದಲ್ಲ ಎಂದು ಖರ್ಗೆಯವರು ಹೇಳಿದ್ದಾರೆ. ಅವರ ಮಾತು ನಮಗೆ ಆದೇಶ ಇದ್ದಂತೆ ಎಂದರು.

ದಿವಾಳಿ ಆಗಿರೋದು ನೀವು:

ಕಾಂಗ್ರೆಸ್‌ ಸರ್ಕಾರಕ್ಕೆ ಸರ್ಕಾರಿ ನೌಕರರಿಗೂ ಸಂಬಳ ಕೊಡಲಾಗುತ್ತಿಲ್ಲ ಎಂಬ ಬಿ.ವೈ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಗಾರ ನಿಂತಿದ್ರೆ ಸುಮ್ಮನಿರ್ತಿದ್ರಾ? ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ಮಾಡಿದೆವು. ಆ ಪ್ರದೇಶಕ್ಕೆ ಅಂತಾನೇ 34 ಕೋಟಿ ಮಂಜೂರು ಮಾಡಿದ್ದೆವು. ಇದು ಬಿಜೆಪಿಯವರಿಗೆ ಕಾಣಲ್ಲವಾ? ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎನ್ನುತ್ತೀರಿ. ನೀವು 5000 ಕೋಟಿ ರೂ ಭದ್ರಾ ಕಾಲುವೆ ಅಭಿವೃದ್ಧಿಗೆ ಕೊಡುತ್ತೇವೆಂದು ಬಜೆಟ್ ನಲ್ಲಿ ಹೇಳಿದ್ದೀರಿ, ಆದರೆ ಕೊಡಿಸಿದ್ರಾ? ಕಾನೂನು ಪ್ರಕಾರ ಕೊಟ್ಟರಾ? ದಿವಾಳಿ ನೀವು ಆಗಿದ್ದೀರಿ ಎಂದು ಟೀಕೆ ಮಾಡಿದರು.

ಆರ್ಥಿಕವಾಗಿ ಅನುಕೂಲತೆಯಿಂದ ನಡೆದಿದ್ದೇವೆ. ಬಿಜೆಪಿಯವರಿಗೆ ಅಸೂಯೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಬಲ್ಲಿದರ ಬಡತನದ ಬೇರನ್ನು ಕಿತ್ತು ಹಾಕುತ್ತಿದ್ದೇವೆ. ಬಡವರನ್ನು ಜಿರೋ ಪರ್ಸೆಂಟ್ ಮಾಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಸುಮಾರು 98.5 % ಜನರಿಗೆ ನಮ್ಮ ಯೋಜನೆಗಳ ಪ್ರತಿಫಲ ಮುಟ್ಟಿದೆ ಎಂದು ಎಚ್ ಕೆ ಪಾಟೀಲ್ ಹೇಳಿದರು.

ಬಿಜೆಪಿಯವರು ತಿರುಕನ ಕನಸು ಕಾಣುತ್ತಿದ್ದಾರೆ;

ರಾಜ್ಯದಲ್ಲಿ 2026ಕ್ಕೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ತಿರುಕನ ಕನಸು ಕಾಣುತ್ತಿದ್ದಾರೆ ಎಂದರು.

ಸರ್ಕಾರದ ಬಹಳಷ್ಟು ಕೇಸ್ ಗಳಿಗೆ ಸೋಲು:

ಇನ್ನೂ ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಸರ್ಕಾರದ ಪರವಾಗಿ ಸಮರ್ಥ ವಾದ ನಡೆಯುತ್ತಿಲ್ಲ ಎಂಬ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಸಿಎಂ ಹಾಗೂ ಅಡಿಷನಲ್ ಅಡ್ವೊಕೇಟ್ ಜನರಲ್ ಚರ್ಚೆ ಮಾಡ್ತಿದ್ದೀವಿ. ಈ ಬಗ್ಗೆ ಗಂಭೀರವಾಗಿ ಪರಿಗಣನೆ ಮಾಡಿದ್ದೇವೆ. ಸರ್ಕಾರದ ಬಹಳಷ್ಟು ಕೇಸ್ ಗಳು ಸೋಲು ಆಗ್ತಿದೆ ಎಂಬ ಅಂಶಗಳು ಬಂದಿದೆ. ಖಂಡಿತವಾಗಿ ಈ ಬಗ್ಗೆ ಒಂದು ನಿರ್ಧಾರ ತಗೊಳ್ತೀವಿ ಎಂದರು.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಆರೋಪಿಯನ್ನು ಬಂಧಿಸಿದ NIA

ಮಂಗಳೂರು:- ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬಂಧಿಸಿದೆ.

ಬಂಧಿತ ಆರೋಪಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಕತಾರ್‌ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎನ್‌ಐಎ ಅಧಿಕಾರಿಗಳು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಘಟನೆ ವಿವರ:

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರು 2022ರ ಜುಲೈ 26ರಂದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ದೆಹಲಿ ಕಚೇರಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದ ಎನ್‌ಐಎ ಓರ್ವ ಪ್ರಮುಖ ಆರೋಪಿ ಅತೀಖ್‌ ಅಹ್ಮದ್‌ ಸೇರಿ 22 ಆರೋಪಿಗಳನ್ನ ಬಂಧಿಸಿತ್ತು. ಒಟ್ಟು 28 ಆರೋಪಿಗಳ ವಿರುದ್ಧ ಜಾರ್ಜ್‌ ಶೀಟ್‌ ಸಲ್ಲಿಸಿದ್ದ ಎನ್‌ಐಎ ಉಳಿದ 6 ಆರೋಪಿಗಳಿಗೆ ತೀವ್ರ ಹುಡುಕಾಟ ನಡೆಸಿತ್ತು.

ಪ್ರಕರಣದ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ವಿದೇಶಕ್ಕೆ ಹಾರಿದ್ದ ಅಬ್ದುಲ್‌ ರಹಿಮಾನ್‌ ನನ್ನು ಇಂದು NIA ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆಸಕ್ತಿಯಿಂದ ಮತ ಚಲಾಯಿಸಿದ ವಿದ್ಯಾರ್ಥಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಗಶಹರದ ಆ್ಯಂಗ್ಲೋ ಉರ್ದು ಬಾಲಕರ/ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಪ್ರಾಯೋಗಿಕವಾಗಿ ತಿಳಿಸಲು ಚುನಾವಣೆಯನ್ನು ಮೊಬೈಲ್ ಇವಿಎಂ ಬಳಸಿ ಮತದಾನ ಪ್ರಕ್ರಿಯೆ ನಡೆಸಲಾಯಿತು.

ಪ್ರಜಾಪ್ರಭುತ್ವದ ಮೌಲ್ಯ, ಮತದಾನದ ಮಹತ್ವ ಹಾಗೂ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸುವ ಸಲುವಾಗಿ ಶಾಲೆಯಲ್ಲಿ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿ ಚುನಾವಣೆ ನಡೆಸಲಾಯಿತು. ವಿದ್ಯಾರ್ಥಿಗಳು ಮತದಾನ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಸಂತಸಪಟ್ಟರು.

ಮಕ್ಕಳಿಗೆ ಶಾಲೆಯ ವತಿಯಿಂದ ಚುನಾವಣಾ ಆಯೋಗ ನೀಡುವ ರೀತಿಯಲ್ಲೇ ಗುರುತಿನ ಚೀಟಿ ನೀಡಲಾಗಿತ್ತು. ಇದಕ್ಕೂ ಮೊದಲು ವಿಜ್ಞಾನ ಶಿಕ್ಷಕ ಇಸ್ಮಾಯಿಲ್ ಆರಿ ಮೊಬೈಲ್ ಇವಿಎಂ ಮೂಲಕ ಮತದಾನದ ಪ್ರಕ್ರಿಯೆ ಮತ್ತು ಮಾಹಿತಿಯನ್ನು ಒದಗಿಸಿದರು. ವಿದ್ಯಾರ್ಥಿಗಳು ಮತದಾನದ ತಿಳುವಳಿಕೆಯನ್ನು ಪಡೆದುಕೊಂಡು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಶಾಲಾ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಚುನಾವಣಾ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರೆ, ಮಕ್ಕಳು ತಮ್ಮ ಹಕ್ಕು ಚಲಾಯಿಸಿದರು. ಇದಕ್ಕೂ ಮುನ್ನ ಚುನಾವಣೆಯಲ್ಲಿ ಸ್ಪರ್ಧಿಸಲು ಮಕ್ಕಳು ಮುಖ್ಯ ಚುನಾವಣಾ ಅಧಿಕಾರಿ ಎಂ.ಎಂ ಪೀರಜಾದೆ ಹಾಗೂ ಟಿ.ಐ. ಕಾಲೇಖಾನ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಬಾಲಕರು 7 ಅಭ್ಯರ್ಥಿಗಳು, ಬಾಲಕಿಯರು 4 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡರು. ನಂತರ ಶಾಲಾ ಮುಖ್ಯ ಚುನಾವಣಾಧಿಕಾರಿ ಎಂ.ಎಂ. ಪೀರಜಾದೆ ಮತ್ತು ಟಿ.ಐ. ಕಾಲೇಖಾನ ಮತ ಪೆಟ್ಟಿಗೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ನೀಡಿದರು. ಮತದಾನ ಮಾಡುವ ವಿದ್ಯಾರ್ಥಿಗಳ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಯಿತು. ಬಾಲಕರ ಶಾಲೆಯಲ್ಲಿದ್ದ ಒಟ್ಟು 120 ಮಕ್ಕಳಲ್ಲಿ 110 ಮಕ್ಕಳು ಮತದಾನ ಮಾಡಿದರು. ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಮಾಡಲಾಗಿ, ಒಟ್ಟು 7 ಅಭ್ಯರ್ಥಿಗಳ ಪೈಕಿ 2 ಮಂದಿ ಬಹುಮತದಿಂದ ಶಾಲಾ ಸಂಸತ್ತಿಗೆ ಆಯ್ಕೆಯಾದರು. ಬಾಲಕಿಯರ ಶಾಲೆಯಲ್ಲಿದ್ದ ಒಟ್ಟು 192 ಮಕ್ಕಳಲ್ಲಿ 147 ಮಕ್ಕಳು ಮಾತದಾನ ಮಾಡಿದರು. ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಮಾಡಲಾಯಿತು. 4 ಅಭ್ಯರ್ಥಿಗಳು 2 ವಿದ್ಯಾರ್ಥಿಗಳು ಬಹುಮತದಿಂದ ಶಾಲಾ ಸಂಸತ್ತಿಗೆ ಆಯ್ಕೆಯಾದರು.

ಮಕ್ಕಳಿಗೆ ಚುನಾವಣೆ ಪ್ರಕ್ರಿಯೆ ಬಗ್ಗೆ ಅರಿವು ಮೂಡಿಸಲು ನಡೆಸಿದ ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದಲೇ ಭಾಗಿಯಾಗಿ ಹೊಸ ಅನುಭವ ಪಡೆದುಕೊಂಡರು. 10ನೇ ತರಗತಿಯ ವಿದ್ಯಾರ್ಥಿ ಎಸ್.ಕೆ. ಬಾಗೇವಾಡೆ ಪ್ರದಾನ ಮಂತ್ರಿಯಾಗಿ, 10ನೇ ತರಗತಿ ವಿದ್ಯಾರ್ಥಿ ಎ.ಡಿ. ಉಳ್ಳಗಡ್ಡಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಬಾಲಕಿಯರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೀನಾಜ್ ಕಲ್ಲಿಪಣ್ಣವರ ಪ್ರಧಾನ ಮಂತ್ರಿ, ತನ್ನಜಿಮ್ ಕೊಪ್ಪಳ ಉಪಪ್ರಧಾನಿಯಾಗಿ ಆಯ್ಕೆಯಾದರು.

ಶಾಲಾ ಸಂಸತ್ತು ಚುನಾವಣಾ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಶಾಲಾ ಆಡಳಿತ ಮಂಡಳಿ ಸದಸ್ಯ ಎ.ಎಂ. ಮುಲ್ಲಾ ಮಾತನಾಡಿದರು. ಸಯ್ಯದ್‌ಇಸ್ಮಾಯಿಲ್ ಬಿಜಾಪೂರ, ಬಾಲಕಿಯರ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಲ್.ಆರ್. ಇಟಗಿ, ಎಂ.ಎ. ರಿಕಾರ್ಟಿ, ಪೈರೋಜ ಡಲಾಯಿತ, ಎಂ.ಎಂ ಪೀರಜಾದೆ, ಎಂ.ಜಿ. ಪಟೇಲ್, ಎನ್.ಕೆ. ಕರಡಿ, ಎಂ.ಎ. ಕಮಾನಗಾರ, ಎಸ್.ಐ. ನದಾಫ್, ಝಡ್.ಎ. ಮುಲ್ಲಾ, ಟಿ.ಐ. ಕಾಲೇಖಾನ, ಎಂ.ಎಚ್. ಜಮಾಲಸಾಬನವರ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

“ಶಾಲಾ ಸಂಸತ್ತು ರಚನೆ ಮಾಡಲು ಪ್ರಸ್ತುತ ದಿನಮಾನಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಮತದಾನದ ಹ್ಕಕ್ಕನ್ನು ಪಾರದರ್ಶಕವಾಗಿ ಅಳವಡಿಸಲಾಗಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಮಕ್ಕಳಿಗೆ ಮತದಾನದ ಪ್ರಕ್ರಿಯೆ ಮತ್ತು ಅವರ ಮಾಹಿತಿಯನ್ನು ಒದಗಿಸಿದರೆ ಮುಂದಿನ ಚುನಾವಣೆಗಳಲ್ಲಿ ಎಲ್ಲರೂ ಆಸಕ್ತಿಯಿಂದ ಮತದಾನ ಮಾಡಲು ಮುಂದಾಗುತ್ತಾರೆ. ಇವಿಎಂ ಮೊಬೈಲ್ ಆ್ಯಪ್ ಮೂಲಕ ಸಿಯು, ಬಿಯು, ಪಿವಿವಿಪಿಎಟ್ ಬಗ್ಗೆ ಮಕ್ಕಳಲ್ಲಿ ಹೆಚ್ಚಿನ ಅರಿವು ಮೂಡಿಸಲಾಗಿದೆ”

– ಇಸ್ಮಾಯಿಲ್ ಆರಿ.

ಬಾಲಕರ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ.

ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ತಡೆಗಟ್ಟಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ನಗರದಲ್ಲಿ ಪಡಿತರ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ ತಡೆಗಟ್ಟುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ತಾಲೂಕಾಧ್ಯಕ್ಷ ಇಸ್ಮಾಯಿಲ್ ಉಮಚಗಿ ಮಾತನಾಡಿ, ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟ ನಿರಂತರ ನಡೆಯುತ್ತಿದ್ದು, ಅವಳಿ ನಗರದಲ್ಲಿ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ. ಅಕ್ರಮ ಅಕ್ಕಿ ಸಾಗಾಟ ತಡೆಯಬೇಕಾದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಮತ್ತು ಅಕ್ರಮ ಪಡಿತರ ಅಕ್ಕಿ ಸಾಗಾಟಗಾರ ಜೊತೆಗೆ ಕೈಜೋಡಿಸಿದ್ದಾರೆ.

ಈ ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟಕ್ಕೆ ಕಡಿವಾಣ ಹಾಕಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಬಡವರ ಹೊಟ್ಟೆ ತುಂಬಿಸುವ ಯೋಜನೆಯ ಉದ್ದೇಶ ಸಾಕಾರವಾಗಬೇಕು ಎಂದರು.

ಈ ಸಂದರ್ಭದಲ್ಲಿ ಖಾಜಾಸಾಬ ಕೊಪ್ಪಳ, ಅಸ್ಲಮ್ ಮಾಲದಾರ, ಸಾಧಿಕ ಚಿತವಾಡಗಿ, ಅನ್ವರ ಕೊಪ್ಪಳ, ಸಲೀಂ ಶಹಪೂರ, ಫಾರುಕ ದಂಡಿನ, ಸತೀಶ ರೋಣ, ಹೈದರಲಿ ಸವಣೂರ, ಮಹಮ್ಮದ ಅಲಿ, ಶಬೀರ ದ್ಯಾಪೂರ, ಹಮಾಯತ್, ಆಸಿಫ್ ಮಾಲದಾರ, ನೌವೀದ ಕಂಪ್ಲಿ, ರಸೂಲ ಬೇಪಾರಿ ಸೋಯಲ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಡಾ. ಬಸವರಾಜ ಬಳ್ಳಾರಿ ಅವರಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಬಸವರಾಜ ಬಳ್ಳಾರಿ ಅವರನ್ನು ಜಿಲ್ಲಾಡಳಿತ ಭವನದ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಸನ್ಮಾಸಿಲಾಯಿತು.

ಈ ಸಂದರ್ಭದಲ್ಲಿ ಲಕ್ಕುಂಡಿ ಪ್ರಾಧಿಕಾರ ಆಯುಕ್ತ ಡಾ. ಶರಣು ಗೊಗೇರಿ, ರಾಜ್ಯ ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ರವಿ ಗುಂಜೀಕರ, ಜಿಲ್ಲಾ ನೌಕರ ಸಂಘದ ಖಜಾಂಚಿ ಮಹಾಂತೇಶ ನಿಟ್ಟಾಲಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ, ಡಯಟ್ ಉಪನ್ಯಾಸಕ ಎಚ್.ಬಿ. ರಡ್ಡೇರ, ಡಿಡಿಪಿಐ ಕಛೇರಿ ಪರಿವೀಕ್ಷಕ ಶ್ರೀಧರ ಬಡಿಗೇರ, ಕರೀಂ ಸುಣಗಾರ ಹಾಜರಿದ್ದರು.

ವೈದ್ಯರು ನಮ್ಮೆಲ್ಲರ ಪಾಲಿನ ದೇವರು

ವಿಜಯಸಾಕ್ಷಿ ಸುದ್ದಿ, ಗದಗ: ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸತ್ಯವಾದುದು. ಆರೋಗ್ಯವು ಅನಾರೋಗ್ಯವಾದಾಗ ಔಷಧ ನೀಡಿ ಗುಣಪಡಿಸುವದು ವೈದ್ಯ ವೃತ್ತಿಧರ್ಮ ಎಂದು ಗದಗ ಜೇಂಟ್ಸ್ ಗ್ರುಪ್ ಆಫ್ ಸಖೀಸಹೇಲಿ ಸಂಘದ ಅಧ್ಯಕ್ಷೆ ಸುಮಾ ಪಾಟೀಲ ಹೇಳಿದರು.

ಅವರು ಗದುಗಿನ ಖ್ಯಾತ ಚಿಕ್ಕಮಕ್ಕಳ ತಜ್ಞರಾದ ಡಾ. ಎಸ್.ಎಫ್. ವರವಿ ಅವರನ್ನು ‘ವೈದ್ಯ ದಿನಾಚರಣೆ’ ಪ್ರಯುಕ್ತ ಸನ್ಮಾನಿಸಿ ಮಾತನಾಡಿದರು.

ನೋವಿನ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಪುನರ್ಜನ್ಮ ನೀಡುವ ವೈದ್ಯರು ನಮ್ಮೆಲ್ಲರ ಪಾಲಿನ ದೇವರು. ಇವರಿಗೆ ವಿಶೇಷ ಗೌರವ ನೀಡುವ ಮೂಲಕ ವೈದ್ಯರ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ನಮ್ಮ ಉತ್ತಮ ಹಾಗೂ ಆರೋಗ್ಯಕರ ಬದುಕಿಗಾಗಿ ಸಮರ್ಪಣಾ ಮನೋಭಾವದಲ್ಲಿ ಕಳೆದ 40 ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ವರವಿ ಅವರ ಸೇವೆ ಅಭಿನಂದನೀಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ನಿರ್ಮಲಾ ಪಾಟೀಲ, ವೈದ್ಯರು ಭೂಮಿಯ ಮೇಲಿರುವ ದೇವರು ಎನ್ನುವ ನಂಬಿಕೆ ನಮ್ಮಲ್ಲಿದೆ. ನಿಸ್ವಾರ್ಥ ಸೇವೆಯನ್ನೇ ಗುರಿಯಾಗಿಸಿಕೊಂಡು ನಿರಂತರ ಸೇವೆಗೈಯುತ್ತಿರುವ ವೈದ್ಯರು ರೋಗಿಗಳ ಬದುಕಿನ ಆಶಾಕಿರಣ ಎಂದು ಬಣ್ಣಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ವರವಿ, ವೈದ್ಯಕೀಯ ಕ್ಷೇತ್ರದಲ್ಲಿ ಹಗಲಿರುಳು ಸೇವೆ ಸಲ್ಲಿಸಿ ನೋವು ಎಂದು ಬಂದವರ ಮುಖದಲ್ಲಿ ನಗು ತರಿಸುವ ಕಾರ್ಯ ನಿರಂತರ ನಡೆಯುತ್ತಿದೆ. ನೋವು ಕಡಿಮೆ ಆದಾಗ ನಮ್ಮೊಂದಿಗೆ ರೋಗಿಗಳು ಸಂತಸ ಹಂಚಿಕೊಂಡು ಆರೋಗ್ಯವಂತರಾಗಿ ನಡೆದಾಗ ನಮ್ಮ ವೃತ್ತಿ ಘನತೆ ಹೆಚ್ಚುತ್ತದೆ ಎಂದರು.

ಮಾಧುರಿ ಮಾಳೇಕೊಪ್ಪ ಹಾಗೂ ಶಶಿಕಲಾ ಮಾಲೀಪಾಟೀಲ ಪ್ರಾರ್ಥಿಸಿದರು. ಪ್ರಿಯಾಂಕಾ ಹಳ್ಳಿ ಸ್ವಾಗತಿಸಿದರು. ಆಶಾ ಪಟ್ಟಣಶೆಟ್ಟಿ ಪರಿಚಯಿಸಿದರು. ಅಶ್ವಿನಿ ಮಾದಗುಂಡಿ ನಿರೂಪಿಸಿದರು. ಚಂದ್ರಕಲಾ ಸ್ಥಾವರಮಠ ವಂದಿಸಿದರು.

ಕಾರ್ಯಕ್ರಮದಲ್ಲಿ ರೇಖಾ ರೊಟ್ಟಿ, ಅನ್ನಪೂರ್ಣ ವರವಿ, ಶಾಂತಾ ಮುಂದಿನಮನಿ, ಲಕ್ಷ್ಮೀ ಕಟ್ಟೇಣ್ಣವರ, ಯಲ್ಲಮ್ಮ ಬೇಲೇರಿ, ಗೀತಾ ಮಠದ, ನಿವೇದಿತಾ ಅಡ್ನೂರ, ವಿಜಯಲ ಲಕ್ಷ್ಮೀ ಬಾರಿಕಾಯಿ, ಹೇಮಾ ಬಿ, ಜಯಶ್ರೀ ಕುರುಬರ ಮುಂತಾದವರಿದ್ದರು.

ರಾಷ್ಟ್ರೀಯ ವೈದ್ಯರ ದಿನ ಆಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ರೋಟರಿ ಗದಗ ಸೆಂಟ್ರಲ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ವೈದ್ಯರಾದ ಡಾ. ಸಿ.ಬಿ. ಹಿರೇಗೌಡರ, ಡಾ. ವಿ.ಸಿ. ಶಿರೋಳ, ಡಾ. ಶಿಲ್ಪಾ ಪವಾಡಶೆಟ್ಟರ, ಡಾ. ಪ್ರಕಾಶ ರಕ್ಕಸಗಿ, ಡಾ. ಮಧುಸೂದನ ಚಿಂತಾಮಣಿ, ಡಾ. ಕುಮಾರ ಕಂಠಿಮಠ ಅವರನ್ನು ಈ ಸಂದರ್ಭದಲ್ಲಿ ಸನ್ಮಾಸಲಾಯಿತು.

ಡಾ. ಸಿ.ಬಿ. ಹಿರೇಗೌಡರ ಮಾತನಾಡಿ, ರೋಟರಿ ಸೆಂಟ್ರಲ್ ಸಂಸ್ಥೆ ವೈದ್ಯರ ದಿನಾಚರಣೆಯ ನಿಮಿತ್ತ ವೈದ್ಯರ ಮನೆಗೆ, ಅವರಿರುವ ಆಸ್ಪತ್ರೆಗಳಿಗೆ ಹೋಗಿ ಸನ್ಮಾನಿಸುತ್ತಿರುವದು ಶ್ಲಾಘನೀಯ. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಡಾ. ಬಿಧನ್ ಚಂದ್ರ ರಾಯ್ ಅವರ ನೆನಪಿಗಾಗಿ ಭಾರತದಾದ್ಯಂತ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. ಸಮಾಜಕ್ಕೆ ವೈದ್ಯರ ಸೇವೆ ಅನುಪಮವಾದದ್ದು. ಎಲ್ಲ ಭಾಗ್ಯಗಳಲ್ಲಿ ಆರೋಗ್ಯ ಭಾಗ್ಯವೇ ದೊಡ್ಡದು. ಅನಾರೋಗ್ಯವನ್ನು ಕಳೆದು ಉತ್ತಮ ಆರೋಗ್ಯವನ್ನು ಸೃಷ್ಟಿಸಿ ಬದುಕಿಗೆ ಚೈತನ್ಯ ನೀಡುವ ವೈದ್ಯ ರೋಗಿಗಳ ಪಾಲಿಗೆ ದೇವರು ಎಂದರು.

ಈ ಸಂದರ್ಭದಲ್ಲಿ ರೋಟರಿ ಸೆಂಟ್ರಲ್ ಗದಗನ 2025-26ನೇ ಸಾಲಿನ ನೂತನ ಅಧ್ಯಕ್ಷ ಚೇತನ ಅಂಗಡಿ, ಕಾರ್ಯದರ್ಶಿ ರಾಜು ಉಮನಾಬಾದಿ, ಖಜಾಂಚಿ ಡಾ. ಪ್ರಭು ಗಂಜಿಹಾಳ, ಮಾಜಿ ಅಸಿಸ್ಟಂಟ್ ಗವರ್ನರ್ ಮಲ್ಲಿಕಾರ್ಜುನ ಐಲಿ, 3170ದ ನೂತನ ಅಸಿಸ್ಟಂಟ್ ಗವರ್ನರ್ ವಿ.ಕೆ. ಗುರುಮಠ, ಚಂದ್ರಗೌಡ ಹಿರೇಗೌಡರ, ಎಸ್.ಆಯ್. ಅಣ್ಣಗೇರಿ, ಶ್ರೀಕಾಂತ ಲಕ್ಕುಂಡಿ, ರಾಜು ಕುರಡಗಿ, ಮಲ್ಲಿಕಾರ್ಜುನ ಚಂದಪ್ಪನವರ, ಪರಶುರಾಮ ನಾಯ್ಕರ್ ಮೊದಲಾದ ಸದಸ್ಯರು ಪಾಲ್ಗೊಂಡಿದ್ದರು.

ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಲು ಗುರುವಾರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಗಜೇಂದ್ರಗಡ ತಾಲೂಕಿನ ನಿಡಗುಂದಿ ಮತ್ತು ಮಾರನಬಸರಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು.

ನಿಡಗುಂದಿ ಗ್ರಾಮದ ಸೊಬಗಿನ ಅವರ ಹೊಲದಿಂದ ಕೆಂಪಯ್ಯನವರ ಹೊಲದವರೆಗೆ 2.20 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಅಭಿವೃದ್ಧಿ ಕಾರ್ಯವನ್ನು ಪರಿಶೀಲಿಸಿದರು. ಈ ವೇಳೆ ರಸ್ತೆ ನಿರ್ಮಾಣದಲ್ಲಿ ಕ್ರಿಯಾಯೋಜನೆಯಂತೆ ರಸ್ತೆ ನಿರ್ಮಾಣ ಕಾರ್ಯ ನಡೆದಿದಿಯೇ ಎಂಬುದನ್ನು ಕಡತ ಪರಿಶೀಲಿಸಿ ತಿಳಿದುಕೊಂಡರು. ಬಳಿಕ ಗ್ರಾಮದ ಸಂಜೀವಿನಿ ವರ್ಕ್ ಶೆಡ್ ಮತ್ತು ಸಿಸಿ ರಸ್ತೆ ನಿರ್ಮಾಣ ಹಾಗೂ ಸರ್ಕಾರಿ ಕಾಲೇಜಿನಲ್ಲಿ ನಿರ್ಮಿಸಿದ ಪಿಂಕ್ ಶೌಚಾಲಯ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಗುಣಮಟ್ಟ ಅವಲೋಕಿಸಿದರು.

ಮಾರನಬಸರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮದಲ್ಲಿ ನಿರ್ಮಿಸಲಾದ ನೂತನ ಗ್ರಂಥಾಲಯ ಕಟ್ಟಡಕ್ಕೆ ಭೇಟಿ ನೀಡಿದರು. ಈ ವೇಳೆ ಗ್ರಂಥಾಲಯದ ಪುಸ್ತಕಗಳ ಸಂಗ್ರಹ ಕೋಣೆ, ಪಿಠೋಪಕರಣಗಳ ಗುಣಮಟ್ಟ, ಗ್ರಂಥಾಲಯದಲ್ಲಿ ತಂತ್ರಜ್ಞಾನ ಅಳವಡಿಕೆ ಕಾರ್ಯ ಸೇರಿದಂತೆ ಹಲವು ಮಾಹಿತಿಯನ್ನು ಗ್ರಂಥಪಾಲಕರಿಂದ ಪಡೆದುಕೊಂಡರು. ಬಳಿಕ ಗ್ರಾಮದ ಮೊಹರಂ ರಸ್ತೆ ಅಭಿವೃದ್ಧಿ, ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ನೂತನ ಶಾಲಾ ಕಟ್ಟಡವನ್ನು ಪರಿಶೀಲಿಸಿದರು.

ಬಳಿಕ ವಸತಿ ನಿಯಲದ ಕಟ್ಟಡ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆಯೇ ಎಂದು ತಿಳಿಯಲು ಸ್ವತಃ ವಿದ್ಯಾರ್ಥಿಗಳೊಂದಿಗೆ ಕ್ಲಾಸ್‌ನಲ್ಲಿ ಕುಳಿತು ಶಿಕ್ಷಕರ ಪಾಠ ಆಲಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಉಪಹಾರ ಸವಿದು ವಸತಿ ನಿಲಯದ ಆಹಾರ ಗುಣಮಟ್ಟ ಮತ್ತು ವಸತಿ ನಿಲಯದ ಕಟ್ಟಡ ಪರಿಶೀಲಿಸಿದರು. ಬಳಿಕ ತಾಲೂಕಿನ ಶಿಕ್ಷಕರಿಗೆ ಜಿಲ್ಲೆಯ ಫಲಿತಾಂಶ ಹೆಚ್ಚಿಸಲ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗಜೇಂದ್ರಗಡ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ, ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಫಣಿಬಂದ, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕರು, ತಾಲೂಕಿನ ನರೇಗಾ ಸಿಬ್ಬಂದಿ ವರ್ಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ನರೇಗಾ ಕಾಮಗಾರಿಗಳ ಜೊತೆಗೆ ಭರತ್ ಎಸ್ ಅವರು ಸರ್ಕಾರಿ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಶೈಕ್ಷಣೀಕ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು. ಕಾಲಕಾಲೇಶ್ವರ ಗ್ರಾಮದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದದ ವೇಳೆ 9ನೇ ತರಗತಿಯಲ್ಲಿ ಶೇ.98 ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿನಿಯೊಬ್ಬಳು ಸಿಇಒ ಅವರ ಗಮನಸೆಳೆದಳು. ಈ ವೇಳೆ ವಿದ್ಯಾರ್ಥಿಗೆ ಸಿಇಒ ಅವರು, 10ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮಳಾಗಿ ತೇರ್ಗಡೆ ಹೊಂದುವಂತೆ ಹರಸಿದರು.

ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ಸ್ ದಿನಾಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ರೋಟರಿ ಗದಗ ಸೆಂಟ್ರಲ್ ವತಿಯಿಂದ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ಸ್ ದಿನಾಚರಣೆಯನ್ನು ಆಚರಿಸಲಾಯಿತು. ಚಾರ್ಟರ್ಡ್ ಅಕೌಂಟೆಂಟ್ಸ್ ಕೆ.ಎಸ್. ಚೆಟ್ಟಿ , ಕಿರಣ ಶಾವಿ, ಆನಂದ ಪೋತ್ನಿಸ್ ಅವರನ್ನು ಗೌರವ ಪೂರ್ವಕವಾಗಿ ಸನ್ಮಾಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್. ಚೆಟ್ಟಿ ಮಾತನಾಡಿ, ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ ದಿನವನ್ನು ಪ್ರತಿ ವರ್ಷ ಜುಲೈ 1ರಂದು ಆಚರಿಸಲಾಗುತ್ತದೆ. ಭಾರತವು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಸ್ಥಾಪನೆಯ ಗುರುತಾಗಿ ಈ ದಿನವನ್ನು ಆಚರಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರೋಟರಿ ಸೆಂಟ್ರಲ್‌ನ 2025-26ನೇ ಸಾಲಿನ ನೂತನ ಅಧ್ಯಕ್ಷ ಚೇತನ ಅಂಗಡಿ, ಕಾರ್ಯದರ್ಶಿ ರಾಜು ಉಮನಾಬಾದಿ, ಖಜಾಂಚಿ ಡಾ. ಪ್ರಭು ಗಂಜಿಹಾಳ, ಮಾಜಿ ಅಸಿಸ್ಟಂಟ್ ಗವರ್ನರ್ ಮಲ್ಲಿಕಾರ್ಜುನ ಐಲಿ, 3170ದ ನೂತನ ಅಸಿಸ್ಟಂಟ್ ಗವರ್ನರ್ ವಿ.ಕೆ. ಗುರುಮಠ, ರಾಜು ಕುರಡಗಿ, ಎಸ್.ಆಯ್. ಅಣ್ಣಗೇರಿ, ಚಂದ್ರಗೌಡ ಹಿರೇಗೌಡರ, ಶ್ರೀಕಾಂತ ಲಕ್ಕುಂಡಿ, ಪರಶುರಾಮ ನಾಯ್ಕರ್, ಮಲ್ಲಿಕಾರ್ಜುನ ಚಂದಪ್ಪನವರ ಮೊದಲಾದ ಸದಸ್ಯರು ಪಾಲ್ಗೊಂಡಿದ್ದರು.

error: Content is protected !!