Home Blog Page 9

ಮರು ಮದುವೆ ಆಗುವುದಾಗಿ ವಿಚ್ಛೇದಿತ ಮಹಿಳೆಯರಿಗೆ ವಂಚಿಸುತ್ತಿದ್ದ ಆರೋಪಿ ಸೂಸೈಡ್!

0

ಚಿಕ್ಕಬಳ್ಳಾಪುರ:- ಮರು ಮದುವೆ ಆಗುವುದಾಗಿ ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ಆರೋಪಿಯು ಸೂಸೈಡ್ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಕನ್ನಂಪಲ್ಲಿ ಮನೆಯಲ್ಲಿ ಜರುಗಿದೆ.

ಗಿರೀಶ್ ಸೂಸೈಡ್ ಮಾಡಿಕೊಂಡ ಆರೋಪಿ. ವಂಚನೆ ಪ್ರಕರಣ ಸಂಬಂಧ ನಾಲ್ವರು ಸಂತ್ರಸ್ತೆಯರು ಈತನ ವಿರುದ್ಧ ದೂರು ನೀಡಿದ್ದರು. ಈ ಬಗ್ಗೆ ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಭಯದಿಂದ ಗಿರೀಶ್​​ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ತಿಂಗಳ ಹಿಂದೆಯೂ ಈತ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆದಿದ್ದ ಎನ್ನಲಾಗಿದೆ.

ಸಿ.ಎಂ.ಗಿರೀಶ್ ಅಲಿಯಾಸ್ ಸಾಯಿಸುದೀಪ್ ಎನ್ನುವ ಈತ ವಿವಾಹಿತ ಮಹಿಳೆಯರನ್ನೇ ಟಾರ್ಗೆಟ್​​ ಮಾಡ್ತಿದ್ದ. ಫೇಸ್​​ಬುಕ್​ ಮೂಲಕ ಪರಿಚಯ ಮಾಡಿಕೊಂಡು, ಮರುಮದುವೆ ಹೆಸರಲ್ಲಿ ಅವರನ್ನು ಪುಸಲಾಯಿಸುತ್ತಿದ್ದ. ಲೈಂಗಿಕವಾಗಿ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ವಿಡಿಯೋ ಮತ್ತು ಆಡಿಯೋಗಳನ್ನು ಇಟ್ಟುಕೊಂಡಿದ್ದ. ನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ, ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿದ್ದ ಎಂದು ಆರೋಪಿಸಲಾಗಿತ್ತು.

ಈ ಬಗ್ಗೆ ಸಂತ್ರಸ್ತ ಮಹಿಳೆಯರು ಗಿರೀಶ್​ ವಿರುದ್ಧ ಚಿಂತಾಮಣಿ ನಗರಠಾಣೆಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಆರೋಪಿ ಸೂಸೈಡ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೋಲೀಸರು ತನಿಖೆ ಕೈಗೊಂಡಿದ್ದಾರೆ.

ನಟ ದರ್ಶನ್‌ ಗೆ ಮತ್ತೆ ಬೆನ್ನು ನೋವು: ಫಿಸಿಯೋಥೆರಪಿಗೆ ಕೋರ್ಟ್ ಸೂಚನೆ

ರೆಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮತ್ತೆ ತನ್ನ ಆರೋಗ್ಯ ಸಮಸ್ಯೆಗಳ ಬಗ್ಗೆ ಕೋರ್ಟ್ ಮುಂದೆ ಅಳಲನ್ನು ತೋಡಿಕೊಂಡಿದ್ದಾರೆ. ಕೆಲ ದಿನಗಳಿಂದ ಚಳಿಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದ ದರ್ಶನ್, ಈಗ ಬೆನ್ನುನೋವು ತೀವ್ರಗೊಂಡಿದೆ ಎಂದು ಕೋರ್ಟ್‌ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಬುಧವಾರವೇ ಚಳಿ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಹೆಚ್ಚುವರಿ ಬೆಡ್‌ಶೀಟ್ ಕೊಡಿಸುವಂತೆ ಮನವಿ ಮಾಡಿದ ದರ್ಶನ್, ಗುರುವಾರ ಕೋರ್ಟ್‌ನಲ್ಲಿ ಹಾಜರಾದಾಗ ಇದೇ ವಿಚಾರವನ್ನು ಮತ್ತೆ ಮುಂದಿಟ್ಟರು. ನ್ಯಾಯಾಲಯದ ಮುಂದೆ “ಚಳಿ ತುಂಬಾ ಇದೆ ಸರ್, ರಾತ್ರಿಯಿಡೀ ನಿದ್ದೆ ಬರ್ತಿಲ್ಲ. ಮೂಲೆಯಲ್ಲಿ ಕೂತು ಕಾಲ ದೂಡ್ತಾ ಇರುತ್ತೀವಿ. ಇದು ನನ್ನೊಬ್ಬನ ಸಮಸ್ಯೆ ಅಲ್ಲ, ಎಲ್ಲಾರದ್ದೇ” ಎಂದು ದರ್ಶನ್ ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮತ್ತೊಬ್ಬ ಆರೋಪಿ ನಾಗರಾಜ್ ಕೂಡ ಜೈಲಿನಲ್ಲಿ ಬೆಡ್‌ಶೀಟ್ ಕೊಡುತ್ತಿಲ್ಲ ಎಂದು ಆರೋಪಿಸಿದರು. “ಸ್ವಾಮಿ, ಮನೆಯಿಂದ ತಂದು ಕೊಟ್ಟರೂ ಕೊಡ್ತಿಲ್ಲ” ಎಂದು ಅಳಲನ್ನು ವ್ಯಕ್ತಪಡಿಸಿದರು. ಇದಕ್ಕೆ ಬೆಂಬಲವಾಗಿ ದರ್ಶನ್ ಮೈಕ್ ಹಿಡಿದು ಎಲ್ಲರ ಪರವಾಗಿ ಮಾತಾಡಿದರು.

ಆರೋಗ್ಯ ಸಮಸ್ಯೆಯ ಭಾಗವಾಗಿ ದರ್ಶನ್ ತಮ್ಮ ಬೆನ್ನುನೋವು ಹೆಚ್ಚಾಗಿದ್ದು, ಫಿಸಿಯೋಥೆರಪಿ ಎರಡೂವರೆ ಬಾರಿ ಮಾಡಿದರೂ ನಂತರ ನಿಲ್ಲಿಸಲಾಗಿದೆ ಎಂದು ಕೋರ್ಟ್‌ಗೆ ಹೇಳಿದರು. ದರ್ಶನ್‌ನ ಆವಾಜು ಕೇಳಿದ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಫಿಸಿಯೋಥೆರಪಿ ಮುಂದುವರಿಸಲು ಸೂಚನೆ ನೀಡಿದೆ.

ಈ ಎಲ್ಲ ಘಟನೆಯು ಟ್ರಯಲ್ ಪ್ರಕ್ರಿಯೆಯ ವೀಡಿಯೋ ಕಾನ್ಫರೆನ್ಸ್ ವಿಚಾರಣೆಯ ವೇಳೆ ನಡೆದಿದೆ. ದರ್ಶನ್, ಪವಿತ್ರ ಗೌಡ ಮತ್ತು ಇತರೆ ಆರೋಪಿಗಳು ಕೋರ್ಟ್‌ಗೆ ಆನ್‌ಲೈನ್ ಮೂಲಕ ಹಾಜರಾಗಿದ್ದರು.

ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ದಾಖಲು

ಬಿಗ್ ಬಾಸ್ ಕನ್ನಡ 12 ಆರಂಭವಾದ ದಿನದಿಂದಲೇ ಮನೆ ಗಲಾಟೆಗಳ, ಜಗಳಗಳ ಮತ್ತು ವಿವಾದಗಳ ಹೊಳೆಯಲ್ಲಿ ಮುಳುಗಿದೆ. ಮೊನ್ನೆಯಷ್ಟೇ ಗಿಲ್ಲಿ ನಟನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಹೋಗಿದ್ದರೆ, ಈಗ ನಿರೂಪಕ ಕಿಚ್ಚ ಸುದೀಪ್ ಅವರೇ ಆರೋಪಗಳ ಸುತ್ತುವರೆದಿದ್ದಾರೆ. ಸುದೀಪ್ ವಿರುದ್ಧ ಮಹಿಳಾ ಆಯೋಗದಲ್ಲಿ ಪ್ರಕರಣ ದಾಖಲಾಗಿರುವ ವಿಚಾರ ಬಿಗ್ ಬಾಸ್ ತಂಡಕ್ಕೆ ದೊಡ್ಡ ಆಘಾತ ತಂದಿದೆ.

ಶೋನಲ್ಲಿ ನಡೆದ ಪ್ರಸಂಗದಲ್ಲಿ ರಕ್ಷಿತಾ ಶೆಟ್ಟಿಗೆ ಸುದೀಪ್ ಅವರು ತೀವ್ರವಾಗಿ ಗರಂ ಆಗಿ, “ನನ್ನ ಪಿತ್ತ ನೆತ್ತಿಗೇರುತ್ತಲ್ಲ ಅದಕ್ಕಿಂತ ಮೊದಲು…” ಎಂದು ಬೈದಿರುವುದು ಮಹಿಳೆಯರ ಮೇಲಿನ ಅವಮಾನ ಎಂದು ಸಂಧ್ಯಾ ಪವಿತ್ರ ಎಂಬವರು ಮಹಿಳಾ ಆಯೋಗದಲ್ಲಿ ದೂರು ನೀಡಿದ್ದಾರೆ. ಇದಲ್ಲದೆ ಬಿಡದಿ ಠಾಣೆಯಲ್ಲೂ ದೂರು ಸಲ್ಲಿಸಿದ್ದಾರೆ. ದೂರು ದಾಖಲಾದ ಬಳಿಕ, ಸುದೀಪ್ ಅಭಿಮಾನಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಂಧ್ಯಾ ಆರೋಪಿಸಿದ್ದಾರೆ.

ಅಷ್ಟೇ ಅಲ್ಲ, ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧವೂ ಸಂಧ್ಯಾ ದೂರು ನೀಡಿದ್ದಾರೆ. ರಕ್ಷಿತಾರನ್ನು ‘ಎಸ್ ಕ್ಯಾಟಗರಿ’ ಮತ್ತು ‘ಎಲ್ಲಿಂದ ಬಂದಿದ್ಯಾ ಗೊತ್ತಿಲ್ಲ’ ಎಂಬ ರೀತಿಯಲ್ಲಿ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಗಿಲ್ಲಿ ನಟನ ಮೇಲೆ ಹಲ್ಲೆ ಮಾಡಿದ ರಿಷಿಕಾ ವಿರುದ್ಧವೂ ಸಂಧ್ಯಾ ಆಯೋಗದ ಮೆಟ್ಟಿಲೇರಿದ್ದಾರೆ.

ಒಟ್ಟಾರೆ, ಬಿಗ್ ಬಾಸ್ ಮನೆ ಮೇಲೆ ಯಾವ ಗ್ರಹಚಾರಿ ಪರಿಣಾಮ ಬೀರಿದೆಯೋ ಗೊತ್ತಿಲ್ಲ, ಆದರೆ ದಿನ ಕಳೆದಂತೆ ಹೊಸಹೊಸ ವಿವಾದಗಳು ಮಾತ್ರ ಮೇಲಕ್ಕೆ ಬರುತ್ತಿವೆ. ಈ ಸೀಸನ್ ಮನರಂಜನೆಯಿಗಿಂತ ಜಗಳ ಮತ್ತು ದೂರುಗಳ ಸದ್ದು ಹೆಚ್ಚಿಸಿದೆ.

 

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಯುವತಿ ಸಾವು, ಯುವಕ ಗಂಭೀರ

0

ದಾವಣಗೆರೆ:- ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ.

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ. ಪ್ರಿಯಾ (21) ಮೃತ ಯುವತಿ. ಯೋಗೇಶ್ ಗಾಯಗೊಂಡ ಯುವಕ. ಇಬ್ಬರು ದಾವಣಗೆರೆ ನಿವಾಸಿಗಳಾಗಿದ್ದು, ಕಾಲೇಜು ಮುಗಿಸಿ ಡಾಬಾವೊಂದಕ್ಕೆ ಸ್ನೇಹಿತರ ಜೊತೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ವಾಪಸ್ಸಾಗುವ ವೇಳೆ ಈ ಅಪಘಾತ ನಡೆದಿದೆ.

ಪ್ರಿಯಾ ಹಾಗೂ ಯೋಗೇಶ್ ನಡುವೆ ಡಾಬಾದಲ್ಲೇ ಗಲಾಟೆ ನಡೆದಿತ್ತು. ಇನ್ನೂ ಇಬ್ಬರ ಜಗಳ ಸಿಸಿ ಕ್ಯಾಮೆರಾದಲ್ಲಿ ಸಹ ಸೆರೆಯಾಗಿದೆ. ಜಗಳವಾಡಿ ಪ್ರಿಯಾ ಹಾಗೂ ಆಕೆಯ ಸ್ನೇಹಿತೆ ಒಂದು ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ, ಬುಲೆಟ್ ಬೈಕ್‌ನಲ್ಲಿ ಯುವತಿಯರನ್ನು ಹಿಂಬಾಲಿಸಿ ಹೊರಟ ಯೋಗೇಶ್, ನಡು ರಸ್ತೆಯಲ್ಲಿ ನಿಲ್ಲಿಸಿ ಪ್ರಿಯಾಳನ್ನು ತನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಬಂದಿದ್ದ. ಆಗಲೂ ಜಗಳವಾಡುತ್ತಾ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿದ್ದು, ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ವಿರುದ್ಧ ಯುವತಿ ಕುಟುಂಬಸ್ಥರು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಹೆಂಡ್ತಿ, ಅತ್ತೆ ಮಾವನ ಕಿರುಕುಳ: ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ಪತಿ

0

ಹಾವೇರಿ:- ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ಪತ್ನಿ, ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ವೀಡಿಯೋ ಮಾಡಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ.

ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಮಂಜುನಾಥ್ ಚಿಲ್ಲೋಜಿ (26) ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿಯಾಗಿರುವ ಮಂಜುನಾಥ್ ಕುರಿಗಾಹಿಯಾಗಿದ್ದರು. ಪತ್ನಿ, ಅತ್ತೆ-ಮಾವ ಮತ್ತು ಅವರ ಮಾವ ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಕಿರುಕುಳಕ್ಕೆ ಬೇಸತ್ತು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಗೂ ಮುನ್ನ ಮಂಜುನಾಥ್ ವೀಡಿಯೋ ಮಾಡಿಟ್ಟು ಕಿರುಕುಳದ ಬಗ್ಗೆ ವಿವರಿಸಿದ್ದಾರೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮಾನಸಿಕವಾಗಿ ಬಹಳ ಹಿಂಸೆ ನೀಡಿದ್ದಾರೆ. ನನ್ನ ಹೆಂಡತಿ, ಅವರ ತಂದೆ-ತಾಯಿ, ಅವರ ಮಾವ ಭೀರಪ್ಪ, ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಮಾನಸಿಕವಾಗಿ ತುಂಬಾ ಹಿಂಸೆ ಕೊಟ್ಟಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕಣ್ಣೀರು ಹಾಕಿದ್ದಾರೆ.

ಗೋಲ್ಡ್ ಪ್ರಿಯರಿಗೆ ಮತ್ತೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ಬೆಲೆ ಕುಸಿತ

0

ಗೋಲ್ಡ್ ಪ್ರಿಯರಿಗೆ ಮತ್ತೆ ಶಾಕಿಂಗ್ ಸುದ್ದಿ ಎದುರಾಗಿದೆ. ಇಂದು ಮತ್ತೆ ಚಿನ್ನದ ಬೆಲೆ ಏರಿಕೆ ಆಗಿದೆ.

ಚಿನ್ನದ ಬೆಲೆ 20 ರೂಗಳಷ್ಟು ಅಲ್ಪ ಹೆಚ್ಚಳ ಕಂಡರೆ, ಬೆಳ್ಳಿ ಬೆಲೆ 4 ರೂಗಳಷ್ಟು ಭರ್ಜರಿ ಕುಸಿತ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,14,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,24,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,14,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,900 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 21ಕ್ಕೆ):-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,448 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,410 ರೂ.

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,336 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 161 ರೂ.

Breaking News: ಬಾಳೆಗೊನೆಗಳಲ್ಲಿ ಶಿವಮೊಗ್ಗ ಜೈಲಿಗೆ ಗಾಂಜಾ ಪೂರೈಕೆ!

0

ಶಿವಮೊಗ್ಗ:- ಆಟೋ ಚಾಲಕನೊಬ್ಬ ಇಲ್ಲಿನ ಸೋಗಾನೆಯಲ್ಲಿರುವ ಜೈಲಿಗೆ ಬಾಳೆಗೊನೆಗಳಲ್ಲಿ ಗಾಂಜಾ ತುಂಬಿ ತಂದು ಗೇಟಿನ ಬಳಿ ಇಟ್ಟು ಹೋಗಿರುವ ಘಟನೆ ಜರುಗಿದೆ.

ಕಳೆದ ನ.19ರ ಮದ್ಯಾಹ್ನ 02:15ಕ್ಕೆ ಆಟೋದಲ್ಲಿ ಐದು ಬಾಳೆಗೊನೆಗಳನ್ನು ಕಾರಾಗೃಹದ ಮುಂಭಾಗಕ್ಕೆ ತಂದು ಇಟ್ಟಿದ್ದಾನೆ. ಕ್ಯಾಂಟೀನ್‌ನವರ ಸೂಚನೆ ಮೇರೆಗೆ ತಂದಿರುವುದಾಗಿ ತಿಳಿಸಿ ತೆರಳಿದ್ದಾನೆ. ಬಳಿಕ ಕಾರಾಗೃಹದ ಮುಖ್ಯ ದ್ವಾರದ ಉಸ್ತುವಾರಿಯಲ್ಲಿದ್ದ ಕೆ.ಎಸ್.ಐ.ಎಸ್.ಎಫ್ ಇನ್ಸ್‌ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಪ್ರೊಬೆಶನರಿ ಪಿಎಸ್ಐ ಪ್ರಭು ಎಸ್. ಹಾಗೂ ಸಿಬ್ಬಂದಿ ಬಾಳೆಗೊನೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ವೇಳೆ ಬಾಳೆಗೊನೆಯ ದಿಂಡನ್ನು ಕೊರೆದು ಅದರೊಳಗೆ ಗಾಂಜಾ ಹಾಗೂ ಸಿಗರೇಟನ್ನು ಟೇಪ್‌ನಲ್ಲಿ ಸುತ್ತಿ ಇಟ್ಟಿರುವುದು ಪತ್ತೆಯಾಗಿದೆ. ಅಧಿಕಾರಿಗಳು 123 ಗ್ರಾಂ ಗಾಂಜಾ ಮತ್ತು 40 ಸಿಗರೇಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ: ಗಾಂಜಾ ಮತ್ತಲ್ಲಿ ಕಿಡಿಗೇಡಿಗಳ ಕೃತ್ಯ?

0

ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ರಾತ್ರೋ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದ ಶ್ರೀರಾಂಪುರ ವ್ಯಾಪ್ತಿಯಲ್ಲಿ ಜರುಗಿದೆ.

ಇತ್ತೀಚೆಗೆ ನಂಜನಗೂಡಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಅದರಂತೆ ತಡರಾತ್ರಿ ಬಂದ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಆರೋಪಿಗಳು, ಕುಡಿದು ಗಾಂಜಾ ಮತ್ತಿನಲ್ಲಿ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ.
ಕಿಡಿಗೇಡಿಗಳನ್ನು ಬಂಧಿಸುವಂತೆ ಕಾರು ಮಾಲೀಕರು ಆಗ್ರಹ ಮಾಡಿದ್ದಾರೆ.

ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿರತೆ ದಾಳಿಗೆ 5 ವರ್ಷದ ಬಾಲಕಿ ಸಾವು; ಕಾಡಂಚಿನಲ್ಲಿ ಮೃತದೇಹ ಪತ್ತೆ!

0

ಚಿಕ್ಕಮಗಳೂರು:- ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ಚಿರತೆ ದಾಳಿಯಿಂದ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜರುಗಿದೆ.

ಸಾನ್ವಿ (5) ಮೃತ ಬಾಲಕಿ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿದೆ. ಈ ವೇಳೆ ಮಗು ಚೀರಾಟ ಕೇಳಿ ಪೋಷಕರು ಬಂದಿದ್ದಾರೆ. ಅವರ ಎದರಲ್ಲೇ ಚಿರತೆ ಮಗುವನ್ನು ಕಾಡಿಗೆ ಹೊತ್ತೊಯ್ದಿದೆ.

ಸ್ಥಳೀಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Power Cut: ಬೆಂಗಳೂರಿನ ಈ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳು ಪವರ್ ಕಟ್; ಎಲ್ಲೆಲ್ಲಿ?

0

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿರುವ ಕಾರಣ ಪವರ್ ಕಟ್ ಇರಲಿದೆ. ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹರ್ಷನಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಶಿವಕುಮಾರ ಸ್ವಾಮಿಜಿಹಳ್ಳಿ, ಗುಜಪ್ಪ ಸ್ವಾಮೀಜಿ ಲೇಔಟ್, ಶಿವಕುಮಾರ ಸ್ವಾಮೀಜಿ ಲೇಔಟ್, ದ್ಯಾವಕುಮಾರ ಸ್ವಾಮೀಜಿ ಲೇಔಟ್‌ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ತೋಟಗೆರೆ ಬಸವಣ್ಣ ದೇವಸ್ಥಾನ ಪ್ರದೇಶ, ಹೊಸಹಳ್ಳಿ ಪಾಳ್ಯ, ಸಿಡಿಪಿಒ ಸಮೀಪ, ಡ್ಯಾನಿಶ್ ಫಾರ್ಮ್, ಕೆಎಂಎಫ್ ಪ್ರದೇಶ, ಪಶುಸಂಗೋಪನಾ ಪ್ರದೇಶ, ಗುಣಿ ಅಗ್ರಹಾರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಪೈಪ್‌ಲೈನ್ ರಸ್ತೆ, ಮತ್ತು ಕೆರೆಗುಡ್ಡಹಳ್ಳಿ. ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹುರುಳಿಚಿಕ್ಕನಹಳ್ಳಿ, ಕೆಟಿಪುರ, ಐಐಎಚ್‌ಆರ್, ಐವರಕೊಂಡಪುರ, ಸೀಟಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ಎ. ಅಚ್ಯುತ ನಗರ, ಸೋಲದೇವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

error: Content is protected !!