Home Blog Page 98

ಸಂಗೀತದಿಂದ ಜನಸೇವೆ ಕಡೆಗೆ? ಅರಿಜಿತ್ ಸಿಂಗ್ ರಾಜಕೀಯದ ಹೊಸ ರಾಗ

ಕೋಟಿ ಕೋಟಿ ಅಭಿಮಾನಿಗಳನ್ನು ಹೊಂದಿರುವ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಗಾಯನ ಕ್ಷೇತ್ರಕ್ಕೆ ಫುಲ್ ಸ್ಟಾಪ್ ಹಾಕಿದ ನಿರ್ಧಾರವೇ ಅಚ್ಚರಿ ಮೂಡಿಸಿದ ಬೆನ್ನಲ್ಲೇ, ಇದೀಗ ಇನ್ನೊಂದು ಸಂಚಲನಕಾರಿ ಸುದ್ದಿ ಹೊರಬಿದ್ದಿದೆ. ಅರಿಜಿತ್ ಸಿಂಗ್ ರಾಜಕೀಯ ಪಕ್ಷ ಸ್ಥಾಪಿಸಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವ ಚಿಂತನೆಯಲ್ಲಿದ್ದಾರೆ ಎಂಬ ವರದಿ ಭಾರೀ ಚರ್ಚೆಗೆ ಕಾರಣವಾಗಿದೆ.

ಎನ್‌ಡಿಟಿವಿ ವರದಿ ಪ್ರಕಾರ, ಈ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅರಿಜಿತ್ ಸಿಂಗ್ ಸ್ಪರ್ಧಿಸುವುದಿಲ್ಲ. ಆದರೆ, ರಾಜಕೀಯ ಪಕ್ಷವನ್ನು ಕಟ್ಟಿಬಳೆಸಲು ದೀರ್ಘಾವಧಿಯ ಸಿದ್ಧತೆ ನಡೆಸುವ ಉದ್ದೇಶ ಅವರದ್ದಾಗಿದೆ. ರಾಜಕೀಯ ಕಣಕ್ಕೆ ಇಳಿಯುವುದು ಕೇವಲ ಘೋಷಣೆಯಿಂದ ಸಾಧ್ಯವಲ್ಲ ಎಂಬ ಅರಿವಿನೊಂದಿಗೆ ಅವರು ಮುಂದಿನ ಹೆಜ್ಜೆ ಇಡಲು ಸಜ್ಜಾಗಿದ್ದಾರೆ.

ಭಾರತದಲ್ಲಿ ಸಿನಿಮಾ ಕ್ಷೇತ್ರದ ಅನೇಕರು ರಾಜಕೀಯಕ್ಕೆ ಬಂದಿದ್ದಾರೆ. ಕೆಲವು ಗಾಯಕರು ರಾಜಕೀಯ ಪಕ್ಷಗಳ ಟಿಕೆಟ್ ಪಡೆದು ಸ್ಪರ್ಧಿಸಿದ್ದಾರೆ. ಆದರೆ, ಒಬ್ಬ ಗಾಯಕ ಸ್ವತಂತ್ರವಾಗಿ ಪಕ್ಷ ಸ್ಥಾಪಿಸಿ ರಾಜಕೀಯ ಭೂಮಿಕೆಗೆ ಇಳಿಯಲು ಮುಂದಾಗಿರುವುದು ಅಪರೂಪದ ಬೆಳವಣಿಗೆಯಾಗಿದೆ. ಈ ಕಾರಣದಿಂದಲೇ ಅರಿಜಿತ್ ಸಿಂಗ್ ಅವರ ನಿರ್ಧಾರ ವಿಭಿನ್ನವಾಗಿ ಕಾಣುತ್ತಿದೆ.

ಅರಿಜಿತ್ ಸಿಂಗ್ ಅವರ ವ್ಯಕ್ತಿತ್ವ ಸಂಗೀತಕ್ಕಷ್ಟೇ ಸೀಮಿತವಲ್ಲ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನವರಾದ ಅವರು, ತಮ್ಮ ಊರಿನ ಬಡವರಿಗಾಗಿ ಹಲವು ಸಾಮಾಜಿಕ ಯೋಜನೆಗಳನ್ನು ಕೈಗೊಂಡಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಜನರಿಗಾಗಿ 40 ರೂಪಾಯಿಗೆ ಊಟ ನೀಡುವ ರೆಸ್ಟೋರೆಂಟ್ ಆರಂಭಿಸಿರುವುದು ಅವರ ಮಾನವೀಯ ಮುಖವನ್ನು ತೋರಿಸುತ್ತದೆ.

ಸಾಮಾಜಿಕ ಸೇವೆಯನ್ನು ವ್ಯವಸ್ಥಿತವಾಗಿ ಮತ್ತು ವ್ಯಾಪಕವಾಗಿ ಮುಂದುವರಿಸಲು ರಾಜಕೀಯವೇ ಪರಿಣಾಮಕಾರಿ ಮಾರ್ಗ ಎಂಬ ನಿರ್ಣಯಕ್ಕೆ ಅವರು ಬಂದಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಇದೇ ಕಾರಣಕ್ಕೆ ಸಂಗೀತ ಜಗತ್ತಿನಿಂದ ಹಿಂದೆ ಸರಿದು ಜನಸೇವೆ ಹಾಗೂ ರಾಜಕೀಯದತ್ತ ಅವರು ಮುಖ ಮಾಡಿದ್ದಾರೆ ಎಂಬ ವಿಶ್ಲೇಷಣೆಗಳು ಇದೀಗ ಜೋರಾಗಿವೆ.

WPL 2026; 8 ವಿಕೆಟ್ ಗಳ ಭರ್ಜರಿ ಜಯದೊಂದಿಗೆ ಫೈನಲ್‌ಗೆ RCB ಎಂಟ್ರಿ!

0

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಮಹಿಳಾ ಪ್ರೀಮಿಯರ್ ಲೀಗ್ 2ನೇ ಆವೃತ್ತಿಯ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 8 ವಿಕೆಟ್‌ ಭರ್ಜರಿ ಜಯ ಸಾಧಿಸಿ ನೇರವಾಗಿ ಫೈನಲ್‌ಗೆ ಪ್ರವೇಶಿಸಿದೆ.

ಈ ಜಯವು ತಂಡದ ಇತಿಹಾಸದಲ್ಲಿ ಫಸ್ಟ್ ಟೈಮ್ ಸಾಧನೆಯಾಗಿದೆ. ಯುಪಿ ವಾರಿಯರ್ಸ್ ಮೊದಲು ಬ್ಯಾಟಿಂಗ್ ಆರಂಭಿಸಿ 8 ವಿಕೆಟ್ ನಷ್ಟಕ್ಕೆ 143 ರನ್‌ಗಳನ್ನಷ್ಟೇ ಗಳಿಸಿತು. ವಾರಿಯರ್ಸ್‌ ಪರ ದೀಪ್ತಿ ಶರ್ಮಾ 55 ರನ್, ನಾಯಕಿ ಮೆಗ್ ಲ್ಯಾನಿಂಗ್ 41 ರನ್ ಗಳಿಸಿದರೂ ಇತರ ಆಟಗಾರರು ಅಲ್ಪ ಮೊತ್ತಕ್ಕೆ ಔಟಾದರು. ಆರ್‌ಸಿಬಿ ಅಲ್ಪ ಗುರಿ ಬೆನ್ನಟ್ಟಿ ಚೇಸ್‌ಗೆ ಎದ್ದಾಗ, ಗ್ರೇಸ್ ಹ್ಯಾರಿಸ್ ಮೊದಲ ಓವರ್‌ನಿಂದಲೇ ಬ್ಯಾಟಿಂಗ್ ಪ್ರಾರಂಭಿಸಿ 37 ಎಸೆತಗಳಲ್ಲಿ 75 ರನ್ (2 ಸಿಕ್ಸರ್‌, 13 ಬೌಂಡರಿ) ಗಳಿಸಿದರು. ಜೊತೆಗೆ ನಾಯಕಿ ಸ್ಮೃತಿ ಮಂಧಾನ 27 ಎಸೆತಗಳಲ್ಲಿ 54 ರನ್ (2 ಸಿಕ್ಸರ್‌, 8 ಬೌಂಡರಿ) ಗಳಿಸಿ ತಂಡದ ಗೆಲುವಿಗೆ ಮಹತ್ವಪೂರ್ಣ ಪಾತ್ರ ವಹಿಸಿದರು. ಜಾರ್ಜಿಯಾ ವೋಲ್ 16 ರನ್ ನೀಡಿ ಮಿಂಚಿದರು.

ಪಂದ್ಯದ ಪ್ರಾರಂಭದಲ್ಲಿ ಮೆಗ್ ಲ್ಯಾನಿಂಗ್ ಮತ್ತು ದೀಪ್ತಿ ಶರ್ಮಾ ಪವರ್‌ ಪ್ಲೇ‌ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 50 ರನ್‌ ಕಲೆಹಾಕಿದರು. ಆದರೆ 9ನೇ ಓವರ್‌ನಲ್ಲಿ ನಾಡಿನ್ ಡಿ ಕ್ಲರ್ಕ್ ಮೊದಲ ಎಸೆತದಲ್ಲಿ ಮೆಗ್ ಲ್ಯಾನಿಂಗ್ ವಿಕೆಟ್ ಕಿತ್ತರು, ನಂತರ 5ನೇ ಎಸೆತದಲ್ಲಿ ಜೋನ್ಸ್ ವಿಕೆಟ್ ಉರುಳಿದರು. ಆದರೆ ಆರ್‌ಸಿಬಿ ಬ್ಯಾಟಿಂಗ್ ಆರ್ಭಟ ಮುಂದುವರಿದು, ಕೊನೆಗೆ ಕೇವಲ 13.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 147 ರನ್‌ ಬಾರಿಸಿ ಜಯವನ್ನು ಖಚಿತಪಡಿಸಿಕೊಂಡಿತು. ಬೌಲಿಂಗ್‌ನಲ್ಲಿ ಗ್ರೇಸ್ ಹ್ಯಾರಿಸ್ 2 ವಿಕೆಟ್, ಲೂರೆನ್ ಬೆಲ್ ಮತ್ತು ಶ್ರೇಯಾಂಕ ಪಾಟೀಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಸೋಫಿ ಎಕ್ಲಿಸ್ಟೋನ್ ಮತ್ತು ಸಿಮ್ರನ್ ಶೈಖಾ ಯುಪಿ ವಾರಿಯರ್ಸ್‌ ಪರ ಪ್ರಮುಖ ವಿಕೆಟ್‌ಗಳನ್ನು ಪಡೆದರು.
ಈ ಜಯದೊಂದಿಗೆ ಆರ್‌ಸಿಬಿ ಮಹಿಳಾ ತಂಡ ನೇರವಾಗಿ WPL ಫೈನಲ್‌ಗೆ ಲಗ್ಗೆಯಿಟ್ಟಿದೆ.

ಚಾಮರಾಜನಗರ| ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿತ; ಅದೃಷ್ಟವಶಾತ್ ತಪ್ಪಿದ ಅನಾಹುತ!

0

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದಲ್ಲಿ ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

34 ವರ್ಷದ ಎಲ್.ರವೀಶ್ ಚಾಕು ಇರಿತಕ್ಕೊಳಗಾದ ಯುವಕ. ಈತ ತಾಲೂಕಿನ ಕುಣಗಳ್ಳಿ ನಿವಾಸಿ. ಅದೃಷ್ಟವಶಾತ್ ರವೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರವೀಶ್​ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯೊಬ್ಬಳೊಂದಿಗೆ ಮದುವೆ ನಿಶ್ಚಯವಾಗಿತ್ತು. ಜ.30 ರಂದು ವೆಂಕಟೇಶ್ವರ ಮಹಲ್‌ನಲ್ಲಿ ಆರತಕ್ಷತೆ ನಡೆಯಬೇಕಾಗಿತ್ತು.

ಸುದ್ದಿಯ ಪ್ರಕಾರ, ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುವಾಗ ಕೊಳ್ಳೇಗಾಲದ ಎಂಜಿಎಸ್​ವಿ ಕಾಲೇಜು ರಸ್ತೆಯ ಬಳಿ ವರ ತೆರಳುತ್ತಿದ್ದ ಕಾರನ್ನು ಹಿಂಬಾಲಿಸಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಎಲ್. ರವೀಶ್ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದು, ಎಡಗೈ ತೊಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ. ಸದ್ಯ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ರವೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ರವೀಶ್ ಈ ಬಗ್ಗೆ ಮಾಧ್ಯಮದವರ ಜತೆ ಮಾತನಾಡಿ, “6 ತಿಂಗಳ ಹಿಂದೆಯಷ್ಟೇ ನನ್ನ ಎಂಗೇಜ್ಮೆಂಟ್ ನಿಶ್ಚಿತವಾಯಿತು. ಆರತಕ್ಷತೆಗೆ ತೆರಳುವಾಗ ಹಿಂಬದಿಯಿಂದ ಬಂದ ಕಾರಿನಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದರು. ಯಾರಿದ್ದಾರೆ ಎಂಬುದು ತಿಳಿಯುತ್ತಿಲ್ಲ” ಎಂದು ಹೇಳಿದರು. ಘಟನೆ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಕೇಸ್; ವೀರೇಂದ್ರ ಪಪ್ಪಿಗೆ ಶಾಕ್ ಕೊಟ್ಟ ED – 177.3 ಕೋಟಿ ಮೌಲ್ಯದ ಆಸ್ತಿ ಜಪ್ತಿ!

0

ಬೆಂಗಳೂರು: ‘ಕೈ’ ಶಾಸಕ ಕೆಸಿ ವೀರೇಂದ್ರ ವಿರುದ್ಧ ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣದ ಸಂಬಂಧ ಕೃಷಿ ಜಮೀನು, ನಿವಾಸ ಸೇರಿದಂತೆ 177.3 ಕೋಟಿ ರೂಪಾಯಿಯ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿದೆ.

ತನಿಖೆ ವೇಳೆ ಕೆಸಿ ವೀರೇಂದ್ರ ಮತ್ತು ಅವರ ಸಹಚರರು ಈ ಪ್ರಕರಣದ “ಮಾಸ್ಟರ್ ಮೈಂಡ್” ಆಗಿರುವುದು ದೃಢಪಟ್ಟಿದ್ದು, ನೂರಾರು ಬೇನಾಮಿ ಖಾತೆ ಬಳಸಿ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ED ಗೆ ದೊರೆತ ದಾಖಲೆಗಳಿಂದ ತಿಳಿದುಬಂದಿದೆ. 177.3 ಕೋಟಿ ರೂ. ಮೌಲ್ಯದ ಆಸ್ತಿ ಈ ಅಕ್ರಮ ಹಣದಿಂದ ಸಂಪಾದನೆಗೊಂಡಿರುವುದು ಪತ್ತೆಯಾಗಿದ್ದು, ಸಾಕ್ಷ್ಯಗಳ ಆಧಾರದ ಮೇಲೆ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

ಈ ಹಿಂದೆ ಪ್ರಕರಣದ ಭಾಗವಾಗಿ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ED ದಾಳಿ ನಡೆಸಿ ಚಿನ್ನ, ನಗದು, ಬೆಳ್ಳಿ, ವಾಹನಗಳನ್ನು ವಶಪಡಿಸಿಕೊಂಡಿತ್ತು. ಇದೀಗ ಒಟ್ಟಾರೆ 320 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ತನಿಖೆ ವೇಳೆ 2,300 ಕೋಟಿ ರೂ. ಅಧಿಕ ಅಕ್ರಮ ಹಣದ ವಹಿವಾಟು ನಡೆದಿರುವುದೂ ಪತ್ತೆಯಾಗಿದ್ದು, ED ತನಿಖೆ ಮುಂದುವರಿದಿದೆ.

ಅದ್ದೂರಿಯಾಗಿ ಜರುಗಿದ ರಂಗಪ್ಪಜ್ಜನ ಜಾತ್ರೆ

0

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಬೆಟಗೇರಿ-ನರಸಾಪುರ ಮಧ್ಯದಲ್ಲಿರುವ ಪೂಜ್ಯ ರಂಗಾವಧೂತರ ತಪೋಭೂಮಿಯಲ್ಲಿ ಪೂಜ್ಯ ವೀರಪ್ಪಜ್ಜ ಹಾಗೂ ಪೂಜ್ಯ ರಂಗಪ್ಪಜ್ಜ ಗುರು ಶಿಷ್ಯರ 97ನೇ ಜೋಡು ರಥೋತ್ಸವ ಜರುಗಿತು. ರಂಗಪ್ಪಜ್ಜನ ಮಠದಲ್ಲಿ ಅಲಂಕೃತವಾದ ಗಡ್ಡಿತೇರು ಪೂಜ್ಯ ವೀರಪ್ಪಜ್ಜನ ರಥ ಸಿದ್ಧಪಡಿಸಲಾಗಿತ್ತು. ಬೆಟಗೇರಿ ಮಂಜುನಾಥ ನಗರದ ನಾಗಲಿಂಗೇಶ್ವರ ಯುವಕ ಮಂಡಳಿ ಹಾಗೂ ಶಿವಾಜಿ ನಗರದ ವಿನಾಯಕ ಗೆಳೆಯರ ಬಳಗದವರು ಬೃಹತ್ ಗಾತ್ರದ ಹೂಮಾಲೆ ಅರ್ಪಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಗಣೇಶಸಿಂಗ್ ಬ್ಯಾಳಿ, ಅಮರೇಶ ಚ್ಯಾಗಿ, ನಿಂಗಪ್ಪ ಚೇಗೂರ, ಮೈಲಾರಪ್ಪ ಅರಣಿ, ರುದ್ರಪ್ಪ ಬಾದರದಿನ್ನಿ, ಭೋಜಪ್ಪ ಹೆಗ್ಗಡಿ, ಮಹದೇಹಸಾ ಮೇರವಾಡೆ, ಹೇಮಂತಗೌಡ ಬೆನಹಾಳ, ರಾಜು ಕಟಗಿ, ಮಲ್ಲೇಶಪ್ಪ ಐಲಿ, ವಿಜಯ ಕಬಾಡಿ, ದುರ್ಗಾಸಿಂಗ್ ಕಾಟೇವಾಲ, ರಂಗಪ್ಪ ದ್ಯಾವಣಸಿ, ನಗರಸಭಾ ಸದಸ್ಯರಾದ ರಾಘವೇಂದ್ರ ಯಳವತ್ತಿ, ಶಕುಂತಲಾ ಅಕ್ಕಿ ಸೇರಿದಂತೆ ನೂರಾರು ಸಾಧು ಸಂತರು ಸೇರಿದಂತೆ ಸಾವಿರಾರು ಸದ್ಭಕ್ತರು ಪಾಲ್ಗೊಂಡಿದ್ದರು.

ರಂಗಾವಧೂತರ ತಪೋಭೂಮಿಯಲ್ಲಿ ನಡೆದ ಜೋಡು ರಥೋತ್ಸವಕ್ಕೆ ಸಹಕರಿಸಿದ ಸಮಸ್ತ ಸದ್ಭಕ್ತರಿಗೆ, ದಾನಿಗಳಿಗೆ, ಗದಗ-ಬೆಟಗೇರಿ ನಗರಸಭೆ, ಹಾತಲಗೇರಿ, ಗ್ರಾಮ ಪಂಚಾಯಿತಿ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಒಂದು ವಾರದಿಂದ ಜರುಗಿದ ಪ್ರಸಾದವನ್ನು ಸ್ವಯಂ ಪ್ರೇರಣೆಯಇಂದ ಸಿದ್ಧಗೊಳಿಸಿದ್ದ ಚಿದಾನಂದ ಖಾಕಿ ಅವರುಗಳಿಗೆ ಟ್ರಸ್ಟ್ ಕಾರ್ಯದರ್ಶಿ ಗಣೇಶಸಿಂಗ್ ಬ್ಯಾಳಿ ಅಭಿನಂದಿಸಿದ್ದಾರೆ.

ಬೆಂಗಳೂರು| 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ!

0

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಅದ್ಧೂರಿಯಾಗಿ ಉದ್ಘಾಟಿಸಿದರು.

ಕನ್ನಡ ಮತ್ತು ಇತರ ಬಹುಭಾಷಾ ಚಿತ್ರರಂಗದ ಸಾಧನೆಗಳನ್ನು ಜಾಗತಿಕ ವೇದಿಕೆಗೆ ಪರಿಚಯಿಸುವ ಉದ್ದೇಶದಿಂದ ಈ ಮಹತ್ತರ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಸಕ ರಿಜ್ವಾನ್ ಅರ್ಶದ್ ಇದ್ದರು. ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಬಹುಭಾಷಾ ನಟ ಪ್ರಕಾಶ್ ರಾಜ್, ಖ್ಯಾತ ನಟಿ ರುಕ್ಮಿಣಿ ವಸಂತ್ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಉಪಸ್ಥಿತರಿದ್ದರು.

ಇದೇ ಸಮಯದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯ ಚಿದಾನಂದ ಪಟೇಲ್ ಸೇರಿದಂತೆ ಚಿತ್ರರಂಗ ಮತ್ತು ಆಡಳಿತ ವಲಯದ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದ ಮೂಲಕ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಸಿನಿ ಕಲೆಯ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ತಲುಪಿಸುವ ಪ್ರಯತ್ನವಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

`ನಿರಂತರ ಪ್ರಕಾಶನ’ಕ್ಕೆ ರಾಜ್ಯಮಟ್ಟದ ಪ್ರಕಾಶಕ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕಳೆದ ಎರಡೂವರೆ ದಶಕಗಳಿಂದ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ತನ್ನದೇ ಆದ ಹಿರಿಮೆ ಗಳಿಸಿ ಮೌಲಿಕ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಿಸಿ, ಅಕ್ಷರ ಸಂಸ್ಕೃತಿ ಉಳಿಸಿ, ಪುಸ್ತಕ ಸಂಸ್ಕೃತಿ ಬೆಳೆಸಲು ಪಣ ತೊಟ್ಟಿರುವ ಸ್ಥಳೀಯ ನಿರಂತರ ಪ್ರಕಾಶನದ ಪ್ರಕಾಶಕ, ಹಿರಿಯ ಸಾಹಿತಿ ಎ.ಎಸ್. ಮಕಾನದಾರ ಅವರು ರಾಜ್ಯಮಟ್ಟದ ಪ್ರಕಾಶನ ಪ್ರಶಸ್ತಿಗೆ ಭಾಜನರಾಗಿದ್ದಾರೆ

ಫೆಬ್ರವರಿ 7 ಮತ್ತು 8ರಂದು ಬೀದರ್ ಜಿಲ್ಲೆಯ ಬೇಲೂರಿನ ಶರಣ ಉರಿಲಿಂಗ ಪೆದ್ದಿ, ಶರಣೆ ಕಾಳವ್ವೆ ಉತ್ಸವ, ಲಿಂಗೈಕ್ಯ ಶಿವಲಿಂಗೇಶ್ವರ ಶಿವಯೋಗಿಗಳ 57ನೇ ಪುಣ್ಯ ಸ್ಮರಣೆ ನಿಮಿತ್ತ ಉರಿಲಿಂಗ ಪೆದ್ದಿ ಮಠದಲ್ಲಿ ಕರ್ನಾಟಕ ರಾಜ್ಯ ಮಟ್ಟದ ಪ್ರಥಮ ಪ್ರಕಾಶಕರ ಸಮ್ಮೇಳನದಲ್ಲಿ ಸಮಗ್ರ ಯೋಜನೆ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ಸತೀಶ್ ಹೊಸಮನಿಯವರು ಪ್ರಶಸ್ತಿ ಪ್ರದಾನ ಮಾಡುವರು.

ಪುಸ್ತಕೋದ್ಯಮಿ ಬಸವರಾಜ್ ಜಿ.ಕೊನೆಕ್ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಶರಣು ಸಲಗರ ಸಮಾರಂಭದ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಪುಸ್ತಕ ವ್ಯಾಪಾರಿ ಮತ್ತು ಪ್ರಕಾಶಕರ ಸಂಘದ ಜಿಯಾ ಉದ್ದಿತ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಉರಿಲಿಂಗಪೆದ್ದಿ ಸಂಸ್ಥಾನ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಖ್ಯಾತ ಕವಿ ಡಾ. ರಾಜಶೇಖರ್ ಮಠಪತಿ ಸಮಾರೋಪ ನುಡಿಗಳನ್ನಾಡುವರು.

ಇದೇ ಸಂದರ್ಭದಲ್ಲಿ ನಿರಂತರ ಪ್ರಕಾಶನದ ಜೊತೆಗೆ ವಿದ್ಯಾನಿಧಿ ಪ್ರಕಾಶನ, ಅಭಿನವ ಪ್ರಕಾಶನ, ಶಾರದಾ ಪ್ರಕಾಶನ, ಅಮರ ಪ್ರಕಾಶನ, ಶಿರಾಪುರ ಪ್ರಕಾಶನ, ಧರಿನಾಡು ಪ್ರಕಾಶನ, ಪೂಜಾ ಪ್ರಕಾಶನ ಸಂಸ್ಥೆಗಳ ಪ್ರಕಾಶಕರೂ ಪ್ರಕಾಶನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಜ. 31ರಂದು ಹಿಂದೂ ಸಮಾಜೋತ್ಸವ, ಶೋಭಾಯಾತ್ರೆ

0

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದೂ ಸಮಾಜೋತ್ಸವ ಸರ್ವ ಸಮಾಜದವರು ಸೇರಿ ನಡೆಸುವ ಕಾರ್ಯಕ್ರಮವಾಗಿದ್ದು, ಇದು ಒಂದು ಧಾರ್ಮಿಕ ಉತ್ಸವ ಅಲ್ಲ. ಸಮಾಜದ ಏಕತೆ, ಸಂಸ್ಕೃತಿಯ ಉಳಿವು ಮತ್ತು ಧಾರ್ಮಿಕ ಜಾಗೃತಿಯ ಪ್ರತೀಕವಾಗಿದೆ ಎಂದು ಸಮಿತಿ ಅಧ್ಯಕ್ಷ ಬಸವರಾಜ ಬಿಂಗಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಧಾರ್ಮಿಕ ಭಾವನೆ, ಶಾಂತಿ ಮತ್ತು ಸಹಕಾರವನ್ನು ಬೆಳೆಸುತ್ತವೆ. ಭವ್ಯ ಶೋಭಾಯಾತ್ರೆಯು ಜ. 31ರಂದು ಮಧ್ಯಾಹ್ನ 3 ಗಂಟೆಗೆ ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಮಠದಿಂದ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ಎಂದರು.

ಶೋಭಾಯಾತ್ರೆಯಲ್ಲಿ ಬೃಹತ್ ಕುಂಭಮೇಳ ನಡೆಯಲಿದ್ದು, ನೂರಾರು ಮಹಿಳೆಯರು ಕುಂಭಮೇಳದಲ್ಲಿ ಭಾಗವಹಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮ ಅದೇ ದಿನ ಸಾಯಂಕಾಲ 6 ಗಂಟೆಗೆ ಹಾತಲಗೇರಿ ರಸ್ತೆಯ ಮಾಳೇಕೊಪ್ಪಮಠ ಅವರ ಬಯಲು ಜಾಗೆಯ ಶ್ರೀ ಸಾಯಿಬಾಬಾ ದೇವಸ್ಥಾನದ ಹತ್ತಿರ ನಡೆಸಲಾಗುವುದು. ದಿಕ್ಸೂಚಿ ಭಾಷಣವನ್ನು ಕೃಷ್ಣಾ ಜೋಷಿ ನಡೆಸಿಕೊಡುವರು. ದಿವ್ಯ ಸಾನ್ನಿಧ್ಯವನ್ನು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪ.ಪೂ. ಡಾ. ಕಲ್ಲಯ್ಯಜ್ಜನವರು ವಹಿಸಿಕೊಳ್ಳಲಿದ್ದಾರೆ ಎಂದರು.

ಈ ವೇಳೆ ಹಿಂದೂ ಸಮಾಜೋತ್ಸವ ಸಮಿತಿ ಉಪಾಧ್ಯಕ್ಷ ಕೇಶವರಾಮ್ ಕೊಳ್ಳಿ, ಸಂಘಟನಾ ಕಾರ್ಯದರ್ಶಿ ಜಗದೀಶ್ ಎಸ್.ಪಿ, ಚಿನ್ಮಯಾನಂದ ಟೆಂಗಿನಕಾಯಿ, ಶಶಿಧರ ದಿಂಡೂರ, ರಘುನಾಥಸಾ ಮೆರವಾಡೆ, ರಾಜಣ್ಣ ಮಲ್ಲಾಡದ, ಮಂಜುನಾಥ ಕೊಟ್ನೆಕಲ್, ಚಂದ್ರಕಾಂತ ಚವ್ಹಾಣ, ಪ್ರೇಮಾ ಕಡೆಮನಿ, ಕಾರ್ಯದರ್ಶಿ ಪ್ರಕಾಶ ಉಗಲಾಟದ, ಶೈಲೇಶ್ ಬಾಗಮಾರ, ಹರೀಶ ಪೂಜಾರ, ರಾಜಶೇಖರ ಕುಂಬಿ, ನಾಗವೇಣಿ ಕಟ್ಟಿಮನಿ, ಡಾ. ಉಮೇಶ ಹಾದಿ, ಚಿನ್ಮಯಾನಂದ ಟೆಂಗಿನಕಾಯಿ ಮುಂತಾದವರು ಉಪಸ್ಥಿತರಿದ್ದರು.

ದೊಡ್ಡಬಳ್ಳಾಪುರ| ಶೋಭಾಯಾತ್ರೆ ವೇಳೆ ಮನೆ ಬಳಿ ಬಿದ್ದ ಅಪರಿಚಿತ ಡ್ರೋನ್; ಸ್ಥಳೀಯರಲ್ಲಿ ಆತಂಕ!

0

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ನಗರದ ಪಾಲನಜೋಗಹಳ್ಳಿ ಪ್ರದೇಶದಲ್ಲಿ ಮನೆ ಬಳಿ ಅಪರಿಚಿತ ಡ್ರೋನ್ ಬಿದ್ದು ಸ್ಥಳೀಯರಲ್ಲಿ ಭಯ ಮೂಡಿಸಿದೆ.

ಈ ಘಟನೆ ಹಿಂದೂ ಸಮಾಜೋತ್ಸವದ ಶೋಭಾಯಾತ್ರೆಯ ಸಮಯದಲ್ಲಿ ಸಂಭವಿಸಿತು. ಹಾರುತ್ತಿದ್ದ ಡ್ರೋನ್ ನೋಡಿದ ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿದರು. ಡ್ರೋನ್‌ನಲ್ಲಿ ಬ್ಯಾಟರಿ ಹಾಗೂ ಎಲೆಕ್ಟ್ರಿಕ್ ವೈರ್‌ಗಳಂತಹ ಸಾಮಗ್ರಿಗಳು ಕಂಡುಬಂದಿದ್ದವು. ಸ್ಫೋಟಕ ಹೊಂದಿರುವ ಸಂಭವನೆ ಬಗ್ಗೆ ಆತಂಕ ವ್ಯಕ್ತಪಡಿಸಿ, ಪೊಲೀಸ್‌ ಏಕ್ಸಪರ್ಟ್ ತಂಡ ಸ್ಥಳಕ್ಕೆ ತೆರಳಿ ಎರಡು–ಮೂರು ಗಂಟೆಗಳ ಪರಿಶೀಲನೆ ನಡೆಸಿತು.

ಪರಿಶೀಲನೆಯ ನಂತರ ಡ್ರೋನ್ ವಶಕ್ಕೆ ತೆಗೆದುಕೊಳ್ಳಲ್ಪಟ್ಟಿದ್ದು, ಪೊಲೀಸರು ಅದನ್ನು ಸುರಕ್ಷಿತವಾಗಿ ಸ್ಥಳದಿಂದ ಕಳಿಸಿದ್ದಾರೆ. ಡ್ರೋನ್ ಎಲ್ಲಿಂದ ಬಂದದ್ದು ಮತ್ತು ಅದರ ಉದ್ದೇಶವೇನು ಎಂಬ ವಿಚಾರದಲ್ಲಿ ಪೊಲೀಸ್ ತನಿಖೆ ಪ್ರಗತಿಯಲ್ಲಿದೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

‘ಸಾಧನೆಯ ಮೌನ ಶಿಲ್ಪಿ’ ಗ್ರಂಥ ಲೋಕಾರ್ಪಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಯಲ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಸಂಸ್ಥಾಪಕರಾದ ದಿವಂಗತ ಎಂ.ಎಂ. ಢಾಲಾಯತ ಗುರುಗಳ ಜೀವನಗಾಥೆ ಕುರಿತಂತೆ ಅವರ ಕೌಟುಂಬಿಕ ಹಿನ್ನೆಲೆ, ಬಾಲ್ಯಜೀವನ, ವಿದ್ಯಾಭ್ಯಾಸ, ವೃತ್ತಿ ಜೀವನ, ಶಿಕ್ಷಕರ ವೃತ್ತಿ ಆರಂಭ, ಎಂ.ಎಂ ಢಾಲಾಯತ ಗುರುಗಳು ಜನರಿಗೆ ನೀಡಿದ ಆರ್ಥಿಕ ನೆರವು ಹಾಗೂ ಸಮಾಜಸೇವೆಯನ್ನು ಒಳಗೊಂಡ ಒಂದು ಅದ್ಭುತ ಸಾರ್ಥಕ ಜೀವನದ ಕಥೆಯನ್ನು ಒಳಗೊಂಡ ‘ಸಾಧನೆಯ ಮೌನ ಶಿಲ್ಪಿ’ ಪುಸ್ತಕವನ್ನು ಡಿ.ಎಸ್.ಪಿ ಮುರ್ತುಜಾ ಖಾದ್ರಿ ಲೋಕಾರ್ಪಣೆಗೊಳಿಸಿದರು.

ಪುಸ್ತಕ ಬಿಡುಗಡೆ ಮಾಡುವ ಸಮಾರಂಭವನ್ನು ಸಹಶಿಕ್ಷಕ ಎಸ್.ವಿ. ಅಂಗಡಿ ನಡೆಸಿಕೊಟ್ಟರು. ವೇದಿಕೆಯ ಮೇಲೆ ಮುಖ್ಯ ಅತಿಥಿಗಳಾದ ಡಾ. ಪರಶುರಾಮ ಗುಡಿಮನಿ, ಶಾಲೆಯ ಅಧ್ಯಕ್ಷರಾದ ಎ.ಎಂ. ಢಾಲಾಯತ, ಮುಖ್ಯೋಪಾಧ್ಯಾಯ ಎಸ್.ಎಸ್. ಕುಂಬಾರ, ಸಹ ಶಿಕ್ಷಕರಾದ ಸಿ.ಎಚ್. ಕೊಪ್ಪಳ, ಸಹ ಶಿಕ್ಷಕರಾದ ಎಂ.ವಿ. ಫಿರಂಗಿ, ಸಾಹಿರಾಬಾನು ಢಾಲಾಯತ, ಮಮತಾಜ ಬೇಗಂ ಢಾಲಾಯತ, ಮಂಜುಳಾ ಉಮಚಗಿ, ಜಾಫರ ಖಾಜಿ, ಜೆ.ಜೆ. ಡಂಬಳ, ಕರೀಮ ಸುಣಗಾರ ಉಪಸ್ಥಿತರಿದ್ದರು.

error: Content is protected !!