Pahalgam Attack: ಕಾಶ್ಮೀರ ಪ್ರವಾಸ ಕೈಗೊಂಡಿದ್ದ ಬೆಂಗಳೂರು ಟೆಕ್ಕಿ ಉಗ್ರರ ದಾಳಿಗೆ ಬಲಿ!

0
Spread the love

ಬೆಂಗಳೂರು:- ಕಾಶ್ಮೀರ ಪ್ರವಾಸ ಕೈಗೊಂಡಿದ್ದ ಬೆಂಗಳೂರು ಟೆಕ್ಕಿಯೋರ್ವರು ಮಂಗಳವಾರ ನಡೆದ ಉಗ್ರರ ದಾಳಿಗೆ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಭರತ್ ಭೂಷಣ್ ಮೃತ ಟೆಕ್ಕಿ.

Advertisement

ಹೌದು, ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಶುಕ್ರವಾರ ಬೆಂಗಳೂರಿನಿಂದ ವೆಕೆಷನ್‌ಗಾಗಿ ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಮಂಗಳವಾರ ನಡೆದ ಉಗ್ರರ ಗುಂಡಿನ ದಾಳಿಯಿಂದ ಭರತ್ ಭೂಷಣ್ ಪ್ರಾಣಪಕ್ಷಿ ಹಾರಿಹೋಗಿದೆ.

ಪಹಲ್ಗಾಮ್‌ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್‌ಗೆ ಉಗ್ರರು ನೇರ ಶೂಟ್ ಮಾಡಿದ್ದಾರೆ. ಬುಲೆಟ್ ನೇರ ಭೂಷಣ್ ತಲೆಗೆ ಬಿದ್ದಿದ್ದು, ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೂಡಲೇ ಭೂಷಣ್ ಪರಿಶೀಲಿಸಿದ ಪತ್ನಿ, ಭೂಷಣ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here