HomeIndia Newsಪಹಲ್ಗಾಮ್ ದಾಳಿ ಎಫೆಕ್ಟ್: ಪಾಕ್‌ನಿಂದ ಆಮದಾಗುವ ಎಲ್ಲಾ ವಸ್ತುಗಳಿಗೆ ಭಾರತ ನಿರ್ಬಂಧ!?

ಪಹಲ್ಗಾಮ್ ದಾಳಿ ಎಫೆಕ್ಟ್: ಪಾಕ್‌ನಿಂದ ಆಮದಾಗುವ ಎಲ್ಲಾ ವಸ್ತುಗಳಿಗೆ ಭಾರತ ನಿರ್ಬಂಧ!?

For Dai;y Updates Join Our whatsapp Group

Spread the love

ನವದೆಹಲಿ:- ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಯಾವ ಸಮಯದಲ್ಲಿ ಯುದ್ಧ ಆಗುತ್ತೋ ಎಂಬ ಆತಂಕ ಎಲ್ಲರಲ್ಲೂ ಇದೆ.

ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕ್ ಮೇಲೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿರುವ ಭಾರತ ಇದೀಗ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿ ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳಿಗೆ ನಿಷೇಧ ಏರಿದೆ. ಭಾರತದ ಈ ನಿರ್ಧಾರದಿಂದ ಪಾಕ್ ಮತ್ತಷ್ಟು ಆರ್ಥಿಕ ಸಮಸ್ಯೆಗೆ ಒಳಗಾದರೆ, ಭಾರತದಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆಗಳಿದೆ.

ವಿದೇಶಿ ವ್ಯಾಪಾರ ನೀತಿ 2023ರ ಅನ್ವಯ ಈ ಘೋಷಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧ ಹೇರಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶಕ ತಿಳಿಸಿದ್ದಾರೆ.

ಪಾಕಿಸ್ತಾನದಿಂದ ಭಾರತ ಕೃಷಿ ಉತ್ಪನ್ನಗಳಾದ ಡ್ರೈಫ್ರೂಟ್ಸ್ (ಅಂಜೂರ, ದ್ರಾಕ್ಷಿ, ಬಾದಾಮಿ), ತಾಜಾ ಹಣ್ಣುಗಳು (ಡೇಟ್ಸ್), ಮತ್ತು ಕೆಲವು ಧಾನ್ಯಗಳನ್ನು ಮತ್ತು ಕಲ್ಲು ಉಪ್ಪು, ಸುಣ್ಣದ ಕಲ್ಲು, ಸಿಮೆಂಟ್ ಕಲ್ಲಿನಂತಹ ಖನಿಜ ಉತ್ಪನ್ನಗಳನ್ನು ಹಾಗೂ ಚರ್ಮದ ವಸ್ತುಗಳು, ಹತ್ತಿ, ಉಕ್ಕಿನ ಉತ್ಪನ್ನಗಳಂತಹ ಕೈಗಾರಿಕಾ ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತಿತ್ತು. ಇದರ ಜೊತೆಗೆ ಪಾಕ್‌ನಿಂದ ಆಪ್ಟಿಕಲ್ ಲೆನ್ಸ್‌ಗಳು, ಕೆಲವು ಮಸಾಲೆ ಪದಾರ್ಥಗಳು ಭಾರತಕ್ಕೆ ಬರುತ್ತಿತ್ತು.

ಆಮದು ನಿಷೇಧ ಮಾಡಿದ ಹಿನ್ನೆಲೆ ಭಾರತದ ಮೇಲೆ ಹಲವು ರೀತಿಯ ಪರಿಣಾಮ ಬೀರಲಿದೆ. ಒಣ ಹಣ್ಣುಗಳು ಮತ್ತು ಕೃಷಿ ಉತ್ಪನ್ನಗಳ ಬೆಲೆ ಏರಿಕೆ ಕಾಶ್ಮೀರ ಮತ್ತು ಇತರ ಪ್ರದೇಶಗಳಿಂದ ಒಣ ಹಣ್ಣುಗಳ ಆಮದು ಕಡಿಮೆಯಾದರೆ ಈ ಉತ್ಪನ್ನಗಳ ಬೆಲೆ ಗಗನಕ್ಕೇರಬಹುದು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!