ಬೆಂಗಳೂರು:– ಜಮ್ಮು ಕಾಶ್ಮೀರದ ಪಹಲ್ಗಾಮ್ ಕಣಿವೆಯಲ್ಲಿ ಉಗ್ರರು ಮಂಗಳವಾರ ನಡೆಸಿದ ಭೀಕರ ದಾಳಿಯಲ್ಲಿ ಬೆಂಗಳೂರಿನ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಮಧುಸೂದನ್ ಎಂದು ಗುರುತಿಸಲಾಗಿದೆ.
Advertisement
ಮೃತ ಮಧುಸೂದನ್ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಕಳೆದ ಎರಡು ದಿನದ ಹಿಂದೆ ಮಧುಸೂದನ್ ಅವರು ಕುಟುಂಬ ಸಮೇತ ಕಾಶ್ಮೀರಕ್ಕೆ ತೆರಳಿದರು. ಆದರೆ ಮಂಗಳವಾರ ನಡೆದ ಉಗ್ರರ ಭೀಕರ ದಾಳಿಗೆ ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕ ಮೂವರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈಗಾಗಲೇ ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಮೃತಪಟ್ಟಿದ್ದಾರೆ.
ಇನ್ನೂ ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ಒಟ್ಟು 26 ಮಂದಿ ಬಲಿಯಾಗಿದ್ದಾರೆ.