Pahalgam Terror Attack: ಸೌದಿ ಪ್ರವಾಸ ಮೊಟಕುಗೊಳಿಸಿ ಮೋದಿ ವಾಪಸ್: ದೆಹಲಿಗೆ ಬರುತ್ತಿದ್ದಂತೆ ತುರ್ತು ಸಭೆ!

0
Spread the love

ನವದೆಹಲಿ/ ಶ್ರೀನಗರ:- ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದಾರೆ.

Advertisement

ಇನ್ನೂ ಇಂದು ಮುಂಜಾನೆ ನವದೆಹಲಿಗೆ ಬರುತ್ತಿದ್ದಂತೆಯೇ ನರೇಂದ್ರ ಮೋದಿ ಅವರು, ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕುರಿತು ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿಯೇ ತುರ್ತು ಸಭೆ ನಡೆಸಿದರು. ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಂಕ್ಷಿಪ್ತ ಚರ್ಚೆ ನಡೆಸಿದರು.

ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಪೂರ್ವ ನಿಗದಿ ಕಾರ್ಯಕ್ರಮದ ಪ್ರಕಾರ ಇಂದು ರಾತ್ರಿ ಮೋದಿ ಮರಳಬೇಕಿತ್ತು. ಆದರೆ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದಾರೆ.


Spread the love

LEAVE A REPLY

Please enter your comment!
Please enter your name here