HomeWorld Newsಮಸೂದ್ ಅಜರ್‌ ಸುಳಿವು ನೀಡಿದವರಿಗೆ 24 ಲಕ್ಷ ರೂ. ಬಹುಮಾನ ಘೋಷಿಸಿದ ಪಾಕಿಸ್ತಾನ!

ಮಸೂದ್ ಅಜರ್‌ ಸುಳಿವು ನೀಡಿದವರಿಗೆ 24 ಲಕ್ಷ ರೂ. ಬಹುಮಾನ ಘೋಷಿಸಿದ ಪಾಕಿಸ್ತಾನ!

For Dai;y Updates Join Our whatsapp Group

ಇಸ್ಲಾಮಾಬಾದ್: ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ ಸುಳಿವು ನೀಡುವವರಿಗೆ 24 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಿಸಿದೆ.

ಪಾಕಿಸ್ತಾನದ ಫೆಡರಲ್ ತನಿಖಾ ಸಂಸ್ಥೆ (ಎಫ್‌ಐಎ) ಅಜರ್‌ನನ್ನು ತನ್ನ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿ ಮುಂದುವರಿಸಿದೆ.

ಅಕ್ಟೋಬರ್ 26ರಿಂದ 30ರವರೆಗೆ ಪ್ಯಾರಿಸ್‌ನಲ್ಲಿ ನಡೆಯಲಿರುವ ಹಣಕಾಸು ಕಾರ್ಯಪಡೆ (ಎಫ್‌ಎಟಿಎಫ್) ಸಭೆಗೂ ಮುನ್ನ ಈ ಬೆಳವಣಿಗೆ ನಡೆದಿದೆ. ಅಜರ್ ಪಾಕಿಸ್ತಾನದಲ್ಲಿಲ್ಲ, ಅಫ್ಘಾನಿಸ್ತಾನಕ್ಕೆ ಪರಾರಿಯಾಗಿದ್ದಾನೆ ಎಂದು ಪಾಕಿಸ್ತಾನ ಹಲವು ವರ್ಷಗಳಿಂದ ಹೇಳಿಕೊಂಡು ಬಂದಿದೆ.

ಆದರೆ, ಎಫ್‌ಐಎಯ ಅಧಿಕೃತ ದಾಖಲೆಗಳಲ್ಲಿ, ವಿಶೇಷವಾಗಿ 2026ರ ‘ರೆಡ್ ಬುಕ್’ನಲ್ಲಿ ಮಸೂದ್ ಅಜರ್‌ನ ಹೆಸರು ಇನ್ನೂ ಇದೆ. 58 ವರ್ಷದ ಅಜರ್ ಜೈಶ್-ಎ-ಮೊಹಮ್ಮದ್ ಸಂಘಟನೆಯ ಸ್ಥಾಪಕ ಹಾಗೂ ಮುಖ್ಯಸ್ಥನಾಗಿದ್ದು, ಭಾರತದಲ್ಲಿ ನಡೆದ ಹಲವು ಉಗ್ರ ದಾಳಿಗಳೊಂದಿಗೆ ಈ ಸಂಘಟನೆಗೆ ನಂಟಿದೆ ಎಂದು ಆರೋಪಿಸಲಾಗಿದೆ.

ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಚಟುವಟಿಕೆಗಳು ಬಹವಾಲ್‌ಪುರ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಬಂಧಿಸಿವೆ ಎನ್ನಲಾಗಿದೆ. ‘ಆಪರೇಷನ್ ಸಿಂಧೂರ್’ ವೇಳೆ ಭಾರತದ ದಾಳಿಗೆ ಗುರಿಯಾದ ಸ್ಥಳಗಳ ಪೈಕಿ ಬಹವಾಲ್‌ಪುರವೂ ಒಂದಾಗಿತ್ತು.

ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಘೋಷಿಸಿದೆ. 2001ರ ಸಂಸತ್ ಭವನ ದಾಳಿ, 2016ರ ಪಠಾಣ್‌ಕೋಟ್ ವಾಯುನೆಲೆ ದಾಳಿ ಹಾಗೂ 2019ರ ಪುಲ್ವಾಮಾ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ಹಲವು ಉಗ್ರ ದಾಳಿಗಳೊಂದಿಗೆ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ನಂಟು ಇದೆ ಎಂದು ಆರೋಪಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img