ಹಿಂದಿನ ಸರ್ಕಾರ ಮಾಡಿದ ತಪ್ಪಿನಿಂದಾಗಿ ಪೋಷಕರು ಹಾಗೂ ಮಕ್ಕಳು ತೊಂದರೆಗೆ ಸಿಲುಕಿದ್ದಾರೆ: ಮಧು ಬಂಗಾರಪ್ಪ

0
Spread the love

ಬೆಂಗಳೂರು: ಹಿಂದಿನ ಸರ್ಕಾರ ಮಾಡಿದ ತಪ್ಪಿನಿಂದಾಗಿ ಪೋಷಕರು ಹಾಗೂ ಮಕ್ಕಳು ತೊಂದರೆಗೆ ಸಿಲುಕಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಹಲವು ಪೋಷಕರು ಮಕ್ಕಳ ದಾಖಲಾತಿ ವಯೋಮಿತಿ ಸಡಿಲಿಕೆ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿನಗರದಲ್ಲಿ ಮಾತನಾಡಿದ ಅವರು,

Advertisement

ಹಿಂದಿನ ಸರ್ಕಾರ ಮಾಡಿದ ತಪ್ಪಿನಿಂದ ಈ ಗೊಂದಲ ಉಂಟಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಅವರು ಮಾರ್ಗಸೂಚಿಗಳನ್ನು ರೂಪಿಸಿದ್ದರು. ಆದರೆ ನಾವು ಅದನ್ನು ವಿರೋಧಿಸುತ್ತೇವೆ. ಹಾಗಾಗಿ ಈ ವಿಷಯವನ್ನು ಪರಿಶೀಲಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಕಳುಹಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ, ಎಸ್‌ಇಪಿ ಆಯೋಗದಿಂದ ಮಾರ್ಗಸೂಚಿಗಳನ್ನು ಪಡೆದ ಕೂಡಲೇ ಅದನ್ನು ಜಾರಿಗೆ ತರುವುದಾಗಿ ಅವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here