HomeBengaluru Newsಪೋಷಕರೇ ಹುಷಾರ್: ಕರ್ನಾಟಕದಲ್ಲಿ ಮಕ್ಕಳನ್ನೇ ಹೆಚ್ಚು ಬಾಧಿಸುತ್ತಿದೆ ಮಹಾಮಾರಿ ಡೆಂಗ್ಯೂ!

ಪೋಷಕರೇ ಹುಷಾರ್: ಕರ್ನಾಟಕದಲ್ಲಿ ಮಕ್ಕಳನ್ನೇ ಹೆಚ್ಚು ಬಾಧಿಸುತ್ತಿದೆ ಮಹಾಮಾರಿ ಡೆಂಗ್ಯೂ!

For Dai;y Updates Join Our whatsapp Group

Spread the love

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗಿದ್ದು, ಮಕ್ಕಳಲ್ಲಿ ಹೆಚ್ಚು ಕೇಸ್ ಪತ್ತೆ ಆಗುತ್ತಿದೆ.

ಕಳೆದ ಒಂದು ತಿಂಗಳಿನಿಂದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಡೆಂಗ್ಯೂ ಹೆಚ್ಚಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 8658 ಪ್ರಕರಣಗಳು ದಾಖಲಾಗಿವೆ. ಏಳು ಜನ ಮೃತಪಟ್ಟಿದ್ದಾರೆ. ಆದರೆ ಈಗ ಆತಂಕಕ್ಕೆ ಕಾರಣವಾಗಿರುವುದು ಡೆಂಗ್ಯೂಗೆ ಮಕ್ಕಳಲ್ಲೇ ಹೆಚ್ಚು ಭಾದಿತರಾಗುತ್ತಿರುವುದು.

ಕಳೆದ 24 ಗಂಟೆಯಲ್ಲಿ 1 ರಿಂದ 18 ವರ್ಷ ಒಳಗಿನ 154 ಮಕ್ಕಳಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಒಟ್ಟು ಜನವರಿಯಿಂದ ಇಲ್ಲಿಯವರೆಗೆ 1 ರಿಂದ 18 ವರ್ಷ ವಯಸ್ಸಿನ 2395 ಮಕ್ಕಳಿಗೆ ಡೆಂಗ್ಯೂ ಬಾಧಿಸಿದೆ. ಹೀಗಾಗಿ ಪೋಷಕರು ಮಕ್ಕಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ವೈದ್ಯರು ಸೂಚಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ 1 ವರ್ಷದೊಳಗಿನ ಏಳು ಮಕ್ಕಳಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಒಂದು ವಾರದ ಹಿಂದೆ ನಾಲ್ಕು ಮಕ್ಕಳಲ್ಲಿ ಕಾಣಿಸಿಕೊಂಡಿತ್ತು. ಜನೆವರಿಯಿಂದ ಒಟ್ಟು 150 ಮಕ್ಕಳಿಗೆ ಡೆಂಗ್ಯೂ ಪಾಸಿಟಿವ್ ಬಂದಿಸಿದೆ.

ಕಳೆದ 24 ಗಂಟೆಯಲ್ಲಿ 1 ವರ್ಷದಿಂದ 18 ವರ್ಷದೊಳಗಿನ 154 ಮಕ್ಕಳಿಗೆ ಡೆಂಗ್ಯೂ ಬಂದಿದೆ. ಒಂದು ವಾರದ ಹಿಂದೆ 1 ವರ್ಷದಿಂದ 18 ವರ್ಷದೊಳಗಿನ 44 ಮಕ್ಕಳಿಗೆ ಡೆಂಗ್ಯೂ ಬಾಧಿಸಿತ್ತು. ಜನವರಿಯಿಂದ ಇಲ್ಲಿಯವರೆಗೆ ಒಟ್ಟು 2395 ಮಕ್ಕಳಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!