ಡಂಬಳ: ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಶಿಕ್ಷಣ ಇಲಾಖೆ ನಾನಾ ರೀತಿಯ ಯೋಜನೆಗಳನ್ನು ಕೈಗೊಂಡಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಹೋಬಳಿಯ ವೆಂಕಟಾಪೂರ ಗ್ರಾಮದ ಹತ್ತಿರ ಪೋಷಕರೇ ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಕುರಿ ಕಾಯುವ ಕೆಲಸಕ್ಕೆ ತೊಡಗಿಸಿರುವುದು ಕಂಡುಬಂದಿದೆ. ಅಲ್ಲದೆ ಹಳ್ಳಿಕೇರಿ ಮುಖ್ಯ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲು ಮಾರುವ ಸ್ಥಳದಲ್ಲಿ ಶಾಲೆ ಬಿಟ್ಟು ಕಬ್ಬಿನ ಹಾಲು ಮಾರುತ್ತಿರುವುದು ಕಂಡು ಬಂದಿತು.
Trending Now



