ಇದಪ್ಪ ಭಕ್ತಿ ಅಂದ್ರೆ: ದರ್ಶನಕ್ಕೆ ಸಿಗದ ಪಾಸ್; ತಿಮ್ಮಪ್ಪನನ್ನೇ ಮನೆಗೆ ಕರೆಸಿದ ಭಕ್ತ!

0
Spread the love

ಬೆಂಗಳೂರು:-ವೈಕುಂಠ ಏಕಾದಶಿ ಹಿನ್ನೆಲೆ ವೆಂಕಟೇಶ್ವರನ ಪಾಸ್ ಸಿಗದೇ ಇದ್ದಿದ್ದಕ್ಕೆ ಬೆಂಗಳೂರಿನ ಭಕ್ತನೊಬ್ಬ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ್ದಾನೆ.

Advertisement

ಇಂದು ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಅನ್ನೋ ನಂಬಿಕೆ ಲಕ್ಷಾಂತರ ಭಕ್ತಾದಿಗಳಲ್ಲಿ ಇರುತ್ತದೆ. ಆದ್ರೆ ಟಿಕೆಟ್ ಎಲ್ಲರಿಗೂ ಸಿಗಲ್ಲ. ಈ ಹಿನ್ನಲೆ, ಬೆಂಗಳೂರಿನ ತಿರುಪತಿ ತಿಮ್ಮಪ್ಪನ ಅಪ್ಪಟ್ಟ ಭಕ್ತನೊಬ್ಬ, ಟಿಕೆಟ್ ಸಿಗದೇ ಇದ್ದಿದ್ದಕ್ಕೆ ಬೆಂಗಳೂರಿನ ತನ್ನ ಮನೆಯಲ್ಲೇ ವೆಂಕಟೇಶ್ವರ ಮೂರ್ತಿಯನ್ನು ನಿರ್ಮಿಸಿದ್ದಾರೆ. ಸುಮಾರು 8 ಅಡಿ ಎತ್ತರದಲ್ಲಿ ಬಾಲಾಜಿ ಮೂರ್ತಿಯನ್ನು ನಿರ್ಮಾಣ ಮಾಡಿದ್ದಾರೆ. ಹತ್ತಿ, ಬಟ್ಟೆ, ಪೇಯಿಂಟ್‌ ಮೂಲಕ ಬಾಲಾಜಿಯನ್ನು ಅಲಂಕರಿಸಲಾಗಿದೆ.

ಜಯನಗರದ ಉಷಾ ಅಪಾರ್ಟ್ಮೆಂಟ್ ನಿವಾಸಿಯಾಗಿರೋ ದೀಪಕ್, ಕಳೆದ 9 ವರ್ಷದಿಂದ ಪ್ರತಿ ತಿಂಗಳು ತಿರುಪತಿ ಬೆಟ್ಟ ಹತ್ತಿಕೊಂಡು ದರ್ಶನ ಮಾಡುತ್ತಿದ್ದರು. ಆದ್ರೇ ಇಂದು ಬಾಲಾಜಿ ದರ್ಶನ ಸಿಗದ ಹಿನ್ನೆಲೆ ಮನೆಯಲ್ಲೇ ದೇಗುಲ ನಿರ್ಮಿಸಿದ್ದಾರೆ. ವೆಂಕಟೇಶ್ವರ ಮೂರ್ತಿ ಜೊತೆ ಲಕ್ಷ್ಮಿ, ವೆಂಕಟೇಶ್ವರ ತೂಗು ಉಯ್ಯಾಲೆ, ವೈಕುಂಠ ದ್ವಾರ ನಿರ್ಮಿಸಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಸ್ಥಳೀಯ ಜನ ಬರುತ್ತಿದ್ದಾರೆ.

ಒಟ್ಟಾರೆ ಈ ಭಕ್ತನ ಭಕ್ತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.


Spread the love

LEAVE A REPLY

Please enter your comment!
Please enter your name here