6 ತಿಂಗಳ ಬಳಿಕ ಪವಿತ್ರಾ ಗೌಡ ರಿಲೀಸ್: ನಗು ನಗುತ್ತಲೆ ಜೈಲಿನಿಂದ ಹೊರ ಬಂದ ದರ್ಶನ್ ಗೆಳತಿ

0
Spread the love

ರೇಣುಕಾಸ್ವಾಮಿ ಕೊಲೆ ಕೇಸ್​​ ನಲ್ಲಿ 1 ಆರೋಪಿಯಾಗಿದ್ದ ನಟಿ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಿಂದ ಬಿಡುಗಡೆ ಆಗಿದ್ದಾರೆ. ಬೆಳಗ್ಗೆಯಿಂದಲೇ ಮಗಳಿಗಾಗಿ ಜೈಲಿನ ಬಾಗಿಲಲ್ಲೇ ಕಾದಿದ್ದ ತಾಯಿ ಮಗಳು ಬಿಡುಗಡೆ ಆಗ್ತಿದ್ದಂಗೆ ಅಲ್ಲೇ ಇದ್ದ ಮುನೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ.

Advertisement

ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ಮಗಳನ್ನು ನೋಡಲು ಪ್ರತಿ ವಾರ ಜೈಲಿಗೆ ಬರ್ತಿದ್ದ ಪವಿತ್ರಾ ಗೌಡ ತಾಯಿ ಇಂದು ಮಗಳು ಬಿಡುಗಡೆಯಾದ ಖುಷಿಯಲ್ಲಿದ್ದಾರೆ. ಮಗಳನ್ನು ಮನೆಗೆ ಕರೆದುಕೊಂಡು ಹೋಗಲಿ ಬೆಳಗ್ಗೆಯೇ ಜೈಲಿನ ಬಳಿ ಕಾದು ನಿಂತಿದ್ರು. ಮಗಳು ಹೊರಗೆ ಬರ್ತಿದ್ದಂತೆ ಖುಷಿಯಲ್ಲಿ ಮಗಳನ್ನು ತಬ್ಬಿಕೊಂಡು ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಪರಪ್ಪನ ಅಗ್ರಹಾರದ ಬಳಿ ಇರುವ ಮುನೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ಪವಿತ್ರಾ ತಾಯಿ ಮಗಳ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವರಿಗೆ ನಿಂಬೆಹಣ್ಣಿನ ಹಾರ ಹಾಕಿ ಪೂಜೆ ಮಾಡಿದ್ದಾರೆ.

ಆರು ತಿಂಗಳ ಬಳಿಕ ಪವಿತ್ರಾ ಗೌಡ ಜೈಲಿನಿಂದ ಹೊರ ಬಂದಿದ್ದು ನಗು ನಗುತ್ತಲೆ ಮನೆ ಕಡೆ ಹೊರಟ್ಟಿದ್ದಾಋಎ.  ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್‌ ಬಿಡುಗಡೆಯಾಗಿದ್ದಾನೆ.

ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ.


Spread the love

LEAVE A REPLY

Please enter your comment!
Please enter your name here