ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಪವಿತ್ರಾ ಗೌಡ

0
Spread the love

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಜೈಲಿಗೆ ಹೋಗಿ ಬಂದಿರುವ ನಟಿ ಪವಿತ್ರಾ ಗೌಡ ಜೈಲಿನಿಂದ ಹೊರ ಬಂದ ಬಳಿಕ ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇದೀಗ ಅಂತೆಯೇ ಮತ್ತೊಂದು ಶಕ್ತಿ ದೇವತೆಯ ಮೊರೆ ಹೋಗಿದ್ದಾರೆ ನಟಿ ಪವಿತ್ರಾ ಗೌಡ.

Advertisement

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ೧ ಆರೋಪಿಯಾಗಿ ಸುಮಾರು ಏಳು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ಪವಿತ್ರಾ ಗೌಡ ಜಾಮೀನಿನ ಮೂಲಕ ಹೊರ ಬಂದಿದ್ದಾರೆ. ಸದ್ಯ ಜೈಲಿನಿಂದ ಹೊರ ಬಂದಿರುವ ನಟಿ ಬ್ಯಾಕ್‌ ಟು ಬ್ಯಾಕ್‌ ಟೆಂಪಲ್‌ ರನ್‌ ಮಾಡ್ತಿದ್ದಾರೆ.

ಇತ್ತೀಚೆಗೆ ನಿಮಿಷಾಂಭ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಪವಿತ್ರಾ ಗೌಡ ಅವರು ಈಗ ಬನಶಂಕರಿ ದೇವಿಯ ಮೊರೆ ಹೋಗಿದ್ದಾರೆ. ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿರುವ ನಟಿ ಪವಿತ್ರ ಗೌಡ ಅವರು ದೇವಿಗೆ ಸೀರೆ, ಮಡಲಕ್ಕಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಂಗಳವಾರವಾದ ಇಂದು ಶಕ್ತಿ ದೇವತೆ ಬನಶಂಕರಿ ಅಮ್ಮನವರ ದರ್ಶನಕ್ಕೆ ಭಕ್ತರು ಆಗಮಿಸುತ್ತಾರೆ. ಮಂಗಳವಾರದ ದಿನ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರೆ ಶುಭವಾಗಲಿದೆ ಅನ್ನೋದು ಭಕ್ತರ ನಂಬಿಕೆ. ಇದೇ ಕಾರಣಕ್ಕೆ ಇಂದು ಬನಶಂಕರಿ ದೇವಸ್ಥಾನಕ್ಕೆ  ಭೇಟಿ ನೀಡಿದ್ದ ನಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here