Murder Case: ಇಂದು ಪವಿತ್ರಾಗೌಡ ಜಾಮೀನು ಭವಿಷ್ಯ; ಜೈಲಿಂದ ಹೊರಗೆ ಬರ್ತಾರಾ ಲಿಪ್ಸ್ಟಿಕ್ ರಾಣಿ!

0
Spread the love

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪವಿತ್ರಾಗೌಡ ಕೊಲೆ ಪ್ರಕರಣದಲ್ಲಿ ಆರೋಪಿ 1 ಆಗಿದ್ದು, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಪವಿತ್ರಾಗೌಡ ಜೈಲಿನಿಂದ ಹೇಗಾದರೂ ಸರಿ ಹೊರಗೆ ಬರಬೇಕೆಂದು ಸಾಕಷ್ಟು ಕಷ್ಟಪಡುತ್ತಿದ್ದಾರೆ. ಇಂದು ಜಾಮೀನು ವಿಚಾರ ಇತ್ಯರ್ಥವಾಗಲಿದೆ.

Advertisement

ಜಾಮೀನು ಅರ್ಜಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ ಕೋರ್ಟ್ ಇಂದು ಆದೇಶ ಹೊರಡಿಸಲಿದೆ. ಇಂದು ಪವಿತ್ರಾಗೌಡ ಜಾಮೀನು ಆದೇಶ ಪ್ರಕಟಿಸಲಿರೋ ಕೋರ್ಟ್ ನತ್ತ ಪವಿತ್ರಾ ಫ್ಯಾಮಿಲಿ ಚಿತ್ತ ನೆಟ್ಟಿದೆ. ಸಿಟಿ ಸಿವಿಲ್ ಕೋರ್ಟ್ ನಿಂದ ಆದೇಶ ಪ್ರಕಟವಾಗಲಿದೆ.

ನಟಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕೇಸ್​​ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ರೇಣುಕಾಸ್ವಾಮಿ ಕೇಸ್​​ನಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ವಾದ ಪ್ರತಿವಾದ ಮುಕ್ತಾಯವಾಗಿದ್ದು ಆಗಸ್ಟ್ 31 ಕ್ಕೆ ಆದೇಶ ಕಾಯ್ದಿರಿಸಲಾಗಿತ್ತು. ರೇಣುಕಾಸ್ವಾಮಿ ಕೇಸ್​​ನಲ್ಲಿ ನಟಿ ಪವಿತ್ರ ಗೌಡ ಜಾಮೀನು‌ ಕೋರಿ ಅರ್ಜಿ‌ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆದಿತ್ತು. ಸಿಸಿಎಚ್ 57 ರಲ್ಲಿ ಜಾಮೀನು‌ ಅರ್ಜಿ ವಿಚಾರಣೆ ಮಾಡಿದ್ದು ಪವಿತ್ರಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು.

ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮೊನ್ನೆ ವಿಚಾರಣೆ ನಡೆಸಿದ ಕೋರ್ಟ್‌ ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸಬಾಸ್ಟಿನ್ ವಾದ ಮಾಡಲಿದ್ದಾರೆ.


Spread the love

LEAVE A REPLY

Please enter your comment!
Please enter your name here