ಮೈಸೂರು: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೆಲುಗು ಚಿತ್ರರಂಗದ ಸ್ಟಾರ್ ನಟ ರಾಮ್ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಪೆದ್ದಿ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಈ ವೇಳೆ ಮೈಸೂರು ನಿವಾಸದಲ್ಲಿ ಸಿಎಂ ಭೇಟಿಯಾದರು.
ಸಿದ್ದರಾಮಯ್ಯಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ನಟ ಗೌರವಿಸಿದರು. ಈ ವೇಳೆ ಸಚಿವ ಸಂತೋಷ್ ಲಾಡ್, ಸಿಎಂ ಪುತ್ರ ಹಾಗೂ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಕೂಡ ಇದ್ದರು. ರಾಮ್ ಚರಣ್ ನಾಯಕನಾಗಿ ಅಭಿನಯಿಸುತ್ತಿರುವ ಪೆದ್ದಿ ಚಿತ್ರೀಕರಣ ಮೈಸೂರಿನಲ್ಲಿ ಭರದಿಂದ ಸಾಗುತ್ತಿದೆ. ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್ವೊಂದನ್ನು ಈಚೆಗೆ ಶೂಟಿಂಗ್ ನಡೆಸಲಾಗಿದೆ.
1,000 ಡ್ಯಾನ್ಸರ್ಸ್ ಜೊತೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಖ್ಯಾತ ಡ್ಯಾನ್ಸ್ ಮಾಸ್ಟರ್ ಜಾನಿ ಈ ಹಾಡಿಗೆ ಕೊರಿಯೋಗ್ರಾಫ್ ಮಾಡಿದ್ದಾರೆ. ಬಹಳ ಅದ್ಧೂರಿಯಾಗಿ ದೊಡ್ಡ ಬಜೆಟ್ನಲ್ಲಿ ಈ ಸಾಂಗ್ ಚಿತ್ರೀಕರಣ ನಡೆಸಲಾಗಿದೆ.