ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಉಸಿರು ಚಲ್ಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಗೆಲುವಿನ ನಂತರ ಇಂತಹ ರೋಡ್ ಶೋಗಳು ನಡೆಯಬಾರದು. ಏಕೆಂದರೆ ಆಚರಣೆಗಳಿಗಿಂತ ಜೀವಗಳು ಮುಖ್ಯ. ನನಗೆ ರೋಡ್ ಶೋಗಳಲ್ಲಿ ನಂಬಿಕೆ ಇಲ್ಲ. ನಾನು ಆಡುತ್ತಿದ್ದಾಗ ಮತ್ತು ನಾವು ಟಿ20 ವಿಶ್ವಕಪ್ ಗೆದ್ದಾಗಲೂ, ನಾನು ಈ ರೋಡ್ ಶೋಗೆ ಬೆಂಬಲ ನೀಡಿರಲಿಲ್ಲ. ಜನರ ಜೀವಗಳು ಹೆಚ್ಚು ಮುಖ್ಯ. ಬೆಂಗಳೂರಿನಲ್ಲಿ ನಡೆದದ್ದು ನೋವಿನ ಸಂಗತಿ ಎಂದರು.
ಇನ್ನು ಇಂಗ್ಲೆಂಡ್ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾ ಕೇವಲ 3 ಪಂದ್ಯಗಳನ್ನು ಮಾತ್ರ ಆಡುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಗೌತಮ್ ಗಂಭೀರ್, ಬುಮ್ರಾ ಯಾವ ಮೂರು ಟೆಸ್ಟ್ಗಳನ್ನು ಆಡುತ್ತಾರೆ ಎಂಬುದನ್ನು ನಿರ್ಧರಿಸಲಾಗಿಲ್ಲ. ಸರಣಿಯ ಸ್ಥಿತಿಯನ್ನು ನೋಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನಮ್ಮಲ್ಲಿ ಗುಣಮಟ್ಟದ ಬೌಲರ್ಗಳಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ಸಹ, ಟೀಂ ಇಂಡಿಯಾ ಅವರಿಲ್ಲದೆ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯವನ್ನು ತೋರಿಸಿತ್ತು, ಈ ಬಾರಿಯೂ ಅವರು ಅದೇ ರೀತಿ ಮಾಡಬೇಕಾಗುತ್ತದೆ ಎಂದರು.