ಡಿಸಿಸಿ ಬ್ಯಾಂಕ್ ಚುನಾವಣೆ ಗೆಲುವಿನ ಸಂಭ್ರಮಾಚರಣೆ ಬಳಿಕ ಪಿಕೆಪಿಎಸ್ ಸದಸ್ಯ ಸಾವು..!

0
Spread the love

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಬಳಿಕ ಪಿಕೆಪಿಎಸ್ (ಪ್ರಗತಿ ಕಾರ್ಮಿಕ ಪಂಚಾಯತ್ ಸಂಘ) ಸದಸ್ಯ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಮಕೇರಿ ಗ್ರಾಮದಲ್ಲಿ ನಡೆದಿದೆ. ಹನುಮಂತಗೌಡ (40) ಮೃತ ದುರ್ಧೈವಿಯಾಗಿದ್ದು, ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಅವರ ಪರ ಪ್ರಚಾರ ಮಾಡಿದ್ದ  ಹನುಮಂತಗೌಡ,

Advertisement

ಫಲಿತಾಂಶದ ದಿನವಾದ ನಿನ್ನೆ ಅಕ್ಟೋಬರ್ 19, 2025 ವಿಜಯೋತ್ಸವದಲ್ಲಿ ಭಾಗವಹಿಸಿದ್ದರು. ಆದರೆ, ಆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಘಟನೆಯು ರಾಮದುರ್ಗ ಮತ್ತು ಬೆಳಗಾವಿಯಲ್ಲಿ ಶೋಕದ ವಾತಾವರಣವನ್ನು ಸೃಷ್ಟಿಸಿದೆ.

ಚುನಾವಣೆ ಗೆಲುವಿನ ಸಂಭ್ರಮದಲ್ಲಿದ್ದವರಿಗೆ ಇದು ಕಂಬನಿ ಮಿಡಿಯುವಂತೆ ಮಾಡಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶವು ರಾಮದುರ್ಗದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ಮಲ್ಲಣ್ಣ ಯಾದವಾಡ ಅವರ ಜಯವನ್ನು ಜನರು ಸಂಭ್ರಮಿಸಿದ್ದಾರೆ. ಆದರೆ ಈ ದುರಂತದಿಂದ ಸಂಭ್ರಮ ದುಃಖಕ್ಕೆ ತಿರುಗಿದೆ.


Spread the love

LEAVE A REPLY

Please enter your comment!
Please enter your name here