ಬೆಳಗಾವಿಯಲ್ಲಿ ವಿಕೃತ ಮನಸ್ಥಿತಿಯಿಂದ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ಆಗಿದೆ: ಹೆಚ್.ಕೆ.ಪಾಟೀಲ್

0
Spread the love

ಹುಬ್ಬಳ್ಳಿ: ಬೆಳಗಾವಿಯಲ್ಲಿ ವಿಕೃತ ಮನಸ್ಥಿತಿಯಿಂದ ಕಂಡಕ್ಟರ್ ಮೇಲೆ  ಪೊಕ್ಸೋ ಕೇಸ್ ಆಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಮುಂದೆ ಈ ರೀತಿ ಆಗದಂತೆ ಜಾಗೃತಿ ವಹಿಸಲಾಗುವುದು.

Advertisement

ಕೆಲವೊಂದು ವಿಕೃತ ಮನಸ್ಥಿತಿಯಿಂದ ನಿರ್ವಾಹಕನ ಮೇಲೆ ಪೋಕ್ಸೋ ಕೇಸ್ ಆಗಿದೆ. ಕಾನೂನಾತ್ಮಕವಾಗಿ ಸಮಸ್ಯೆ ಬಗೆಹರಿಸಲಾಗುವುದು. ಕನ್ನಡ-ಮರಾಠಿ ಸಾಮರಸ್ಯ ಕೆಡಿಸುವವರನ್ನು ಮಟ್ಟ ಹಾಕಲಾಗುವುದು. ಕಾನೂನು ಕೈಗೆತ್ತಿಕೊಳ್ಳುವವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನೂ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಂ ಸೊಸೈಟಿ ಸಹಯೋಗದಲ್ಲಿ ನಡೆಯಲಿರುವ ಈ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ತಾಜ್ ವೆಸ್ಟ್ ಎಂಡ್.ರೇಸ್ ಕೋರ್ಸ್ ರಸ್ತೆಯಲ್ಲಿ ಉದ್ಘಾಟನೆ ಮಾಡಲಿದ್ದು, ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪಾಲ್ಗೊಳ್ಳಲಿದೆ ಎಂದರು.


Spread the love

LEAVE A REPLY

Please enter your comment!
Please enter your name here