ಬೆಂಗಳೂರು:- ಮೊನ್ನೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಹುಲಿಗಳಿಗೆ ವಿಷವುಣಿಸಿ ಐದು ಹುಲಿಗಳು ಸಾವನ್ನಪ್ಪಿದ್ದವು.. ಈ ಘಟನೆ ಮಾಸುವ ಮುನ್ನವೇ ಐದಾರು ಬೀದಿ ಶ್ವಾನಗಳಿಗೆ ವಿಷವುಣಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೌದು.. ಬೆಂಗಳೂರಿನ ಭಟ್ಟರಹಳ್ಳಿಯಲ್ಲಿ ಬೀದಿ ನಾಯಿಗಳಿಗೆ ತಿಂಡಿಯಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದು, ಐದು ನಾಯಿಗಳು ನರಳಾಡಿ ಸ್ಥಳದಲ್ಲೇ ಸಾವನ್ನಪ್ಪಿವೆ.. ಎರಡು ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ನಾಯಿಗಳು ರಕ್ತವಾಂತಿಯಿಂದ ನರಳಾಡುತ್ತಿರುವ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸ್ಥಳದಲ್ಲಿ ಐದು ನಾಯಿಗಳು ಮೃತಪಟ್ಟಿದ್ದು, ಒಂದನ್ನು ಮಾತ್ರ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ರಕ್ಷಿಸಿದ್ದಾರೆ. ಈ ಘಟನೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.. ಇನ್ನೂ ಈ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.