ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಪೊಲೀಸ್ ಆಯುಕ್ತ ದಯಾನಂದ್ ಮಹತ್ವದ ಹೇಳಿಕೆ!

0
Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್ & ಗ್ಯಾಂಗ್ ಮೇಲೆ ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಸಿದ್ಧಪಡಿಕೊಂಡಿದ್ದಾರೆ. ಕೋರ್ಟ್‌ಗೆ ಇಂದು ಚಾರ್ಜ್‌ಶೀಟ್‌ ಸಲ್ಲಿಸುವುದು ಅನುಮಾನ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ.

Advertisement

ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್​ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ’ ಎಂದಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್​ಎಸ್​ಎಲ್​ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್​ನ ಎಫ್​ಎಸ್​ಎಲ್​ನಿಂದ ಕೆಲವು ವರದಿಗಳು ಬರಬೇಕಿವೆ. ಆದರೆ ಅವರುಗಳ ಹೊರತಾಗಿಯೇ ನಾವು ವರದ ಸಲ್ಲಿಕೇ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸುತ್ತಿದ್ದೇವೆ’ ಎಂದಿದ್ದಾರೆ.

 


Spread the love

LEAVE A REPLY

Please enter your comment!
Please enter your name here