ನಾಗಮಂಗಲ ಘಟನೆಯನ್ನು ನಿರ್ವಹಣೆ ಮಾಡುವಲ್ಲಿ ಪೊಲೀಸರು ಎಡವಿದ್ದಾರೆ: ಸಚಿವ ಪರಮೇಶ್ವರ್‌

0
Spread the love

ಬೆಂಗಳೂರು: ನಾಗಮಂಗಲ ಘಟನೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ಒಬ್ಬರನ್ನ ಅಮಾನತು ಮಾಡಲಾಗಿದೆ ಎಂದು ಸಚಿವ ಪರಮೇಶ್ವರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಯಾವುದೇ ಘಟನೆಗಳು ನಡೆದರೆ ನಿಮ್ಮನ್ನೇ ಹೊಣೆ ಮಾಡುತ್ತೇವೆ ಎಂದು ಸೂಚಿಸಿದ್ದೇವೆ.

Advertisement

ಈ ಘಟನೆಯನ್ನು ನಿರ್ವಹಣೆ ಮಾಡುವಲ್ಲಿ ಪೊಲೀಸರು ಎಡವಿದ್ದಾರೆ. ಹೀಗಾಗಿ ಇನ್ ಸ್ಪೆಕ್ಟರ್ ಅವರನ್ನು ಅಮಾನತು ಮಾಡಿದ್ದೇವೆ. ಅವರ ಮೇಲೆ ತನಿಖೆ ನಡೆಯುತ್ತಿದೆ. ವರದಿ ಕೊಡಲು ಹಿರಿಯ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ. ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗಣೇಶೋತ್ಸವ ಅಥವಾ ಇತರ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಪೊಲೀಸ್ ಇಲಾಖೆಯವರು ಶಾಂತಿ ಸಭೆಗಳನ್ನು ನಡೆಸುತ್ತಾರೆ. ಸರ್ಕಾರದಿಂದಲೂ ಈ ಸಂಬಂಧ ಕೆಲವೊಂದು ಸೂಚನೆಗಳನ್ನು ನೀಡುತ್ತೇವೆ. ಎಡಿಜಿಪಿ, ಡಿಜಿ ಎಲ್ಲಾ ಎಸ್ ಪಿ ಗಳಿಗೆ ಸೂಚನೆ ಕೊಡುತ್ತಾರೆ. ನಾಗಮಂಗಲದಲ್ಲೂ ಗಣೇಶೋತ್ಸವದ ಸಂದರ್ಭದಲ್ಲಿ ಕ್ರಮ ಕೈಗೊಂಡಿದ್ದರು ಎಂದು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here