ಬೆಂಗಳೂರು: ಕಿರುತರೆ ನಟಿ ಹಾಗೂ ನಿರ್ದೇಶಿಕಿ ವಿರುದ್ಧ ₹6.5 ಲಕ್ಷ ಸಾಲ ಪಡೆದು ಹಿಂದಿರುಗಿಸದೇ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ನ್ಯಾಯಾಲಯದ ನಿರ್ದೇಶನದಂತೆ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. 6.5 ಲಕ್ಷ ಸಾಲ ಪಡೆದು ವಾಪಸ್ಸು ನೀಡದೆ ವಂಚಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. ಹಿಮಾನ್ವಿ ಎಂಬುವರಿಂದ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು.
ಇನ್ಸ್ಟ್ರಾಗ್ರಾಮ್ನಲ್ಲಿ 2019ರಲ್ಲಿ ಹಿಮಾನ್ವಿ ಹಾಗೂ ವಿಸ್ಮಯ ಗೌಡ ಪರಿಚಯ ಆಗಿದ್ದರು. ನಾನು ಸಿನಿಮಾ ನಿರ್ದೇಶಕಿ ಹಾಗೂ ಇನ್ಸ್ಟಾಗ್ರಾಮ್ನಲ್ಲಿ ಲೈಫ್ ಕೋಚ್ ಎಂದು ವಿಸ್ಮಯ ಗೌಡ ಪರಿಚಯ ಮಾಡಿಕೊಂಡಿದ್ದರು. ವಿಸ್ಮಯಗೌಡಳಿಂದ ಹಿಮಾನ್ವಿ ಅವರು ಮ್ಯಾನಿಫಸ್ಟೇಷನ್ ಕ್ಲಾಸ್ ತೆಗೆದು ಕೊಂಡಿದ್ದರು.
ಈ ವೇಳೆ ವಿಸ್ಮಯ ಗೌಡ ಅವರು ಹಿಮಾನ್ವಿಯಿಂದ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ವಿಸ್ಮಯ ಗೌಡ ಅವರು ಹಿಮಾನ್ವಿಗೆ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬ್ಯಾಂಕ್ಗೆ ಕೊಟ್ಟಾಗ ಸಹಿ ಸರಿಯಿಲ್ಲ ಎಂದು ರಿಜೆಕ್ಟ್ ಆಗಿತ್ತು. ಆನಂತರ ಹಣ ಕೇಳಿದ್ರೆ ಅವಾಚ್ಯ ಶಬ್ಧದಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಲಾಗಿತ್ತು” ಎಂದು ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.