HomeGadag Newsಗದಗ ಜಿಲ್ಲೆಗೆ ಹೆಮ್ಮೆ ತಂದ ಪೊಲೀಸ್ ಅಧಿಕಾರಿಗಳು: ಕುಸಗಲ್, ಜೂಲಕಟ್ಟಿ ಸೇರಿ ಐವರಿಗೆ ಸಿಎಂ ಪದಕ!

ಗದಗ ಜಿಲ್ಲೆಗೆ ಹೆಮ್ಮೆ ತಂದ ಪೊಲೀಸ್ ಅಧಿಕಾರಿಗಳು: ಕುಸಗಲ್, ಜೂಲಕಟ್ಟಿ ಸೇರಿ ಐವರಿಗೆ ಸಿಎಂ ಪದಕ!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ/ ಬೆಂಗಳೂರು

ದಕ್ಷ ಹಾಗೂ ಪ್ರಾಮಾಣಿಕವಾಗಿ ಸಲ್ಲಿಸಿದ ಸೇವೆ ಪರಿಗಣಿಸಿ ರಾಜ್ಯ ಸರ್ಕಾರ ಗದಗ ಜಿಲ್ಲೆಯ ಇಬ್ಬರು ಅಧಿಕಾರಿಗಳು ಸೇರಿದಂತೆ ಮೂವರು
ಪೊಲೀಸರಿಗೆ 2024ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಘೋಷಣೆ ಮಾಡಿದೆ.

ಎಲ್ ಕೆ ಜೂಲಕಟ್ಟಿ

ಶನಿವಾರ ರಾಜ್ಯ ಸರಕಾರ ಹೊರಡಿಸಿದ ಪ್ರಕಟಣೆಯಲ್ಲಿ ಐಪಿಎಸ್ ಅಧಿಕಾರಿಗಳು ಸೇರಿದಂತೆ ಒಟ್ಟು 197 ಸಿಬ್ಬಂದಿ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ 2024 ರ ಮುಖ್ಯಮಂತ್ರಿಗಳ ಪದಕ ಲಭಿಸಿದೆ.

ಪ್ರವೀಣ್

ಜಿಲ್ಲೆಯ ಮುಂಡರಗಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸಗಲ್, ಗದಗ ಗ್ರಾಮೀಣ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಲ್ ಕೆ ಜೂಲಕಟ್ಟಿ ಅವರಿಗೆ ಮುಖ್ಯಮಂತ್ರಿಗಳ ಪದಕ ಘೋಷಿಸಲಾಗಿದೆ.

ಶಿದ್ದರಡ್ಡಿ

ಸಿಬ್ಬಂದಿಗಳಾದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಎಚ್‌ಸಿ ಹನಮಂತಗೌಡ ಮರಿಗೌಡ, ಇಂಟಲಿಜೆನ್ಸ್ ಗದಗ ಜಿಲ್ಲಾ ಘಟಕದ ಹಿರಿಯ ಗುಪ್ತಚರ ಸಹಾಯಕ ಶಿದ್ದರಡ್ಡಿ ಎಸ್ ಕಪ್ಪತ್ತನವರ್ ಹಾಗೂ ಶಹರ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರವೀಣ್ ಕಲ್ಲೂರ ಅವರಿಗೆ ಮುಖ್ಯಮಂತ್ರಿಗಳ ಪದಕ ದೊರಕಿದೆ.

ಮರಿಗೌಡ

ಇದೇ ಮೊದಲ ಬಾರಿಗೆ ಜಿಲ್ಲೆಯ ಇಬ್ಬರು ಅಧಿಕಾರಿಗಳು ಸೇರಿದಂತೆ ಮೂವರು ಸಿಬ್ಬಂದಿಗಳಿಗೆ ಸಿಎಂ ಪದಕ ದೊರಕಿದ್ದು ಗದಗ ಜಿಲ್ಲೆಗೆ ಹೆಮ್ಮೆ ತರಿಸಿದ್ದು, ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಮ್ ಬಿ ಸಂಕದ, ಸೇರಿದಂತೆ ಸಹ ಸಿಬ್ಬಂದಿ, ಸಾರ್ವಜನಿಕರು ಮೆಚ್ಚುಗೆ ಹಾಗೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!