ಬೆಂಗಳೂರು:- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳಿಂದ ಆರೋಪಿಗಳ ಸ್ಥಳ ಮಹಜರು ನಡೆಯುತ್ತಿದೆ.
Advertisement
ಆರೋಪಿ ಮುಸಾವಿರ್ನನ್ನು ಕರೆತಂದು ಎನ್ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸ್ಥಳೀಯವಾಗಿ ವೈಟ್ ಫೀಲ್ಡ್ ವಿಭಾಗದ 50ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಘಟನೆ ನಡೆದು ಐದು ತಿಂಗಳ ಬಳಿಕ ಆರೋಪಿ ಕರೆತಂದು ಮಹಜರು ನಡೆಸಲಾಗುತ್ತಿದೆ.
ರಾಷ್ಟ್ರೀಯ ತನಿಖಾ ದಳ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ. ಮಾ.1ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಏಪ್ರಿಲ್ 12ರಂದು ಪ್ರಮುಖ ಆರೋಪಿಗಳನ್ನು NIA ಬಂಧಿಸಿತ್ತು ಎನ್ನಲಾಗಿದೆ.