ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ 32ನೇ ರಾಜ್ಯ ಮಟ್ಟದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ‘ಮಹಿಳಾ ಸಮಾವೇಶ’ ಮತ್ತು ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ಪುರಸ್ಕಾರ ಕಾರ್ಯಕ್ರಮವನ್ನು ಅ.27ಕ್ಕೆ ನಿಗದಿ ಮಾಡಲಾಗಿತ್ತು.
Advertisement
ಈಗ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ಕಾರ್ಯಕ್ರಮ ಉದ್ಘಾಟಿಸಲು ಆಗಮಿಸಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 16ರಂದು ದಿನಾಂಕ ನಿಗದಿಗೊಳಿಸಿದ್ದು, ಸಮಾಜದ ಹಿತಚಿಂತನೆ ಮತ್ತು ಕಳಕಳಿಗಾಗಿ, ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನವೆಂಬರ್ 16ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಗದಗ ಜಿಲ್ಲಾ ಅಧ್ಯಕ್ಷರಾದ ಕೆ.ಎಫ್. ಹಳ್ಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.