HomeBengaluru Newsಬೆಂಗಳೂರಿನಲ್ಲಿ ಮುಂದುವರೆದ ಪವರ್ ಕಟ್; ಶುಕ್ರವಾರವೂ ಈ ಏರಿಯಾದಲ್ಲಿ ಇರೋದಿಲ್ಲ ಕರೆಂಟ್

ಬೆಂಗಳೂರಿನಲ್ಲಿ ಮುಂದುವರೆದ ಪವರ್ ಕಟ್; ಶುಕ್ರವಾರವೂ ಈ ಏರಿಯಾದಲ್ಲಿ ಇರೋದಿಲ್ಲ ಕರೆಂಟ್

For Dai;y Updates Join Our whatsapp Group

Spread the love

ಬೆಂಗಳೂರು:- ಕಳೆದ ಕೆಲವು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪವರ್ ಸಮಸ್ಯೆ ಬಿಟ್ಟು ಬಿಡದೇ ಕಾಡುತ್ತಿದ್ದು, ಸಿಟಿ ಮಂದಿ ಕಂಗಾಲಾಗಿದ್ದಾರೆ.

ಅದರಂತೆ ಶುಕ್ರವಾರವೂ ನಗರದ ವಿವಿಧ ಭಾಗಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆವಿಎ ಮಾನ್ಯತಾ ಟೆಕ್ ಪಾರ್ಕ್ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಫಿಡೆಲಿಟಿ, ಫಿಲಿಪ್ಸ್, ಇಂಕ್ಯುಬೇಟರ್, ಐಬಿಎಂ D1, D2, D3 ಮತ್ತು D4 ಬ್ಲಾಕ್ಗಳು, F2 ಬ್ಲಾಕ್, L5 ನೋಕಿಯಾ ಬ್ಲಾಕ್, L6 ಸಿಮೆನ್ಸ್ ಬ್ಲಾಕ್, G1 ಬ್ಲಾಕ್, ಎಎನ್ಜೆಡ್ H ಬ್ಲಾಕ್, C4 ಬ್ಲಾಕ್, ಮನ್ಯತಾ ರೆಸಿಡೆನ್ಸಿ, ಬಿ.ಟಿ.ಎಸ್. ಲೇಔಟ್, ಗೋದ್ರೆಜ್ ಅಪಾರ್ಟ್ಮೆಂಟ್ಸ್, ಹೆಬ್ಬಾಳ ಕೆಂಪಾಪುರ, ವಿನಾಯಕ ಲೇಔಟ್, ಚಿರಂಜೀವಿ ಲೇಔಟ್, ವೆಂಕಟೇಗೌಡ ಲೇಔಟ್, ಜೆಎನ್ಸಿ, ಎಂಎಫ್ಎಆರ್, ಮಧುವನ M2 ಬ್ಲಾಕ್ ಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಹಾಗೆಯೇ, ರಾಚೇನಹಳ್ಳಿ, ಶ್ರೀರಾಮಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್ಕ್ಲೇವ್, ಮೇಸ್ತ್ರಿ ಪಾಳ್ಯ, ತನಿಸಂದ್ರ, ಎಸ್ಎನ್ಎನ್ ಕ್ಲರ್ಮಾಂಟ್ ಅಪಾರ್ಟ್ಮೆಂಟ್ಸ್, ಕಾರ್ಲೆ ಟೌನ್ ಸೆಂಟರ್, ಬಿ. ನಾರಾಯಣಪುರ ಕ್ರಾಸ್, ಬಿಡಿಎಸ್ ಲೇಔಟ್, ಮಂತ್ರಿ ಲಿಥೋಸ್, ಕಾಫಿ ಬೋರ್ಡ್ ಲೇಔಟ್, ಫಾತಿಮಾ ಲೇಔಟ್, ಅಮರ್ಜ್ಯೋತಿ ಲೇಔಟ್, ಮರಿಯಣ್ಣಪಾಳ್ಯ, ಉಮಿಯಾ ವೆಲಾಸಿಟಿ, ಬ್ರಿಗೇಡ್ ಕ್ಯಾಲಾಡಿಯಂ ಏರಿಯಾದಲ್ಲಿ ವಿದ್ಯುತ್ ಕಟ್ ಆಗಲಿದೆ.

ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗರ‍್ಡೇನಿಯ ಅಪರ‍್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ರ‍್ಲಿ ಸ್ಡೀಟ್, ಲಿಯೋನಾರ್ಡ್ ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ವಿಲ್ಸನ್ ಗರ‍್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ರ‍್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗರ‍್ಡನ್, ಡಬಲ್ ರೋಡ್, ಸುಬ್ಬಯ್ಯ ರ‍್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!