HomeBengaluru NewsPower Cut: ಬೆಂಗಳೂರಿನಲ್ಲಿ ಫೆಬ್ರವರಿ 17ರವರೆಗೆ ಕರೆಂಟ್ ಕಟ್, ಎಲ್ಲೆಲ್ಲಿ?

Power Cut: ಬೆಂಗಳೂರಿನಲ್ಲಿ ಫೆಬ್ರವರಿ 17ರವರೆಗೆ ಕರೆಂಟ್ ಕಟ್, ಎಲ್ಲೆಲ್ಲಿ?

For Dai;y Updates Join Our whatsapp Group

Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆಯಿಂದ ಫೆಬ್ರವರಿ 17ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿದೆ. ಈ ಸಂಬಂಧ ನಗರದ ವಿವಿಧ ಪ್ರದೇಶಗಳಲ್ಲಿ ಮುಂದಿನ ಫೆಬ್ರವರಿ17ರವರೆಗೆ ಅನೇಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಘೋಷಿಸಿದೆ.

ಫೆಬ್ರವರಿ 9 ರಿಂದ ಫೆಬ್ರವರಿ 17 ರವರೆಗೆ ಪ್ರತಿ ದಿನವು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ಕಡಿಗೊಳ್ಳಲಿದೆ. ಕೆಲವು ಬಡಾವಣೆಗಳಲ್ಲಿ ವಿವಿಧ ದಿನಾಂಕಗಳಂದು ವಿದ್ಯತ್ ಕಡಿತಗೊಳ್ಳಲಿದೆ.

ಬೆಂಗಳೂರಿನ ಗುಬ್ಬಿ ಗೇಟ್, ಕುಂಟಮ್ಮನತೋಟ, ಗೋವಿಂದನಗರ, ಹೌಸಿಂಗ್ ಬೋರ್ಡ್, ದಿಟ್ಟೂರು, ಬಿಎಚ್. ಪಾಲಿ, ಹೊನ್ನೇನಹಳ್ಳಿ ರಸ್ತೆ ಮತ್ತು ಹಾರೋಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿವಿಧ ದಿನಾಂಕಗಳಾದ ಫೆಬ್ರವರಿ 9, 10, 12, 14, 16 ಹಾಗೂ 18ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ಮತ್ತು ನಿರ್ವಾಣಿ ಬಡಾವಣೆ ಸೇರಿದಂತೆ ವಿವಿಧೆಡೆ ಫೆಬ್ರವರಿ 9, 11, 13, 15 ಹಾಗೂ 17ರಂದು ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ತುರ್ತು ಕಾಮಗಾರಿಗಳು ಪೂರ್ಣಗೊಳ್ಳುತ್ತಿದ್ದಂತೆ ಬೆಸ್ಕಾಂ ಬಾಧಿತ ಪ್ರದೇಶಗಳಲ್ಲಿ ಎಂದಿನಂತೆ ವಿದ್ಯುತ್ ಸರಬರಾಜು ಮಾಡಲಾಗುವುದು. ವಿದ್ಯುತ್ ಕಡಿತದಿಂದ ಎದುರಾಗುವ ಪ್ರದೇಶಗಳ ಜನರು ಬೆಸ್ಕಾಂ ಜೊತೆಗೆ ಸಹಕರಿಸುವಂತೆ ತಿಳಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!