ಬೆಂಗಳೂರು:- ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಅದರಂತೆ ನಗರದ ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ಫೋರ್ಸ್, ಮಾರಸಂದ್ರ. ಶ್ರೀರಾಮನಹಳ್ಳಿ, ನೆಲ್ಲಕುಂಟೆ, ಹನಿಯೂರು, ಚಲ್ಲಹಳ್ಳಿ, ಕರ್ಲಾಪುರ, ರಾಮ್ಮಿ ಉತ್ತರ-1. ಪ್ರೆಸ್ಟೀಜ್ ನಗರ, ಮಾರುತಿ ರಾಯಲ್ ಗಾರ್, ಕೋಗಿಲು, ಪೂಜಾ ಮಹಾಶಂ ಲೇಔಟ್, ಸಪ್ತಗಿರಿ ಲೇಔಟ್, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ ಕ್ಲೇವ್, ಎನ್ಎನ್ ಹಳ್ಳಿ ಸುತ್ತಮುತ್ತಲಿನ ಪ್ರದೇಶಗಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಈ ಬಗ್ಗೆ ಅಧಿಕೃತ ಮಾಹಿತಿ ಹೊರಡಿಸಿದೆ. ವಿದ್ಯುತ್ ಸಮಸ್ಯೆಯನ್ನು ಸುಧಾರಿಸುವ ಮತ್ತು ಈ ಪ್ರದೇಶಗಳಲ್ಲಿ ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ನಿರ್ವಹಣೆ ಕೆಲಸ ಅತ್ಯಗತ್ಯವಾಗಿದೆ. ಜನರು ಅಗತ್ಯ ಮುನ್ನೆಚ್ಚರಿಕೆಗಳನ್ನು ಗಮನದಲ್ಲಿಕೊಂಡು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಈ ವಿದ್ಯುತ್ ಅಡಚಣೆಗಾಗಿ ಬೆಸ್ಕಾಂ ವಿಷಾದಿಸಿದೆ.