ಅಧಿಕಾರ ಹಂಚಿಕೆ ವಿಚಾರ: ಖರ್ಗೆ ಅವ್ರ ಮಾತಿಗೆ ನಾನು ಬದ್ಧ ಎಂದ ಡಿಕೆಶಿ!

0
Spread the love

ಬೆಂಗಳೂರು:- ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ DCM ಡಿಕೆ ಶಿವಕುಮಾರ್ ತಮ್ಮದೇ ಶೈಲಿಯಲ್ಲಿ ಉತ್ತರ ಕೊಟ್ಟಿದ್ದಾರೆ.

Advertisement

ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದರು.

ಇದೇ ವೇಳೆ ಡಿಕೆ ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ ಯಾರಿಂದಲೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಮಾತನಾಡಿ, ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ನಾನು ಕಾರ್ಯಕರ್ತರ ಸಭೆ ಮಾಡಲು ಹೋಗಿದ್ದೆ. ಮೊಯ್ಲಿ ಅವರ ಹೇಳಿಕೆಗೆ ನಾನು ‌ಪ್ರತಿಕ್ರಿಯೆ ಕೊಡಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಬಾರದು ಅಂತ ಹೇಳಿದ್ದಾರೆ. ನಾನು ಅದಕ್ಕೆ ಬದ್ದವಾಗಿದ್ದೇನೆ ಅಂತ ತಿಳಿಸಿದರು.


Spread the love

LEAVE A REPLY

Please enter your comment!
Please enter your name here