Power Shock: ವಿದ್ಯುತ್ ತಂತಿ ತುಳಿದು ಎರಡು ಕಾಡಾನೆಗಳು ಸಾವು!

0
Spread the love

ಹಾಸನ:- ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಡ್ಡೆಬೆಟ್ಟ ಗ್ರಾಮದ ಬಳಿಯ ಎಬಿಸಿ ಎಸ್ಟೇಟ್‍ನಲ್ಲಿ ವಿದ್ಯುತ್ ಶಾಕ್‍ನಿಂದ ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ಆಹಾರ ಹರಸಿ ಕಾಫಿ ತೋಟಕ್ಕೆ ಎರಡು ಕಾಡಾನೆಗಳು ಬಂದಿದ್ದವು. ಈ ವೇಳೆ ಕಾಫಿ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್‌ ತಂತಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದು, ತಂತಿಯನ್ನು ತುಳಿದು ಕಾಡಾನೆಗಳು ಸಾವನ್ನಪ್ಪಿವೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here