Homecultureಸತ್ಕಾರ್ಯಗಳಿಂದ ಸಮಾಜಕ್ಕೆ ಶಕ್ತಿ : ಶ್ರೀ ರಂಭಾಪುರಿ ಜಗದ್ಗುರುಗಳು

ಸತ್ಕಾರ್ಯಗಳಿಂದ ಸಮಾಜಕ್ಕೆ ಶಕ್ತಿ : ಶ್ರೀ ರಂಭಾಪುರಿ ಜಗದ್ಗುರುಗಳು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಸಮಾಜದಲ್ಲಿ ರಚನಾತ್ಮಕ ಮತ್ತು ಗುಣಾತ್ಮಕ ಕಾರ್ಯಗಳು ಯಾವಾಗಲೂ ನಡೆಯಬೇಕು. ಸತ್ಕಾರ್ಯಗಳಿಂದ ಸಮಾಜಕ್ಕೆ ಹೆಚ್ಚು ಬಲ ದೊರಕಲು ಸಹಕಾರಿಯಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಇಲ್ಲಿನ ಕನಕಗಿರಿಯಲ್ಲಿ ನಿರ್ಮಾಣಗೊಂಡ ಶ್ರೀ ರಂಭಾಪುರಿ ಜಗದ್ಗುರು ಶಿವಾನಂದ ರಾಜೇಂದ್ರ ಸಮುದಾಯ ಭವನದ ವಾಸ್ತು ಶಾಂತಿ ಪೂಜಾ ವಿಧಾನ ನೆರವೇರಿಸಿ ಆಶೀರ್ವಚನ ನೀಡುತ್ತಿದ್ದರು.
ಪರಮ ತಪಸ್ವಿ ಲಿಂ.ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ಸತ್ಯ ಸಂಕಲ್ಪ ಸಾಕಾರಗೊಂಡ ಸಂತೃಪ್ತಿ ಮನೋಭಾವ ನಮಗಿದೆ. ಮೂಲ ಸ್ಥಳ ದಾನಿಗಳಾದ ಹಂಪಣ್ಣ ಜೋಡಗಾಣದ, ಬಸೆಟ್ಟೆಪ್ಪ ಭತ್ತದ, ಮುದಕಪ್ಪ ಶೆಟ್ಟರ, ಗುಂಡದಮಠ ಕಂಪ್ಲಿ, ಲಕ್ಷ್ಮಣಪ್ಪ ಕನಕಪ್ಪ ಖ್ಯಾಡೆದ ದಾನ ಮಾಡಿದ ನಿವೇಶನದಲ್ಲಿ ಶ್ರೀ ರಂಭಾಪುರಿ ಜಗದ್ಗುರು ಶಿವಾನಂದ ರಾಜೇಂದ್ರ ಸಮುದಾಯ ಭವನ ಭವ್ಯವಾಗಿ ನಿರ್ಮಾಣಗೊಂಡಿರುವುದು ದಾನಿಗಳವರ ಪರಿವಾರದವರಿಗೆ ಆತ್ಮ ಸಂತೃಪ್ತಿ ಉಂಟಾಗಿದೆ ಎಂದರು.
ಸೊರಬ ತಾಲೂಕಿನ ತೆಲಗುಂದ ಹಿರೇಮಠದ ವೇ.ಗುರುಶಾಸ್ತಿç ಮತ್ತು ಲಕ್ಷ್ಮೇಶ್ವರದ ಹಾಲೇವಾಡಿಮಠ ಶಿವಲಿಂಗಯ್ಯ ಶಾಸ್ತಿçಗಳವರ ವೈದಿಕತ್ವದಲ್ಲಿ ಪೂಜಾ ಕಾರ್ಯಗಳು ಜರುಗಿದವು.
ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು, ಸುವರ್ಣಗಿರಿ ಮಠದ ಡಾ.ಚನ್ನಮಲ್ಲ ಸ್ವಾಮಿಗಳು, ಚಳಗೇರಿ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮಿಗಳು, ಕುಷ್ಟಗಿ ಮದ್ದಾನಿ ಮಠದ ಕರಿಬಸವೇಶ್ವರ ಶಿವಾಚಾರ್ಯ ಸ್ವಾಮಿಗಳು, ಸಿಂಧನೂರು ಕನ್ನೂರಿನ ಸೋಮನಾಥ ಶಿವಾಚಾರ್ಯ ಸ್ವಾಮಿಗಳು, ಕೆಂಭಾವಿ ಚನ್ನಬಸವ ಶಿವಾಚಾರ್ಯ ಸ್ವಾಮಿಗಳು ಹಾಗೂ ಹೆಬ್ಬಾಳದ ಶಿವಪ್ರಕಾಶ ಶರಣರು ಪಾಲ್ಗೊಂಡು ವೀರಶೈವ ಧರ್ಮ ಸಂಸ್ಕೃತಿ ಮತ್ತು ಗುರು ಪರಂಪರೆಯ ಮಹತ್ವವನ್ನು ವಿವರಿಸಿದರು.
ಚನಬಸಯ್ಯ ಹಿರೇಮಠ, ಸಂಗಪ್ಪ ಸಜ್ಜನ ಸಹೋದರರು, ಡಾ. ಗುರುಮೂರ್ತಿ, ಮಹಾಬಲೇಶ್ವರಪ್ಪ ಸಜ್ಜನ, ಗುರುಸಿದ್ಧಪ್ಪ ಹಾದಿಮನಿ, ಶೇಖರಗೌಡ ಪಾಟೀಲ, ಬಸವರಾಜ ಸಜ್ಜನ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img