ವಿಜಯಸಾಕ್ಷಿ ಸುದ್ದಿ, ರೋಣ: ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ರೋಣ ಪಟ್ಟಣದ ಅಂಜುಮನ್ ಪ್ರೌಢಶಾಲೆಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವದರೊಂದಿಗೆ, ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಬಾವಾಸಾಬ ಬೆಟಗೇರಿ ಮಾತನಾಡಿ, ವಕ್ಫ್ ತಿದ್ದುಪಡಿ ಮಸೂದೆ ಜಾರಿ ಮಾಡುವುದು ಮುಸ್ಲಿಂ ಜನಾಂಗಕ್ಕೆ ಮಾರಕವಾಗಲಿದೆ. ದೇಶದಲ್ಲಿ ಎಲ್ಲ ಸಮುದಾಯದವರಿಗೂ ಅವರದ್ದೇ ಆದ ಹಬ್ಬ, ಆಚರಣೆ, ಪೂಜೆ, ನಮಾಜ್ ಮಾಡುವ ಹಕ್ಕನ್ನು ಕಾನೂನಿನಲ್ಲಿ ನೀಡಲಾಗಿದೆ. ಆದರೆ ಈಗಿನ ಕೇಂದ್ರ ಸರ್ಕಾರ ಸಮಾಜದಲ್ಲಿ ಶಾಂತಿ ಭಂಗ ಮಾಡುವ ಜನ ವಿರೋಧಿ ಕಾನೂನುಗಳನ್ನು ರೂಪಿಸಲು ಮುಂದಾಗಿದ್ದು, ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ವಕ್ಫ್ ತಿದ್ದುಪಡಿ ಮಸೂದೆ ದ್ವೇಷಪೂರಿತ ಕಾನೂನಾಗಿದೆ. ಯಾವದೇ ಕಾರಣಕ್ಕೂ ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರಬಾರದು ಎಂದು ಆಕ್ರೊಶ ವ್ಯಕ್ತಪಡಿಸಿದರು.
ಈ ವೇಳೆ ಅಂಜುಮನ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಅಬ್ದುಲ್ರೇಮಾನ್ ಸೈಯದ್, ಯೂಸೂಫ್ ಇಟಗಿ, ಅಪ್ತಾಬ ಅಹ್ಮದ ತಹಸೀಲ್ದಾರ, ಬವಾಸಾಬ ಚಿನ್ನೂರ, ಕಲೀಲ ಅಹ್ಮದ ರಾಮದುರ್ಗ, ಮಲೀಕ ಯಲಿಗಾರ, ಶಫೀಕ ಮೂಗನೂರ, ಶಬ್ಬೀರ ಖಾಜಿ, ಎ.ಎಸ್. ಖತೀಬ, ಮುಸ್ತಾಕ ಅತ್ತಾರ, ದಾವಲಸಾಬ ಬಾಡಿನ, ಅಬ್ಬು ಹೊಸೂರ, ಪೀರಸಾಬ ಮಾರನಬಸರಿ, ಮಾಬುಸಾಬ ಮುಜಾವರ ಮುಂತಾದವರು ಭಾಗವಹಿಸಿದ್ದರು.