ಮೈಸೂರು: ಮೈಸೂರು ದಸರಾ-2026ರ ಸಾಂಸ್ಕೃತಿಕ ಕಾರ್ಯಕ್ರಮ ‘ಯುವ ದಸರಾ’ಗೆ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ ಅವರನ್ನು ಉದ್ಘಾಟಕರಾಗಿ ಆಹ್ವಾನಿಸಲಾಗಿದೆ. ಈ ಸಂಬಂಧ ಮೈಸೂರು ಜಿಲ್ಲಾಡಳಿತದಿಂದ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.
ಜಿಲ್ಲಾಡಳಿತದ ಪ್ರತಿನಿಧಿಗಳು ಪ್ರಭುದೇವ ಅವರಿಗೆ ಪೇಟ ತೊಡಿಸಿ, ಶಾಲು ಹಾಗೂ ಹೂವಿನ ಹಾರ ಹಾಕಿ ಗೌರವಿಸಿದರು. ಬಳಿಕ ಯುವ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು ಆತ್ಮೀಯವಾಗಿ ಆಹ್ವಾನಿಸಲಾಯಿತು.



