ಚಿಕ್ಕಬಳ್ಳಾಪುರ: ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಸಚಿವ ಸ್ಥಾನ ಸಿಗುವ ಬಗ್ಗೆ ನಿರೀಕ್ಷೆ ಇದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್,
ಚಿಕ್ಕಬಳ್ಳಾಪುರದ ಎಲ್ಲಾ ಶಾಸಕರೂ ಒಟ್ಟಾಗಿ ಇದ್ದೇವೆ. ನನಗೆ ಸಚಿವ ಸ್ಥಾನ ಸಿಕ್ಕರೆ ಜಿಲ್ಲೆಯ ಎಲ್ಲಾ ಶಾಸಕರೂ ಸ್ವಾಗತಿಸುತ್ತಾರೆ. ಸಚಿವ ಎಂ.ಸಿ. ಸುಧಾಕರ್ ಸಾಹೇಬರು ಕೂಡ ಸ್ವಾಗತಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ನನ್ನನ್ನು ಬಿಟ್ಟು ಬೇರೆ ಶಾಸಕರಿಗೆ ಸಚಿವ ಸ್ಥಾನ ಸಿಕ್ಕರೂ ನಾನೂ ಸ್ವಾಗತಿಸುತ್ತೇನೆ. ಯೂತ್ ಕೋಟಾ ಹಾಗೂ ಸಮುದಾಯದ ಕೋಟಾದಡಿ ಸಚಿವ ಸ್ಥಾನ ನೀಡಲು ಅವಕಾಶವಿದೆ ಎಂದು ಅವರು ಹೇಳಿದರು.
ನಾನು ಸದಾ ಜನರ ಜೊತೆ ಇದ್ದೇನೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ದರಕಾಸ್ತು ಕಮಿಟಿ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.
ಕಳೆದ 15 ವರ್ಷಗಳಿಂದ ಕಮಿಟಿ ಮೀಟಿಂಗ್ ನಡೆದಿರಲಿಲ್ಲ. ಇದೀಗ ನಾನು ದರಕಾಸ್ತು ಕಮಿಟಿ ಅಧ್ಯಕ್ಷನಾಗಿರುವ ಕಾರಣ ಇಂದು ಸಭೆ ನಡೆಸಲಾಗಿದೆ ಎಂದು ಹೇಳಿದರು.



