ವಿಜಯಸಾಕ್ಷಿ ಸುದ್ದಿ, ಗದಗ: ಪಾಕಿಸ್ತಾನದ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ್ದು, ನಮ್ಮ ಹೆಮ್ಮೆಯ ಭಾರತೀಯ ಯೋಧರು ಪಾಕಿಸ್ತಾನದ ಪಾಪಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾ ಗೌರವಾಧ್ಯಕ್ಷ ನಿಂಗನಗೌಡ ಮಾಲಿಪಾಟೀಲ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ತಿಂಗಳು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದಿಂದ ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿ ಅಮಾಯಕ ನಾಗರಿಕರನ್ನು ಹತ್ಯೆಗೈದ ಉಗ್ರರಿಗೆ ಇದು ತಕ್ಕ ಶಾಸ್ತಿಯಾಗಿದೆ. ವಿಶ್ವದಾದ್ಯಂತ ಇಂತಹ ಉಗ್ರವಾದಿಗಳನ್ನು ಬೇರು ಸಮಿತ ಕಿತ್ತೊಗೆಯಬೇಕಿದೆ. ಈ ನಿಟ್ಟಿನಲ್ಲಿ, ನಮ್ಮ ದೇಶದ ಅಭಿವೃದ್ಧಿಗಾಗಿ, ನಮ್ಮ ದೇಶದ ನಾಗರಿಕರ ನೆಮ್ಮದಿಗಾಗಿ ಪಕ್ಷ, ಜಾತಿ ಭೇದ ಮರೆತು ದೇವರಲ್ಲಿ ಪ್ರಾರ್ಥನೆಯನ್ನು ಸಲ್ಲಿಸುವ ಮೂಲಕ ನಮ್ಮ ದೇಶದ ಯೋಧರಿಗೆ ಬೆಂಬಲ ನೀಡಬೇಕೆಂದು ವಿನಂತಿಸಿದ್ದಾರೆ.