ವಿಜಯಸಾಕ್ಷಿ ಸುದ್ದಿ, ಗದಗ : ಭಾರತದಲ್ಲಿ ಅಸಂಘಟಿತ ವಲಯವು ಆರ್ಥಿಕತೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ದೇಶದ ಜನಸಂಖ್ಯೆಯ ಸುಮಾರು 92ರಷ್ಟು ಅಸಂಘಟಿತ ಕಾರ್ಮಿಕರನ್ನು ಒಳಗೊಂಡಿದೆ. ಅಸಂಘಟಿತ ಕಾರ್ಮಿಕರಿಗೆ ಭದ್ರತೆ ಒದಗಿಸಲು ಸಾಕಷ್ಟು ಸಾಧನಗಳಿಲ್ಲ. ಕಾರ್ಮಿಕರ ಸಾಮಾಜಿಕ ಭದ್ರತೆಯು ಕಾರ್ಮಿಕರ ಕುಟುಂಬಗಳಿಗೆ ಮತ್ತು ಸಮುದಾಯಕ್ಕೆ ಮುಖ್ಯವಾಗಿದೆ. ಆದ ಕಾರಣ ಸರ್ಕಾರಗಳು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಸಮಸ್ಯಗಳ ಪಡಿಹಾರಕ್ಕಾಗಿ ಯೋಜನೆಗಳನ್ನು ರೊಪಿಸಬೇಕಾಗಿದೆ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಜಿಲ್ಲಾಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಹೇಳಿದರು.
ಸೆ. 29ರಂದು ಗದಗ ಜಿಲ್ಲಾ ಸ್ಲಂ ಸಮಿತಿ ಹಾಗೂ ಶ್ರಮಜೀವಿಗಳ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಶ್ರಮಜೀವಿಗಳ ಬೃಹತ್ ಸಮಾವೇಶದ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಕರೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಸಂಘಟಿತ ವಲಯವು ತಮ್ಮ ಉದ್ಯೋಗದಲ್ಲಿ ಮಾಡುತ್ತಿರುವ ಕೆಲಸಕ್ಕೆ ಕಡಿಮೆ ವೇತನದಂತಹ ಅನೇಕ ತೊಂದರೆಗಳನ್ನು ಎದುರಿಸುತ್ತಿದೆ. ಶೇ.90ರಷ್ಟು ಅಸಂಘಟಿತ ಕಾರ್ಮಿಕರು ಕೊಳಗೇರಿ ಪ್ರದೇಶಗಳಲ್ಲಿ ವಸತಿ, ನೈರ್ಮಲ್ಯ ಮುಂತಾದ ಸಮಸ್ಯೆಗಳ ನಡುವೆಯೇ ಬದುಕನ್ನು ಕಟ್ಟಿಕೊಂಡಿದ್ದಾರೆ. ಅಸಂಘಟಿತ ಕಾರ್ಮಿಕರು ಸಮಾಜದಲ್ಲಿ ದುರ್ಬಲ ವರ್ಗವಾಗಿರುವುದರಿಂದ ಅವರು ಅನೇಕ ಸಮಸ್ಯಗಳನ್ನು ಎದುರಿಸುತ್ತಿದ್ದಾರೆ. ನಮ್ಮ ಸಮಿತಿಯ ಕಾರ್ಯಕರತರು ಇದನ್ನು ಅರಿತುಕೊಂಡು ಸಮಾವೇಶದ ಯಶಸ್ವಿಗಾಗಿ ಶ್ರಮಿಸಬೇಕೆಂದು ಹೇಳಿದರು.
ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾವೇಶದ ರೋಪರೇಶಗಳ ಕುರಿತು ವಿವರಿಸಿದರು. ಮಿಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ದುರ್ಗಪ್ಪ ಮಣ್ಣವಡ್ಡರ, ಮೆಹರುನಿಸಾ ಡಂಬಳ, ಮೈಮುನ ಬೈರಕದಾರ, ಮಂಜುನಾಥ ಶ್ರೀಗಿರಿ, ಮೆಹರುನಿಸಾ ಢಾಲಾಯತ, ಪ್ರೇಮಾ ಮಣವಡ್ಡರ, ಸುಶೀಲಮ್ಮ ಗೊಂದಾರ, ಮೆಹಬೂಬಸಾಬ ಬಳ್ಳಾರಿ, ಸಾಕ್ರುಬಾಯಿ ಗೋಸಾವಿ, ಖಾಜೇಸಾಬ ಇಸ್ಮಾಯಿಲನವರ, ಮಕ್ತುಮಸಾಬ ಮುಲ್ಲಾನವರ, ಈರಮ್ಮ ಬೇವಿನಮರದ, ನಾಗರಾಜ ಮಣವಡ್ಡರ, ಶಿವಾನಂದ ಶಿಗ್ಲಿ, ರಾಜೇಸಾಬ ಸೈಯದ, ಮಂಜುನಾಥ ಒಂಟಿಯಲಿ, ಬಾಷಾಸಾಬ ಡಂಬಳ, ಸಲೀಮ ಹರಿಹರ, ಮಲೇಶಪ್ಪ ಕಲಾಲ, ಚಂದ್ರಪ್ಪ ಲಕ್ಕುಂಡಿ, ದುರ್ಗಪ್ಪ ಮಣವಡ್ಡರ, ಶರಣಪ್ಪ ಬಿಂಗದಕಟ್ಟಿ ಹಾಗೂ ನೂರಾರು ಸ್ಲಂ ನವಾಸಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸ್ಲಂ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ ಮಾತನಾಡಿ, ಶ್ರಮಜೀವಿಗಳ ಸಮಾವೇಶ ನಡೆಸುತ್ತಿರುವುದು ಸಂತಸದ ವಿಚಾರ. ನಮ್ಮ ಸಂಘಟಿತ ನಿರಂತರ ಹೋರಟಗಳ ಫಲವಾಗಿ ನಗರದ ಅನೇಕ ಕೊಳಗೇರಿ ಪ್ರದೇಶಗಳು ಅಭಿವೃದ್ಧಿಗೊಂಡು ಭೂಮಿಯ ಮಾಲಿಕತ್ವ ದೊರಕಿಸಿಕೊಡಲಾಗಿದೆ. ಸಮಾವೇಶಗಳನ್ನು ನಡೆಸುವ ಮೂಲಕ ನಗರದಲ್ಲಿಯ ಸ್ಲಂ ಜನರ ಶಕ್ತಿ ಪ್ರರ್ದಶನ ಮಾಡಲಾಗುತ್ತಿದೆ ಎಂದರು.